Homeಆರೋಗ್ಯಮಾನಸಿಕ ಒತ್ತಡ (stress) ತೊಲಗಿಸಲು ಇರುವ ಹತ್ತು ನಡೆಗಳು

ಮಾನಸಿಕ ಒತ್ತಡ (stress) ತೊಲಗಿಸಲು ಇರುವ ಹತ್ತು ನಡೆಗಳು

ಅರೋಗ್ಯ ಸರಿಯಿಲ್ಲದಿದ್ದರೆ ವಿಶ್ರಮಿಸಿ. ಅನಾರೋಗ್ಯದಲ್ಲಿ ಹೆಚ್ಚಿನ ಕೆಲಸ/ಯೋಚನೆ ಮಾಡಿ ಆರೋಗ್ಯ ಇನ್ನಷ್ಟು ಹದಗೆಡಿಸಿಕೊಳ್ಳಬೇಡಿ. ಖಿನ್ನತೆ ಇದೆ ಎಂದೆನಿಸಿದರೆ ವೈದ್ಯಕೀಯ ಸಲಹೆ/ಸಮಾಲೋಚನೆ ಪಡೆಯಿರಿ.

- Advertisement -
- Advertisement -

ಜೀವನ ಕಲೆಗಳು: ಅಂಕಣ-18

ಮಾನಸಿಕ ಒತ್ತಡ ಎಂದ ಕೂಡಲೇ ನಮಗೆ ಒಂದು ರೀತಿಯ ಹೆದರಿಕೆ, ಆತಂಕ ಶುರುವಾಗುತ್ತದೆ. ಅದರ ಭಯಾನಕ ಪರಿಣಾಮಗಳ ದೃಶ್ಯ ಕಣ್ಣಮುಂದೆ ಬರುತ್ತವೆ. ಹಾಗಾದರೆ ಮಾನಸಿಕ ಒತ್ತಡಗಳನ್ನು ತಡೆದುಕೊಳ್ಳುವುದು ಹೇಗೆ?

ಮಾನಸಿಕ ಒತ್ತಡ (ಸ್ಟ್ರೆಸ್) ಒಂದು ಭಾವನಾತ್ಮಕ ಮಾನಸಿಕ ಉದ್ವೇಗ ಮತ್ತು ದೈಹಿಕ ಬಿಗುಪು. ಯಾವುದೋ ಸನ್ನಿವೇಶ ಅಥವಾ ನಮ್ಮ ನಿಯಂತ್ರಣದಲ್ಲಿರದ ವಿಷಯದ ಬಗ್ಗೆಯ ಯೋಚನೆಯಿಂದಾಗಿ ನಾವು ನಿರಾಶೆ, ಆತಂಕಕ್ಕೆ, ಕೋಪಕ್ಕೆ, ಕ್ಷೋಭೆಗೆ ಒಳಗೊಂಡಾಗ, ಪರೀಕ್ಷೆ, ಸವಾಲನ್ನು ಎದುರಿಸಬೇಕಾದಾಗ ದೈಹಿಕ ಪ್ರತಿಕ್ರಿಯೆಯೇ ಸ್ಟ್ರೆಸ್. ಇದು ಧನಾತ್ಮಕವೂ ಆಗಿರಬಹುದು ಅಥವಾ ಜೀವರಸ ಹಿಂಡುವ ಶಕ್ತಿಯೂ ಆಗಿರಬಹುದು. ಹಲವರು ಇಂತಹ ಒತ್ತಡದಲ್ಲಿ ಪ್ರಭಾವಶಾಲಿಯಾಗಿ ಕೆಲಸ ಮಾಡುತ್ತಾರೆ. ಕೆಲವರು ಕೆಲಸದ ಸಮಯಮಿತಿ (ಡೆಡ್ಲೈನ್)ಯಿಂದಾಗಿ ಹೆದರಿ ಏನೂ ತೋಚದೆ, ಭ್ರಮೆಗೆ ಸಿಲುಕುತ್ತಾರೆ. ಸ್ವಲ್ಪ ಸಮಯದ ಒತ್ತಡ ಪ್ರೇರೇಪಕವೂ ಆಗಬಹುದು ಆದರೆ ದೀರ್ಘ ಸಮಯದ ಒತ್ತಡ ಆಸ್ಪತ್ರೆಗೂ ಸೇರಿಸಬಹುದು, ಆದ್ದರಿಂದ ಅದನ್ನು ನಿಭಾಯಿಸುವುದು ಅತ್ಯಗತ್ಯ.

