Homeಸಿನಿಮಾಕ್ರೀಡೆಡಿಫೆಂಡಿಂಗ್‌ನಲ್ಲಿ ಬಲ ಪ್ರದರ್ಶನ: ಯುಪಿ ಎದುರು ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಬೆಂಗಳೂರು ಬುಲ್ಸ್

ಡಿಫೆಂಡಿಂಗ್‌ನಲ್ಲಿ ಬಲ ಪ್ರದರ್ಶನ: ಯುಪಿ ಎದುರು ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಬೆಂಗಳೂರು ಬುಲ್ಸ್

- Advertisement -
- Advertisement -

ಕಾರ್ನರ್ ಡಿಫೆಂಡಿಂಗ್ ಆಟಗಾರರಾದ ಅಮನ್ ಮತ್ತು ಸೌರಭ್ ನಂದಲ್‌ ರವರ ಅದ್ಭುತ ಡಿಫೆಂಡಿಂಗ್ ಬಲದಿಂದ ಬೆಂಗಳೂರು ಬುಲ್ಸ್ ತಂಡವು ಬಲಿಷ್ಠ ಯುಪಿ ಯೋಧ ತಂಡವನ್ನು ಮಣಸಿ (38-35) ಪ್ಲೇ ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿತು.

ಡಿಫೆನ್ಸ್‌ನಲ್ಲಿ ಹೆಚ್ಚು ವೈಫಲ್ಯ ಕಾಣುತ್ತಿದ್ದ ಬೆಂಗಳೂರು ಬುಲ್ಸ್ ತಂಡದಲ್ಲಿ ಸುಧಾರಣೆ ಕಂಡಿದೆ. ಅಮನ್ ಏಳು ಡಿಫೆಂಡಿಂಗ್ ಪ್ರಯತ್ನಗಳಲ್ಲಿ 5 ಬಾರಿ ಯಶಸ್ಸು ಕಂಡರು. ಇನ್ನೊಂದೆಡೆ ಸೌರಭ್ ನಂದಲ್ ಮೂರು ಬಾರಿ ಪರ್ದೀಪ್ ನರ್ವಾಲ್‌ರವರನ್ನು ಕಟ್ಟಿ ಹಾಕುವಲ್ಲಿ ಸಫಲವಾದರು. ಪರಿಣಾಮ ಬುಲ್ಸ್ ತಂಡವನ್ನು ಯುಪಿ ಯೋಧ ತಂಡವನ್ನು ಎರಡು ಬಾರಿ ಆಲೌಟ್ ಮಾಡಲು ಸಾಧ್ಯವಾಯಿತು.

ಆದರೆ ರೈಡಿಂಗ್ ವಿಭಾಗದಲ್ಲಿ ಬುಲ್ಸ್ ತಂಡಕ್ಕೆ ಹೆಚ್ಚಿನ ಅಂಕಗಳು ಸಿಗಲಿಲ್ಲ. ಭರತ್ 13 ರೈಡ್‌ಗಳಿಂದ 8 ಪಾಯಿಂಟ್ ಪಡೆದರೆ, ವಿಕಾಸ್ ಖಂಡೋಲ 21 ರೈಡ್‌ಗಳಿಂದ ಕೇವಲ 6 ಪಾಯಿಂಟ್ ಪಡೆದರು. ನೀರಜ್ ನರ್ವಾಲ್ 9 ರೈಡ್‌ಗಳಿಂದ 4 ಅಂಕ ಪಡೆದರು. ಆದರೂ ಡಿಫೆಂಡರ್‌ಗಳು ತಮ್ಮ ನೈಜ ಆಟ ಪ್ರದರ್ಶಿಸಿದ ಕಾರಣ ಬೆಂಗಳೂರು ಬುಲ್ಸ್ ತಂಡ ಜಯಭೇರಿ ಬಾರಿಸಿತು.

