Homeಕರ್ನಾಟಕ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

- Advertisement -
- Advertisement -

ಬಿಜೆಪಿಗೆ ರೌಡಿ ಶೀಟರ್‌ಗಳು ಸೇರ್ಪಡೆಯಾಗಿರುವ ಬೆನ್ನಲ್ಲೇ ‘ಬಿಜೆಪಿ ರೌಡಿ ಮೋರ್ಚಾ’ ಹೆಸರಲ್ಲಿ ವೆಬ್‌ಸೈಟ್ ತೆರೆದಿರುವ ಪ್ರತಿಪಕ್ಷ ಕಾಂಗ್ರೆಸ್‌ ಬಿಜೆಪಿಯ ಮೇಲೆ ವಿನೂತನವಾಗಿ ದಾಳಿ ನಡೆಸಿದೆ.

‘ಬಿಜೆಪಿರೌಡಿಮೋರ್ಚಾ.ಕಾಂ’ (www.bjprowdymorcha.com) ಎಂದು ವೈಬ್‌ಸೈಟ್ ತೆರೆಯಲಾಗಿದ್ದು, ಅದರಲ್ಲಿ ಕೆಲವು ರೌಡಿ ಶೀಟರ್‌ಗಳ ವಿವರಣೆ ಹಾಕಿ, “2023 ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ” ಎಂದು ಬರೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯ ಚಿಹ್ನೆಯಾದ ಕಮಲವನ್ನು ಎರಡು ಬದಿಯಲ್ಲಿ ತಲೆಕೆಳಗಾಗಿ ಚಿತ್ರಿಸಿರುವ ಲೋಗೋದೊಂದಿಗೆ ‘ಬಿಜೆಪಿ ರೌಡಿ ಮೋರ್ಚಾ’ ಎಂದು ದೊಡ್ಡದಾದ ಶೀರ್ಷಿಕೆ ನೀಡಿರುವುದನ್ನು ವೆಬ್‌ಸೈಟ್ ತೆರೆದ ತಕ್ಷಣ ಕಾಣಬಹುದು.

“ಚುನಾವಣೆ ಹತ್ತಿರ ಬರುತ್ತಿದೆ, ಜನರು ನಮ್ಮಿಂದ ದೂರ ಹೋಗುತ್ತಿದ್ದಾರೆ. ಆಪರೇಷನ್ ಕಮಲ ಮಾಡಿದರೂ ಗೆಲ್ಲುವುದು ಗ್ಯಾರಂಟಿ ಇಲ್ಲದ ಕಾರಣ ‘ಬಿಜೆಪಿ ರೌಡಿ ಮೋರ್ಚಾ’ ಸ್ಥಾಪಿಸುವುದಕ್ಕಾಗಿ ‘ಆಪರೇಷನ್ ರೌಡಿ ಶೀಟರ್‌’ ಪ್ರಾರಂಭಿಸಿದ್ದೇವೆ” ಎಂದು ನಂತರದಲ್ಲಿ ವಿವರಣೆ ನೀಡಲಾಗಿದೆ.

ಇದಾದ ಬಳಿಕ ‘2023 ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ’ ಎಂದು ಕೆಲವು ರೌಡಿಗಳ ಫೋಟೋದೊಂದಿಗೆ ಅವರ ಹೆಸರು ಹಾಗೂ ಸಾಧನೆಯನ್ನು ಬರೆಯಲಾಗಿದೆ. ಉದಾಹರಣೆಗೆ: ವಿಲ್ಸನ್‌ ಗಾರ್ಡನ್ ನಾಗ (ಸಾಧನೆಗಳು- ಕೊಲೆ ಕೇಸುಗಳು ಸೇರಿದಂತೆ ಹಲವು ಗ್ಯಾಂಗ್ ವಾರ್‌ಗಳಲ್ಲಿ ಭಾಗಿ), ಸಲೆಂಟ್ ಸುನೀಲ್‌ (ಸಾಧನೆಗಳು- ಪೊಲೀಸ್ ಪೇದೆ ಮರ್ಡರ್‌ ಕೇಸ್ ಸೇರಿದಂತೆ 17 ಕೊಲೆ, ದರೋಡೆ ಮತ್ತು ಸುಲಿಗೆ ಆರೋಪಗಳು), ಬೆತ್ತನಗೆರೆ ಶಂಕರ್‌ (ಸಾಧನೆಗಳು- ವಕೀಲರ ಡಬಲ್ ಮರ್ಡರ್‌ ಕೇಸ್ ಸೇರಿದಂತೆ ಹಲವಾರು ಕೊಲೆ, ಕಿಡ್ನಾಪ್ ಮತ್ತು ಸುಲಿಗೆ ಆರೋಪಗಳು), ಫೈಟರ್‌ ರವಿ (ಸಾಧನೆಗಳು- ಬೆಟ್ಟಿಂಗ್ ದಂಧೆಯಲ್ಲಿ ಪರಿಣಿತ, ರೌಡಿ ಶೀಟರ್‌ ಪೆರೇಡ್‌ನಲ್ಲಿ ಭಾಗಿ)- ಈ ರೀತಿಯಲ್ಲಿ ಬರೆದು ವ್ಯಂಗ್ಯ ಮಾಡಲಾಗಿದೆ.

