Homeಮುಖಪುಟಒಬ್ಬನೇ ದೇವರೆಂದು ಘೋಷಿಸುವಂತೆ ಅರ್ಜಿ ಸಲ್ಲಿಸಿದವನಿಗೆ ಸುಪ್ರೀಂ ಕೋರ್ಟ್ ದಂಡ

ಒಬ್ಬನೇ ದೇವರೆಂದು ಘೋಷಿಸುವಂತೆ ಅರ್ಜಿ ಸಲ್ಲಿಸಿದವನಿಗೆ ಸುಪ್ರೀಂ ಕೋರ್ಟ್ ದಂಡ

- Advertisement -
- Advertisement -

ಭಾರತವು ಜಾತ್ಯತೀತ ರಾಷ್ಟ್ರವಾಗಿದ್ದು, ಪ್ರತಿಯೊಬ್ಬರೂ ತಮ್ಮದೇ ಆದ ಧರ್ಮವನ್ನು ಅನುಸರಿಸುವ ಹಕ್ಕನ್ನು ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಎಲ್ಲಾ ನಾಗರಿಕರು ಹಿಂದೂ ಧರ್ಮದ ನಿರ್ದಿಷ್ಟ ಪಂಗಡವನ್ನು (ಪರಮಾತ್ಮನನ್ನು) ಅನುಸರಿಸಬೇಕೆಂದು ಸಲ್ಲಿಸಿದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ. ಭವಿಷ್ಯದಲ್ಲಿ ಜನರು ಇಂತಹ ಅರ್ಜಿ ಸಲ್ಲಿಸುವ ಮುನ್ನ ಯೋಚಿಸಬೇಕು ಎಂಬ ಮುನ್ನೆಚ್ಚರಿಕೆಯ ಭಾಗವಾಗಿ ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ₹ 1 ಲಕ್ಷ ದಂಡ ವಿಧಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮನವಿಯು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಾಗಿದೆ ಎಂದು ಸೂಚಿಸಿದ ನ್ಯಾಯಮೂರ್ತಿಗಳಾದ ಎಂಆರ್ ಷಾ ಮತ್ತು ಸಿಟಿ ರವಿಕುಮಾರ್ ಅವರ ಪೀಠವು ಅರ್ಜಿದಾರ ಉಪೇಂದ್ರ ನಾಥ್ ದಲೈ ಅವರ ಅರ್ಜಿಯನ್ನು ವಜಾಗೊಳಿಸಿತು. “ನೀವು ಬಯಸಿದರೆ ನೀವು ಅವರನ್ನು ಪರಮಾತ್ಮ ಎಂದು ಪರಿಗಣಿಸಬಹುದು. ಅದನ್ನು ಇತರರ ಮೇಲೆ ಏಕೆ ಹೇರಲು ಬಯಸುತ್ತೀರಿ?” ಎಂದು ಕೋರ್ಟ್ ಪ್ರಶ್ನಿಸಿದೆ.

“ಭಾರತದಲ್ಲಿ, ಪ್ರತಿಯೊಬ್ಬರೂ ತಮ್ಮ ಧರ್ಮವನ್ನು ಅನುಸರಿಸಲು ಸಂಪೂರ್ಣ ಹಕ್ಕನ್ನು ಹೊಂದಿದ್ದಾರೆ. ಪ್ರತಿಯೊಬ್ಬರೂ ಒಂದೇ ಧರ್ಮವನ್ನು ಅನುಸರಿಸಬೇಕು ಎಂದು ನೀವು ಹೇಳಲು ಸಾಧ್ಯವಿಲ್ಲ” ಎಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ.

