Homeಕರ್ನಾಟಕಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

- Advertisement -
- Advertisement -

ಸದನದಲ್ಲಿಂದು ಬಹುಮತ ಸಾಬೀತು ಮಾಡಲಾಗದಿದ್ದರೂ ಮೈತ್ರಿ ಪಕ್ಷಗಳ ಶಾಸಕರು ಭರ್ಜರಿ ಭಾಷಣ ಮಾಡಿ ಗಮನ ಸೆಳೆದಿದ್ದಾರೆ. ಬಸವಕಲ್ಯಾಣದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು ಈ ಕೆಳಗಿನಂತಿವೆ.

ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನ ನೆನೆದು ಮಾತು ಆರಂಭಿಸಿದ ಬಿ.ನಾರಾಯಣರಾವ್ ಜನರ ಮಧ್ಯೆ ಹೋರಾಟ ಮಾಡಿ ಮಾಡಿ ಕೊನೆಗೆ ಸಿದ್ಧರಾಮಯ್ಯ, ಪರಮೇಶ್ವರ್ ಅವರು ಟಿಕೇಟ್ ಕೊಟ್ಟಿದ್ದರಿಂದ ನಾನು ಬಂದು ಇಲ್ಲಿ ನಿಮ್ಮ ಮುಂದೆ ನಿಂತಿದ್ದೇನೆ. ಮೊದಲು ದೇವೆಗೌಡರು ಟಿಕೇಟ್ ಕೊಟ್ಟಿದ್ದರು ಅಲ್ಲಿ ಸೋತಿದ್ದೆ ಇಲ್ಲಿಗೆ ಬಂದರೆ ಇಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದಾರೆ, ನಾವು ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗತ್ತಾರೆ ಅಂದುಕೊಂಡಿದ್ದೆವು ಎಂದು ಹೇಳಿದಾಗ ಸದನದ ಸದಸ್ಯರನ್ನು ನಗೆಯ ಅಲೆ ತೇಲಿಹೋದರು.

ಅನ್ನಭಾಗ್ಯ ಯೋಜನೆ ಇಂದು ಬಡವರು ನೆನೆಯುವಂತ ಕಾರ್ಯಕ್ರಮ ಎಂದ ಅವರು, ನಾವು ಪಂಚಾಯಿತಿ ಕಟ್ಟೆಯಿಂದದ ಬಂದವರು, ನನಗೆ ಕೃಷ್ಣಭೈರೆಗೌಡ, ಮಾಧುಸ್ವಾಮಿ ರೀತಿ ಕಾನೂನು ಮಾತಾಡಲು ಬರುವುದಿಲ್ಲ ಆದರೆ ನಮ್ಮ ಮೂರು ಪಕ್ಷದ ಮುಖಂಡರು ಬೇವಿನ ಬೀಜಗಳನ್ನು ಬಿತ್ತಲು ಹೋಗಬೇಡಿ. ಇಲ್ಲಿ ಏನ್ ನಡೆಯುತ್ತಿದೆ ಎಂಬುದನ್ನು ಎಲ್ಲಾ ಜನ ಮಾಧ್ಯಮಗಳಲ್ಲಿ ನೋಡುತ್ತಿದ್ದಾರೆ, ಎಲ್ಲಾರಿಗಿಂತ ಹೆಚ್ಚು ಮತದಾರರು ಗಮನಿಸುತ್ತಿದ್ದಾರೆ. ಅವರು ಚನ್ನಾಗಿ ಅರಿಯುತ್ತಾರೆ ಸಾರ್, ನಾವು ರಾಜಕೀಯ ಮನೆತನದಿಂದ ಬಂದಿಲ್ಲ ದುಡ್ಡಿರೋರು ಮತ್ತೆ ಚುನಾವಣೆಗೆ ಹೋಗತಾರೆ ನಾವು ಬಡವರು ನಾವು ಎಲ್ಲಿಗೆ ಹೋಗಬೇಕು?

