Homeಕರ್ನಾಟಕಬೆಂಗಳೂರು: ಡ್ರಾಪ್‌ ಮಾಡುವುದಾಗಿ ಕರೆದೋಯ್ದು ಮಹಿಳೆ ಮೇಲೆ ಅತ್ಯಾಚಾರ; ಬಸ್ ಚಾಲಕ ಅರೆಸ್ಟ್

ಬೆಂಗಳೂರು: ಡ್ರಾಪ್‌ ಮಾಡುವುದಾಗಿ ಕರೆದೋಯ್ದು ಮಹಿಳೆ ಮೇಲೆ ಅತ್ಯಾಚಾರ; ಬಸ್ ಚಾಲಕ ಅರೆಸ್ಟ್

- Advertisement -
- Advertisement -

ಪಶ್ಚಿಮ ಬೆಂಗಳೂರಿನ ನಾಯಂಡಹಳ್ಳಿ ಬಳಿ ಖಾಸಗಿ ಶಾಲಾ ಬಸ್ಸಿನ ಚಾಲಕ ತನ್ನ ವಾಹನದೊಳಗೆ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಂಗಳವಾರ ನಡೆದಿದೆ.

ಆರೋಪಿ, ನಾಯಂಡಹಳ್ಳಿ ನಿವಾಸಿ ಶಿವಕುಮಾರ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಾಗರಭಾವಿಯಲ್ಲಿ ವಾಸವಾಗಿರುವ ಅತ್ಯಾಚಾರ ಸಂತ್ರಸ್ತೆ, ಖಾಸಗಿ ಶಾಲೆಯೊಂದರಲ್ಲಿ ಆಯಾ (ಪ್ಯೂನ್) ಆಗಿ ಕೆಲಸ ಮಾಡುತ್ತಿದ್ದಾರೆ.

ಕೆಲಸ ಮುಗಿಸಿ ನಾಯಂಡಹಳ್ಳಿ ಜಂಕ್ಷನ್ ಬಳಿ ಬಸ್‌ಗಾಗಿ ಮಹಿಳೆ ಕಾಯುತ್ತಿದ್ದಾಗ ಶಿವಕುಮಾರ್ ಬಸ್‌ ಚಲಾಯಿಸಿಕೊಂಡು ಆ ಮಹಿಳೆ ಇರುವತ್ತ ಬಂದಿದ್ದನು. ಮಹಿಳೆ ಡ್ರಾಪ್ ಗಾಗಿ ಬಸ್ಸಿನತ್ತ ಕೈಬೀಸಿದ್ದರು. ಶಿವಕುಮಾರ್ ಬಸ್ ನಿಲ್ಲಿಸಿ, “ನಾನೂ ನಾಗರಭಾವಿ ಕಡೆಗೆ ಹೋಗುತ್ತಿದ್ದೇನೆ” ಎಂದು ಹೇಳಿ ಮಹಿಳೆಯನ್ನು ಬಸ್‌ನಲ್ಲಿ ಕೂರಿಸಿಕೊಂಡಿದ್ದನು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಜೆ 5.30ರ ಸುಮಾರಿಗೆ ಮಹಿಳೆ ವಾಹನವನ್ನು ಹತ್ತಿದ ಕೂಡಲೇ ಶಿವಕುಮಾರ್ ನಾಯಂಡಹಳ್ಳಿ ಜಂಕ್ಷನ್‌ನಿಂದ ಮೂರು ಕಿ.ಮೀ ಆಸುಪಾಸಿನಲ್ಲಿರುವ ಕೈಲಾಸಗಿರಿಯ ಮಲೆ ಮಹದೇಶ್ವರ ದೇವಸ್ಥಾನದ ಕಡೆಗೆ ಹೋಗಿ ಬಸ್ಸನ್ನು ರಸ್ತೆಬದಿಯಲ್ಲಿ ನಿಲ್ಲಿಸಿದ್ದನು. ಮಹಿಳೆಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಬಸ್ಸಿನೊಳಗೆ ಅತ್ಯಾಚಾರ ಎಸಗಿದ್ದಾನೆ. “ಪೊಲೀಸರನ್ನು ಸಂಪರ್ಕಿಸಬೇಡ ಅಥವಾ ಘಟನೆಯ ಬಗ್ಗೆ ಯಾರಿಗೂ ಹೇಳಬೇಡ” ಎಂದು ಬೆದರಿಸಿದ ನಂತರ ಆತ ಸಂಜೆ 7 ಗಂಟೆ ಸುಮಾರಿಗೆ ಮಹಿಳೆಯನ್ನು ಡ್ರಾಪ್ ಮಾಡಿದ್ದಾನೆ.