ಒಂದು ಹಂತದಲ್ಲಿ ಬುಲ್ಸ್ ಮುಂದಿದ್ದರು ಮೂರು ಬಾರಿ ಸತತವಾಗಿ ಸೂಪರ್ ಟ್ಯಾಕಲ್ ಆಗಿ ಪಾಯಿಂಟ್ಸ್ ಚೆಲ್ಲಿತು. ಇನ್ನು 12 ಅಂಕಗಳಿಂದ ಮುಂದಿದ್ದಾಗಲೂ ಆಲೌಟ್ ಆಗಿ ಕೇವಲ 3 ಅಂಕದಿಂದ ಗೆಲ್ಲುವಂತಾಯಿತು.

ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ತಂಡಗಳು ತಲಾ 20 ಪಂದ್ಯಗಳಿಂದ ತಲಾ 74 ಅಂಕ ಗಳಿಸಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿದ್ದು ಈಗಾಗಲೆ ಪ್ಲೇ ಆಫ್‌ನಲ್ಲಿ ತಮ್ಮ ಸ್ಥಾನ ಖಚಿತಪಡಿಸಿಕೊಂಡಿವೆ. ಬೆಂಗಳೂರು ತಂಡ 20 ಪಂದ್ಯಗಳಿಂದ 68 ಅಂಕ ಗಳಿಸಿದರೆ, ಅಷ್ಟೇ ಪಂದ್ಯಗಳಿಂದ ಯುಪಿ ಯೋಧ ತಂಡ 66 ಅಂಕ ಗಳಿಸಿ ಅದು ಸಹ ಪ್ಲೇ ಆಫ್‌ನಲ್ಲಿ ಸ್ಥಾನ ಪಡೆದಿದೆ.

ಉಳಿದ ಎರಡು ಸ್ಥಾನಗಳಿಗಾಗಿ ತಮಿಳು ತಲೈವಾಸ್ (61 ಅಂಕ), ದಬಾಂಗ್ ಡೆಲ್ಲಿ (55 ಅಂಕ), ಯು ಮುಂಬಾ (51 ಅಂಕ), ಹರ್ಯಾಣ ಸ್ಟೀಲರ್ಸ್ (51 ಅಂಕ), ಗುಜರಾತ್ ಜೈಂಟ್ಸ್ (51 ಅಂಕ), ಬೆಂಗಾಲ್ ವಾರಿಯರ್ಸ್ (50 ಅಂಕ) ಮತ್ತು ಪಟ್ನಾ ಪೈರೇಟ್ಸ್ (49 ಅಂಕ) ಸೇರಿ ಒಟ್ಟು 7 ತಂಡಗಳು ಸೆಣಸಾಟ ನಡೆಸುತ್ತಿವೆ. ಪಟ್ನಾ ತಂಡಕ್ಕೆ 3 ಪಂದ್ಯಗಳಿ ಬಾಕಿ ಇದ್ದರೆ, ಉಳಿದ ತಂಡಗಳಿಗೆ ತಲಾ 2 ಪಂದ್ಯಗಳಿದ್ದು ಎಲ್ಲವನ್ನು ದೊಡ್ಡ ಅಂತರದಲ್ಲಿ ಗೆದ್ದ 2 ತಂಡಕ್ಕೆ ಮಾತ್ರ ಪ್ಲೇ ಆಫ್ ಅವಕಾಶವಿದೆ. ಆದರೆ 18 ಪಂದ್ಯ ಸೋತಿರುವ ತೆಲುಗು ಟೈಟನ್ಸ್ ಮಾತ್ರ ಟೂರ್ನಿಯಿಂದ ಹೊರ ಬಿದ್ದಿದೆ.

