Homeಕರ್ನಾಟಕಡಿ.6ಕ್ಕೆ ದಲಿತ ಸಾಂಸ್ಕೃತಿಕ ಪ್ರತಿರೋಧ: ಟ್ವಿಟರ್‌ನಲ್ಲಿ ಗಮನ ಸೆಳೆದ ಅಭಿಯಾನ

ಡಿ.6ಕ್ಕೆ ದಲಿತ ಸಾಂಸ್ಕೃತಿಕ ಪ್ರತಿರೋಧ: ಟ್ವಿಟರ್‌ನಲ್ಲಿ ಗಮನ ಸೆಳೆದ ಅಭಿಯಾನ

- Advertisement -
- Advertisement -

ಡಿಸೆಂಬರ್‌ 6ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ನಡೆಯಲಿರುವ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’, ‘ದಲಿತ ಸಂಘಟನೆಗಳ ಬೃಹತ್‌ ಐಕ್ಯತಾ ಸಮಾವೇಶ’ದ ಭಾಗವಾಗಿ ಇಂದು ಟ್ವಿಟರ್‌ನಲ್ಲಿ ಅಭಿಯಾನ ನಡೆದಿದೆ.

#DalitResistance (ದಲಿತ ಪ್ರತಿರೋಧ), #DSS (ದಸಂಸ) ಎಂಬ ಹ್ಯಾಷ್‌ಟ್ಯಾಗ್‌ಗಳಲ್ಲಿ ನೂರಾರು ಟ್ವೀಟ್‌ಗಳನ್ನು ಮಾಡಲಾಗಿದೆ.

ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಹಮ್ಮಿಕೊಂಡಿರುವ ಸಮಾವೇಶವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಮೊಮ್ಮಗಳಾದ ರಮಾಬಾಯಿ ಆನಂದ್‌ ತೇಲ್ತುಂಬ್ಡೆಯವರು ಉದ್ಘಾಟಿಸಲಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ಆರಂಭವಾಗುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ರಂಗಕರ್ಮಿ ಸಿ.ಬಸವಲಿಂಗಯ್ಯ ಚಾಲನೆ ನೀಡಲಿದ್ದಾರೆ. 12 ಗಂಟೆಗೆ ಸಮಾವೇಶ ಉದ್ಘಾಟನೆಯಾಗಲಿದ್ದು, ಹಿರಿಯ ದಲಿತ ಹೋರಾಟಗಾರರಾದ ಎನ್‌.ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತರಾದ ಇಂದೂಧರ ಹೊನ್ನಾಪುರ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್, ಕರ್ನಾಟಕ ಸರ್ಕಾರದ ಮಾಜಿ ಅಡ್ವೊಕೇಟ್ ಜನರಲ್‌ ಪ್ರೊ.ರವಿವರ್ಮ ಕುಮಾರ್‌ ಪ್ರಧಾನ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಎಸ್.ಮರಿಸ್ವಾಮಿ, ಮಾವಳ್ಳಿ ಶಂಕರ್‌, ಗುರುಪ್ರಸಾದ್ ಕೆರೆಗೋಡು, ವಿ.ನಾಗರಾಜ್, ಡಾ.ಡಿ.ಜಿ.ಸಾಗರ್‌, ಲಕ್ಷ್ಮಿನಾರಾಯಣ ನಾಗವಾರ, ಅಣ್ಣಯ್ಯ, ಅರ್ಜುನ ಭದ್ರೆ, ಎನ್.ಮುನಿಸ್ವಾಮಿ, ಎಂ.ಸೋಮಶೇಖರ್‌, ಜಗಣಿ ಶಂಕರ್‌, ಎಸ್.ಆರ್‌.ಕೊಲ್ಲೂರು ಪಾಲ್ಗೊಳ್ಳದ್ದಾರೆ.

ಕಾರ್ಯಕ್ರಮದಲ್ಲಿ ದೇವನೂರ ಮಹಾದೇವ, ರಾಮದೇವ ರಾಕೆ, ಕೆ.ರಾಮಯ್ಯ, ಶಿವಾಜಿ ಗಣೇಶನ್‌, ರುದ್ರಪ್ಪ ಹನಗವಾಡಿ, ಎಚ್.ಎಂ.ರುದ್ರಸ್ವಾಮಿ, ಲಕ್ಷ್ಮಿಪತಿ ಕೋಲಾರ, ಮಂಗ್ಳೂರು ವಿಜಯ, ಹುಲ್ಕೆರೆ ಮಹಾದೇವ, ಬಾಬು ಬಂಡಾರಿಗಲ್‌, ಎಚ್.ಜನಾರ್ದನ್‌ (ಜನ್ನಿ), ಪಿಚ್ಚಳ್ಳಿ ಶ್ರೀನಿವಾಸ್, ಗೊಲ್ಲಹಳ್ಳಿ ಶಿವಪ್ರಸಾದ್, ಸಿ.ಜಿ.ಶ್ರೀನಿವಾಸನ್, ಬಸವರಾಜ ನಾಯಕ, ಎಚ್.ಎನ್.ಅಣ್ಣಯ್ಯ, ಕುಪ್ಪೆ ನಾಗರಾಜ್, ಅನಂತ ನಾಯಕ್, ಎಂ.ಆರ್‌.ಬೇರಿ, ರಮೇಶ್ ಡಾಕುಳಿಕಿ, ಆದರ್ಶ್ ಯಲ್ಲಪ್ಪ, ಭಾರತಿ ರಾಜಣ್ಣ, ಇಂದಿರಾ ಕೃಷ್ಣಪ್ಪ, ಪುರುಷೋತ್ತಮ ದಾಸ್‌ ಸೇರಿದಂತೆ ಹಲವು ದಲಿತ ಹೋರಾಟಗಾರರು ಹಾಜರಿರಲಿದ್ದಾರೆ.

