Homeಮುಖಪುಟಒಬ್ಬನೇ ದೇವರೆಂದು ಘೋಷಿಸುವಂತೆ ಅರ್ಜಿ ಸಲ್ಲಿಸಿದವನಿಗೆ ಸುಪ್ರೀಂ ಕೋರ್ಟ್ ದಂಡ

ಒಬ್ಬನೇ ದೇವರೆಂದು ಘೋಷಿಸುವಂತೆ ಅರ್ಜಿ ಸಲ್ಲಿಸಿದವನಿಗೆ ಸುಪ್ರೀಂ ಕೋರ್ಟ್ ದಂಡ

- Advertisement -
- Advertisement -

ಭಾರತವು ಜಾತ್ಯತೀತ ರಾಷ್ಟ್ರವಾಗಿದ್ದು, ಪ್ರತಿಯೊಬ್ಬರೂ ತಮ್ಮದೇ ಆದ ಧರ್ಮವನ್ನು ಅನುಸರಿಸುವ ಹಕ್ಕನ್ನು ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಎಲ್ಲಾ ನಾಗರಿಕರು ಹಿಂದೂ ಧರ್ಮದ ನಿರ್ದಿಷ್ಟ ಪಂಗಡವನ್ನು (ಪರಮಾತ್ಮನನ್ನು) ಅನುಸರಿಸಬೇಕೆಂದು ಸಲ್ಲಿಸಿದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ. ಭವಿಷ್ಯದಲ್ಲಿ ಜನರು ಇಂತಹ ಅರ್ಜಿ ಸಲ್ಲಿಸುವ ಮುನ್ನ ಯೋಚಿಸಬೇಕು ಎಂಬ ಮುನ್ನೆಚ್ಚರಿಕೆಯ ಭಾಗವಾಗಿ ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ₹ 1 ಲಕ್ಷ ದಂಡ ವಿಧಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮನವಿಯು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಾಗಿದೆ ಎಂದು ಸೂಚಿಸಿದ ನ್ಯಾಯಮೂರ್ತಿಗಳಾದ ಎಂಆರ್ ಷಾ ಮತ್ತು ಸಿಟಿ ರವಿಕುಮಾರ್ ಅವರ ಪೀಠವು ಅರ್ಜಿದಾರ ಉಪೇಂದ್ರ ನಾಥ್ ದಲೈ ಅವರ ಅರ್ಜಿಯನ್ನು ವಜಾಗೊಳಿಸಿತು. “ನೀವು ಬಯಸಿದರೆ ನೀವು ಅವರನ್ನು ಪರಮಾತ್ಮ ಎಂದು ಪರಿಗಣಿಸಬಹುದು. ಅದನ್ನು ಇತರರ ಮೇಲೆ ಏಕೆ ಹೇರಲು ಬಯಸುತ್ತೀರಿ?” ಎಂದು ಕೋರ್ಟ್ ಪ್ರಶ್ನಿಸಿದೆ.

“ಭಾರತದಲ್ಲಿ, ಪ್ರತಿಯೊಬ್ಬರೂ ತಮ್ಮ ಧರ್ಮವನ್ನು ಅನುಸರಿಸಲು ಸಂಪೂರ್ಣ ಹಕ್ಕನ್ನು ಹೊಂದಿದ್ದಾರೆ. ಪ್ರತಿಯೊಬ್ಬರೂ ಒಂದೇ ಧರ್ಮವನ್ನು ಅನುಸರಿಸಬೇಕು ಎಂದು ನೀವು ಹೇಳಲು ಸಾಧ್ಯವಿಲ್ಲ” ಎಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ.

