Homeಕರ್ನಾಟಕ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

- Advertisement -
- Advertisement -

ಬಿಜೆಪಿಗೆ ರೌಡಿ ಶೀಟರ್‌ಗಳು ಸೇರ್ಪಡೆಯಾಗಿರುವ ಬೆನ್ನಲ್ಲೇ ‘ಬಿಜೆಪಿ ರೌಡಿ ಮೋರ್ಚಾ’ ಹೆಸರಲ್ಲಿ ವೆಬ್‌ಸೈಟ್ ತೆರೆದಿರುವ ಪ್ರತಿಪಕ್ಷ ಕಾಂಗ್ರೆಸ್‌ ಬಿಜೆಪಿಯ ಮೇಲೆ ವಿನೂತನವಾಗಿ ದಾಳಿ ನಡೆಸಿದೆ.

‘ಬಿಜೆಪಿರೌಡಿಮೋರ್ಚಾ.ಕಾಂ’ (www.bjprowdymorcha.com) ಎಂದು ವೈಬ್‌ಸೈಟ್ ತೆರೆಯಲಾಗಿದ್ದು, ಅದರಲ್ಲಿ ಕೆಲವು ರೌಡಿ ಶೀಟರ್‌ಗಳ ವಿವರಣೆ ಹಾಕಿ, “2023 ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ” ಎಂದು ಬರೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯ ಚಿಹ್ನೆಯಾದ ಕಮಲವನ್ನು ಎರಡು ಬದಿಯಲ್ಲಿ ತಲೆಕೆಳಗಾಗಿ ಚಿತ್ರಿಸಿರುವ ಲೋಗೋದೊಂದಿಗೆ ‘ಬಿಜೆಪಿ ರೌಡಿ ಮೋರ್ಚಾ’ ಎಂದು ದೊಡ್ಡದಾದ ಶೀರ್ಷಿಕೆ ನೀಡಿರುವುದನ್ನು ವೆಬ್‌ಸೈಟ್ ತೆರೆದ ತಕ್ಷಣ ಕಾಣಬಹುದು.

“ಚುನಾವಣೆ ಹತ್ತಿರ ಬರುತ್ತಿದೆ, ಜನರು ನಮ್ಮಿಂದ ದೂರ ಹೋಗುತ್ತಿದ್ದಾರೆ. ಆಪರೇಷನ್ ಕಮಲ ಮಾಡಿದರೂ ಗೆಲ್ಲುವುದು ಗ್ಯಾರಂಟಿ ಇಲ್ಲದ ಕಾರಣ ‘ಬಿಜೆಪಿ ರೌಡಿ ಮೋರ್ಚಾ’ ಸ್ಥಾಪಿಸುವುದಕ್ಕಾಗಿ ‘ಆಪರೇಷನ್ ರೌಡಿ ಶೀಟರ್‌’ ಪ್ರಾರಂಭಿಸಿದ್ದೇವೆ” ಎಂದು ನಂತರದಲ್ಲಿ ವಿವರಣೆ ನೀಡಲಾಗಿದೆ.

ಇದಾದ ಬಳಿಕ ‘2023 ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ’ ಎಂದು ಕೆಲವು ರೌಡಿಗಳ ಫೋಟೋದೊಂದಿಗೆ ಅವರ ಹೆಸರು ಹಾಗೂ ಸಾಧನೆಯನ್ನು ಬರೆಯಲಾಗಿದೆ. ಉದಾಹರಣೆಗೆ: ವಿಲ್ಸನ್‌ ಗಾರ್ಡನ್ ನಾಗ (ಸಾಧನೆಗಳು- ಕೊಲೆ ಕೇಸುಗಳು ಸೇರಿದಂತೆ ಹಲವು ಗ್ಯಾಂಗ್ ವಾರ್‌ಗಳಲ್ಲಿ ಭಾಗಿ), ಸಲೆಂಟ್ ಸುನೀಲ್‌ (ಸಾಧನೆಗಳು- ಪೊಲೀಸ್ ಪೇದೆ ಮರ್ಡರ್‌ ಕೇಸ್ ಸೇರಿದಂತೆ 17 ಕೊಲೆ, ದರೋಡೆ ಮತ್ತು ಸುಲಿಗೆ ಆರೋಪಗಳು), ಬೆತ್ತನಗೆರೆ ಶಂಕರ್‌ (ಸಾಧನೆಗಳು- ವಕೀಲರ ಡಬಲ್ ಮರ್ಡರ್‌ ಕೇಸ್ ಸೇರಿದಂತೆ ಹಲವಾರು ಕೊಲೆ, ಕಿಡ್ನಾಪ್ ಮತ್ತು ಸುಲಿಗೆ ಆರೋಪಗಳು), ಫೈಟರ್‌ ರವಿ (ಸಾಧನೆಗಳು- ಬೆಟ್ಟಿಂಗ್ ದಂಧೆಯಲ್ಲಿ ಪರಿಣಿತ, ರೌಡಿ ಶೀಟರ್‌ ಪೆರೇಡ್‌ನಲ್ಲಿ ಭಾಗಿ)- ಈ ರೀತಿಯಲ್ಲಿ ಬರೆದು ವ್ಯಂಗ್ಯ ಮಾಡಲಾಗಿದೆ.