ಅರ್ಜಿಯನ್ನು ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲಾಗಿದೆ. ಈ ಅರ್ಜಿಯು ₹ 1 ಲಕ್ಷದ ಅನುಕರಣೀಯ ವೆಚ್ಚಗಳೊಂದಿಗೆ, ಇಂದಿನಿಂದ ನಾಲ್ಕು ವಾರಗಳಲ್ಲಿ ಈ ನ್ಯಾಯಾಲಯದ ರಿಜಿಸ್ಟ್ರಿಯಲ್ಲಿ ಠೇವಣಿ ಮಾಡಲು ಅರ್ಹವಾಗಿದೆ ಎಂದು ಕೋರ್ಟ್ ಹೇಳಿದೆ.

ದಂಡ‌ವನ್ನು ವಿಧಿಸಿರುವುದರಿಂದ ಇಂತಹ ಸಾರ್ವಜನಿಕ ಹಿತಾಸಕ್ತಿಗಳನ್ನು ಸಲ್ಲಿಸುವ ಮೊದಲು ಕನಿಷ್ಠ ನಾಲ್ಕು ಬಾರಿ ಯೋಚಿಸಲು ಸಾಧ್ಯವಾಗುತ್ತದೆ ಎಂದು ನ್ಯಾಯಮೂರ್ತಿ ಎಂ.ಆರ್‌.ಷಾ ತಿಳಿಸಿದ್ದಾರೆ.

ಇದನ್ನೂ ಓದಿರಿ: ದಲಿತ ಸಂಘಟನೆಗಳ ಐಕ್ಯತೆ ಕುರಿತು ಎದ್ದಿರುವ ಪ್ರಶ್ನೆಗಳ ಸುತ್ತ…

ಪಿಐಎಲ್ ವಜಾಗೊಳಿಸಿದ ನ್ಯಾಯಮೂರ್ತಿ ಷಾ ಅವರು, “ಆಪ್ ಮನೋ ಕಿ ಏಕ್ ಹೈ ಗುರೂಜಿ ಹೈಂ. ಐಸೇ ಕಭಿ ಹೋತಾ ಹೈ ಭಯ್ಯಾ? ಸಬ್ಕೋ ಪುರಾ ಅಧಿಕಾರ ಹೈಂ ಯೇ ಕಂಟ್ರಿ ಮೇ ಜಿಸ್ಕೋ ಜೋ ಧರಮ್ ಮನ್ನಾ ಹೈ, ಮಾನೆ (ನಿಮ್ಮ ಗುರೂಜಿಯನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ನೀವು ಹೇಳುತ್ತಿದ್ದೀರಿ. ಅದು ಹೇಗೆ ಸಾಧ್ಯ? ಭಾರತದಲ್ಲಿ ಪ್ರತಿಯೊಬ್ಬರಿಗೂ ಅವರವರ ಧರ್ಮವನ್ನು ಅನುಸರಿಸುವ ಹಕ್ಕಿದೆ)” ಎಂದಿದ್ದಾರೆ.

ಬಿಜೆಪಿ, ಆರ್‌ಎಸ್‌ಎಸ್, ವಿಎಚ್‌ಪಿ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ನ್ಯಾಷನಲ್‌ ಕ್ರಿಶ್ಚಿಯನ್ ಕೌನ್ಸಿಲ್, ಶ್ರೀ ಪಾಲನ್‌ಪುರಿ ಸ್ಥಾನಕ್ವಾಸಿ ಜೈನ್ ಅಸೋಸಿಯೇಷನ್, ಬೌದ್ಧ ಸೊಸೈಟಿ ಆಫ್ ಇಂಡಿಯಾ, ಪುರಿ ಜಗನ್ನಾಥ ಮಂದಿರ ನಿರ್ವಹಣಾ ಸಮಿತಿ, ಅಖಿಲ ಭಾರತ ಇಸ್ಕಾನ್ ಸಮಿತಿ, ರಾಮಕೃಷ್ಣ ಮಠ, ಗುರುದ್ವಾರ ಬಾಂಗ್ಲಾ ಸಾಹಿಬ್‌ಗಳನ್ನುಈ ಪ್ರಕರಣದಲ್ಲಿ ಎದುರುದಾರರನ್ನಾಗಿ ಅರ್ಜಿದಾರರು ನಿಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...