Homeಕರ್ನಾಟಕ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

- Advertisement -
- Advertisement -

ಬಿಜೆಪಿಗೆ ರೌಡಿ ಶೀಟರ್‌ಗಳು ಸೇರ್ಪಡೆಯಾಗಿರುವ ಬೆನ್ನಲ್ಲೇ ‘ಬಿಜೆಪಿ ರೌಡಿ ಮೋರ್ಚಾ’ ಹೆಸರಲ್ಲಿ ವೆಬ್‌ಸೈಟ್ ತೆರೆದಿರುವ ಪ್ರತಿಪಕ್ಷ ಕಾಂಗ್ರೆಸ್‌ ಬಿಜೆಪಿಯ ಮೇಲೆ ವಿನೂತನವಾಗಿ ದಾಳಿ ನಡೆಸಿದೆ.

‘ಬಿಜೆಪಿರೌಡಿಮೋರ್ಚಾ.ಕಾಂ’ (www.bjprowdymorcha.com) ಎಂದು ವೈಬ್‌ಸೈಟ್ ತೆರೆಯಲಾಗಿದ್ದು, ಅದರಲ್ಲಿ ಕೆಲವು ರೌಡಿ ಶೀಟರ್‌ಗಳ ವಿವರಣೆ ಹಾಕಿ, “2023 ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ” ಎಂದು ಬರೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯ ಚಿಹ್ನೆಯಾದ ಕಮಲವನ್ನು ಎರಡು ಬದಿಯಲ್ಲಿ ತಲೆಕೆಳಗಾಗಿ ಚಿತ್ರಿಸಿರುವ ಲೋಗೋದೊಂದಿಗೆ ‘ಬಿಜೆಪಿ ರೌಡಿ ಮೋರ್ಚಾ’ ಎಂದು ದೊಡ್ಡದಾದ ಶೀರ್ಷಿಕೆ ನೀಡಿರುವುದನ್ನು ವೆಬ್‌ಸೈಟ್ ತೆರೆದ ತಕ್ಷಣ ಕಾಣಬಹುದು.

“ಚುನಾವಣೆ ಹತ್ತಿರ ಬರುತ್ತಿದೆ, ಜನರು ನಮ್ಮಿಂದ ದೂರ ಹೋಗುತ್ತಿದ್ದಾರೆ. ಆಪರೇಷನ್ ಕಮಲ ಮಾಡಿದರೂ ಗೆಲ್ಲುವುದು ಗ್ಯಾರಂಟಿ ಇಲ್ಲದ ಕಾರಣ ‘ಬಿಜೆಪಿ ರೌಡಿ ಮೋರ್ಚಾ’ ಸ್ಥಾಪಿಸುವುದಕ್ಕಾಗಿ ‘ಆಪರೇಷನ್ ರೌಡಿ ಶೀಟರ್‌’ ಪ್ರಾರಂಭಿಸಿದ್ದೇವೆ” ಎಂದು ನಂತರದಲ್ಲಿ ವಿವರಣೆ ನೀಡಲಾಗಿದೆ.

ಇದಾದ ಬಳಿಕ ‘2023 ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ’ ಎಂದು ಕೆಲವು ರೌಡಿಗಳ ಫೋಟೋದೊಂದಿಗೆ ಅವರ ಹೆಸರು ಹಾಗೂ ಸಾಧನೆಯನ್ನು ಬರೆಯಲಾಗಿದೆ. ಉದಾಹರಣೆಗೆ: ವಿಲ್ಸನ್‌ ಗಾರ್ಡನ್ ನಾಗ (ಸಾಧನೆಗಳು- ಕೊಲೆ ಕೇಸುಗಳು ಸೇರಿದಂತೆ ಹಲವು ಗ್ಯಾಂಗ್ ವಾರ್‌ಗಳಲ್ಲಿ ಭಾಗಿ), ಸಲೆಂಟ್ ಸುನೀಲ್‌ (ಸಾಧನೆಗಳು- ಪೊಲೀಸ್ ಪೇದೆ ಮರ್ಡರ್‌ ಕೇಸ್ ಸೇರಿದಂತೆ 17 ಕೊಲೆ, ದರೋಡೆ ಮತ್ತು ಸುಲಿಗೆ ಆರೋಪಗಳು), ಬೆತ್ತನಗೆರೆ ಶಂಕರ್‌ (ಸಾಧನೆಗಳು- ವಕೀಲರ ಡಬಲ್ ಮರ್ಡರ್‌ ಕೇಸ್ ಸೇರಿದಂತೆ ಹಲವಾರು ಕೊಲೆ, ಕಿಡ್ನಾಪ್ ಮತ್ತು ಸುಲಿಗೆ ಆರೋಪಗಳು), ಫೈಟರ್‌ ರವಿ (ಸಾಧನೆಗಳು- ಬೆಟ್ಟಿಂಗ್ ದಂಧೆಯಲ್ಲಿ ಪರಿಣಿತ, ರೌಡಿ ಶೀಟರ್‌ ಪೆರೇಡ್‌ನಲ್ಲಿ ಭಾಗಿ)- ಈ ರೀತಿಯಲ್ಲಿ ಬರೆದು ವ್ಯಂಗ್ಯ ಮಾಡಲಾಗಿದೆ.