ಬಸ್‌ನಿಂದ ಇಳಿದ ನಂತರ ಸಂತ್ರಸ್ತ ಮಹಿಳೆಯು ನೋಂದಣಿ ಸಂಖ್ಯೆಯೊಂದಿಗೆ ವಾಹನದ ಚಿತ್ರವನ್ನು ಕ್ಲಿಕ್ ಮಾಡಿಕೊಂಡರು. ಅದನ್ನು ತನ್ನ 20 ವರ್ಷದ ಮಗನಿಗೆ ತಲುಪಿಸಿದರು. ಚಾಲಕ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಮಗನಿಗೆ ತಿಳಿಸಿದರು.

ನಾಯಂಡಹಳ್ಳಿಯಲ್ಲಿ ವಾಹನ ಮತ್ತು ಚಾಲಕನನ್ನು ಕೆಲವು ಬಾರಿ ನೋಡಿರುವುದಾಗಿ ತಾಯಿ ತಿಳಿಸಿದ್ದರಿಂದ, ಸಂತ್ರಸ್ತೆಯ ಮಗ ತನ್ನ ಸ್ನೇಹಿತರ ಜೊತೆಗೂಡಿ ಬಸ್ ಹುಡುಕಲು ಹೊರಟನು.

ಇದನ್ನೂ ಓದಿರಿ: ಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

ರಾತ್ರಿ 8.30ರ ಸುಮಾರಿಗೆ ನಾಯಂಡಹಳ್ಳಿಯಲ್ಲಿ ಬಸ್ ಪತ್ತೆ ಹಚ್ಚಲಾಯಿತು. ಆ ವೇಳೆಗೆ ಚಾಲಕ ಕಂಠಪೂರ್ತಿ ಕುಡಿದಿದ್ದ. ಸಂತ್ರಸ್ತೆಯ ಮಗ ಮತ್ತು ಆತನ ಸ್ನೇಹಿತರು ಚಾಲಕನನ್ನು ಬಸ್‌ನಿಂದ ಹೊರಕ್ಕೆ ಎಳೆದುಕೊಂಡು ಬಂದು ಜಗಳವಾಡಿದರು. ಇವರಿಬ್ಬರ ಜಗಳ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಚಾಲಕ ಏನು ಮಾಡಿದ್ದಾನೆಂದು ಜನರಿಗೆ ತಿಳಿದಿರಲಿಲ್ಲ. ಅತ್ಯಾಚಾರ ನಡೆದಿರುವ ಕುರಿತು ಚಂದ್ರಾ ಲೇಔಟ್ ಪೊಲೀಸರಿಗೆ ಮಾಹಿತಿ ನೀಡಲಾಯಿತು.

“ನಾವು ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದೇವೆ. ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳ ತಂಡವು ಬಸ್‌ನಿಂದ ಮತ್ತು ಸಂತ್ರಸ್ತೆಯಿಂದ ಸಾಕ್ಷ್ಯವನ್ನು ಸಂಗ್ರಹಿಸಿದೆ. ಅತ್ಯಾಚಾರ, ಕೊಲೆ ಯತ್ನ ಇತರ ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಯನ್ನು ಬಂಧಿಸಿದ್ದೇವೆ” ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಲಕ್ಷ್ಮಣ ಬಿ ನಿಂಬರಗಿ ತಿಳಿಸಿದ್ದಾರೆ.

“ಶಿವಕುಮಾರ್ ಪ್ರತಿನಿತ್ಯ ಇದೇ ರಸ್ತೆಯಲ್ಲಿ ಹೋಗುತ್ತಿದ್ದರಿಂದ ಕೆಲವು ಬಾರಿ ಆತನನ್ನು ನೋಡಿದ್ದೆ, ಆದರೆ ನಾವು ಪರಿಚಯಸ್ಥರಲ್ಲ” ಎಂದು ಮಹಿಳೆ ಪೊಲೀಸರಿಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...