Homeಸಿನಿಮಾಕ್ರೀಡೆಡಿಫೆಂಡಿಂಗ್‌ನಲ್ಲಿ ಬಲ ಪ್ರದರ್ಶನ: ಯುಪಿ ಎದುರು ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಬೆಂಗಳೂರು ಬುಲ್ಸ್

ಡಿಫೆಂಡಿಂಗ್‌ನಲ್ಲಿ ಬಲ ಪ್ರದರ್ಶನ: ಯುಪಿ ಎದುರು ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಬೆಂಗಳೂರು ಬುಲ್ಸ್

- Advertisement -
- Advertisement -

ಕಾರ್ನರ್ ಡಿಫೆಂಡಿಂಗ್ ಆಟಗಾರರಾದ ಅಮನ್ ಮತ್ತು ಸೌರಭ್ ನಂದಲ್‌ ರವರ ಅದ್ಭುತ ಡಿಫೆಂಡಿಂಗ್ ಬಲದಿಂದ ಬೆಂಗಳೂರು ಬುಲ್ಸ್ ತಂಡವು ಬಲಿಷ್ಠ ಯುಪಿ ಯೋಧ ತಂಡವನ್ನು ಮಣಸಿ (38-35) ಪ್ಲೇ ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿತು.

ಡಿಫೆನ್ಸ್‌ನಲ್ಲಿ ಹೆಚ್ಚು ವೈಫಲ್ಯ ಕಾಣುತ್ತಿದ್ದ ಬೆಂಗಳೂರು ಬುಲ್ಸ್ ತಂಡದಲ್ಲಿ ಸುಧಾರಣೆ ಕಂಡಿದೆ. ಅಮನ್ ಏಳು ಡಿಫೆಂಡಿಂಗ್ ಪ್ರಯತ್ನಗಳಲ್ಲಿ 5 ಬಾರಿ ಯಶಸ್ಸು ಕಂಡರು. ಇನ್ನೊಂದೆಡೆ ಸೌರಭ್ ನಂದಲ್ ಮೂರು ಬಾರಿ ಪರ್ದೀಪ್ ನರ್ವಾಲ್‌ರವರನ್ನು ಕಟ್ಟಿ ಹಾಕುವಲ್ಲಿ ಸಫಲವಾದರು. ಪರಿಣಾಮ ಬುಲ್ಸ್ ತಂಡವನ್ನು ಯುಪಿ ಯೋಧ ತಂಡವನ್ನು ಎರಡು ಬಾರಿ ಆಲೌಟ್ ಮಾಡಲು ಸಾಧ್ಯವಾಯಿತು.

ಆದರೆ ರೈಡಿಂಗ್ ವಿಭಾಗದಲ್ಲಿ ಬುಲ್ಸ್ ತಂಡಕ್ಕೆ ಹೆಚ್ಚಿನ ಅಂಕಗಳು ಸಿಗಲಿಲ್ಲ. ಭರತ್ 13 ರೈಡ್‌ಗಳಿಂದ 8 ಪಾಯಿಂಟ್ ಪಡೆದರೆ, ವಿಕಾಸ್ ಖಂಡೋಲ 21 ರೈಡ್‌ಗಳಿಂದ ಕೇವಲ 6 ಪಾಯಿಂಟ್ ಪಡೆದರು. ನೀರಜ್ ನರ್ವಾಲ್ 9 ರೈಡ್‌ಗಳಿಂದ 4 ಅಂಕ ಪಡೆದರು. ಆದರೂ ಡಿಫೆಂಡರ್‌ಗಳು ತಮ್ಮ ನೈಜ ಆಟ ಪ್ರದರ್ಶಿಸಿದ ಕಾರಣ ಬೆಂಗಳೂರು ಬುಲ್ಸ್ ತಂಡ ಜಯಭೇರಿ ಬಾರಿಸಿತು.

