Homeಕರ್ನಾಟಕ2ನೇ ಸ್ನಾತಕೋತ್ತರ ಪದವಿ ದಲಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪ್ರವೇಶವಿಲ್ಲ: ಬೆಂಗಳೂರು ವಿವಿಯಿಂದ ಸುತ್ತೋಲೆ

2ನೇ ಸ್ನಾತಕೋತ್ತರ ಪದವಿ ದಲಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪ್ರವೇಶವಿಲ್ಲ: ಬೆಂಗಳೂರು ವಿವಿಯಿಂದ ಸುತ್ತೋಲೆ

- Advertisement -
- Advertisement -

ಎರಡನೇ ಸ್ನಾತಕೋತ್ತರ ಪದವಿಗೆ ಸೇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪ್ರವೇಶಾತಿ ನೀಡಬಾರದು ಎಂದು ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ.

ದಲಿತ ವಿದ್ಯಾರ್ಥಿಗಳ ವಿಚಾರದಲ್ಲಿ ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾನಿಲಯಗಳು ದಿನಕ್ಕೊಂದು ನಿಯಮಗಳನ್ನು ಜಾರಿಗೊಳಿಸುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಬೆಂಗಳೂರು ವಿವಿಯ ಸುತ್ತೋಲೆ ಹೊರಬಿದ್ದಿದೆ.

ಸುತ್ತೋಲೆಯಲ್ಲಿ ಏನಿದೆ?

2022-23ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದ ಹಾಸ್ಟೆಲ್ ಪ್ರವೇಶ ನೀಡುವ ಸಂದರ್ಭದಲ್ಲಿ ಎರಡನೇ ಸ್ನಾತಕೋತ್ತರ ಪದವಿಗೆ ಕಡ್ಡಾಯವಾಗಿ ಅವಕಾಶ ನೀಡಬಾರದೆಂದು ತಿಳಿಸಲಾಗಿದೆ. ಕಾರಣ ಸರ್ಕಾರದ ಆದೇಶದನ್ವಯ ಒಂದು ಭಾರಿ ಸರ್ಕಾರಿ ಅಥವಾ ವಿಶ್ವವಿದ್ಯಾನಿಲಯದ ಸೌಲಭ್ಯಗಳನ್ನು ಪಡೆದಿರುವವರಿಗೆ ಮತ್ತೊಮ್ಮೆ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಇದನ್ನು ಅತೀ ಸೂಕ್ಷ್ಮವಾಗಿ ಪರಿಗಣಿಸಿ ಪ್ರವೇಶ ನೀಡುವ ಸಂದರ್ಭದಲ್ಲಿ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ ಪ್ರವೇಶ ನೀಡಬೇಕು.

ಆದುದರಿಂದ ಎಲ್ಲಾ ಪ್ರಧಾನ ಕ್ಷೇಮಪಾಲಕರುಗಳು ವಿದ್ಯಾರ್ಥಿಗಳ ವಿವರಗಳನ್ನು ಪರಿಶೀಲಿಸಿ ಮುಚ್ಚಳಿಕೆಯನ್ನು ಪಡೆದು ಹಾಸ್ಟೆಲ್ ಪ್ರವೇಶ ನೀಡಬೇಕು. ವಿಭಾಗಗಳಿಗೆ ಪ್ರವೇಶ ನೀಡುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಎಲ್ಲ ದಾಖಲಾತಿಗಳನ್ನು ಪರಿಶೀಲಿಸಿ ಮೊದಲು ಪಿಜಿ/ಎರಡನೇ ಪಿಜಿ ಎಂಬುದನ್ನು ಪರಿಶೀಲಿಸಿಕೊಂಡು ವಿಭಾಗಗಳ ಮುಖ್ಯಸ್ಥರು ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶದ ಅರ್ಜಿಗಳನ್ನು ದೃಢೀಕರಿಸಬೇಕು.

