Homeಆರೋಗ್ಯಮಾನಸಿಕ ಒತ್ತಡ (stress) ತೊಲಗಿಸಲು ಇರುವ ಹತ್ತು ನಡೆಗಳು

ಮಾನಸಿಕ ಒತ್ತಡ (stress) ತೊಲಗಿಸಲು ಇರುವ ಹತ್ತು ನಡೆಗಳು

ಅರೋಗ್ಯ ಸರಿಯಿಲ್ಲದಿದ್ದರೆ ವಿಶ್ರಮಿಸಿ. ಅನಾರೋಗ್ಯದಲ್ಲಿ ಹೆಚ್ಚಿನ ಕೆಲಸ/ಯೋಚನೆ ಮಾಡಿ ಆರೋಗ್ಯ ಇನ್ನಷ್ಟು ಹದಗೆಡಿಸಿಕೊಳ್ಳಬೇಡಿ. ಖಿನ್ನತೆ ಇದೆ ಎಂದೆನಿಸಿದರೆ ವೈದ್ಯಕೀಯ ಸಲಹೆ/ಸಮಾಲೋಚನೆ ಪಡೆಯಿರಿ.

- Advertisement -
- Advertisement -

ಜೀವನ ಕಲೆಗಳು: ಅಂಕಣ-18

ಮಾನಸಿಕ ಒತ್ತಡ ಎಂದ ಕೂಡಲೇ ನಮಗೆ ಒಂದು ರೀತಿಯ ಹೆದರಿಕೆ, ಆತಂಕ ಶುರುವಾಗುತ್ತದೆ. ಅದರ ಭಯಾನಕ ಪರಿಣಾಮಗಳ ದೃಶ್ಯ ಕಣ್ಣಮುಂದೆ ಬರುತ್ತವೆ. ಹಾಗಾದರೆ ಮಾನಸಿಕ ಒತ್ತಡಗಳನ್ನು ತಡೆದುಕೊಳ್ಳುವುದು ಹೇಗೆ?

ಮಾನಸಿಕ ಒತ್ತಡ (ಸ್ಟ್ರೆಸ್) ಒಂದು ಭಾವನಾತ್ಮಕ ಮಾನಸಿಕ ಉದ್ವೇಗ ಮತ್ತು ದೈಹಿಕ ಬಿಗುಪು. ಯಾವುದೋ ಸನ್ನಿವೇಶ ಅಥವಾ ನಮ್ಮ ನಿಯಂತ್ರಣದಲ್ಲಿರದ ವಿಷಯದ ಬಗ್ಗೆಯ ಯೋಚನೆಯಿಂದಾಗಿ ನಾವು ನಿರಾಶೆ, ಆತಂಕಕ್ಕೆ, ಕೋಪಕ್ಕೆ, ಕ್ಷೋಭೆಗೆ ಒಳಗೊಂಡಾಗ, ಪರೀಕ್ಷೆ, ಸವಾಲನ್ನು ಎದುರಿಸಬೇಕಾದಾಗ ದೈಹಿಕ ಪ್ರತಿಕ್ರಿಯೆಯೇ ಸ್ಟ್ರೆಸ್. ಇದು ಧನಾತ್ಮಕವೂ ಆಗಿರಬಹುದು ಅಥವಾ ಜೀವರಸ ಹಿಂಡುವ ಶಕ್ತಿಯೂ ಆಗಿರಬಹುದು. ಹಲವರು ಇಂತಹ ಒತ್ತಡದಲ್ಲಿ ಪ್ರಭಾವಶಾಲಿಯಾಗಿ ಕೆಲಸ ಮಾಡುತ್ತಾರೆ. ಕೆಲವರು ಕೆಲಸದ ಸಮಯಮಿತಿ (ಡೆಡ್ಲೈನ್)ಯಿಂದಾಗಿ ಹೆದರಿ ಏನೂ ತೋಚದೆ, ಭ್ರಮೆಗೆ ಸಿಲುಕುತ್ತಾರೆ. ಸ್ವಲ್ಪ ಸಮಯದ ಒತ್ತಡ ಪ್ರೇರೇಪಕವೂ ಆಗಬಹುದು ಆದರೆ ದೀರ್ಘ ಸಮಯದ ಒತ್ತಡ ಆಸ್ಪತ್ರೆಗೂ ಸೇರಿಸಬಹುದು, ಆದ್ದರಿಂದ ಅದನ್ನು ನಿಭಾಯಿಸುವುದು ಅತ್ಯಗತ್ಯ.