ಇನ್ನೊಂದು ಒತ್ತಡ ಬರುವುದು ನಮ್ಮ ಸಮಾನಸ್ಕಂಧರಿಂದ (ಪೀರ್ ಪ್ರೆಷರ್). ಈ ಒತ್ತಡ ಅವರಿಂದ ಯಾವುದೋ ದುರಭ್ಯಾಸಕ್ಕೋ, ಕೆಟ್ಟ ಕೆಲಸಕ್ಕೋ ಬರಬಹುದು ಅಥವಾ ನಾವೂ ಮಿಕ್ಕವರಂತೆ ಆಗಬೇಕು ಎನ್ನುವ ನಮ್ಮ ಸ್ವಂತ ಹಂಬಲದಿಂದಲೂ ಬರಬಹುದು. ಉದಾ: ಮಾದಕ ವಸ್ತುಗಳ ಸೇವನ, ಅಸಾಮಾಜಿಕ ನಡವಳಿಕೆ, ಇತ್ಯಾದಿ.

ಒತ್ತಡ ತಡೆದುಕೊಳ್ಳಲು ನಮ್ಮ ಮನಸ್ಸು ಸ್ವಚ್ಛವಾಗಿರಬೇಕು, ಹಗುರವಾಗಿರಬೇಕು. ನಮ್ಮ ಜೀವನದ ಗುರಿ ಸ್ಪಷ್ಟವಾಗಿರಬೇಕು.

ಇದಕ್ಕೆ ಸಹಕಾರಿಯಾಗುವ ಹತ್ತು ನಡೆಗಳು:

1. ಕಾಫಿ, ಸಾರಾಯಿ, ತಂಬಾಕು ಮುಂತಾದ ವ್ಯಸನಗಳನ್ನು ತ್ಯಜಿಸಿ. ಇವು ಸಣ್ಣ ಪ್ರಮಾಣದಲ್ಲಿ ಉತ್ತೇಜನಕಾರಿ ಎಂದು ಎನಿಸಿದರೂ, ಕ್ರಮೇಣ ಅಭ್ಯಾಸ ಹೆಚ್ಚಾಗಿ, ಯಾವಾಗ ವ್ಯಸನಕ್ಕೆ ತಿರುಗುತ್ತದೋ ಹೇಳಲು ಸಾಧ್ಯವಿಲ್ಲ. ಖಂಡಿತಾ ನಿಮ್ಮನ್ನು ಪ್ರಪಾತಕ್ಕೆ ಎಳೆದುಕೊಂಡು ಹೋಗುತ್ತವೆ. ಇದರ ಬದಲಿಗೆ ಎಳನೀರು, ಹರ್ಬಲ್ ಟೀ, ಹಣ್ಣಿನ ರಸ (ಅಧಿಕ ಅಥವಾ ಬಿಳಿ ಸಕ್ಕರೆ ಇಲ್ಲದ), ತಂಪು ಪಾನೀಯಗಳನ್ನು ಕುಡಿಯಿರಿ. ಇದರಿಂದ ದೇಹ ದ್ರವಹೀನಗೊಳ್ಳದೆ ಸ್ಟ್ರೆಸ್ ನಿಂದ ಹೋರಾಡುವಲ್ಲಿ ಸಹಕಾರಿಯಾಗುತ್ತದೆ. ಆಹಾರ ನಿಯಮಿತವಾಗಿ ಸೇವಿಸಿ. ಊಟದಲ್ಲಿ ಸಮತೋಲನೆ ಮತ್ತು ಪೌಷ್ಟಿಕಾಂಶ ಇರಲಿ. ಪಾಚನಕ್ರಿಯೆ ಸುಗಮವಾಗಿರಲಿ. ಇದರಿಂದ ಮನಸ್ಸು ಹಗುರವಾಗಿರುತ್ತದೆ.