ಇಂದು ಪುಣೇರಿ ಪಲ್ಟಾನ್ ಮತ್ತು ಪಟ್ನಾ ನಡುವಿನ ಮೊದಲ ಪಂದ್ಯವಿದೆ. ಇಲ್ಲಿ ಪಟ್ನಾ ಗೆದ್ದಲ್ಲಿ ಅದರ ಪ್ಲೇ ಆಫ್ ಆಸೆ ಜೀವಂತವಾಗಿ ಉಳಿಯುತ್ತದೆ. ಪುಣೇರಿ ಪಲ್ಟಾನ್ ಗೆದ್ದಲ್ಲಿ ಅದು ಅಂಕ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನದಲ್ಲಿ ಉಳಿಯುವುದರಿಂದ ನೇರವಾಗಿ ಸೆಮಿಫೈನಲ್ ತಲುಪುತ್ತದೆ. ಅದೇ ಎರಡನೇ ಪಂದ್ಯ ಜೈಪುರ್ ಮತ್ತು ಹರ್ಯಾಣ ನಡುವೆ ನಡೆಯಲಿದೆ. ಹರ್ಯಾಣ ಪ್ಲೇ ಆಫ್ ಆಸೆ ಜೀವಂತವಾಗಿಟ್ಟುಕೊಳ್ಳಬೇಕಾದರೆ ಇಂದು ಗೆಲ್ಲಲೇಬೇಕು. ಒಂದು ವೇಳೆ ಜೈಪುರ್ ಗೆದ್ದಲ್ಲಿ ಅದು ಅಂಕ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನದಲ್ಲಿ ಉಳಿಯುವುದರಿಂದ ನೇರವಾಗಿ ಸೆಮಿಫೈನಲ್ ತಲುಪುತ್ತದೆ.

ಬೆಂಗಳೂರು ಬುಲ್ಸ್ ಬುಧವಾರ ಪಟ್ನಾ ಎದುರು ಆಡಿದರೆ ಶನಿವಾರ ತನ್ನ ಕೊನೆಯ ಪಂದ್ಯವನ್ನು ಯು ಮುಂಬಾ ಎದುರು ಆಡಲಿದೆ. ಅದು ಎರಡು ಪಂದ್ಯಗಳನ್ನು ಗೆಲ್ಲಬೇಕು ಮತ್ತು ಪುಣೆ ಅಥವಾ ಜೈಪುರ್ ಉಳಿದ ಎರಡು ಪಂದ್ಯಗಳನ್ನು ಸೋತರೆ ಮಾತ್ರ ಬೆಂಗಳೂರು ಅಗ್ರ ಮೊದಲ ಅಥವಾ ಎರಡನೇ ಸ್ಥಾನಕ್ಕೆ ಹೋಗಲು ಸಾಧ್ಯ. ಆದರೆ ಅದು ತೀರಾ ಕಷ್ಟ ಎನಿಸುತ್ತದೆ. ಏಕೆಂದರೆ  ಆ ಎರೆಡು ತಂಡಗಳು ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡುತ್ತಿವೆ.

ಪ್ರೊ ಕಬಡ್ಡಿಯ ಲೀಗ್‌ ಹಂತ ಡಬಲ್ ರೌಂಡ್ ರಾಬಿನ್ ಆಧಾರದಲ್ಲಿ ನಡೆಯುತ್ತದೆ. ಪ್ರತಿ ತಂಡಕ್ಕೂ 22 ಪಂದ್ಯಗಳು ಸಿಗುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಆರು ಸ್ಥಾನ ಪಡೆದ ತಂಡಗಳು ಪ್ಲೇಆಫ್ ಪ್ರವೇಶಿಸಿದರೆ, ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅದರಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಪ್ಲೇ ಆಫ್‌ನಲ್ಲಿ ಕ್ವಾಲಿಫೈಯರ್ ಪಂದ್ಯ ಎದುರಿಸಿ ಗೆದ್ದ ತಂಡಗಳು ಮಾತ್ರ ಸೆಮಿಫೈನಲ್ ಪ್ರವೇಶಿಸುತ್ತವೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಹಾಗಾಗಿ ಮೊದಲ ಎರಡು ಸ್ಥಾನ ಪಡೆಯುವುದು ಉತ್ತಮ. ಇಷ್ಟು ದಿನ ಮೊದಲು ಮತ್ತು ಎರಡನೇ ಸ್ಥಾನದಲ್ಲಿರುತ್ತಿದ್ದ ಬೆಂಗಳೂರು 3 ಸೋಲಿನೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ. ಸೋತವರು ಮನೆಗೆ ನಡೆಯುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ; ಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...