ಇನ್ನೊಂದು ಒತ್ತಡ ಬರುವುದು ನಮ್ಮ ಸಮಾನಸ್ಕಂಧರಿಂದ (ಪೀರ್ ಪ್ರೆಷರ್). ಈ ಒತ್ತಡ ಅವರಿಂದ ಯಾವುದೋ ದುರಭ್ಯಾಸಕ್ಕೋ, ಕೆಟ್ಟ ಕೆಲಸಕ್ಕೋ ಬರಬಹುದು ಅಥವಾ ನಾವೂ ಮಿಕ್ಕವರಂತೆ ಆಗಬೇಕು ಎನ್ನುವ ನಮ್ಮ ಸ್ವಂತ ಹಂಬಲದಿಂದಲೂ ಬರಬಹುದು. ಉದಾ: ಮಾದಕ ವಸ್ತುಗಳ ಸೇವನ, ಅಸಾಮಾಜಿಕ ನಡವಳಿಕೆ, ಇತ್ಯಾದಿ.

ಒತ್ತಡ ತಡೆದುಕೊಳ್ಳಲು ನಮ್ಮ ಮನಸ್ಸು ಸ್ವಚ್ಛವಾಗಿರಬೇಕು, ಹಗುರವಾಗಿರಬೇಕು. ನಮ್ಮ ಜೀವನದ ಗುರಿ ಸ್ಪಷ್ಟವಾಗಿರಬೇಕು.

ಇದಕ್ಕೆ ಸಹಕಾರಿಯಾಗುವ ಹತ್ತು ನಡೆಗಳು:

1. ಕಾಫಿ, ಸಾರಾಯಿ, ತಂಬಾಕು ಮುಂತಾದ ವ್ಯಸನಗಳನ್ನು ತ್ಯಜಿಸಿ. ಇವು ಸಣ್ಣ ಪ್ರಮಾಣದಲ್ಲಿ ಉತ್ತೇಜನಕಾರಿ ಎಂದು ಎನಿಸಿದರೂ, ಕ್ರಮೇಣ ಅಭ್ಯಾಸ ಹೆಚ್ಚಾಗಿ, ಯಾವಾಗ ವ್ಯಸನಕ್ಕೆ ತಿರುಗುತ್ತದೋ ಹೇಳಲು ಸಾಧ್ಯವಿಲ್ಲ. ಖಂಡಿತಾ ನಿಮ್ಮನ್ನು ಪ್ರಪಾತಕ್ಕೆ ಎಳೆದುಕೊಂಡು ಹೋಗುತ್ತವೆ. ಇದರ ಬದಲಿಗೆ ಎಳನೀರು, ಹರ್ಬಲ್ ಟೀ, ಹಣ್ಣಿನ ರಸ (ಅಧಿಕ ಅಥವಾ ಬಿಳಿ ಸಕ್ಕರೆ ಇಲ್ಲದ), ತಂಪು ಪಾನೀಯಗಳನ್ನು ಕುಡಿಯಿರಿ. ಇದರಿಂದ ದೇಹ ದ್ರವಹೀನಗೊಳ್ಳದೆ ಸ್ಟ್ರೆಸ್ ನಿಂದ ಹೋರಾಡುವಲ್ಲಿ ಸಹಕಾರಿಯಾಗುತ್ತದೆ. ಆಹಾರ ನಿಯಮಿತವಾಗಿ ಸೇವಿಸಿ. ಊಟದಲ್ಲಿ ಸಮತೋಲನೆ ಮತ್ತು ಪೌಷ್ಟಿಕಾಂಶ ಇರಲಿ. ಪಾಚನಕ್ರಿಯೆ ಸುಗಮವಾಗಿರಲಿ. ಇದರಿಂದ ಮನಸ್ಸು ಹಗುರವಾಗಿರುತ್ತದೆ.

