Homeಮುಖಪುಟಒಬ್ಬನೇ ದೇವರೆಂದು ಘೋಷಿಸುವಂತೆ ಅರ್ಜಿ ಸಲ್ಲಿಸಿದವನಿಗೆ ಸುಪ್ರೀಂ ಕೋರ್ಟ್ ದಂಡ

ಒಬ್ಬನೇ ದೇವರೆಂದು ಘೋಷಿಸುವಂತೆ ಅರ್ಜಿ ಸಲ್ಲಿಸಿದವನಿಗೆ ಸುಪ್ರೀಂ ಕೋರ್ಟ್ ದಂಡ

- Advertisement -
- Advertisement -

ಭಾರತವು ಜಾತ್ಯತೀತ ರಾಷ್ಟ್ರವಾಗಿದ್ದು, ಪ್ರತಿಯೊಬ್ಬರೂ ತಮ್ಮದೇ ಆದ ಧರ್ಮವನ್ನು ಅನುಸರಿಸುವ ಹಕ್ಕನ್ನು ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಎಲ್ಲಾ ನಾಗರಿಕರು ಹಿಂದೂ ಧರ್ಮದ ನಿರ್ದಿಷ್ಟ ಪಂಗಡವನ್ನು (ಪರಮಾತ್ಮನನ್ನು) ಅನುಸರಿಸಬೇಕೆಂದು ಸಲ್ಲಿಸಿದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ. ಭವಿಷ್ಯದಲ್ಲಿ ಜನರು ಇಂತಹ ಅರ್ಜಿ ಸಲ್ಲಿಸುವ ಮುನ್ನ ಯೋಚಿಸಬೇಕು ಎಂಬ ಮುನ್ನೆಚ್ಚರಿಕೆಯ ಭಾಗವಾಗಿ ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ₹ 1 ಲಕ್ಷ ದಂಡ ವಿಧಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮನವಿಯು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಾಗಿದೆ ಎಂದು ಸೂಚಿಸಿದ ನ್ಯಾಯಮೂರ್ತಿಗಳಾದ ಎಂಆರ್ ಷಾ ಮತ್ತು ಸಿಟಿ ರವಿಕುಮಾರ್ ಅವರ ಪೀಠವು ಅರ್ಜಿದಾರ ಉಪೇಂದ್ರ ನಾಥ್ ದಲೈ ಅವರ ಅರ್ಜಿಯನ್ನು ವಜಾಗೊಳಿಸಿತು. “ನೀವು ಬಯಸಿದರೆ ನೀವು ಅವರನ್ನು ಪರಮಾತ್ಮ ಎಂದು ಪರಿಗಣಿಸಬಹುದು. ಅದನ್ನು ಇತರರ ಮೇಲೆ ಏಕೆ ಹೇರಲು ಬಯಸುತ್ತೀರಿ?” ಎಂದು ಕೋರ್ಟ್ ಪ್ರಶ್ನಿಸಿದೆ.

“ಭಾರತದಲ್ಲಿ, ಪ್ರತಿಯೊಬ್ಬರೂ ತಮ್ಮ ಧರ್ಮವನ್ನು ಅನುಸರಿಸಲು ಸಂಪೂರ್ಣ ಹಕ್ಕನ್ನು ಹೊಂದಿದ್ದಾರೆ. ಪ್ರತಿಯೊಬ್ಬರೂ ಒಂದೇ ಧರ್ಮವನ್ನು ಅನುಸರಿಸಬೇಕು ಎಂದು ನೀವು ಹೇಳಲು ಸಾಧ್ಯವಿಲ್ಲ” ಎಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ.

