Homeಕರ್ನಾಟಕ2ನೇ ಸ್ನಾತಕೋತ್ತರ ಪದವಿ ದಲಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪ್ರವೇಶವಿಲ್ಲ: ಬೆಂಗಳೂರು ವಿವಿಯಿಂದ ಸುತ್ತೋಲೆ

2ನೇ ಸ್ನಾತಕೋತ್ತರ ಪದವಿ ದಲಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪ್ರವೇಶವಿಲ್ಲ: ಬೆಂಗಳೂರು ವಿವಿಯಿಂದ ಸುತ್ತೋಲೆ

- Advertisement -
- Advertisement -

ಎರಡನೇ ಸ್ನಾತಕೋತ್ತರ ಪದವಿಗೆ ಸೇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪ್ರವೇಶಾತಿ ನೀಡಬಾರದು ಎಂದು ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ.

ದಲಿತ ವಿದ್ಯಾರ್ಥಿಗಳ ವಿಚಾರದಲ್ಲಿ ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾನಿಲಯಗಳು ದಿನಕ್ಕೊಂದು ನಿಯಮಗಳನ್ನು ಜಾರಿಗೊಳಿಸುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಬೆಂಗಳೂರು ವಿವಿಯ ಸುತ್ತೋಲೆ ಹೊರಬಿದ್ದಿದೆ.

ಸುತ್ತೋಲೆಯಲ್ಲಿ ಏನಿದೆ?

2022-23ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದ ಹಾಸ್ಟೆಲ್ ಪ್ರವೇಶ ನೀಡುವ ಸಂದರ್ಭದಲ್ಲಿ ಎರಡನೇ ಸ್ನಾತಕೋತ್ತರ ಪದವಿಗೆ ಕಡ್ಡಾಯವಾಗಿ ಅವಕಾಶ ನೀಡಬಾರದೆಂದು ತಿಳಿಸಲಾಗಿದೆ. ಕಾರಣ ಸರ್ಕಾರದ ಆದೇಶದನ್ವಯ ಒಂದು ಭಾರಿ ಸರ್ಕಾರಿ ಅಥವಾ ವಿಶ್ವವಿದ್ಯಾನಿಲಯದ ಸೌಲಭ್ಯಗಳನ್ನು ಪಡೆದಿರುವವರಿಗೆ ಮತ್ತೊಮ್ಮೆ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಇದನ್ನು ಅತೀ ಸೂಕ್ಷ್ಮವಾಗಿ ಪರಿಗಣಿಸಿ ಪ್ರವೇಶ ನೀಡುವ ಸಂದರ್ಭದಲ್ಲಿ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ ಪ್ರವೇಶ ನೀಡಬೇಕು.

ಆದುದರಿಂದ ಎಲ್ಲಾ ಪ್ರಧಾನ ಕ್ಷೇಮಪಾಲಕರುಗಳು ವಿದ್ಯಾರ್ಥಿಗಳ ವಿವರಗಳನ್ನು ಪರಿಶೀಲಿಸಿ ಮುಚ್ಚಳಿಕೆಯನ್ನು ಪಡೆದು ಹಾಸ್ಟೆಲ್ ಪ್ರವೇಶ ನೀಡಬೇಕು. ವಿಭಾಗಗಳಿಗೆ ಪ್ರವೇಶ ನೀಡುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಎಲ್ಲ ದಾಖಲಾತಿಗಳನ್ನು ಪರಿಶೀಲಿಸಿ ಮೊದಲು ಪಿಜಿ/ಎರಡನೇ ಪಿಜಿ ಎಂಬುದನ್ನು ಪರಿಶೀಲಿಸಿಕೊಂಡು ವಿಭಾಗಗಳ ಮುಖ್ಯಸ್ಥರು ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶದ ಅರ್ಜಿಗಳನ್ನು ದೃಢೀಕರಿಸಬೇಕು.

ಈ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ವಿಧಾನಪರಿಷತ್‌ ಮಾಜಿ ಸದಸ್ಯರಾದ ರಮೇಶ್‌ ಬಾಬು, “ಬೆಂಗಳೂರು ವಿವಿಯು ದಲಿತ ವಿರೋಧಿ ನೀತಿಯನ್ನು ಪದೇ ಪದೇ ಜಾಹೀರು ಮಾಡಿದೆ. ಬಿಜೆಪಿಯ ರಹಸ್ಯ ಕಾರ್ಯಸೂಚಿ ಬೆತ್ತಲಾಗಿದೆ. ದಲಿತ ವಿದ್ಯಾರ್ಥಿಗಳಿಗೆ ಎರಡನೇ ಸ್ನಾತಕೋತ್ತರ ಪದವಿಗೆ ಹಾಸ್ಟೆಲ್‌ಗೆ ಅವಕಾಶ ನೀಡದಂತೆ ಸುತ್ತೋಲೆ ನೀಡಿ ಅವರ ಹಕ್ಕು ಕಸಿಯಲು ಶಿಕ್ಷಣ ವಂಚಿತ ಮಾಡಲು ಹೊರಟಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

