Homeಸಿನಿಮಾಕ್ರೀಡೆಡಿಫೆಂಡಿಂಗ್‌ನಲ್ಲಿ ಬಲ ಪ್ರದರ್ಶನ: ಯುಪಿ ಎದುರು ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಬೆಂಗಳೂರು ಬುಲ್ಸ್

ಡಿಫೆಂಡಿಂಗ್‌ನಲ್ಲಿ ಬಲ ಪ್ರದರ್ಶನ: ಯುಪಿ ಎದುರು ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಬೆಂಗಳೂರು ಬುಲ್ಸ್

- Advertisement -
- Advertisement -

ಕಾರ್ನರ್ ಡಿಫೆಂಡಿಂಗ್ ಆಟಗಾರರಾದ ಅಮನ್ ಮತ್ತು ಸೌರಭ್ ನಂದಲ್‌ ರವರ ಅದ್ಭುತ ಡಿಫೆಂಡಿಂಗ್ ಬಲದಿಂದ ಬೆಂಗಳೂರು ಬುಲ್ಸ್ ತಂಡವು ಬಲಿಷ್ಠ ಯುಪಿ ಯೋಧ ತಂಡವನ್ನು ಮಣಸಿ (38-35) ಪ್ಲೇ ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿತು.

ಡಿಫೆನ್ಸ್‌ನಲ್ಲಿ ಹೆಚ್ಚು ವೈಫಲ್ಯ ಕಾಣುತ್ತಿದ್ದ ಬೆಂಗಳೂರು ಬುಲ್ಸ್ ತಂಡದಲ್ಲಿ ಸುಧಾರಣೆ ಕಂಡಿದೆ. ಅಮನ್ ಏಳು ಡಿಫೆಂಡಿಂಗ್ ಪ್ರಯತ್ನಗಳಲ್ಲಿ 5 ಬಾರಿ ಯಶಸ್ಸು ಕಂಡರು. ಇನ್ನೊಂದೆಡೆ ಸೌರಭ್ ನಂದಲ್ ಮೂರು ಬಾರಿ ಪರ್ದೀಪ್ ನರ್ವಾಲ್‌ರವರನ್ನು ಕಟ್ಟಿ ಹಾಕುವಲ್ಲಿ ಸಫಲವಾದರು. ಪರಿಣಾಮ ಬುಲ್ಸ್ ತಂಡವನ್ನು ಯುಪಿ ಯೋಧ ತಂಡವನ್ನು ಎರಡು ಬಾರಿ ಆಲೌಟ್ ಮಾಡಲು ಸಾಧ್ಯವಾಯಿತು.

ಆದರೆ ರೈಡಿಂಗ್ ವಿಭಾಗದಲ್ಲಿ ಬುಲ್ಸ್ ತಂಡಕ್ಕೆ ಹೆಚ್ಚಿನ ಅಂಕಗಳು ಸಿಗಲಿಲ್ಲ. ಭರತ್ 13 ರೈಡ್‌ಗಳಿಂದ 8 ಪಾಯಿಂಟ್ ಪಡೆದರೆ, ವಿಕಾಸ್ ಖಂಡೋಲ 21 ರೈಡ್‌ಗಳಿಂದ ಕೇವಲ 6 ಪಾಯಿಂಟ್ ಪಡೆದರು. ನೀರಜ್ ನರ್ವಾಲ್ 9 ರೈಡ್‌ಗಳಿಂದ 4 ಅಂಕ ಪಡೆದರು. ಆದರೂ ಡಿಫೆಂಡರ್‌ಗಳು ತಮ್ಮ ನೈಜ ಆಟ ಪ್ರದರ್ಶಿಸಿದ ಕಾರಣ ಬೆಂಗಳೂರು ಬುಲ್ಸ್ ತಂಡ ಜಯಭೇರಿ ಬಾರಿಸಿತು.