2. ವ್ಯಾಯಾಮ ಅಥವಾ ದೈಹಿಕ ಶ್ರಮದಲ್ಲಿ ಭಾಗವಹಿಸಿ. ಒತ್ತಡದಿಂದಾಗಿ ದೇಹದ ಹಾರ್ಮೋನುಗಳಲ್ಲಿ ಏರುಪೇರಾಗುತ್ತದೆ. ನಮ್ಮ ದೇಹವನ್ನು ರಕ್ಷಿಸುವ ಹಾರ್ಮೋನುಗಳು ಇಂದಿನ ಒತ್ತಡಕ್ಕೆ ಸರಿಹೊಂದುವುದಿಲ್ಲ. ದೈಹಿಕ ವ್ಯಾಯಾಮ, ಹೊರಗಿನ ಮುಕ್ತ ವಾತಾವರಣ ನಮ್ಮ ಬಿಗುಪನ್ನು ಕಡಿಮೆ ಮಾಡಿ, ಮನಸ್ಸಿನ ವ್ಯಾಕುಲತೆಯನ್ನು ಸಡಿಲಗೊಳಿಸುತ್ತದೆ. ನಿದ್ದೆಯೂ ಸರಿಯಾಗಿ ಬರುತ್ತದೆ.

3. ಸರಿಯಾಗಿ ನಿದ್ರಿಸದಿರುವುದು ಸಹ ವ್ಯಾಕುಲತೆಯ ಲಕ್ಷಣ. ಮನಸ್ಸು ರಿಲಾಕ್ಸ್ ಆಗಿಲ್ಲದಿದ್ದಾಗ ನಿದ್ದೆ ಹಾರಿ ಹೋಗುವುದು ಸಹಜ. ಅಂತಹ ಸಮಯದಲ್ಲಿ ನಿದ್ದೆ ಮಾತ್ರೆ ಅಥವಾ ಇತರ ವ್ಯಸನಗಳಿಗೆ ಮಾರು ಹೋಗದೆ, ಮನಸ್ಸನ್ನು ಹಗುರಗೊಳಿಸುವ ಸಂಗೀತ ಕೇಳಿ. ಪ್ರಯೋಜನಕಾರಿ ಹಗುರವಾದ ಪುಸ್ತಕ ಓದಿ. ನಿಮ್ಮ ಮಲಗುವ ಕೋಣೆಯಲ್ಲಿ ನಿದ್ರೆಗೆ ಸೂಕ್ತವಾಗುವಂತಹ ವಾತಾವರಣ ಕಲ್ಪಿಸಿ, ಬೆಳಕು ಜಾಸ್ತಿ ಇಲ್ಲದಿರಲಿ. ಹೆಚ್ಚಿನ ಬುದ್ಧಿಶಕ್ತಿ ಬೇಕಾಗುವ ಕೆಲಸ ಮಲಗುವ ಮುನ್ನ ಮಾಡಬೇಡಿ. ಪ್ರತಿದಿನ (ರಾತ್ರಿ ಮತ್ತು ಬೆಳಿಗ್ಗೆ) ಅದೇ ಸಮಯಕ್ಕೆ, ಬೇಗ ಮಲಗುವ ಮತ್ತು ಏಳುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಬೆಳಿಗ್ಗೆ ಮನಸ್ಸು ಹಗುರವೂ, ಉಲ್ಲಾಸ ಭರಿತವೂ ಆಗಿರುತ್ತದೆ.