ಒಂದು ಹಂತದಲ್ಲಿ ಬುಲ್ಸ್ ಮುಂದಿದ್ದರು ಮೂರು ಬಾರಿ ಸತತವಾಗಿ ಸೂಪರ್ ಟ್ಯಾಕಲ್ ಆಗಿ ಪಾಯಿಂಟ್ಸ್ ಚೆಲ್ಲಿತು. ಇನ್ನು 12 ಅಂಕಗಳಿಂದ ಮುಂದಿದ್ದಾಗಲೂ ಆಲೌಟ್ ಆಗಿ ಕೇವಲ 3 ಅಂಕದಿಂದ ಗೆಲ್ಲುವಂತಾಯಿತು.

ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ತಂಡಗಳು ತಲಾ 20 ಪಂದ್ಯಗಳಿಂದ ತಲಾ 74 ಅಂಕ ಗಳಿಸಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿದ್ದು ಈಗಾಗಲೆ ಪ್ಲೇ ಆಫ್‌ನಲ್ಲಿ ತಮ್ಮ ಸ್ಥಾನ ಖಚಿತಪಡಿಸಿಕೊಂಡಿವೆ. ಬೆಂಗಳೂರು ತಂಡ 20 ಪಂದ್ಯಗಳಿಂದ 68 ಅಂಕ ಗಳಿಸಿದರೆ, ಅಷ್ಟೇ ಪಂದ್ಯಗಳಿಂದ ಯುಪಿ ಯೋಧ ತಂಡ 66 ಅಂಕ ಗಳಿಸಿ ಅದು ಸಹ ಪ್ಲೇ ಆಫ್‌ನಲ್ಲಿ ಸ್ಥಾನ ಪಡೆದಿದೆ.

ಉಳಿದ ಎರಡು ಸ್ಥಾನಗಳಿಗಾಗಿ ತಮಿಳು ತಲೈವಾಸ್ (61 ಅಂಕ), ದಬಾಂಗ್ ಡೆಲ್ಲಿ (55 ಅಂಕ), ಯು ಮುಂಬಾ (51 ಅಂಕ), ಹರ್ಯಾಣ ಸ್ಟೀಲರ್ಸ್ (51 ಅಂಕ), ಗುಜರಾತ್ ಜೈಂಟ್ಸ್ (51 ಅಂಕ), ಬೆಂಗಾಲ್ ವಾರಿಯರ್ಸ್ (50 ಅಂಕ) ಮತ್ತು ಪಟ್ನಾ ಪೈರೇಟ್ಸ್ (49 ಅಂಕ) ಸೇರಿ ಒಟ್ಟು 7 ತಂಡಗಳು ಸೆಣಸಾಟ ನಡೆಸುತ್ತಿವೆ. ಪಟ್ನಾ ತಂಡಕ್ಕೆ 3 ಪಂದ್ಯಗಳಿ ಬಾಕಿ ಇದ್ದರೆ, ಉಳಿದ ತಂಡಗಳಿಗೆ ತಲಾ 2 ಪಂದ್ಯಗಳಿದ್ದು ಎಲ್ಲವನ್ನು ದೊಡ್ಡ ಅಂತರದಲ್ಲಿ ಗೆದ್ದ 2 ತಂಡಕ್ಕೆ ಮಾತ್ರ ಪ್ಲೇ ಆಫ್ ಅವಕಾಶವಿದೆ. ಆದರೆ 18 ಪಂದ್ಯ ಸೋತಿರುವ ತೆಲುಗು ಟೈಟನ್ಸ್ ಮಾತ್ರ ಟೂರ್ನಿಯಿಂದ ಹೊರ ಬಿದ್ದಿದೆ.

