Homeಮುಖಪುಟಬಿಜೆಪಿ, ಆರ್‌ಎಸ್‌ಎಸ್‌ನವರು ಶ್ರೀರಾಮನಂತೆ ಜೀವನ ನಡೆಸಲ್ಲ: ರಾಹುಲ್‌

ಬಿಜೆಪಿ, ಆರ್‌ಎಸ್‌ಎಸ್‌ನವರು ಶ್ರೀರಾಮನಂತೆ ಜೀವನ ನಡೆಸಲ್ಲ: ರಾಹುಲ್‌

- Advertisement -
- Advertisement -

ಬಿಜೆಪಿ ಮತ್ತು ಆರೆಸ್ಸೆಸ್ ಜನರು ಭಗವಾನ್ ರಾಮನು ನಡೆಸಿದ ರೀತಿಯಲ್ಲಿ ತಮ್ಮ ಜೀವನವನ್ನು ನಡೆಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

ತಮ್ಮ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಅವರು, “ಮಹಾತ್ಮ ಗಾಂಧಿಯವರು ಬಳಸಿದ ‘ಹೇ ರಾಮ್’ ಎಂಬ ನುಡಿಗಟ್ಟು ‘ಜೀವನದ ಮಾರ್ಗ’ವನ್ನು ಸೂಚಿಸುತ್ತದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಸ್ತುತ ಮಧ್ಯಪ್ರದೇಶದ ಮೂಲಕ ಹಾದು ಹೋಗುತ್ತಿರುವ ಭಾರತ್ ಜೋಡೋ ಪಾದಯಾತ್ರೆಯು ಶುಕ್ರವಾರ ಸಂಜೆ ಅಗರ್ ಮಾಲ್ವಾ ಜಿಲ್ಲೆಯಲ್ಲಿ ವಿರಾಮ ಪಡೆಯಿತು. “ಮಧ್ಯಪ್ರದೇಶದಲ್ಲಿ ಯಾತ್ರೆಯ ವೇಳೆ ನನ್ನನ್ನು ಭೇಟಿಯಾಗಲು ಬಂದಿದ್ದ ಅರ್ಚಕರೊಬ್ಬರು ಗಾಂಧೀಜಿಯವರು ಆಗಾಗ ಬಳಸುತ್ತಿದ್ದ ‘ಹೇ ರಾಮ್’ ಪದದ ಅರ್ಥವನ್ನು ಹೇಳಿದರು. ಹೇ ರಾಮ್ ಒಂದು ಜೀವನ ವಿಧಾನ. ಇದು ಇಡೀ ಜಗತ್ತಿಗೆ ಪ್ರೀತಿ, ಭ್ರಾತೃತ್ವ, ಗೌರವ ಮತ್ತು ತಪಸ್ಸಿನ ಅರ್ಥವನ್ನು ಕಲಿಸಿತು” ಎಂದು ರಾಹುಲ್ ಅಭಿಪ್ರಾಯಪಟ್ಟಿದ್ದಾರೆ.

“ಅದೇ ರೀತಿ, ‘ಜೈ ಸಿಯಾ ರಾಮ್’ ಎಂದರೆ ಸೀತೆ ಮತ್ತು ರಾಮರು ಒಬ್ಬರೇ. ಶ್ರೀರಾಮನು ಸೀತೆಯ ಗೌರವಕ್ಕಾಗಿ ಹೋರಾಡಿದನು” ಎಂದು ಅವರು ತಿಳಿಸಿದ್ದಾರೆ.

“ಜೈ ಶ್ರೀರಾಮ್ ಎಂದರೆ ಭಗವಾನ್ ರಾಮನನ್ನು ಸ್ತುತಿಸುವುದಾಗಿದೆ. ಆದರೆ ಬಿಜೆಪಿ ಮತ್ತು ಆರೆಸ್ಸೆಸ್ ಜನರು ಭಗವಾನ್‌ ರಾಮನಂತೆ ತಮ್ಮ ಜೀವನವನ್ನು ನಡೆಸುತ್ತಿಲ್ಲ. ಮಹಿಳೆಯರ ಗೌರವಕ್ಕಾಗಿ ಹೋರಾಡುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಗುರುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. “ಭಗವಾನ್ ರಾಮನ ಅಸ್ತಿತ್ವವನ್ನು ಎಂದಿಗೂ ನಂಬದವರು ಈಗ ಅವನನ್ನು ನಿಂದಿಸಲು ‘ರಾವಣನನ್ನು ಕರೆತಂದಿದ್ದಾರೆ’” ಎಂದು ಮೋದಿ ಪ್ರತಿಕ್ರಿಯಿಸಿದ್ದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಮೋದಿ ಉಲ್ಲೇಖಿಸಿದ್ದರು. “ಎಲ್ಲಾ ಚುನಾವಣೆಗಳಲ್ಲಿಯೂ ತಮ್ಮ ಮುಖವನ್ನು ನೋಡಿಕೊಂಡು ಮತ ಚಲಾಯಿಸುವಂತೆ ಪ್ರಧಾನಿ ಕೇಳುತ್ತಾರೆ” ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. “ನೀವು ರಾವಣನಂತೆ 100 ತಲೆ ಹೊಂದಿದ್ದೀರಾ?” ಎಂದು ಖರ್ಗೆ ಪ್ರಶ್ನಿಸಿದ್ದರು.