ಈ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ವಿಧಾನಪರಿಷತ್‌ ಮಾಜಿ ಸದಸ್ಯರಾದ ರಮೇಶ್‌ ಬಾಬು, “ಬೆಂಗಳೂರು ವಿವಿಯು ದಲಿತ ವಿರೋಧಿ ನೀತಿಯನ್ನು ಪದೇ ಪದೇ ಜಾಹೀರು ಮಾಡಿದೆ. ಬಿಜೆಪಿಯ ರಹಸ್ಯ ಕಾರ್ಯಸೂಚಿ ಬೆತ್ತಲಾಗಿದೆ. ದಲಿತ ವಿದ್ಯಾರ್ಥಿಗಳಿಗೆ ಎರಡನೇ ಸ್ನಾತಕೋತ್ತರ ಪದವಿಗೆ ಹಾಸ್ಟೆಲ್‌ಗೆ ಅವಕಾಶ ನೀಡದಂತೆ ಸುತ್ತೋಲೆ ನೀಡಿ ಅವರ ಹಕ್ಕು ಕಸಿಯಲು ಶಿಕ್ಷಣ ವಂಚಿತ ಮಾಡಲು ಹೊರಟಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

8 COMMENTS

  1. ಪರಿಶಿಷ್ಟ ಜಾತಿ/ಪಂಗಡಗಳ ಶಾಸಕ,ಲೋಕಸಭೆ ಸದಸ್ಯರು, ಮಂತ್ರಿಗಳು ಏನು ಗೆಣಸು ತಿನ್ನುತ್ತಿದ್ದಾರಾ? ನಿಮ್ಮಗಳಿಗೆ ನಿಮ್ಮ ಸಮುದಾಯದ ಜನಗಳು ವಿದ್ಯಾವಂತರಾಗುವುದು ಬೇಡವಾ, ನೀವೇ ಈ ದರಿದ್ರ ಜಾತಿವಾದಿ ಸರ್ಕಾರದ ಜೀತದಾಳಾಗಲು ಭಾಭಾಸಾಹೇಬರು ನಿಮಗೆಲ್ಲಾ ರಾಜಕೀಯ ಮೀಸಲಾತಿ ನೀಡಿದರಾ? ಒಂದು ವೇಳೆ ನೀವೆಲ್ಲಾ ಈ ಜಾತಿವಾದಿ ಸರ್ಕಾರದ ಗುಲಾಮರಾಗುವುದಾದರೆ , ಪರಿಶಿಷ್ಟರ ಸಂವಿಧಾನಕ ಅಶಯಗಳನ್ನ ರಕ್ಷಣೆ ನೀಡಲು ಅಶಕ್ತರಾದರೆ ,ನಿಮ್ಮ ಸ್ಥಾನಕ್ಕೆ ರಾಜನಾಮೆ ನೀಡಿ ತೊಲಗಿ, ಕನಿಷ್ಠ ದಲಿತರ ನಿಜ ಪ್ರತಿನಿದಿಗಳಾದರು ಬರಲಿ.

  2. ಇದೆಲ್ಲ ಮನುವಾದಿಗಳ ಷಡ್ಯಂತ್ರ. ಶೂದ್ರರ, ದಲಿತರ ಸೌಲಭ್ಯಗಳನ್ನು ಮೊಟಕುಗೊಳಿಸಿ, ವಿವಿ ಕ್ಯಾಂಪಸ್ ನಲ್ಲಿ ದೇವಸ್ಥಾನ ಕಟ್ಟಲು ಪ್ರಯತ್ನ ಮಾಡುವುದು ಕೇವಲ ನಾಗಪುರದ ಅಜೆoಡಾ ಅಷ್ಟೇ….

  3. ಕಲಿಯುತ್ತಿರುವ ಮೊದಲ ಪೀಳಿಗೆಯ ದಲಿತ ಮಕ್ಕಳಿಗೆ ಮೊದಲೊತ್ತು ನೀಡಲಿ. ಸೀಟುಗಳು ಉಳಿದರೆ, ಕಲಿಕೆಯ ಎರಡನೇ ಪೀಳಿಗೆಯವರಿಗೂ ಎಡೆಮಾಡಲಿ.

  4. ಬಿಜೆಪಿ ಸರ್ಕಾರ ದಲಿತ ವಿರೋಧಿ ಎಂಬುವುದನ್ನು ಸಾಬೀತು ಪಡಿಸಿದೆ ದಲಿತ ಜನಪ್ರತಿನಿಧಿಗಳು ಯೋಚಿಸಿ ನೋಡಿ ನಮಗೆ ಈ ಸರ್ಕಾರ ಬೇಕಾ..????