ಒಂದು ಹಂತದಲ್ಲಿ ಬುಲ್ಸ್ ಮುಂದಿದ್ದರು ಮೂರು ಬಾರಿ ಸತತವಾಗಿ ಸೂಪರ್ ಟ್ಯಾಕಲ್ ಆಗಿ ಪಾಯಿಂಟ್ಸ್ ಚೆಲ್ಲಿತು. ಇನ್ನು 12 ಅಂಕಗಳಿಂದ ಮುಂದಿದ್ದಾಗಲೂ ಆಲೌಟ್ ಆಗಿ ಕೇವಲ 3 ಅಂಕದಿಂದ ಗೆಲ್ಲುವಂತಾಯಿತು.

ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ತಂಡಗಳು ತಲಾ 20 ಪಂದ್ಯಗಳಿಂದ ತಲಾ 74 ಅಂಕ ಗಳಿಸಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿದ್ದು ಈಗಾಗಲೆ ಪ್ಲೇ ಆಫ್‌ನಲ್ಲಿ ತಮ್ಮ ಸ್ಥಾನ ಖಚಿತಪಡಿಸಿಕೊಂಡಿವೆ. ಬೆಂಗಳೂರು ತಂಡ 20 ಪಂದ್ಯಗಳಿಂದ 68 ಅಂಕ ಗಳಿಸಿದರೆ, ಅಷ್ಟೇ ಪಂದ್ಯಗಳಿಂದ ಯುಪಿ ಯೋಧ ತಂಡ 66 ಅಂಕ ಗಳಿಸಿ ಅದು ಸಹ ಪ್ಲೇ ಆಫ್‌ನಲ್ಲಿ ಸ್ಥಾನ ಪಡೆದಿದೆ.

ಉಳಿದ ಎರಡು ಸ್ಥಾನಗಳಿಗಾಗಿ ತಮಿಳು ತಲೈವಾಸ್ (61 ಅಂಕ), ದಬಾಂಗ್ ಡೆಲ್ಲಿ (55 ಅಂಕ), ಯು ಮುಂಬಾ (51 ಅಂಕ), ಹರ್ಯಾಣ ಸ್ಟೀಲರ್ಸ್ (51 ಅಂಕ), ಗುಜರಾತ್ ಜೈಂಟ್ಸ್ (51 ಅಂಕ), ಬೆಂಗಾಲ್ ವಾರಿಯರ್ಸ್ (50 ಅಂಕ) ಮತ್ತು ಪಟ್ನಾ ಪೈರೇಟ್ಸ್ (49 ಅಂಕ) ಸೇರಿ ಒಟ್ಟು 7 ತಂಡಗಳು ಸೆಣಸಾಟ ನಡೆಸುತ್ತಿವೆ. ಪಟ್ನಾ ತಂಡಕ್ಕೆ 3 ಪಂದ್ಯಗಳಿ ಬಾಕಿ ಇದ್ದರೆ, ಉಳಿದ ತಂಡಗಳಿಗೆ ತಲಾ 2 ಪಂದ್ಯಗಳಿದ್ದು ಎಲ್ಲವನ್ನು ದೊಡ್ಡ ಅಂತರದಲ್ಲಿ ಗೆದ್ದ 2 ತಂಡಕ್ಕೆ ಮಾತ್ರ ಪ್ಲೇ ಆಫ್ ಅವಕಾಶವಿದೆ. ಆದರೆ 18 ಪಂದ್ಯ ಸೋತಿರುವ ತೆಲುಗು ಟೈಟನ್ಸ್ ಮಾತ್ರ ಟೂರ್ನಿಯಿಂದ ಹೊರ ಬಿದ್ದಿದೆ.