2. ವ್ಯಾಯಾಮ ಅಥವಾ ದೈಹಿಕ ಶ್ರಮದಲ್ಲಿ ಭಾಗವಹಿಸಿ. ಒತ್ತಡದಿಂದಾಗಿ ದೇಹದ ಹಾರ್ಮೋನುಗಳಲ್ಲಿ ಏರುಪೇರಾಗುತ್ತದೆ. ನಮ್ಮ ದೇಹವನ್ನು ರಕ್ಷಿಸುವ ಹಾರ್ಮೋನುಗಳು ಇಂದಿನ ಒತ್ತಡಕ್ಕೆ ಸರಿಹೊಂದುವುದಿಲ್ಲ. ದೈಹಿಕ ವ್ಯಾಯಾಮ, ಹೊರಗಿನ ಮುಕ್ತ ವಾತಾವರಣ ನಮ್ಮ ಬಿಗುಪನ್ನು ಕಡಿಮೆ ಮಾಡಿ, ಮನಸ್ಸಿನ ವ್ಯಾಕುಲತೆಯನ್ನು ಸಡಿಲಗೊಳಿಸುತ್ತದೆ. ನಿದ್ದೆಯೂ ಸರಿಯಾಗಿ ಬರುತ್ತದೆ.

3. ಸರಿಯಾಗಿ ನಿದ್ರಿಸದಿರುವುದು ಸಹ ವ್ಯಾಕುಲತೆಯ ಲಕ್ಷಣ. ಮನಸ್ಸು ರಿಲಾಕ್ಸ್ ಆಗಿಲ್ಲದಿದ್ದಾಗ ನಿದ್ದೆ ಹಾರಿ ಹೋಗುವುದು ಸಹಜ. ಅಂತಹ ಸಮಯದಲ್ಲಿ ನಿದ್ದೆ ಮಾತ್ರೆ ಅಥವಾ ಇತರ ವ್ಯಸನಗಳಿಗೆ ಮಾರು ಹೋಗದೆ, ಮನಸ್ಸನ್ನು ಹಗುರಗೊಳಿಸುವ ಸಂಗೀತ ಕೇಳಿ. ಪ್ರಯೋಜನಕಾರಿ ಹಗುರವಾದ ಪುಸ್ತಕ ಓದಿ. ನಿಮ್ಮ ಮಲಗುವ ಕೋಣೆಯಲ್ಲಿ ನಿದ್ರೆಗೆ ಸೂಕ್ತವಾಗುವಂತಹ ವಾತಾವರಣ ಕಲ್ಪಿಸಿ, ಬೆಳಕು ಜಾಸ್ತಿ ಇಲ್ಲದಿರಲಿ. ಹೆಚ್ಚಿನ ಬುದ್ಧಿಶಕ್ತಿ ಬೇಕಾಗುವ ಕೆಲಸ ಮಲಗುವ ಮುನ್ನ ಮಾಡಬೇಡಿ. ಪ್ರತಿದಿನ (ರಾತ್ರಿ ಮತ್ತು ಬೆಳಿಗ್ಗೆ) ಅದೇ ಸಮಯಕ್ಕೆ, ಬೇಗ ಮಲಗುವ ಮತ್ತು ಏಳುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಬೆಳಿಗ್ಗೆ ಮನಸ್ಸು ಹಗುರವೂ, ಉಲ್ಲಾಸ ಭರಿತವೂ ಆಗಿರುತ್ತದೆ.