  5. ಮಾನ್ಯ ಗೋವಿಂದ ಕಾರಜೋಳ್, ಪಿ ರಾಜೀವ್ ಕುಡಚಿ ಶಾಸಕರ, ನಾರಾಯಣ ಸ್ವಾಮಿ, ಇನ್ನಿತರ ಎಸ್ಸಿ ಎಸ್ಟಿ ಜನ ಪ್ರತಿನಿದಿಗಳೇ ಕತ್ತೆ ಕಾಯ್ತಿದಿರಾ ನಮ್ಮ ಬಡ ವಿದ್ಯಾರ್ಥಿಗಳು ಎಲ್ಲಿ ಓದಬೇಕು, ಈ ಆದೇಶದ ವಿರುದ್ದ ಬಾಯಿ ಬಿಟ್ಟು ಮಾತಾಡಿ. ನಮ್ಮ ಅಳಿವು ಉಳಿವಿನ ಪ್ರಶ್ನೆ ಯಾಗಿದೆ.

  6. ಈಗಲಾದರೂ ಎಸ್ಸಿ ಎಸ್ಟಿ ಗಳು ಒಂದಾಗಿ ರಾಜ್ಯಧಿಕಾರ ಹಿಡಿಯಬೇಕು, ಯುವಕರು ಅರ್ಥಮಾಡಿಕೊಳ್ಳಿ ಬಿಜೆಪಿ ಬಿಜೆಪಿ ಎಂದು ಹಿಂದೆ ಹೋಗಿ ಸಮಾಜವನ್ನು ಅದೋಗತಿಗೆ ದೂಡಬೇಡಿ ಅಂಬೇಡ್ಕರ್ ಅವರ ಅನುಭವದ ಜೀವನ ಚರಿತ್ರೆಯನ್ನು ಓದಿ ತಿಳುಕೊಳ್ಳಿ ನಮ್ಮ ಸಮಾಜದ ಏಳಿಗೆಗಾಗಿ ಶ್ರಮಿಸಿ ಜೈಭೀಮ್

LEAVE A REPLY

Please enter your comment!
Please enter your name here

- Advertisment -

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು

ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ, ಲೋಕಸಭೆಯ ಬಜೆಟ್ ಅಧಿವೇಶನದ 10ನೇ ದಿನದ ಕಲಾಪವೂ ಸೋಮವಾರ (ಫೆ.10) ಪದೇ ಪದೇ ಮುಂದೂಡಿಕೆಯಾಯಿತು. ಎಂದಿನಂತೆ ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾದಾಗ ವಿರೋಧ ಪಕ್ಷಗಳ ಸದಸ್ಯರು...

ರಾಜಸ್ಥಾನ| ಅನಧಿಕೃತ ಧರ್ಮೋಪದೇಶದ ಆರೋಪ; 12 ತಬ್ಲಿಘಿ ಜಮಾತ್ ಸದಸ್ಯರ ಬಂಧನ

ಗುಜರಾತ್‌ನ ಗೋಧ್ರಾದಿಂದ ಬಂದಿದ್ದ 10 ರಿಂದ 12 ಜನರ ಗುಂಪು ಕಳೆದ ಎರಡು ದಿನಗಳಿಂದ ಬಾಗಿಡೋರಾ ಪ್ರದೇಶದಲ್ಲಿ ಓಡಾಡುತ್ತಿದೆ ಎಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ಬಂದ ನಂತರ ಅವರನ್ನು ಬಂಧಿಸಲಾಗಿದೆ. ಅಧಿಕಾರಿಗಳಿಗೆ ಮಾಹಿತಿ...

ಕೆನಡಾದಲ್ಲಿ ನೆಲಮಂಗಲ ಮೂಲದ 37ವರ್ಷದ ಟೆಕ್ಕಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಿಚಿತ ಗುಂಪು 

ಬೆಂಗಳೂರು: ಕೆನಡಾದ ಟೊರೊಂಟೊದಲ್ಲಿರುವ ಜನನಿಬಿಡ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಬೆಂಗಳೂರು ಮೂಲದ 37 ವರ್ಷದ ಟೆಕ್ಕಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲಮಂಗಲ ಬಳಿಯ ತ್ಯಾಮಗೊಂಡ್ಲು ನಿವಾಸಿ...

ತೆಲಂಗಾಣ| ಪುರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು; ಕುಟುಂಬದಿಂದ ಬೆದರಿಕೆ ಆರೋಪ

ಪುರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಯಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಿಂದ ವರದಿಯಾಗಿದೆ. ಸೋಮವಾರ ತಡರಾತ್ರಿ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ಪುರಸಭೆಯಲ್ಲಿ ಈ ಘಟನೆ ನಡೆದಿದೆ. ಮಕ್ತಲ್ ಪುರಸಭೆಯ...

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...