Homeಕರ್ನಾಟಕ2ನೇ ಸ್ನಾತಕೋತ್ತರ ಪದವಿ ದಲಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪ್ರವೇಶವಿಲ್ಲ: ಬೆಂಗಳೂರು ವಿವಿಯಿಂದ ಸುತ್ತೋಲೆ

2ನೇ ಸ್ನಾತಕೋತ್ತರ ಪದವಿ ದಲಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪ್ರವೇಶವಿಲ್ಲ: ಬೆಂಗಳೂರು ವಿವಿಯಿಂದ ಸುತ್ತೋಲೆ

- Advertisement -
- Advertisement -

ಎರಡನೇ ಸ್ನಾತಕೋತ್ತರ ಪದವಿಗೆ ಸೇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪ್ರವೇಶಾತಿ ನೀಡಬಾರದು ಎಂದು ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ.

ದಲಿತ ವಿದ್ಯಾರ್ಥಿಗಳ ವಿಚಾರದಲ್ಲಿ ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾನಿಲಯಗಳು ದಿನಕ್ಕೊಂದು ನಿಯಮಗಳನ್ನು ಜಾರಿಗೊಳಿಸುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಬೆಂಗಳೂರು ವಿವಿಯ ಸುತ್ತೋಲೆ ಹೊರಬಿದ್ದಿದೆ.

ಸುತ್ತೋಲೆಯಲ್ಲಿ ಏನಿದೆ?

2022-23ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದ ಹಾಸ್ಟೆಲ್ ಪ್ರವೇಶ ನೀಡುವ ಸಂದರ್ಭದಲ್ಲಿ ಎರಡನೇ ಸ್ನಾತಕೋತ್ತರ ಪದವಿಗೆ ಕಡ್ಡಾಯವಾಗಿ ಅವಕಾಶ ನೀಡಬಾರದೆಂದು ತಿಳಿಸಲಾಗಿದೆ. ಕಾರಣ ಸರ್ಕಾರದ ಆದೇಶದನ್ವಯ ಒಂದು ಭಾರಿ ಸರ್ಕಾರಿ ಅಥವಾ ವಿಶ್ವವಿದ್ಯಾನಿಲಯದ ಸೌಲಭ್ಯಗಳನ್ನು ಪಡೆದಿರುವವರಿಗೆ ಮತ್ತೊಮ್ಮೆ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಇದನ್ನು ಅತೀ ಸೂಕ್ಷ್ಮವಾಗಿ ಪರಿಗಣಿಸಿ ಪ್ರವೇಶ ನೀಡುವ ಸಂದರ್ಭದಲ್ಲಿ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ ಪ್ರವೇಶ ನೀಡಬೇಕು.

ಆದುದರಿಂದ ಎಲ್ಲಾ ಪ್ರಧಾನ ಕ್ಷೇಮಪಾಲಕರುಗಳು ವಿದ್ಯಾರ್ಥಿಗಳ ವಿವರಗಳನ್ನು ಪರಿಶೀಲಿಸಿ ಮುಚ್ಚಳಿಕೆಯನ್ನು ಪಡೆದು ಹಾಸ್ಟೆಲ್ ಪ್ರವೇಶ ನೀಡಬೇಕು. ವಿಭಾಗಗಳಿಗೆ ಪ್ರವೇಶ ನೀಡುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಎಲ್ಲ ದಾಖಲಾತಿಗಳನ್ನು ಪರಿಶೀಲಿಸಿ ಮೊದಲು ಪಿಜಿ/ಎರಡನೇ ಪಿಜಿ ಎಂಬುದನ್ನು ಪರಿಶೀಲಿಸಿಕೊಂಡು ವಿಭಾಗಗಳ ಮುಖ್ಯಸ್ಥರು ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶದ ಅರ್ಜಿಗಳನ್ನು ದೃಢೀಕರಿಸಬೇಕು.

ಈ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ವಿಧಾನಪರಿಷತ್‌ ಮಾಜಿ ಸದಸ್ಯರಾದ ರಮೇಶ್‌ ಬಾಬು, “ಬೆಂಗಳೂರು ವಿವಿಯು ದಲಿತ ವಿರೋಧಿ ನೀತಿಯನ್ನು ಪದೇ ಪದೇ ಜಾಹೀರು ಮಾಡಿದೆ. ಬಿಜೆಪಿಯ ರಹಸ್ಯ ಕಾರ್ಯಸೂಚಿ ಬೆತ್ತಲಾಗಿದೆ. ದಲಿತ ವಿದ್ಯಾರ್ಥಿಗಳಿಗೆ ಎರಡನೇ ಸ್ನಾತಕೋತ್ತರ ಪದವಿಗೆ ಹಾಸ್ಟೆಲ್‌ಗೆ ಅವಕಾಶ ನೀಡದಂತೆ ಸುತ್ತೋಲೆ ನೀಡಿ ಅವರ ಹಕ್ಕು ಕಸಿಯಲು ಶಿಕ್ಷಣ ವಂಚಿತ ಮಾಡಲು ಹೊರಟಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