4. ಮನಸ್ಸನ್ನು ತಿಳಿಗೊಳಿಸುವ ಕಸರತ್ತು ಮಾಡಿ: ಯೋಗ, ಪ್ರಾಣಾಯಾಮ, ಸ್ವಯಂ-ವಶೀಕರಣ ತಂತ್ರಗಳನ್ನು ಬಳಸಿ, ನಿಮ್ಮನ್ನು ನೀವೇ ಶಾಂತಗೊಳಿಸಲು ಕಲಿಯಿರಿ.

 

5. ಇನ್ನೊಬ್ಬರೊಂದಿಗೆ ಮಾತನಾಡಿ. ಅದು ನಿಮ್ಮ ಸಹೋದ್ಯೋಗಿ/ಸಹಪಾಠಿ, ಪೋಷಕ/ಶಿಕ್ಷಕ/ಗುರು ಅಥವಾ ಸ್ನೇಹಿತರಾಗಿರಬಹುದು. ನಿಮ್ಮ ಬಗ್ಗೆ ತೀರ್ಪು ನೀಡದ, ಕೇವಲ ಸಲಹೆ ನೀಡಬಲ್ಲ ವ್ಯಕ್ತಿಯ ಜೊತೆ ನಿಮ್ಮ ಆತಂಕ ಹಂಚಿಕೊಳ್ಳಿ. ಅಂತಹ ವ್ಯಕ್ತಿ ಇಲ್ಲದಿದ್ದಲ್ಲಿ ಪರಿಣಿತರ (ಕೌನ್ಸೆಲ್ಲಿಂಗ್) ಸಲಹೆ ಪಡೆಯಿರಿ.

6. ಸ್ಟ್ರೆಸ್ ಡೈರಿ ಬರೆಯಿರಿ. ನಿಮ್ಮ ಆತಂಕದ ಸನ್ನಿವೇಶಗಳು, ಅನುಭವಗಳು, ಪರಿಹಾರಗಳನ್ನು ಒಂದು ದಿನಚರಿ ಪುಸ್ತಕದಲ್ಲಿ ಬರೆದಿಡಿ. ಪ್ರತಿಯೊಂದು ಸನ್ನಿವೇಶಕ್ಕೂ/ಕಾರಣಕ್ಕೂ ಒಂದು ಸೂಚ್ಯಾಂಕ ನೀಡಿ, ಅತ್ಯಂತ ಹೆಚ್ಚಿನ ಒತ್ತಡಕ್ಕೆ 10, ತೀರಾ ಕಡಿಮೆಗೆ 1, ಹೀಗೆ ಅಂಕಗಳನ್ನು ನೀಡುತ್ತಾ ಬನ್ನಿ. ಕೆಲವೇ ದಿನಗಳಲ್ಲಿ ನಿಮ್ಮ ಆತಂಕಕ್ಕೆ ಕಾರಣ ಮತ್ತು ಪರಿಹಾರ ಎರಡೂ ನಿಮ್ಮ ಮುಂದೆ ಇರುತ್ತದೆ. ಇದರಿಂದ ಅಂತಹ ಸನ್ನಿವೇಶದಿಂದ ದೂರವಿರಲು ಮತ್ತು ಧೈರ್ಯದಿಂದ ಸೆಣಸಾಡುವ ಉಪಾಯ ದೊರಕುತ್ತದೆ.

