Homeಮುಖಪುಟಇಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ ಚುನಾವಣೆ: ಎಎಪಿ, ಬಿಜೆಪಿ ನಡುವೆ ತೀವ್ರ ಸ್ಪರ್ಧೆ

ಇಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ ಚುನಾವಣೆ: ಎಎಪಿ, ಬಿಜೆಪಿ ನಡುವೆ ತೀವ್ರ ಸ್ಪರ್ಧೆ

- Advertisement -
- Advertisement -

ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್‌ (ಎಂಸಿಡಿ) ಚುನಾವಣೆ ಇಂದು ನಡೆಯುತ್ತಿದ್ದು ಕಸದ ಸಮಸ್ಯೆಯನ್ನು ಗುರಿಯಾಗಿಸಿಕೊಂಡಿರುವ ಎಎಪಿ, ಎಂಸಿಡಿ ಮೇಲೆ ಕಣ್ಣಿಟ್ಟಿದೆ. ಆಡಳಿತಾರೂಢ ಬಿಜೆಪಿ ತನ್ನ ಅಧಿಕಾರವನ್ನು ವಿಸ್ತರಿಸುವ ವಿಶ್ವಾಸದಲ್ಲಿದ್ದರೆ, ಕಾಂಗ್ರೆಸ್ ಸ್ವಲ್ಪಮಟ್ಟಿಗೆ ಮತ್ತೆ ಗೆಲ್ಲುವ ನಿರೀಕ್ಷೆಯಲ್ಲಿದೆ.

ಸುಮಾರು 1.5 ಕೋಟಿ ಜನರು 250 ವಾರ್ಡ್‌ಗಳಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ. 2011ರಲ್ಲಿ ಪ್ರದೇಶವಾರು ರೂಪುಗೊಂಡ ಮೂರು ಎಂಸಿಡಿಗಳನ್ನು ಮರುಸಂಘಟಿಸಲಾಯಿತು. ಈ ವರ್ಷದ ಆರಂಭದಲ್ಲಿ, ಬಿಜೆಪಿಯ ಅವಧಿ ಮುಗಿದ ಬಳಿಕ ವಾರ್ಡ್‌ಗಳನ್ನು ಮರುವಿನ್ಯಾಸಗೊಳಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5.30ಕ್ಕೆ ಮತದಾನ ಕೇಂದ್ರದ ಗೇಟ್‌ಗಳನ್ನು ಮುಚ್ಚಲಾಗುತ್ತದೆ. ನಂತರ ಒಳಗೆ ಇರುವವರು ಮಾತ್ರ ಮತ ಚಲಾಯಿಸಬಹುದು. ಮೆಟ್ರೋ ರೈಲು ಸೇವೆಗಳು ಸಾಮಾನ್ಯ ದಿನಗಳಿಗಿಂತ ಎರಡು ಗಂಟೆ ಮುಂಚಿತವಾಗಿ (4 ಗಂಟೆಗೆ) ಸೇವೆ ಆರಂಭಿಸಿತು. ಡಿಸೆಂಬರ್ 7ರಂದು ಫಲಿತಾಂಶ ಹೊರಬೀಳಲಿದೆ. ಅರವತ್ತೆಂಟು ಮಾದರಿ ಮತಗಟ್ಟೆಗಳು ಮತ್ತು ನಗರದ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ಹಲವು ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