ನಾರ್ವೆ ಸೋಮಶೇಖರ್‌, ರೌಡಿ ಶೀಟರ್‌ ಉಪ್ಪಿ, ಮಣಿಕಂಠ ರಾಥೋಡ್‌, ರಾಜೇಂದ್ರ, ಸಂಗಾತಿ ವೆಂಕಟೇಶ್‌ ಎಂಬವರ ಪೋಟೋಗಳನ್ನು ಪ್ರಕಟಿಸಿ, ಅವರ ಪರಿಚಯವನ್ನು ಮಾಡಲಾಗಿದೆ.

‘ನಮ್ಮ ಅಭ್ಯರ್ಥಿಗಳ ಅರ್ಹತೆಗಳು’ ಎಂಬ ವಿಭಾಗದಲ್ಲಿ “ಶಿಕ್ಷಣ ಮತ್ತು ಮನುಷ್ಯತ್ವದ ಕೊರತೆ, ಬಡವರ ರಕ್ತ ಹೀರುವ ಕಲೆಗಾರಿಕೆ, ಅಧಿಕಾರಕ್ಕಾಗಿ ಏನಾದರೂ ಮಾಡುವ ಮನಸ್ಥಿತಿ, ಅಪರಾಧ ಮಾಡಿರುವ ಅತ್ಯುತ್ತಮ ಟ್ರಾಕ್ ರೆಕಾರ್ಡ್” ಎಂದು ಬರೆಯಲಾಗಿದೆ.

ಇದನ್ನೂ ಓದಿರಿ: ಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

ರೌಡಿ ಶೀಟರ್‌ಗಳು ಬಿಜೆಪಿಗೆ ಸೇರುತ್ತಿದ್ದಾರೆಂಬ ವಿಚಾರಗಳಿಗೆ ಕೆಲವು ಬಿಜೆಪಿ ನಾಯಕರು ನೀಡಿರುವ ಪ್ರತಿಕ್ರಿಯೆಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ. ಅವುಗಳು ಹೀಗಿವೆ: “ರಾಜಕೀಯದಲ್ಲಿ ಅಚಾತುರ್ಯ ಆಗುತ್ತೆ. ಎಲ್ಲವನ್ನೂ ಕ್ರಿಮಿನಲ್ ಕೇಸ್ ಎಂದು ಹೇಳಲು ಆಗಲ್ಲ- ನಳೀನ್‌ಕುಮಾರ್‌ ಕಟೀಲ್‌”, “ರೌಡಿ ಶೀಟರ್ ಪಟ್ಟಿಯಲ್ಲಿರುವವರನ್ನು ರೌಡಿಗಳೆಂದು ಕರೆಯುವುದು ಸಮಂಜಸವಿಲ್ಲ. ಯಾಕಂದ್ರೆ ನನ್ನ ಹೆಸರೂ ರೌಡಿಗಳ ಪಟ್ಟಿಯಲ್ಲಿತ್ತು- ಸಿ.ಟಿ.ರವಿ”, “ಪಕ್ಷಕ್ಕೆ ಸುಮಾರು ಜನ ಸೇರ್ತಾ ಇರ್ತಾರೆ. ನಾವು ಎಲ್ಲರ ಪೂರ್ವ-ಪರ ವಿಚಾರಿಸೋಕೆ ಆಗಲ್ಲ- ಪ್ರತಾಪ್ ಸಿಂಹ”.

ಬಿಜೆಪಿಗೆ ರೌಡಿ ಶೀಟರ್‌ಗಳು ಸೇರಿರುವ ಕುರಿತ ವಿಡಿಯೊ ಸುದ್ದಿಯನ್ನು ಕೊನೆಯಲ್ಲಿ ಲಗತ್ತಿಸಲಾಗಿದೆ. ಈ ವೆಬ್‌ಸೈಟ್ ಯಾರು ಮಾಡಿದ್ದಾರೆಂದು ಥಟ್ಟನೆ ಗೊತ್ತಾಗುವುದಿಲ್ಲ. ಆದರೆ ಕಾಂಗ್ರೆಸ್ ತೆರೆದಿರುವ “40ಪರ್ಸೆಂಟ್‌.ಕಾಂ” ವೆಬ್‌ಸೈಟ್‌ಗೂ ಈ ವೆಬ್‌ಸೈಟ್‌ಗೂ ಸಾಮ್ಯತೆ ಕಂಡು ಬರುತ್ತಿದೆ. ಜೊತೆಗೆ ಕೊನೆಯಲ್ಲಿ ಚಿಕ್ಕ ಅಕ್ಷರಗಳಲ್ಲಿ “ಹೆಚ್ಚಿನ ವಿವರಗಳಿಗೆ www.40percentsarkara.comಗೆ ಭೇಟಿ ನೀಡಿ (For more information about the candidates log into to www.40percentsarkara.com or dial  844 770 40 40)” ಎಂಬ ಸೂಚನೆಯನ್ನು ನೀಡಿರುವುದರಿಂದ ಇದು ಕಾಂಗ್ರೆಸ್ ಮಾಡಿರುವ ಜಾಲತಾಣವೆಂಬುದು ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...