8 COMMENTS

  1. ಪರಿಶಿಷ್ಟ ಜಾತಿ/ಪಂಗಡಗಳ ಶಾಸಕ,ಲೋಕಸಭೆ ಸದಸ್ಯರು, ಮಂತ್ರಿಗಳು ಏನು ಗೆಣಸು ತಿನ್ನುತ್ತಿದ್ದಾರಾ? ನಿಮ್ಮಗಳಿಗೆ ನಿಮ್ಮ ಸಮುದಾಯದ ಜನಗಳು ವಿದ್ಯಾವಂತರಾಗುವುದು ಬೇಡವಾ, ನೀವೇ ಈ ದರಿದ್ರ ಜಾತಿವಾದಿ ಸರ್ಕಾರದ ಜೀತದಾಳಾಗಲು ಭಾಭಾಸಾಹೇಬರು ನಿಮಗೆಲ್ಲಾ ರಾಜಕೀಯ ಮೀಸಲಾತಿ ನೀಡಿದರಾ? ಒಂದು ವೇಳೆ ನೀವೆಲ್ಲಾ ಈ ಜಾತಿವಾದಿ ಸರ್ಕಾರದ ಗುಲಾಮರಾಗುವುದಾದರೆ , ಪರಿಶಿಷ್ಟರ ಸಂವಿಧಾನಕ ಅಶಯಗಳನ್ನ ರಕ್ಷಣೆ ನೀಡಲು ಅಶಕ್ತರಾದರೆ ,ನಿಮ್ಮ ಸ್ಥಾನಕ್ಕೆ ರಾಜನಾಮೆ ನೀಡಿ ತೊಲಗಿ, ಕನಿಷ್ಠ ದಲಿತರ ನಿಜ ಪ್ರತಿನಿದಿಗಳಾದರು ಬರಲಿ.

  2. ಇದೆಲ್ಲ ಮನುವಾದಿಗಳ ಷಡ್ಯಂತ್ರ. ಶೂದ್ರರ, ದಲಿತರ ಸೌಲಭ್ಯಗಳನ್ನು ಮೊಟಕುಗೊಳಿಸಿ, ವಿವಿ ಕ್ಯಾಂಪಸ್ ನಲ್ಲಿ ದೇವಸ್ಥಾನ ಕಟ್ಟಲು ಪ್ರಯತ್ನ ಮಾಡುವುದು ಕೇವಲ ನಾಗಪುರದ ಅಜೆoಡಾ ಅಷ್ಟೇ….

  3. ಕಲಿಯುತ್ತಿರುವ ಮೊದಲ ಪೀಳಿಗೆಯ ದಲಿತ ಮಕ್ಕಳಿಗೆ ಮೊದಲೊತ್ತು ನೀಡಲಿ. ಸೀಟುಗಳು ಉಳಿದರೆ, ಕಲಿಕೆಯ ಎರಡನೇ ಪೀಳಿಗೆಯವರಿಗೂ ಎಡೆಮಾಡಲಿ.

  4. ಬಿಜೆಪಿ ಸರ್ಕಾರ ದಲಿತ ವಿರೋಧಿ ಎಂಬುವುದನ್ನು ಸಾಬೀತು ಪಡಿಸಿದೆ ದಲಿತ ಜನಪ್ರತಿನಿಧಿಗಳು ಯೋಚಿಸಿ ನೋಡಿ ನಮಗೆ ಈ ಸರ್ಕಾರ ಬೇಕಾ..????

  5. ಮಾನ್ಯ ಗೋವಿಂದ ಕಾರಜೋಳ್, ಪಿ ರಾಜೀವ್ ಕುಡಚಿ ಶಾಸಕರ, ನಾರಾಯಣ ಸ್ವಾಮಿ, ಇನ್ನಿತರ ಎಸ್ಸಿ ಎಸ್ಟಿ ಜನ ಪ್ರತಿನಿದಿಗಳೇ ಕತ್ತೆ ಕಾಯ್ತಿದಿರಾ ನಮ್ಮ ಬಡ ವಿದ್ಯಾರ್ಥಿಗಳು ಎಲ್ಲಿ ಓದಬೇಕು, ಈ ಆದೇಶದ ವಿರುದ್ದ ಬಾಯಿ ಬಿಟ್ಟು ಮಾತಾಡಿ. ನಮ್ಮ ಅಳಿವು ಉಳಿವಿನ ಪ್ರಶ್ನೆ ಯಾಗಿದೆ.

  6. ಈಗಲಾದರೂ ಎಸ್ಸಿ ಎಸ್ಟಿ ಗಳು ಒಂದಾಗಿ ರಾಜ್ಯಧಿಕಾರ ಹಿಡಿಯಬೇಕು, ಯುವಕರು ಅರ್ಥಮಾಡಿಕೊಳ್ಳಿ ಬಿಜೆಪಿ ಬಿಜೆಪಿ ಎಂದು ಹಿಂದೆ ಹೋಗಿ ಸಮಾಜವನ್ನು ಅದೋಗತಿಗೆ ದೂಡಬೇಡಿ ಅಂಬೇಡ್ಕರ್ ಅವರ ಅನುಭವದ ಜೀವನ ಚರಿತ್ರೆಯನ್ನು ಓದಿ ತಿಳುಕೊಳ್ಳಿ ನಮ್ಮ ಸಮಾಜದ ಏಳಿಗೆಗಾಗಿ ಶ್ರಮಿಸಿ ಜೈಭೀಮ್

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...