ದಲಿತ ಪ್ರತಿರೋಧ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಲವಾರು ಜನರು ಟ್ವೀಟರ್‌ ಅಭಿಯಾನದಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಬರೆದಿದ್ದಾರೆ. “ಸ್ವಾತಂತ್ರ್ಯ ನಮ್ಮ ಹಕ್ಕು, ಸಮಾನತೆ ನಮ್ಮ ಅಗತ್ಯ, ಭ್ರಾತೃತ್ವ ನಮ್ಮ ಕನಸು” ಎಂದು ಲೇಖಾ ಅಡವಿ ಟ್ವೀಟ್ ಮಾಡಿದ್ದಾರೆ.

“ಜಾತಿ ಎಲ್ಲಿದೆ ಎನ್ನುತ್ತಲೇ ಅಸಮಾನತೆ ತೋರುವ ಫ್ಯೂಡಲ್‌‌ಗಳಿಂದ ಮತ್ತು ಜಾತಿ ಶ್ರೇಷ್ಠತೆಯ ಕಾಯಿಲೆಯಿಂದ ನರಳುತ್ತಿರುವವರಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಹೋರಾಟ ಅನಿವಾರ್ಯ. ಅದಕ್ಕಾಗಿಯೇ ಈ ಐಕ್ಯತೆ” ಎಂದು ಮುರುಳಿ ಮಾಲೂರು ಟ್ವೀಟ್ ಮಾಡಿದ್ದಾರೆ.

“ಸಿಂಹದಂತೆ ಸಿಡಿದು ಬನ್ನಿ ಹುಲಿಯಂತೆ ನೆಗೆದು ಬನ್ನಿ ಹೋರಾಟದ ಸಾಗರಕ್ಕೆ ನಾರಿಯರೇ ನಗುತ ಬನ್ನಿ” ಎಂದು ನಿಶಾ ಗೂಳೂರ್‌ ಟ್ವೀಟ್ ಮಾಡಿದ್ದಾರೆ.

“ಕರ್ನಾಟಕದಲ್ಲಿ ಶೇ 24 ರಿಂದ 30 ಇರುವ ದಲಿತ ಸಮುದಾಯದಿಂದ ಆದ ಮುಖ್ಯಮಂತ್ರಿಗಳ ಸಂಖ್ಯೆ ಎಷ್ಟು? ಸೊನ್ನೆ! ಇನ್ನು ಮುಂದಾದರೂ ದಲಿತರು ರಾಜಕೀಯವಾಗಿ ಎಚ್ಚರಗೊಳ್ಳಲಿ” ಎಂದು ಶ್ಯಾಮ್ ಎಂಬವರು ಮನವಿ ಮಾಡಿದ್ದಾರೆ.

“ತಳದಲ್ಲಿದ್ದವರು ನಾವು, ಬೂದಿಯಲೆದ್ದವರು, ಕತ್ತಲೆ ಚರಿತ್ರೆಯ ಬೆತ್ತಲೆ ಮಾಡುವ ಕನಸನು ಹೊತ್ತವರು ನಾವು, ಕನಸನು ಹೊತ್ತವರು” ಎಂದು ಗುಲಾಬ್ ಪಾಷಾ ಬರೆದಿದ್ದಾರೆ.

ಸಮಾವೇಶಕ್ಕೆ ಸಂಬಂಧಿಸಿದ ಹತ್ತಾರು ಪೋಸ್ಟರ್‌ಗಳು ಟ್ವಿಟರ್‌ನಲ್ಲಿ ಹರಿದಾಡಿವೆ. ಹೋರಾಟದ ಹಾಡುಗಳ ಸಾಲುಗಳನ್ನು ಜನರು ಹಂಚಿಕೊಳ್ಳುತ್ತಿದ್ದಾರೆ.

“ಒಡೆದು ಹೋದ ದಲಿತ ಸಂಘಟನೆಗಳು ಕೋಮುವಾದಿಗಳಿಗೆ ಸುಲಭ ತುತ್ತುಗಳು. ಐಕ್ಯತೆ ಎಂಬುದು ಅಭಿಯಾನದ ಹೆಸರಲ್ಲ, ಅದು ಹೋರಾಟದ ನಂಬಿಕೆಯ ಮಾರ್ಗ” ಎಂದು ಬಹುತ್ವ ಕರ್ನಾಟಕ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾವು ಮುಂದೆ ಮತ ಚಲಾಯಿಸುವುದರ ಮೂಲಕ ಕೋಮುವಾದದ ನಶೆಯಲ್ಲಿರುವ ಸರಕಾರವನ್ನು ಕಿತ್ತೊಗೆದು ಜಾತ್ಯಾತೀತ ಸರಕಾರದ ಭವ್ಯ ಭಾರತವನ್ನ ನಿರ್ಮಾಣ ಮಾಡೋಣ. ಎಲ್ಲರೂ ಭಾರತೀಯರಾಗೋಣ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...