ಇಂದು ಪುಣೇರಿ ಪಲ್ಟಾನ್ ಮತ್ತು ಪಟ್ನಾ ನಡುವಿನ ಮೊದಲ ಪಂದ್ಯವಿದೆ. ಇಲ್ಲಿ ಪಟ್ನಾ ಗೆದ್ದಲ್ಲಿ ಅದರ ಪ್ಲೇ ಆಫ್ ಆಸೆ ಜೀವಂತವಾಗಿ ಉಳಿಯುತ್ತದೆ. ಪುಣೇರಿ ಪಲ್ಟಾನ್ ಗೆದ್ದಲ್ಲಿ ಅದು ಅಂಕ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನದಲ್ಲಿ ಉಳಿಯುವುದರಿಂದ ನೇರವಾಗಿ ಸೆಮಿಫೈನಲ್ ತಲುಪುತ್ತದೆ. ಅದೇ ಎರಡನೇ ಪಂದ್ಯ ಜೈಪುರ್ ಮತ್ತು ಹರ್ಯಾಣ ನಡುವೆ ನಡೆಯಲಿದೆ. ಹರ್ಯಾಣ ಪ್ಲೇ ಆಫ್ ಆಸೆ ಜೀವಂತವಾಗಿಟ್ಟುಕೊಳ್ಳಬೇಕಾದರೆ ಇಂದು ಗೆಲ್ಲಲೇಬೇಕು. ಒಂದು ವೇಳೆ ಜೈಪುರ್ ಗೆದ್ದಲ್ಲಿ ಅದು ಅಂಕ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನದಲ್ಲಿ ಉಳಿಯುವುದರಿಂದ ನೇರವಾಗಿ ಸೆಮಿಫೈನಲ್ ತಲುಪುತ್ತದೆ.

ಬೆಂಗಳೂರು ಬುಲ್ಸ್ ಬುಧವಾರ ಪಟ್ನಾ ಎದುರು ಆಡಿದರೆ ಶನಿವಾರ ತನ್ನ ಕೊನೆಯ ಪಂದ್ಯವನ್ನು ಯು ಮುಂಬಾ ಎದುರು ಆಡಲಿದೆ. ಅದು ಎರಡು ಪಂದ್ಯಗಳನ್ನು ಗೆಲ್ಲಬೇಕು ಮತ್ತು ಪುಣೆ ಅಥವಾ ಜೈಪುರ್ ಉಳಿದ ಎರಡು ಪಂದ್ಯಗಳನ್ನು ಸೋತರೆ ಮಾತ್ರ ಬೆಂಗಳೂರು ಅಗ್ರ ಮೊದಲ ಅಥವಾ ಎರಡನೇ ಸ್ಥಾನಕ್ಕೆ ಹೋಗಲು ಸಾಧ್ಯ. ಆದರೆ ಅದು ತೀರಾ ಕಷ್ಟ ಎನಿಸುತ್ತದೆ. ಏಕೆಂದರೆ  ಆ ಎರೆಡು ತಂಡಗಳು ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡುತ್ತಿವೆ.

ಪ್ರೊ ಕಬಡ್ಡಿಯ ಲೀಗ್‌ ಹಂತ ಡಬಲ್ ರೌಂಡ್ ರಾಬಿನ್ ಆಧಾರದಲ್ಲಿ ನಡೆಯುತ್ತದೆ. ಪ್ರತಿ ತಂಡಕ್ಕೂ 22 ಪಂದ್ಯಗಳು ಸಿಗುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಆರು ಸ್ಥಾನ ಪಡೆದ ತಂಡಗಳು ಪ್ಲೇಆಫ್ ಪ್ರವೇಶಿಸಿದರೆ, ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅದರಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಪ್ಲೇ ಆಫ್‌ನಲ್ಲಿ ಕ್ವಾಲಿಫೈಯರ್ ಪಂದ್ಯ ಎದುರಿಸಿ ಗೆದ್ದ ತಂಡಗಳು ಮಾತ್ರ ಸೆಮಿಫೈನಲ್ ಪ್ರವೇಶಿಸುತ್ತವೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಹಾಗಾಗಿ ಮೊದಲ ಎರಡು ಸ್ಥಾನ ಪಡೆಯುವುದು ಉತ್ತಮ. ಇಷ್ಟು ದಿನ ಮೊದಲು ಮತ್ತು ಎರಡನೇ ಸ್ಥಾನದಲ್ಲಿರುತ್ತಿದ್ದ ಬೆಂಗಳೂರು 3 ಸೋಲಿನೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ. ಸೋತವರು ಮನೆಗೆ ನಡೆಯುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ; ಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...