7. ನಿಯಂತ್ರಣ ನಿಮ್ಮ ಕೈಗೆ ತೆಗೆದುಕೊಳ್ಳಿ. ನಿಮ್ಮನ್ನು ನಿಯಂತ್ರಿಸುವ “ರಿಮೋಟ್” ಬೇರೆಯವರ ಕೈಗೆ ಕೊಡಬೇಡಿ. ನಿಮ್ಮ ಸಮಸ್ಯೆಯನ್ನು, ಆದಷ್ಟು ಮಟ್ಟಿಗೆ, ನೀವೇ ಪರಿಹರಿಸಿಕೊಳ್ಳಿ. ಸಣ್ಣ ಪುಟ್ಟ ತೊಂದರೆಗೂ ಇನ್ನೊಬ್ಬರ ಬಳಿ ಓಡಿ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಡಿ. ಅವರು ನಿಮ್ಮ ದುರ್ಬಲತೆಯ ದುರುಪಯೋಗ ಮಾಡಿಕೊಳ್ಳಬಹುದು. ಅವಶ್ಯಕತೆ ಎನಿಸಿದಾಗ ಪರಿಣಿತರ ಸಲಹೆ ಪಡೆಯಿರಿ.

8. ಸಮಯ ನಿರ್ವಹಣೆ ಕಲಿಯಿರಿ. ಕೆಲಸಗಳು ಸಮಯಕ್ಕೆ ಸರಿಯಾಗಿ ಆಗದಿದ್ದಾಗ ಸಮಸ್ಯೆಗಳು ಹುಟ್ಟಿಕೊಳ್ಳುತ್ತವೆ. ಆದ್ದರಿಂದ ನಿಮ್ಮ ಕೆಲಸದ, ಆದ್ಯತೆಯ, ಸಮಯದ, ಪಟ್ಟಿ ಮಾಡಿಕೊಂಡು ಅದರಂತೆ ಚಲಿಸಿ. ಯಾವುದು ಮುಖ್ಯ ಮತ್ತು ಅವಸರವೋ ಅದನ್ನು ಮೊದಲು ಮಾಡಿ. ಮುಖ್ಯವಲ್ಲದ, ಅವಸರವಿಲ್ಲದ ಕೆಲಸ ಸಮಯ ಸಿಕ್ಕಾಗ ಮಾಡಿ.

9. ಇಲ್ಲ ಎನ್ನುವುದನ್ನು ಕಲಿಯಿರಿ. ದಾಕ್ಷಿಣ್ಯಕ್ಕೆ ಬಲಿಯಾಗಿ ಕೈಯಲ್ಲಾಗದ/ಮನಸ್ಸು ಒಪ್ಪದ ಕೆಲಸಕ್ಕೆ ಒಪ್ಪಿಕೊಳ್ಳಬೇಡಿ. ಇಲ್ಲ ಎನ್ನುವುದನ್ನು ಕಲಿಯಿರಿ. ನೀವು “ಇಲ್ಲ” ಎಂದರೆ “ಇಲ್ಲ” ಎನ್ನುವುದನ್ನು ಬೇರೆಯವರಿಗೆ ಅರ್ಥವಾಗುವಂತೆ, ನಯವಾಗಿ ತಿಳಿಸಿ. ಪ್ರತಿಯೊಂದು “ಇಲ್ಲ”ವೂ ಜಗಳಕ್ಕೆ ಕಾರಣವಾಗುವುದಿಲ್ಲ.

10. ಅರೋಗ್ಯ ಸರಿಯಿಲ್ಲದಿದ್ದರೆ ವಿಶ್ರಮಿಸಿ. ಅನಾರೋಗ್ಯದಲ್ಲಿ ಹೆಚ್ಚಿನ ಕೆಲಸ/ಯೋಚನೆ ಮಾಡಿ ಆರೋಗ್ಯ ಇನ್ನಷ್ಟು ಹದಗೆಡಿಸಿಕೊಳ್ಳಬೇಡಿ. ಖಿನ್ನತೆ ಇದೆ ಎಂದೆನಿಸಿದರೆ ವೈದ್ಯಕೀಯ ಸಲಹೆ/ಸಮಾಲೋಚನೆ ಪಡೆಯಿರಿ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...