ನಾರ್ವೆ ಸೋಮಶೇಖರ್‌, ರೌಡಿ ಶೀಟರ್‌ ಉಪ್ಪಿ, ಮಣಿಕಂಠ ರಾಥೋಡ್‌, ರಾಜೇಂದ್ರ, ಸಂಗಾತಿ ವೆಂಕಟೇಶ್‌ ಎಂಬವರ ಪೋಟೋಗಳನ್ನು ಪ್ರಕಟಿಸಿ, ಅವರ ಪರಿಚಯವನ್ನು ಮಾಡಲಾಗಿದೆ.

‘ನಮ್ಮ ಅಭ್ಯರ್ಥಿಗಳ ಅರ್ಹತೆಗಳು’ ಎಂಬ ವಿಭಾಗದಲ್ಲಿ “ಶಿಕ್ಷಣ ಮತ್ತು ಮನುಷ್ಯತ್ವದ ಕೊರತೆ, ಬಡವರ ರಕ್ತ ಹೀರುವ ಕಲೆಗಾರಿಕೆ, ಅಧಿಕಾರಕ್ಕಾಗಿ ಏನಾದರೂ ಮಾಡುವ ಮನಸ್ಥಿತಿ, ಅಪರಾಧ ಮಾಡಿರುವ ಅತ್ಯುತ್ತಮ ಟ್ರಾಕ್ ರೆಕಾರ್ಡ್” ಎಂದು ಬರೆಯಲಾಗಿದೆ.

ಇದನ್ನೂ ಓದಿರಿ: ಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

ರೌಡಿ ಶೀಟರ್‌ಗಳು ಬಿಜೆಪಿಗೆ ಸೇರುತ್ತಿದ್ದಾರೆಂಬ ವಿಚಾರಗಳಿಗೆ ಕೆಲವು ಬಿಜೆಪಿ ನಾಯಕರು ನೀಡಿರುವ ಪ್ರತಿಕ್ರಿಯೆಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ. ಅವುಗಳು ಹೀಗಿವೆ: “ರಾಜಕೀಯದಲ್ಲಿ ಅಚಾತುರ್ಯ ಆಗುತ್ತೆ. ಎಲ್ಲವನ್ನೂ ಕ್ರಿಮಿನಲ್ ಕೇಸ್ ಎಂದು ಹೇಳಲು ಆಗಲ್ಲ- ನಳೀನ್‌ಕುಮಾರ್‌ ಕಟೀಲ್‌”, “ರೌಡಿ ಶೀಟರ್ ಪಟ್ಟಿಯಲ್ಲಿರುವವರನ್ನು ರೌಡಿಗಳೆಂದು ಕರೆಯುವುದು ಸಮಂಜಸವಿಲ್ಲ. ಯಾಕಂದ್ರೆ ನನ್ನ ಹೆಸರೂ ರೌಡಿಗಳ ಪಟ್ಟಿಯಲ್ಲಿತ್ತು- ಸಿ.ಟಿ.ರವಿ”, “ಪಕ್ಷಕ್ಕೆ ಸುಮಾರು ಜನ ಸೇರ್ತಾ ಇರ್ತಾರೆ. ನಾವು ಎಲ್ಲರ ಪೂರ್ವ-ಪರ ವಿಚಾರಿಸೋಕೆ ಆಗಲ್ಲ- ಪ್ರತಾಪ್ ಸಿಂಹ”.

ಬಿಜೆಪಿಗೆ ರೌಡಿ ಶೀಟರ್‌ಗಳು ಸೇರಿರುವ ಕುರಿತ ವಿಡಿಯೊ ಸುದ್ದಿಯನ್ನು ಕೊನೆಯಲ್ಲಿ ಲಗತ್ತಿಸಲಾಗಿದೆ. ಈ ವೆಬ್‌ಸೈಟ್ ಯಾರು ಮಾಡಿದ್ದಾರೆಂದು ಥಟ್ಟನೆ ಗೊತ್ತಾಗುವುದಿಲ್ಲ. ಆದರೆ ಕಾಂಗ್ರೆಸ್ ತೆರೆದಿರುವ “40ಪರ್ಸೆಂಟ್‌.ಕಾಂ” ವೆಬ್‌ಸೈಟ್‌ಗೂ ಈ ವೆಬ್‌ಸೈಟ್‌ಗೂ ಸಾಮ್ಯತೆ ಕಂಡು ಬರುತ್ತಿದೆ. ಜೊತೆಗೆ ಕೊನೆಯಲ್ಲಿ ಚಿಕ್ಕ ಅಕ್ಷರಗಳಲ್ಲಿ “ಹೆಚ್ಚಿನ ವಿವರಗಳಿಗೆ www.40percentsarkara.comಗೆ ಭೇಟಿ ನೀಡಿ (For more information about the candidates log into to www.40percentsarkara.com or dial  844 770 40 40)” ಎಂಬ ಸೂಚನೆಯನ್ನು ನೀಡಿರುವುದರಿಂದ ಇದು ಕಾಂಗ್ರೆಸ್ ಮಾಡಿರುವ ಜಾಲತಾಣವೆಂಬುದು ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...