Homeಕರ್ನಾಟಕಬೆಂಗಳೂರು: ಡ್ರಾಪ್‌ ಮಾಡುವುದಾಗಿ ಕರೆದೋಯ್ದು ಮಹಿಳೆ ಮೇಲೆ ಅತ್ಯಾಚಾರ; ಬಸ್ ಚಾಲಕ ಅರೆಸ್ಟ್

ಬೆಂಗಳೂರು: ಡ್ರಾಪ್‌ ಮಾಡುವುದಾಗಿ ಕರೆದೋಯ್ದು ಮಹಿಳೆ ಮೇಲೆ ಅತ್ಯಾಚಾರ; ಬಸ್ ಚಾಲಕ ಅರೆಸ್ಟ್

- Advertisement -
- Advertisement -

ಪಶ್ಚಿಮ ಬೆಂಗಳೂರಿನ ನಾಯಂಡಹಳ್ಳಿ ಬಳಿ ಖಾಸಗಿ ಶಾಲಾ ಬಸ್ಸಿನ ಚಾಲಕ ತನ್ನ ವಾಹನದೊಳಗೆ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಂಗಳವಾರ ನಡೆದಿದೆ.

ಆರೋಪಿ, ನಾಯಂಡಹಳ್ಳಿ ನಿವಾಸಿ ಶಿವಕುಮಾರ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಾಗರಭಾವಿಯಲ್ಲಿ ವಾಸವಾಗಿರುವ ಅತ್ಯಾಚಾರ ಸಂತ್ರಸ್ತೆ, ಖಾಸಗಿ ಶಾಲೆಯೊಂದರಲ್ಲಿ ಆಯಾ (ಪ್ಯೂನ್) ಆಗಿ ಕೆಲಸ ಮಾಡುತ್ತಿದ್ದಾರೆ.

ಕೆಲಸ ಮುಗಿಸಿ ನಾಯಂಡಹಳ್ಳಿ ಜಂಕ್ಷನ್ ಬಳಿ ಬಸ್‌ಗಾಗಿ ಮಹಿಳೆ ಕಾಯುತ್ತಿದ್ದಾಗ ಶಿವಕುಮಾರ್ ಬಸ್‌ ಚಲಾಯಿಸಿಕೊಂಡು ಆ ಮಹಿಳೆ ಇರುವತ್ತ ಬಂದಿದ್ದನು. ಮಹಿಳೆ ಡ್ರಾಪ್ ಗಾಗಿ ಬಸ್ಸಿನತ್ತ ಕೈಬೀಸಿದ್ದರು. ಶಿವಕುಮಾರ್ ಬಸ್ ನಿಲ್ಲಿಸಿ, “ನಾನೂ ನಾಗರಭಾವಿ ಕಡೆಗೆ ಹೋಗುತ್ತಿದ್ದೇನೆ” ಎಂದು ಹೇಳಿ ಮಹಿಳೆಯನ್ನು ಬಸ್‌ನಲ್ಲಿ ಕೂರಿಸಿಕೊಂಡಿದ್ದನು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಜೆ 5.30ರ ಸುಮಾರಿಗೆ ಮಹಿಳೆ ವಾಹನವನ್ನು ಹತ್ತಿದ ಕೂಡಲೇ ಶಿವಕುಮಾರ್ ನಾಯಂಡಹಳ್ಳಿ ಜಂಕ್ಷನ್‌ನಿಂದ ಮೂರು ಕಿ.ಮೀ ಆಸುಪಾಸಿನಲ್ಲಿರುವ ಕೈಲಾಸಗಿರಿಯ ಮಲೆ ಮಹದೇಶ್ವರ ದೇವಸ್ಥಾನದ ಕಡೆಗೆ ಹೋಗಿ ಬಸ್ಸನ್ನು ರಸ್ತೆಬದಿಯಲ್ಲಿ ನಿಲ್ಲಿಸಿದ್ದನು. ಮಹಿಳೆಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಬಸ್ಸಿನೊಳಗೆ ಅತ್ಯಾಚಾರ ಎಸಗಿದ್ದಾನೆ. “ಪೊಲೀಸರನ್ನು ಸಂಪರ್ಕಿಸಬೇಡ ಅಥವಾ ಘಟನೆಯ ಬಗ್ಗೆ ಯಾರಿಗೂ ಹೇಳಬೇಡ” ಎಂದು ಬೆದರಿಸಿದ ನಂತರ ಆತ ಸಂಜೆ 7 ಗಂಟೆ ಸುಮಾರಿಗೆ ಮಹಿಳೆಯನ್ನು ಡ್ರಾಪ್ ಮಾಡಿದ್ದಾನೆ.