8 COMMENTS

  1. ಪರಿಶಿಷ್ಟ ಜಾತಿ/ಪಂಗಡಗಳ ಶಾಸಕ,ಲೋಕಸಭೆ ಸದಸ್ಯರು, ಮಂತ್ರಿಗಳು ಏನು ಗೆಣಸು ತಿನ್ನುತ್ತಿದ್ದಾರಾ? ನಿಮ್ಮಗಳಿಗೆ ನಿಮ್ಮ ಸಮುದಾಯದ ಜನಗಳು ವಿದ್ಯಾವಂತರಾಗುವುದು ಬೇಡವಾ, ನೀವೇ ಈ ದರಿದ್ರ ಜಾತಿವಾದಿ ಸರ್ಕಾರದ ಜೀತದಾಳಾಗಲು ಭಾಭಾಸಾಹೇಬರು ನಿಮಗೆಲ್ಲಾ ರಾಜಕೀಯ ಮೀಸಲಾತಿ ನೀಡಿದರಾ? ಒಂದು ವೇಳೆ ನೀವೆಲ್ಲಾ ಈ ಜಾತಿವಾದಿ ಸರ್ಕಾರದ ಗುಲಾಮರಾಗುವುದಾದರೆ , ಪರಿಶಿಷ್ಟರ ಸಂವಿಧಾನಕ ಅಶಯಗಳನ್ನ ರಕ್ಷಣೆ ನೀಡಲು ಅಶಕ್ತರಾದರೆ ,ನಿಮ್ಮ ಸ್ಥಾನಕ್ಕೆ ರಾಜನಾಮೆ ನೀಡಿ ತೊಲಗಿ, ಕನಿಷ್ಠ ದಲಿತರ ನಿಜ ಪ್ರತಿನಿದಿಗಳಾದರು ಬರಲಿ.

  2. ಇದೆಲ್ಲ ಮನುವಾದಿಗಳ ಷಡ್ಯಂತ್ರ. ಶೂದ್ರರ, ದಲಿತರ ಸೌಲಭ್ಯಗಳನ್ನು ಮೊಟಕುಗೊಳಿಸಿ, ವಿವಿ ಕ್ಯಾಂಪಸ್ ನಲ್ಲಿ ದೇವಸ್ಥಾನ ಕಟ್ಟಲು ಪ್ರಯತ್ನ ಮಾಡುವುದು ಕೇವಲ ನಾಗಪುರದ ಅಜೆoಡಾ ಅಷ್ಟೇ….

  3. ಕಲಿಯುತ್ತಿರುವ ಮೊದಲ ಪೀಳಿಗೆಯ ದಲಿತ ಮಕ್ಕಳಿಗೆ ಮೊದಲೊತ್ತು ನೀಡಲಿ. ಸೀಟುಗಳು ಉಳಿದರೆ, ಕಲಿಕೆಯ ಎರಡನೇ ಪೀಳಿಗೆಯವರಿಗೂ ಎಡೆಮಾಡಲಿ.

  4. ಬಿಜೆಪಿ ಸರ್ಕಾರ ದಲಿತ ವಿರೋಧಿ ಎಂಬುವುದನ್ನು ಸಾಬೀತು ಪಡಿಸಿದೆ ದಲಿತ ಜನಪ್ರತಿನಿಧಿಗಳು ಯೋಚಿಸಿ ನೋಡಿ ನಮಗೆ ಈ ಸರ್ಕಾರ ಬೇಕಾ..????

  5. ಮಾನ್ಯ ಗೋವಿಂದ ಕಾರಜೋಳ್, ಪಿ ರಾಜೀವ್ ಕುಡಚಿ ಶಾಸಕರ, ನಾರಾಯಣ ಸ್ವಾಮಿ, ಇನ್ನಿತರ ಎಸ್ಸಿ ಎಸ್ಟಿ ಜನ ಪ್ರತಿನಿದಿಗಳೇ ಕತ್ತೆ ಕಾಯ್ತಿದಿರಾ ನಮ್ಮ ಬಡ ವಿದ್ಯಾರ್ಥಿಗಳು ಎಲ್ಲಿ ಓದಬೇಕು, ಈ ಆದೇಶದ ವಿರುದ್ದ ಬಾಯಿ ಬಿಟ್ಟು ಮಾತಾಡಿ. ನಮ್ಮ ಅಳಿವು ಉಳಿವಿನ ಪ್ರಶ್ನೆ ಯಾಗಿದೆ.

  6. ಈಗಲಾದರೂ ಎಸ್ಸಿ ಎಸ್ಟಿ ಗಳು ಒಂದಾಗಿ ರಾಜ್ಯಧಿಕಾರ ಹಿಡಿಯಬೇಕು, ಯುವಕರು ಅರ್ಥಮಾಡಿಕೊಳ್ಳಿ ಬಿಜೆಪಿ ಬಿಜೆಪಿ ಎಂದು ಹಿಂದೆ ಹೋಗಿ ಸಮಾಜವನ್ನು ಅದೋಗತಿಗೆ ದೂಡಬೇಡಿ ಅಂಬೇಡ್ಕರ್ ಅವರ ಅನುಭವದ ಜೀವನ ಚರಿತ್ರೆಯನ್ನು ಓದಿ ತಿಳುಕೊಳ್ಳಿ ನಮ್ಮ ಸಮಾಜದ ಏಳಿಗೆಗಾಗಿ ಶ್ರಮಿಸಿ ಜೈಭೀಮ್

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...