4. ಮನಸ್ಸನ್ನು ತಿಳಿಗೊಳಿಸುವ ಕಸರತ್ತು ಮಾಡಿ: ಯೋಗ, ಪ್ರಾಣಾಯಾಮ, ಸ್ವಯಂ-ವಶೀಕರಣ ತಂತ್ರಗಳನ್ನು ಬಳಸಿ, ನಿಮ್ಮನ್ನು ನೀವೇ ಶಾಂತಗೊಳಿಸಲು ಕಲಿಯಿರಿ.

 

5. ಇನ್ನೊಬ್ಬರೊಂದಿಗೆ ಮಾತನಾಡಿ. ಅದು ನಿಮ್ಮ ಸಹೋದ್ಯೋಗಿ/ಸಹಪಾಠಿ, ಪೋಷಕ/ಶಿಕ್ಷಕ/ಗುರು ಅಥವಾ ಸ್ನೇಹಿತರಾಗಿರಬಹುದು. ನಿಮ್ಮ ಬಗ್ಗೆ ತೀರ್ಪು ನೀಡದ, ಕೇವಲ ಸಲಹೆ ನೀಡಬಲ್ಲ ವ್ಯಕ್ತಿಯ ಜೊತೆ ನಿಮ್ಮ ಆತಂಕ ಹಂಚಿಕೊಳ್ಳಿ. ಅಂತಹ ವ್ಯಕ್ತಿ ಇಲ್ಲದಿದ್ದಲ್ಲಿ ಪರಿಣಿತರ (ಕೌನ್ಸೆಲ್ಲಿಂಗ್) ಸಲಹೆ ಪಡೆಯಿರಿ.

6. ಸ್ಟ್ರೆಸ್ ಡೈರಿ ಬರೆಯಿರಿ. ನಿಮ್ಮ ಆತಂಕದ ಸನ್ನಿವೇಶಗಳು, ಅನುಭವಗಳು, ಪರಿಹಾರಗಳನ್ನು ಒಂದು ದಿನಚರಿ ಪುಸ್ತಕದಲ್ಲಿ ಬರೆದಿಡಿ. ಪ್ರತಿಯೊಂದು ಸನ್ನಿವೇಶಕ್ಕೂ/ಕಾರಣಕ್ಕೂ ಒಂದು ಸೂಚ್ಯಾಂಕ ನೀಡಿ, ಅತ್ಯಂತ ಹೆಚ್ಚಿನ ಒತ್ತಡಕ್ಕೆ 10, ತೀರಾ ಕಡಿಮೆಗೆ 1, ಹೀಗೆ ಅಂಕಗಳನ್ನು ನೀಡುತ್ತಾ ಬನ್ನಿ. ಕೆಲವೇ ದಿನಗಳಲ್ಲಿ ನಿಮ್ಮ ಆತಂಕಕ್ಕೆ ಕಾರಣ ಮತ್ತು ಪರಿಹಾರ ಎರಡೂ ನಿಮ್ಮ ಮುಂದೆ ಇರುತ್ತದೆ. ಇದರಿಂದ ಅಂತಹ ಸನ್ನಿವೇಶದಿಂದ ದೂರವಿರಲು ಮತ್ತು ಧೈರ್ಯದಿಂದ ಸೆಣಸಾಡುವ ಉಪಾಯ ದೊರಕುತ್ತದೆ.