ಅರ್ಜಿಯನ್ನು ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲಾಗಿದೆ. ಈ ಅರ್ಜಿಯು ₹ 1 ಲಕ್ಷದ ಅನುಕರಣೀಯ ವೆಚ್ಚಗಳೊಂದಿಗೆ, ಇಂದಿನಿಂದ ನಾಲ್ಕು ವಾರಗಳಲ್ಲಿ ಈ ನ್ಯಾಯಾಲಯದ ರಿಜಿಸ್ಟ್ರಿಯಲ್ಲಿ ಠೇವಣಿ ಮಾಡಲು ಅರ್ಹವಾಗಿದೆ ಎಂದು ಕೋರ್ಟ್ ಹೇಳಿದೆ.

ದಂಡ‌ವನ್ನು ವಿಧಿಸಿರುವುದರಿಂದ ಇಂತಹ ಸಾರ್ವಜನಿಕ ಹಿತಾಸಕ್ತಿಗಳನ್ನು ಸಲ್ಲಿಸುವ ಮೊದಲು ಕನಿಷ್ಠ ನಾಲ್ಕು ಬಾರಿ ಯೋಚಿಸಲು ಸಾಧ್ಯವಾಗುತ್ತದೆ ಎಂದು ನ್ಯಾಯಮೂರ್ತಿ ಎಂ.ಆರ್‌.ಷಾ ತಿಳಿಸಿದ್ದಾರೆ.

ಇದನ್ನೂ ಓದಿರಿ: ದಲಿತ ಸಂಘಟನೆಗಳ ಐಕ್ಯತೆ ಕುರಿತು ಎದ್ದಿರುವ ಪ್ರಶ್ನೆಗಳ ಸುತ್ತ…

ಪಿಐಎಲ್ ವಜಾಗೊಳಿಸಿದ ನ್ಯಾಯಮೂರ್ತಿ ಷಾ ಅವರು, “ಆಪ್ ಮನೋ ಕಿ ಏಕ್ ಹೈ ಗುರೂಜಿ ಹೈಂ. ಐಸೇ ಕಭಿ ಹೋತಾ ಹೈ ಭಯ್ಯಾ? ಸಬ್ಕೋ ಪುರಾ ಅಧಿಕಾರ ಹೈಂ ಯೇ ಕಂಟ್ರಿ ಮೇ ಜಿಸ್ಕೋ ಜೋ ಧರಮ್ ಮನ್ನಾ ಹೈ, ಮಾನೆ (ನಿಮ್ಮ ಗುರೂಜಿಯನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ನೀವು ಹೇಳುತ್ತಿದ್ದೀರಿ. ಅದು ಹೇಗೆ ಸಾಧ್ಯ? ಭಾರತದಲ್ಲಿ ಪ್ರತಿಯೊಬ್ಬರಿಗೂ ಅವರವರ ಧರ್ಮವನ್ನು ಅನುಸರಿಸುವ ಹಕ್ಕಿದೆ)” ಎಂದಿದ್ದಾರೆ.

ಬಿಜೆಪಿ, ಆರ್‌ಎಸ್‌ಎಸ್, ವಿಎಚ್‌ಪಿ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ನ್ಯಾಷನಲ್‌ ಕ್ರಿಶ್ಚಿಯನ್ ಕೌನ್ಸಿಲ್, ಶ್ರೀ ಪಾಲನ್‌ಪುರಿ ಸ್ಥಾನಕ್ವಾಸಿ ಜೈನ್ ಅಸೋಸಿಯೇಷನ್, ಬೌದ್ಧ ಸೊಸೈಟಿ ಆಫ್ ಇಂಡಿಯಾ, ಪುರಿ ಜಗನ್ನಾಥ ಮಂದಿರ ನಿರ್ವಹಣಾ ಸಮಿತಿ, ಅಖಿಲ ಭಾರತ ಇಸ್ಕಾನ್ ಸಮಿತಿ, ರಾಮಕೃಷ್ಣ ಮಠ, ಗುರುದ್ವಾರ ಬಾಂಗ್ಲಾ ಸಾಹಿಬ್‌ಗಳನ್ನುಈ ಪ್ರಕರಣದಲ್ಲಿ ಎದುರುದಾರರನ್ನಾಗಿ ಅರ್ಜಿದಾರರು ನಿಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...