Homeಕರ್ನಾಟಕಡಿ.6ಕ್ಕೆ ದಲಿತ ಸಾಂಸ್ಕೃತಿಕ ಪ್ರತಿರೋಧ: ಟ್ವಿಟರ್‌ನಲ್ಲಿ ಗಮನ ಸೆಳೆದ ಅಭಿಯಾನ

ಡಿ.6ಕ್ಕೆ ದಲಿತ ಸಾಂಸ್ಕೃತಿಕ ಪ್ರತಿರೋಧ: ಟ್ವಿಟರ್‌ನಲ್ಲಿ ಗಮನ ಸೆಳೆದ ಅಭಿಯಾನ

- Advertisement -
- Advertisement -

ಡಿಸೆಂಬರ್‌ 6ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ನಡೆಯಲಿರುವ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’, ‘ದಲಿತ ಸಂಘಟನೆಗಳ ಬೃಹತ್‌ ಐಕ್ಯತಾ ಸಮಾವೇಶ’ದ ಭಾಗವಾಗಿ ಇಂದು ಟ್ವಿಟರ್‌ನಲ್ಲಿ ಅಭಿಯಾನ ನಡೆದಿದೆ.

#DalitResistance (ದಲಿತ ಪ್ರತಿರೋಧ), #DSS (ದಸಂಸ) ಎಂಬ ಹ್ಯಾಷ್‌ಟ್ಯಾಗ್‌ಗಳಲ್ಲಿ ನೂರಾರು ಟ್ವೀಟ್‌ಗಳನ್ನು ಮಾಡಲಾಗಿದೆ.

ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಹಮ್ಮಿಕೊಂಡಿರುವ ಸಮಾವೇಶವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಮೊಮ್ಮಗಳಾದ ರಮಾಬಾಯಿ ಆನಂದ್‌ ತೇಲ್ತುಂಬ್ಡೆಯವರು ಉದ್ಘಾಟಿಸಲಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ಆರಂಭವಾಗುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ರಂಗಕರ್ಮಿ ಸಿ.ಬಸವಲಿಂಗಯ್ಯ ಚಾಲನೆ ನೀಡಲಿದ್ದಾರೆ. 12 ಗಂಟೆಗೆ ಸಮಾವೇಶ ಉದ್ಘಾಟನೆಯಾಗಲಿದ್ದು, ಹಿರಿಯ ದಲಿತ ಹೋರಾಟಗಾರರಾದ ಎನ್‌.ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತರಾದ ಇಂದೂಧರ ಹೊನ್ನಾಪುರ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್, ಕರ್ನಾಟಕ ಸರ್ಕಾರದ ಮಾಜಿ ಅಡ್ವೊಕೇಟ್ ಜನರಲ್‌ ಪ್ರೊ.ರವಿವರ್ಮ ಕುಮಾರ್‌ ಪ್ರಧಾನ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಎಸ್.ಮರಿಸ್ವಾಮಿ, ಮಾವಳ್ಳಿ ಶಂಕರ್‌, ಗುರುಪ್ರಸಾದ್ ಕೆರೆಗೋಡು, ವಿ.ನಾಗರಾಜ್, ಡಾ.ಡಿ.ಜಿ.ಸಾಗರ್‌, ಲಕ್ಷ್ಮಿನಾರಾಯಣ ನಾಗವಾರ, ಅಣ್ಣಯ್ಯ, ಅರ್ಜುನ ಭದ್ರೆ, ಎನ್.ಮುನಿಸ್ವಾಮಿ, ಎಂ.ಸೋಮಶೇಖರ್‌, ಜಗಣಿ ಶಂಕರ್‌, ಎಸ್.ಆರ್‌.ಕೊಲ್ಲೂರು ಪಾಲ್ಗೊಳ್ಳದ್ದಾರೆ.

ಕಾರ್ಯಕ್ರಮದಲ್ಲಿ ದೇವನೂರ ಮಹಾದೇವ, ರಾಮದೇವ ರಾಕೆ, ಕೆ.ರಾಮಯ್ಯ, ಶಿವಾಜಿ ಗಣೇಶನ್‌, ರುದ್ರಪ್ಪ ಹನಗವಾಡಿ, ಎಚ್.ಎಂ.ರುದ್ರಸ್ವಾಮಿ, ಲಕ್ಷ್ಮಿಪತಿ ಕೋಲಾರ, ಮಂಗ್ಳೂರು ವಿಜಯ, ಹುಲ್ಕೆರೆ ಮಹಾದೇವ, ಬಾಬು ಬಂಡಾರಿಗಲ್‌, ಎಚ್.ಜನಾರ್ದನ್‌ (ಜನ್ನಿ), ಪಿಚ್ಚಳ್ಳಿ ಶ್ರೀನಿವಾಸ್, ಗೊಲ್ಲಹಳ್ಳಿ ಶಿವಪ್ರಸಾದ್, ಸಿ.ಜಿ.ಶ್ರೀನಿವಾಸನ್, ಬಸವರಾಜ ನಾಯಕ, ಎಚ್.ಎನ್.ಅಣ್ಣಯ್ಯ, ಕುಪ್ಪೆ ನಾಗರಾಜ್, ಅನಂತ ನಾಯಕ್, ಎಂ.ಆರ್‌.ಬೇರಿ, ರಮೇಶ್ ಡಾಕುಳಿಕಿ, ಆದರ್ಶ್ ಯಲ್ಲಪ್ಪ, ಭಾರತಿ ರಾಜಣ್ಣ, ಇಂದಿರಾ ಕೃಷ್ಣಪ್ಪ, ಪುರುಷೋತ್ತಮ ದಾಸ್‌ ಸೇರಿದಂತೆ ಹಲವು ದಲಿತ ಹೋರಾಟಗಾರರು ಹಾಜರಿರಲಿದ್ದಾರೆ.