ಇಂದು ಪುಣೇರಿ ಪಲ್ಟಾನ್ ಮತ್ತು ಪಟ್ನಾ ನಡುವಿನ ಮೊದಲ ಪಂದ್ಯವಿದೆ. ಇಲ್ಲಿ ಪಟ್ನಾ ಗೆದ್ದಲ್ಲಿ ಅದರ ಪ್ಲೇ ಆಫ್ ಆಸೆ ಜೀವಂತವಾಗಿ ಉಳಿಯುತ್ತದೆ. ಪುಣೇರಿ ಪಲ್ಟಾನ್ ಗೆದ್ದಲ್ಲಿ ಅದು ಅಂಕ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನದಲ್ಲಿ ಉಳಿಯುವುದರಿಂದ ನೇರವಾಗಿ ಸೆಮಿಫೈನಲ್ ತಲುಪುತ್ತದೆ. ಅದೇ ಎರಡನೇ ಪಂದ್ಯ ಜೈಪುರ್ ಮತ್ತು ಹರ್ಯಾಣ ನಡುವೆ ನಡೆಯಲಿದೆ. ಹರ್ಯಾಣ ಪ್ಲೇ ಆಫ್ ಆಸೆ ಜೀವಂತವಾಗಿಟ್ಟುಕೊಳ್ಳಬೇಕಾದರೆ ಇಂದು ಗೆಲ್ಲಲೇಬೇಕು. ಒಂದು ವೇಳೆ ಜೈಪುರ್ ಗೆದ್ದಲ್ಲಿ ಅದು ಅಂಕ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನದಲ್ಲಿ ಉಳಿಯುವುದರಿಂದ ನೇರವಾಗಿ ಸೆಮಿಫೈನಲ್ ತಲುಪುತ್ತದೆ.

ಬೆಂಗಳೂರು ಬುಲ್ಸ್ ಬುಧವಾರ ಪಟ್ನಾ ಎದುರು ಆಡಿದರೆ ಶನಿವಾರ ತನ್ನ ಕೊನೆಯ ಪಂದ್ಯವನ್ನು ಯು ಮುಂಬಾ ಎದುರು ಆಡಲಿದೆ. ಅದು ಎರಡು ಪಂದ್ಯಗಳನ್ನು ಗೆಲ್ಲಬೇಕು ಮತ್ತು ಪುಣೆ ಅಥವಾ ಜೈಪುರ್ ಉಳಿದ ಎರಡು ಪಂದ್ಯಗಳನ್ನು ಸೋತರೆ ಮಾತ್ರ ಬೆಂಗಳೂರು ಅಗ್ರ ಮೊದಲ ಅಥವಾ ಎರಡನೇ ಸ್ಥಾನಕ್ಕೆ ಹೋಗಲು ಸಾಧ್ಯ. ಆದರೆ ಅದು ತೀರಾ ಕಷ್ಟ ಎನಿಸುತ್ತದೆ. ಏಕೆಂದರೆ  ಆ ಎರೆಡು ತಂಡಗಳು ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡುತ್ತಿವೆ.

ಪ್ರೊ ಕಬಡ್ಡಿಯ ಲೀಗ್‌ ಹಂತ ಡಬಲ್ ರೌಂಡ್ ರಾಬಿನ್ ಆಧಾರದಲ್ಲಿ ನಡೆಯುತ್ತದೆ. ಪ್ರತಿ ತಂಡಕ್ಕೂ 22 ಪಂದ್ಯಗಳು ಸಿಗುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಆರು ಸ್ಥಾನ ಪಡೆದ ತಂಡಗಳು ಪ್ಲೇಆಫ್ ಪ್ರವೇಶಿಸಿದರೆ, ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅದರಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಪ್ಲೇ ಆಫ್‌ನಲ್ಲಿ ಕ್ವಾಲಿಫೈಯರ್ ಪಂದ್ಯ ಎದುರಿಸಿ ಗೆದ್ದ ತಂಡಗಳು ಮಾತ್ರ ಸೆಮಿಫೈನಲ್ ಪ್ರವೇಶಿಸುತ್ತವೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಹಾಗಾಗಿ ಮೊದಲ ಎರಡು ಸ್ಥಾನ ಪಡೆಯುವುದು ಉತ್ತಮ. ಇಷ್ಟು ದಿನ ಮೊದಲು ಮತ್ತು ಎರಡನೇ ಸ್ಥಾನದಲ್ಲಿರುತ್ತಿದ್ದ ಬೆಂಗಳೂರು 3 ಸೋಲಿನೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ. ಸೋತವರು ಮನೆಗೆ ನಡೆಯುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ; ಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...