1,300 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಿವೆ. ಎಎಪಿ ಉದಯವಾದಾಗಿನಿಂದ ದೆಹಲಿಯಲ್ಲಿ ತನ್ನ ನೆಲೆಯನ್ನು ಕಂಡುಕೊಳ್ಳಲು ಹೆಣಗಾಡುತ್ತಿರುವ ಕಾಂಗ್ರೆಸ್, 247 ಸ್ಥಾನಗಳಲ್ಲಿ ಕಣಕ್ಕಿಳಿದಿದೆ. ತಾಂತ್ರಿಕ ಕಾರಣಗಳಿಂದಾಗಿ ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಕಳೆದ 24 ವರ್ಷಗಳಲ್ಲಿ ಬಿಜೆಪಿ ದೆಹಲಿಯಲ್ಲಿ ರಾಜ್ಯ ಸರ್ಕಾರವನ್ನು ರಚಿಸದಿದ್ದರೂ, ಎಂಸಿಡಿ ಮೇಲೆ ನಿಯಂತ್ರಣ ಸಾಧಿಸಿದೆ. 2015ರ ಅಸೆಂಬ್ಲಿ ಚುನಾವಣೆಯಲ್ಲಿ ಎಎಪಿ 70 ಸ್ಥಾನಗಳಲ್ಲಿ ದಾಖಲೆಯ 67 ಸ್ಥಾನಗಳನ್ನು ಗೆದ್ದ ನಂತರವೂ, ಅಂದರೆ ಎರಡು ವರ್ಷಗಳ ಬಳಿಕ ಬಿಜೆಪಿ ತನ್ನ 272 ಸ್ಥಾನಗಳಲ್ಲಿ 181 ಸ್ಥಾನಗಳನ್ನು ಗೆಲ್ಲುವ ಮೂಲಕ ಎಂಸಿಡಿ ಮೇಲೆ ಹಿಡಿತವನ್ನು ಉಳಿಸಿಕೊಂಡಿದೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌‌ನ ಈ ಹಿಂದಿನ ಚುನಾವಣೆಯಲ್ಲಿ ಎಎಪಿ 48 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 30 ಸ್ಥಾನಗಳಲ್ಲಿ ಗೆದ್ದಿದೆ.

ಇದನ್ನೂ ಓದಿರಿ: ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

ಎಎಪಿ ಕಳೆದ ವರ್ಷದ ಆರಂಭದಿಂದಲೇ ತಯಾರಿ ನಡೆಸಿದೆ. ಕಸದ ಸಮಸ್ಯೆಯ ಮೇಲೆ ನೇರವಾಗಿ ತನ್ನ ಗುರಿ ಇಟ್ಟುಕೊಂಡಿದೆ. ‘ಕೇಜ್ರಿವಾಲ್ ಸರ್ಕಾರ, ಕೇಜ್ರಿವಾಲ್ ಕಾರ್ಪೊರೇಟರ್’ ಎಂಬ ಘೋಷಣೆಯನ್ನು ಎಎಪಿ ಮಾಡಿದೆ. ಈ ಮೂಲಕ ಬಿಜೆಪಿಯ ‘ಡಬ್ಬಲ್ ಇಂಜಿನ್ ಸರ್ಕಾರ’ ಘೋಷಣೆಗೆ ಎಎಪಿ ಪ್ರತಿ ಅಸ್ತ್ರ ಪ್ರಯೋಗಿಸಿದೆ.

ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಎಎಪಿ ಸಚಿವರ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದೆ. ಜನರಿಗೆ ವಸತಿ ಭರವಸೆಗಳನ್ನು ನೀಡಿದೆ. ಬಂಧಿತ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ವಿಶೇಷ ಚಿಕಿತ್ಸೆ ಪಡೆದಿರುವ ಸಿಸಿಟಿವಿ ವಿಡಿಯೋಗಳು ಹೊರಬಿದ್ದಿವೆ. ಎಎಪಿಯನ್ನು ಕೆಣಕಲು ಕಾಂಗ್ರೆಸ್ ಕೂಡ ಇದನ್ನು ಬಳಸಿಕೊಂಡಿದೆ. ಒಂದಿಷ್ಟು ಪ್ರಭಾವ ಬೀರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. 2019ರಲ್ಲಿ ಶೀಲಾ ದೀಕ್ಷಿತ್ ಅವರ ಮರಣದ ನಂತರ ದೆಹಲಿಯಲ್ಲಿ ತನ್ನ ಇತಿಹಾಸ ಮರುಕಳಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಪಕ್ಷವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...