ದಲಿತ ಪ್ರತಿರೋಧ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಲವಾರು ಜನರು ಟ್ವೀಟರ್‌ ಅಭಿಯಾನದಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಬರೆದಿದ್ದಾರೆ. “ಸ್ವಾತಂತ್ರ್ಯ ನಮ್ಮ ಹಕ್ಕು, ಸಮಾನತೆ ನಮ್ಮ ಅಗತ್ಯ, ಭ್ರಾತೃತ್ವ ನಮ್ಮ ಕನಸು” ಎಂದು ಲೇಖಾ ಅಡವಿ ಟ್ವೀಟ್ ಮಾಡಿದ್ದಾರೆ.

“ಜಾತಿ ಎಲ್ಲಿದೆ ಎನ್ನುತ್ತಲೇ ಅಸಮಾನತೆ ತೋರುವ ಫ್ಯೂಡಲ್‌‌ಗಳಿಂದ ಮತ್ತು ಜಾತಿ ಶ್ರೇಷ್ಠತೆಯ ಕಾಯಿಲೆಯಿಂದ ನರಳುತ್ತಿರುವವರಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಹೋರಾಟ ಅನಿವಾರ್ಯ. ಅದಕ್ಕಾಗಿಯೇ ಈ ಐಕ್ಯತೆ” ಎಂದು ಮುರುಳಿ ಮಾಲೂರು ಟ್ವೀಟ್ ಮಾಡಿದ್ದಾರೆ.

“ಸಿಂಹದಂತೆ ಸಿಡಿದು ಬನ್ನಿ ಹುಲಿಯಂತೆ ನೆಗೆದು ಬನ್ನಿ ಹೋರಾಟದ ಸಾಗರಕ್ಕೆ ನಾರಿಯರೇ ನಗುತ ಬನ್ನಿ” ಎಂದು ನಿಶಾ ಗೂಳೂರ್‌ ಟ್ವೀಟ್ ಮಾಡಿದ್ದಾರೆ.

“ಕರ್ನಾಟಕದಲ್ಲಿ ಶೇ 24 ರಿಂದ 30 ಇರುವ ದಲಿತ ಸಮುದಾಯದಿಂದ ಆದ ಮುಖ್ಯಮಂತ್ರಿಗಳ ಸಂಖ್ಯೆ ಎಷ್ಟು? ಸೊನ್ನೆ! ಇನ್ನು ಮುಂದಾದರೂ ದಲಿತರು ರಾಜಕೀಯವಾಗಿ ಎಚ್ಚರಗೊಳ್ಳಲಿ” ಎಂದು ಶ್ಯಾಮ್ ಎಂಬವರು ಮನವಿ ಮಾಡಿದ್ದಾರೆ.

“ತಳದಲ್ಲಿದ್ದವರು ನಾವು, ಬೂದಿಯಲೆದ್ದವರು, ಕತ್ತಲೆ ಚರಿತ್ರೆಯ ಬೆತ್ತಲೆ ಮಾಡುವ ಕನಸನು ಹೊತ್ತವರು ನಾವು, ಕನಸನು ಹೊತ್ತವರು” ಎಂದು ಗುಲಾಬ್ ಪಾಷಾ ಬರೆದಿದ್ದಾರೆ.

ಸಮಾವೇಶಕ್ಕೆ ಸಂಬಂಧಿಸಿದ ಹತ್ತಾರು ಪೋಸ್ಟರ್‌ಗಳು ಟ್ವಿಟರ್‌ನಲ್ಲಿ ಹರಿದಾಡಿವೆ. ಹೋರಾಟದ ಹಾಡುಗಳ ಸಾಲುಗಳನ್ನು ಜನರು ಹಂಚಿಕೊಳ್ಳುತ್ತಿದ್ದಾರೆ.

“ಒಡೆದು ಹೋದ ದಲಿತ ಸಂಘಟನೆಗಳು ಕೋಮುವಾದಿಗಳಿಗೆ ಸುಲಭ ತುತ್ತುಗಳು. ಐಕ್ಯತೆ ಎಂಬುದು ಅಭಿಯಾನದ ಹೆಸರಲ್ಲ, ಅದು ಹೋರಾಟದ ನಂಬಿಕೆಯ ಮಾರ್ಗ” ಎಂದು ಬಹುತ್ವ ಕರ್ನಾಟಕ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾವು ಮುಂದೆ ಮತ ಚಲಾಯಿಸುವುದರ ಮೂಲಕ ಕೋಮುವಾದದ ನಶೆಯಲ್ಲಿರುವ ಸರಕಾರವನ್ನು ಕಿತ್ತೊಗೆದು ಜಾತ್ಯಾತೀತ ಸರಕಾರದ ಭವ್ಯ ಭಾರತವನ್ನ ನಿರ್ಮಾಣ ಮಾಡೋಣ. ಎಲ್ಲರೂ ಭಾರತೀಯರಾಗೋಣ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...