ಇದೇ ವೇಳೆ, ಕೇಂದ್ರ ಹಾಗೂ ಮಧ್ಯಪ್ರದೇಶದ ಬಿಜೆಪಿ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಮಾತನಾಡಿರುವ ರಾಹುಲ್ ಗಾಂಧಿ, “ರೈತರಿಗೆ ರಸಗೊಬ್ಬರ ಸಿಗುತ್ತಿಲ್ಲ ಮತ್ತು 50 ಸಾವಿರದಿಂದ ಒಂದು ಲಕ್ಷ ರೂಪಾಯಿ ಸಾಲ ಮರುಪಾವತಿ ಮಾಡದೆ ಸತಾಯಿಸಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

“ಪಾಲಕರು ತಮ್ಮ ಮಗನನ್ನು ಇಂಜಿನಿಯರ್ ಮಾಡಲು ಶೈಕ್ಷಣಿಕ ಸಾಲವನ್ನು ತೆಗೆದುಕೊಳ್ಳುತ್ತಾರೆ, ಆದರೆ ಪದವಿ ಪಡೆದ ನಂತರ, ಯುವ ಇಂಜಿನಿಯರ್‌ಗಳು ಉದ್ಯೋಗದ ಕೊರತೆಯಿಂದಾಗಿ ಕಾರ್ಮಿಕರಾಗಿ ದುಡಿಯುತ್ತಾರೆ” ಎಂದು ರಾಹುಲ್ ಬೇಸರ ವ್ಯಕ್ತಪಡಿಸಿದ್ದಾರೆ.

“ಚಿಕ್ಕಪುಟ್ಟ ಅಂಗಡಿಗಳು, ಗೃಹ ಸಂಬಂಧಿ ಕೆಲಸಗಳು ದೊಡ್ಡ ಉದ್ಯೋಗ ಮೂಲವಾಗಿವೆ. ಆದರೆ ಇವುಗಳನ್ನು ಅವಲಂಬಿಸಿರುವವರು ಜಿಎಸ್‌ಟಿ ಮತ್ತು ನೋಟ್‌ ಬ್ಯಾನ್‌ನಿಂದ ತೀವ್ರವಾಗಿ ಹೊಡೆತ ತಿಂದಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಉದ್ಯೋಗದ ಮತ್ತೊಂದು ಪ್ರಮುಖ ಮೂಲವೆಂದರೆ ಸಾರ್ವಜನಿಕ ವಲಯದ ಉದ್ಯಮಗಳು (ಪಿಎಸ್‌ಯು). ಆದರೆ ಅವುಗಳನ್ನು ಸಹ ಮುಚ್ಚಲಾಗುತ್ತಿದೆ. ಆಸ್ಪತ್ರೆಗಳು ಮತ್ತು ಶಾಲೆಗಳನ್ನು ಸಹ ಖಾಸಗೀಕರಣಗೊಳಿಸಲಾಗುತ್ತಿದೆ, ಹೀಗಾಗಿ ಎಲ್ಲಾ ಉದ್ಯೋಗಾವಕಾಶಗಳನ್ನು ಕೊನೆಗೊಳಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಪ.ಬಂಗಾಳ: ಟಿಎಂಸಿ ಮುಖಂಡನ ಮನೆಯಲ್ಲಿ ಬಾಂಬ್ ಸ್ಫೋಟ, ಮೂರು ಸಾವು

ಬೆಲೆ ಏರಿಕೆಯನ್ನು ಉಲ್ಲೇಖಿಸಿದ ಅವರು, “ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 60 ರೂ. ಇತ್ತು. ಆದರೆ ಈಗ ಅದು ಲೀಟರ್‌ಗೆ 107 ರೂ.ಗೆ ಏರಿಕೆಯಾಗಿದೆ. 400 ರೂಪಾಯಿ ಬೆಲೆಯ ಎಲ್‌ಪಿಜಿ ಸಿಲಿಂಡರ್ ಈಗ 1,000 ರೂಪಾಯಿಗಿಂತ ಹೆಚ್ಚಿದೆ” ಎಂದು ಟೀಕಿಸಿದ್ದಾರೆ.

“ಸಾಮಾನ್ಯ ಜನರ ಜೇಬಿನಿಂದ ಹಣ ತೆಗೆದು ಕೈಗಾರಿಕೋದ್ಯಮಿಗಳಿಗೆ ನೀಡಲಾಗುತ್ತಿದೆ. ಇದರ ಪರಿಣಾಮವಾಗಿ, ಈಗ ದೇಶದಲ್ಲಿ ಎರಡು ವಿಭಾಗಗಳಿವೆ. ಒಂದು ವಿಭಾಗದಲ್ಲಿ ಬಿಲಿಯನೇರ್ ಕೈಗಾರಿಕೋದ್ಯಮಿಗಳು ಇದ್ದಾರೆ. ಮತ್ತೊಂದು ವಿಭಾಗದಲ್ಲಿ ರೈತರು, ಕಾರ್ಮಿಕರು ಮತ್ತು ಸಣ್ಣ ಅಂಗಡಿ ಮಾಲೀಕರು ಇದ್ದಾರೆ” ಎಂದು ಎಚ್ಚರಿಸಿದ್ದಾರೆ.

“ಜನರು ಈ ಪರಿಸ್ಥಿತಿಯನ್ನು ಬಯಸುವುದಿಲ್ಲ. ಅವರು ನ್ಯಾಯವನ್ನು ಬಯಸುತ್ತಾರೆ. ಅವರಿಗೆ ನ್ಯಾಯವನ್ನು ದೊರಕಿಸುವುದು ಭಾರತ್ ಜೋಡೋ ಯಾತ್ರೆಯ ಮುಖ್ಯ ಗುರಿಯಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...