ನಮಗೆ ಕೋಟಿ ಕೋಟಿ ದುಡ್ಡು ಕೊಟ್ಟರೆ ನಾವು ಇಡೋಕೆ ಜಾಗ ಇಲ್ಲ. ನಾನು ಪಾನ್ ಕಾರ್ಡ್ ಮಾಡಿಸಿಲ್ಲ , ಸತ್ತರೆ ಉಳೋದಕ್ಕೆ ಜಾಗ ಇಲ್ಲ ಸಾರ್. ಇನ್ನು ಲೋಕಯುಕ್ತರು ಕೇಳಿಯೇ ಕೇಳುತ್ತಾರೆ, ಕದ್ದು ಮುಚ್ಚು ತಗೊಂಡರೆ ವಿಡಿಯೋ ಮಾಡಿದರೆ ಮತ್ತೆ ಜೈಲಿಗೆ ಹೋಗಬೆಕು ಎಂದು ವಿವರಿಸಿದರು. ನಾನು ನಮ್ಮ ಕ್ಷೇತ್ರದ ವಾರ್ಡ್ ನಲ್ಲಿ ತಿರುಗುತ್ತಿದ್ದರೂ ಉಮೇಶ್ ಜಾಧವ್ ಜೊತೆ ಮುಂಬೈನಲ್ಲಿ ವಾಸ್ತವ್ಯ ಅಂತ ಈ ಮಾಧ್ಯಮಗಳು ಬ್ರೇಕಿಂಗ್ ನ್ಯೂಸ್ ಮಾಡತ್ತಾರೆ. ನಾವು ಮೊದಲೆ ಬಡವರು, ಬಡವ ಸತ್ಯ ಹೇಳಿದರು ನಂಬೊದಿಲ್ಲ. ನನಗೆ ಮಾಲೀಕರು ಮತದಾರರು.

ಎಲ್ಲಾ 224 ಗೌರವಾನ್ವಿತ ಸದಸ್ಯರೆ ನೀವು ಮತದಾರರ ಕಣ್ಣಲ್ಲಿ ಕೀಳು ಮಟ್ಟದಲ್ಲಿ ಕಾಣಬೇಡಿ. ಮೊಟ್ಟ ಮೊದಲು ಸಂಸತ್ತು ಹುಟ್ಟಿದ್ದು ಬಸವಕಲ್ಯಾಣದಲ್ಲಿ. 700 ಶೋಷಿತ ಸಮುದಾಯಗಳ ನೇತೃದ್ವದಲ್ಲಿ ಸಂಸತ್ತು ಪ್ರಾರಂಭ ಆಗಿದ್ದು ಬಸವಕಲ್ಯಾಣದಲ್ಲಿ, ಅನ್ನದಾಸೋಹ ಪ್ರಾರಂಭ ಮಾಡಿದ್ದು ಬಸವ ಕಲ್ಯಾಣ. ಅನುಭವ ಮಂಟಪಕ್ಕೆ 650ಕೋಟಿ ಕೊಡಬೇಕು ಎಂದು ಮನವಿ ಮಾಡಿದರು.

ನೆಲದ ಕಾನೂನಿನ ಪ್ರಕಾರ ವಿಶ್ವಾಸಮತ ಯಾಚಿಸಲು ಹಿಂದೆ ಮುಂದೆ ಯೋಚನೆ ಮಾಡಬೇಡಿ ಈ ಹಿಂದೆ ದೇವೆಗೌಡರು ಸ್ವಾಭಿಮಾನದಿಂದ ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದ್ದರು. ನೀವು ಒಮ್ಮೆ ನಿಮ್ಮ ತಂದೆಗೆ ನೋವು ತಂದು ಬಿಜೆಪಿ ಸಹವಾಸ ಮಾಡಿದ್ದೀರಿ ಅದನ್ನ ಇಂದು ನಾವೆಲ್ಲ ಅನುಭವಿಸುವಂತಾಗಿದೆ. ಇನ್ನು ಮೇಲೆ ನೀವು ಆ ತಪ್ಪು ಮಾಡಬೇಡಿ ಎಂದು ಹೇಳಿದರು.

ಬಸವಣ್ಣನವರ ಆಶಯದಂತೆ, ಬಾಬಾ ಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನದ ಚೌಕಟ್ಟಿನ ಒಳಗಡೆ ಈ ಸಮಸ್ಯೆಯನ್ನ ಬೇಗ ಪರಿಹರಿಸಿ. ಯಾರು ಜಾತ್ಯಾತೀತ ಶಕ್ತಿಗಳು ಒಂದಾಗಬೇಕೆಂದು, ಒಟ್ಟಾಗಿ ಸೇರಿಬೇಕೆಂದು ಮುಖ್ಯಮಂತ್ರಿಯಾದ ನೀವು ಗ್ರಾಮವಾಸ್ತವ್ಯಕ್ಕೆ ಬಂದು ಗಡಿಭಾಗದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೀರಿ. ಮಾಧ್ಯಮಗಳು, ವಿರೋಧ ಪಕ್ಷಗಳು ಗಮನಿಸಿ ನಮ್ಮ ಹಳ್ಳಿಗಳಿಗೆ ಸರಪಂಚ್ ಬರೋದೆ ಕಷ್ಟ ಒಬ್ಬ ಮುಖ್ಯಮಂತ್ರಿ ಬರ್ತಾನೆ ಅಂದರೆ ಅಲ್ಲಿ ಹಬ್ಬದ ವಾತಾವರಣ ಇತ್ತು ಬಸವಕಲ್ಯಾಣಕ್ಕೆ ಅನುದಾನ ಕೊಡಿ ಎಂದು ಮನವಿ ಮಾಡಿ ಮಾತು ಮುಗಿಸಿದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...