ಅರ್ಜಿಯನ್ನು ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲಾಗಿದೆ. ಈ ಅರ್ಜಿಯು ₹ 1 ಲಕ್ಷದ ಅನುಕರಣೀಯ ವೆಚ್ಚಗಳೊಂದಿಗೆ, ಇಂದಿನಿಂದ ನಾಲ್ಕು ವಾರಗಳಲ್ಲಿ ಈ ನ್ಯಾಯಾಲಯದ ರಿಜಿಸ್ಟ್ರಿಯಲ್ಲಿ ಠೇವಣಿ ಮಾಡಲು ಅರ್ಹವಾಗಿದೆ ಎಂದು ಕೋರ್ಟ್ ಹೇಳಿದೆ.

ದಂಡ‌ವನ್ನು ವಿಧಿಸಿರುವುದರಿಂದ ಇಂತಹ ಸಾರ್ವಜನಿಕ ಹಿತಾಸಕ್ತಿಗಳನ್ನು ಸಲ್ಲಿಸುವ ಮೊದಲು ಕನಿಷ್ಠ ನಾಲ್ಕು ಬಾರಿ ಯೋಚಿಸಲು ಸಾಧ್ಯವಾಗುತ್ತದೆ ಎಂದು ನ್ಯಾಯಮೂರ್ತಿ ಎಂ.ಆರ್‌.ಷಾ ತಿಳಿಸಿದ್ದಾರೆ.

ಇದನ್ನೂ ಓದಿರಿ: ದಲಿತ ಸಂಘಟನೆಗಳ ಐಕ್ಯತೆ ಕುರಿತು ಎದ್ದಿರುವ ಪ್ರಶ್ನೆಗಳ ಸುತ್ತ…

ಪಿಐಎಲ್ ವಜಾಗೊಳಿಸಿದ ನ್ಯಾಯಮೂರ್ತಿ ಷಾ ಅವರು, “ಆಪ್ ಮನೋ ಕಿ ಏಕ್ ಹೈ ಗುರೂಜಿ ಹೈಂ. ಐಸೇ ಕಭಿ ಹೋತಾ ಹೈ ಭಯ್ಯಾ? ಸಬ್ಕೋ ಪುರಾ ಅಧಿಕಾರ ಹೈಂ ಯೇ ಕಂಟ್ರಿ ಮೇ ಜಿಸ್ಕೋ ಜೋ ಧರಮ್ ಮನ್ನಾ ಹೈ, ಮಾನೆ (ನಿಮ್ಮ ಗುರೂಜಿಯನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ನೀವು ಹೇಳುತ್ತಿದ್ದೀರಿ. ಅದು ಹೇಗೆ ಸಾಧ್ಯ? ಭಾರತದಲ್ಲಿ ಪ್ರತಿಯೊಬ್ಬರಿಗೂ ಅವರವರ ಧರ್ಮವನ್ನು ಅನುಸರಿಸುವ ಹಕ್ಕಿದೆ)” ಎಂದಿದ್ದಾರೆ.

ಬಿಜೆಪಿ, ಆರ್‌ಎಸ್‌ಎಸ್, ವಿಎಚ್‌ಪಿ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ನ್ಯಾಷನಲ್‌ ಕ್ರಿಶ್ಚಿಯನ್ ಕೌನ್ಸಿಲ್, ಶ್ರೀ ಪಾಲನ್‌ಪುರಿ ಸ್ಥಾನಕ್ವಾಸಿ ಜೈನ್ ಅಸೋಸಿಯೇಷನ್, ಬೌದ್ಧ ಸೊಸೈಟಿ ಆಫ್ ಇಂಡಿಯಾ, ಪುರಿ ಜಗನ್ನಾಥ ಮಂದಿರ ನಿರ್ವಹಣಾ ಸಮಿತಿ, ಅಖಿಲ ಭಾರತ ಇಸ್ಕಾನ್ ಸಮಿತಿ, ರಾಮಕೃಷ್ಣ ಮಠ, ಗುರುದ್ವಾರ ಬಾಂಗ್ಲಾ ಸಾಹಿಬ್‌ಗಳನ್ನುಈ ಪ್ರಕರಣದಲ್ಲಿ ಎದುರುದಾರರನ್ನಾಗಿ ಅರ್ಜಿದಾರರು ನಿಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...