ಬಸ್‌ನಿಂದ ಇಳಿದ ನಂತರ ಸಂತ್ರಸ್ತ ಮಹಿಳೆಯು ನೋಂದಣಿ ಸಂಖ್ಯೆಯೊಂದಿಗೆ ವಾಹನದ ಚಿತ್ರವನ್ನು ಕ್ಲಿಕ್ ಮಾಡಿಕೊಂಡರು. ಅದನ್ನು ತನ್ನ 20 ವರ್ಷದ ಮಗನಿಗೆ ತಲುಪಿಸಿದರು. ಚಾಲಕ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಮಗನಿಗೆ ತಿಳಿಸಿದರು.

ನಾಯಂಡಹಳ್ಳಿಯಲ್ಲಿ ವಾಹನ ಮತ್ತು ಚಾಲಕನನ್ನು ಕೆಲವು ಬಾರಿ ನೋಡಿರುವುದಾಗಿ ತಾಯಿ ತಿಳಿಸಿದ್ದರಿಂದ, ಸಂತ್ರಸ್ತೆಯ ಮಗ ತನ್ನ ಸ್ನೇಹಿತರ ಜೊತೆಗೂಡಿ ಬಸ್ ಹುಡುಕಲು ಹೊರಟನು.

ಇದನ್ನೂ ಓದಿರಿ: ಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

ರಾತ್ರಿ 8.30ರ ಸುಮಾರಿಗೆ ನಾಯಂಡಹಳ್ಳಿಯಲ್ಲಿ ಬಸ್ ಪತ್ತೆ ಹಚ್ಚಲಾಯಿತು. ಆ ವೇಳೆಗೆ ಚಾಲಕ ಕಂಠಪೂರ್ತಿ ಕುಡಿದಿದ್ದ. ಸಂತ್ರಸ್ತೆಯ ಮಗ ಮತ್ತು ಆತನ ಸ್ನೇಹಿತರು ಚಾಲಕನನ್ನು ಬಸ್‌ನಿಂದ ಹೊರಕ್ಕೆ ಎಳೆದುಕೊಂಡು ಬಂದು ಜಗಳವಾಡಿದರು. ಇವರಿಬ್ಬರ ಜಗಳ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಚಾಲಕ ಏನು ಮಾಡಿದ್ದಾನೆಂದು ಜನರಿಗೆ ತಿಳಿದಿರಲಿಲ್ಲ. ಅತ್ಯಾಚಾರ ನಡೆದಿರುವ ಕುರಿತು ಚಂದ್ರಾ ಲೇಔಟ್ ಪೊಲೀಸರಿಗೆ ಮಾಹಿತಿ ನೀಡಲಾಯಿತು.

“ನಾವು ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದೇವೆ. ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳ ತಂಡವು ಬಸ್‌ನಿಂದ ಮತ್ತು ಸಂತ್ರಸ್ತೆಯಿಂದ ಸಾಕ್ಷ್ಯವನ್ನು ಸಂಗ್ರಹಿಸಿದೆ. ಅತ್ಯಾಚಾರ, ಕೊಲೆ ಯತ್ನ ಇತರ ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಯನ್ನು ಬಂಧಿಸಿದ್ದೇವೆ” ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಲಕ್ಷ್ಮಣ ಬಿ ನಿಂಬರಗಿ ತಿಳಿಸಿದ್ದಾರೆ.

“ಶಿವಕುಮಾರ್ ಪ್ರತಿನಿತ್ಯ ಇದೇ ರಸ್ತೆಯಲ್ಲಿ ಹೋಗುತ್ತಿದ್ದರಿಂದ ಕೆಲವು ಬಾರಿ ಆತನನ್ನು ನೋಡಿದ್ದೆ, ಆದರೆ ನಾವು ಪರಿಚಯಸ್ಥರಲ್ಲ” ಎಂದು ಮಹಿಳೆ ಪೊಲೀಸರಿಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...