7. ನಿಯಂತ್ರಣ ನಿಮ್ಮ ಕೈಗೆ ತೆಗೆದುಕೊಳ್ಳಿ. ನಿಮ್ಮನ್ನು ನಿಯಂತ್ರಿಸುವ “ರಿಮೋಟ್” ಬೇರೆಯವರ ಕೈಗೆ ಕೊಡಬೇಡಿ. ನಿಮ್ಮ ಸಮಸ್ಯೆಯನ್ನು, ಆದಷ್ಟು ಮಟ್ಟಿಗೆ, ನೀವೇ ಪರಿಹರಿಸಿಕೊಳ್ಳಿ. ಸಣ್ಣ ಪುಟ್ಟ ತೊಂದರೆಗೂ ಇನ್ನೊಬ್ಬರ ಬಳಿ ಓಡಿ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಡಿ. ಅವರು ನಿಮ್ಮ ದುರ್ಬಲತೆಯ ದುರುಪಯೋಗ ಮಾಡಿಕೊಳ್ಳಬಹುದು. ಅವಶ್ಯಕತೆ ಎನಿಸಿದಾಗ ಪರಿಣಿತರ ಸಲಹೆ ಪಡೆಯಿರಿ.

8. ಸಮಯ ನಿರ್ವಹಣೆ ಕಲಿಯಿರಿ. ಕೆಲಸಗಳು ಸಮಯಕ್ಕೆ ಸರಿಯಾಗಿ ಆಗದಿದ್ದಾಗ ಸಮಸ್ಯೆಗಳು ಹುಟ್ಟಿಕೊಳ್ಳುತ್ತವೆ. ಆದ್ದರಿಂದ ನಿಮ್ಮ ಕೆಲಸದ, ಆದ್ಯತೆಯ, ಸಮಯದ, ಪಟ್ಟಿ ಮಾಡಿಕೊಂಡು ಅದರಂತೆ ಚಲಿಸಿ. ಯಾವುದು ಮುಖ್ಯ ಮತ್ತು ಅವಸರವೋ ಅದನ್ನು ಮೊದಲು ಮಾಡಿ. ಮುಖ್ಯವಲ್ಲದ, ಅವಸರವಿಲ್ಲದ ಕೆಲಸ ಸಮಯ ಸಿಕ್ಕಾಗ ಮಾಡಿ.

9. ಇಲ್ಲ ಎನ್ನುವುದನ್ನು ಕಲಿಯಿರಿ. ದಾಕ್ಷಿಣ್ಯಕ್ಕೆ ಬಲಿಯಾಗಿ ಕೈಯಲ್ಲಾಗದ/ಮನಸ್ಸು ಒಪ್ಪದ ಕೆಲಸಕ್ಕೆ ಒಪ್ಪಿಕೊಳ್ಳಬೇಡಿ. ಇಲ್ಲ ಎನ್ನುವುದನ್ನು ಕಲಿಯಿರಿ. ನೀವು “ಇಲ್ಲ” ಎಂದರೆ “ಇಲ್ಲ” ಎನ್ನುವುದನ್ನು ಬೇರೆಯವರಿಗೆ ಅರ್ಥವಾಗುವಂತೆ, ನಯವಾಗಿ ತಿಳಿಸಿ. ಪ್ರತಿಯೊಂದು “ಇಲ್ಲ”ವೂ ಜಗಳಕ್ಕೆ ಕಾರಣವಾಗುವುದಿಲ್ಲ.

10. ಅರೋಗ್ಯ ಸರಿಯಿಲ್ಲದಿದ್ದರೆ ವಿಶ್ರಮಿಸಿ. ಅನಾರೋಗ್ಯದಲ್ಲಿ ಹೆಚ್ಚಿನ ಕೆಲಸ/ಯೋಚನೆ ಮಾಡಿ ಆರೋಗ್ಯ ಇನ್ನಷ್ಟು ಹದಗೆಡಿಸಿಕೊಳ್ಳಬೇಡಿ. ಖಿನ್ನತೆ ಇದೆ ಎಂದೆನಿಸಿದರೆ ವೈದ್ಯಕೀಯ ಸಲಹೆ/ಸಮಾಲೋಚನೆ ಪಡೆಯಿರಿ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...