ನಾರ್ವೆ ಸೋಮಶೇಖರ್‌, ರೌಡಿ ಶೀಟರ್‌ ಉಪ್ಪಿ, ಮಣಿಕಂಠ ರಾಥೋಡ್‌, ರಾಜೇಂದ್ರ, ಸಂಗಾತಿ ವೆಂಕಟೇಶ್‌ ಎಂಬವರ ಪೋಟೋಗಳನ್ನು ಪ್ರಕಟಿಸಿ, ಅವರ ಪರಿಚಯವನ್ನು ಮಾಡಲಾಗಿದೆ.

‘ನಮ್ಮ ಅಭ್ಯರ್ಥಿಗಳ ಅರ್ಹತೆಗಳು’ ಎಂಬ ವಿಭಾಗದಲ್ಲಿ “ಶಿಕ್ಷಣ ಮತ್ತು ಮನುಷ್ಯತ್ವದ ಕೊರತೆ, ಬಡವರ ರಕ್ತ ಹೀರುವ ಕಲೆಗಾರಿಕೆ, ಅಧಿಕಾರಕ್ಕಾಗಿ ಏನಾದರೂ ಮಾಡುವ ಮನಸ್ಥಿತಿ, ಅಪರಾಧ ಮಾಡಿರುವ ಅತ್ಯುತ್ತಮ ಟ್ರಾಕ್ ರೆಕಾರ್ಡ್” ಎಂದು ಬರೆಯಲಾಗಿದೆ.

ಇದನ್ನೂ ಓದಿರಿ: ಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

ರೌಡಿ ಶೀಟರ್‌ಗಳು ಬಿಜೆಪಿಗೆ ಸೇರುತ್ತಿದ್ದಾರೆಂಬ ವಿಚಾರಗಳಿಗೆ ಕೆಲವು ಬಿಜೆಪಿ ನಾಯಕರು ನೀಡಿರುವ ಪ್ರತಿಕ್ರಿಯೆಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ. ಅವುಗಳು ಹೀಗಿವೆ: “ರಾಜಕೀಯದಲ್ಲಿ ಅಚಾತುರ್ಯ ಆಗುತ್ತೆ. ಎಲ್ಲವನ್ನೂ ಕ್ರಿಮಿನಲ್ ಕೇಸ್ ಎಂದು ಹೇಳಲು ಆಗಲ್ಲ- ನಳೀನ್‌ಕುಮಾರ್‌ ಕಟೀಲ್‌”, “ರೌಡಿ ಶೀಟರ್ ಪಟ್ಟಿಯಲ್ಲಿರುವವರನ್ನು ರೌಡಿಗಳೆಂದು ಕರೆಯುವುದು ಸಮಂಜಸವಿಲ್ಲ. ಯಾಕಂದ್ರೆ ನನ್ನ ಹೆಸರೂ ರೌಡಿಗಳ ಪಟ್ಟಿಯಲ್ಲಿತ್ತು- ಸಿ.ಟಿ.ರವಿ”, “ಪಕ್ಷಕ್ಕೆ ಸುಮಾರು ಜನ ಸೇರ್ತಾ ಇರ್ತಾರೆ. ನಾವು ಎಲ್ಲರ ಪೂರ್ವ-ಪರ ವಿಚಾರಿಸೋಕೆ ಆಗಲ್ಲ- ಪ್ರತಾಪ್ ಸಿಂಹ”.

ಬಿಜೆಪಿಗೆ ರೌಡಿ ಶೀಟರ್‌ಗಳು ಸೇರಿರುವ ಕುರಿತ ವಿಡಿಯೊ ಸುದ್ದಿಯನ್ನು ಕೊನೆಯಲ್ಲಿ ಲಗತ್ತಿಸಲಾಗಿದೆ. ಈ ವೆಬ್‌ಸೈಟ್ ಯಾರು ಮಾಡಿದ್ದಾರೆಂದು ಥಟ್ಟನೆ ಗೊತ್ತಾಗುವುದಿಲ್ಲ. ಆದರೆ ಕಾಂಗ್ರೆಸ್ ತೆರೆದಿರುವ “40ಪರ್ಸೆಂಟ್‌.ಕಾಂ” ವೆಬ್‌ಸೈಟ್‌ಗೂ ಈ ವೆಬ್‌ಸೈಟ್‌ಗೂ ಸಾಮ್ಯತೆ ಕಂಡು ಬರುತ್ತಿದೆ. ಜೊತೆಗೆ ಕೊನೆಯಲ್ಲಿ ಚಿಕ್ಕ ಅಕ್ಷರಗಳಲ್ಲಿ “ಹೆಚ್ಚಿನ ವಿವರಗಳಿಗೆ www.40percentsarkara.comಗೆ ಭೇಟಿ ನೀಡಿ (For more information about the candidates log into to www.40percentsarkara.com or dial  844 770 40 40)” ಎಂಬ ಸೂಚನೆಯನ್ನು ನೀಡಿರುವುದರಿಂದ ಇದು ಕಾಂಗ್ರೆಸ್ ಮಾಡಿರುವ ಜಾಲತಾಣವೆಂಬುದು ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...