HomeಚಳವಳಿDSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ: ಇಂದೂಧರ ಹೊನ್ನಾಪುರ

DSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ: ಇಂದೂಧರ ಹೊನ್ನಾಪುರ

ಒನ್ ಮ್ಯಾನ್ ಒನ್ ವೋಟು ನಮ್ಮ ತಂದೆ ಅಂಬೇಡ್ಕರ್ ಕೊಟ್ಟಿದ್ದೇ ಹೊರತು ಯಾರೋ ವೈದಿಕರಲ್ಲ.

- Advertisement -
- Advertisement -

ದಲಿತ ಚಳವಳಿ ನಮ್ಮ ಕಾಲಮಾನದಲ್ಲಿ ದೊಡ್ಡಸಾಧನೆಗಳನ್ನು ಮಾಡಿದೆ. ನಾವು ಹೋರಾಟಗಳ ಮೂಲಕ ಕಟ್ಟಿಕೊಟ್ಟಂತಹ ವಿಚಾರಗಳು ಲಕ್ಷಾಂತರ ದಲಿತರ ಹೃದಯದಲ್ಲಿ ಸ್ವಾಭಿಮಾನಿದ ಕಿಚ್ಚು ಹತ್ತಿಸಿದೆ. DSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ ಎಂದು ಹಿರಿಯ ದಲಿತ ಹೋರಾಟಗಾರ ಇಂದೂಧರ ಹೊನ್ನಾಪುರ ಅಭಿಪ್ರಾಯಪಟ್ಟರು.

ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶದ ಪ್ರಾಸ್ತವಿಕ ಮಾತುಗಳನ್ನಾಡಿದ ಅವರು, “ಇಂದು ಬಾಬಾ ಸಾಹೇಬರ 66ನೇ ಪರಿನಿಬ್ಬಾಣದ ದಿನ. ಬಾಬಾ ಸಾಹೇಬರು, ಬುದ್ಧ, ಬಸವಣ್ಣ್ರಾರಾಧಿಯಾಗಿ…. ದಲಿತ ಬಂಧುಗಳ ವಿಮುಕ್ತಗಾಗಿ ಪ್ರಾಣಾರ್ಪಣೆ ಮಾಡಿದವರಿಗೆ ಈ ಸಮಾವೇಶವನ್ನು ಅರ್ಪಿಸುತ್ತೇವೆ. ದಲಿತರೆಂದರೆ ಕೇವಲ ಅಸ್ಪಶ್ಯತೆರಲ್ಲ, ಈ ನಾಡಿನ ಎಲ್ಲಾ ನೊಂದವರು. ಎಲ್ಲ ನೊಂದವರ ಪರ ಡಿಎಸ್‌ಎಸ್‌ ಹೋರಾಟ ಮಾಡಿದೆ. ಹಿಂದುಳಿದ ವರ್ಗದ ಅನುಸೂಯಮ್ಮನವರ ಪರ ಹೋರಾಡಿತ್ತು” ಎಂದರು.

ದಲಿತ ಚಳವಳಿ ಆರಂಭವಾಗಿ ಐವತ್ತು ವರ್ಷಗಳಾಗಿವೆ. ದಲಿತರು ಕೂಗುತ್ತಿರುವ ಘೋಷಣೆಗಳು ಕಾರ್ಯಕ್ರಮಗಳಾಗಿವೆ. ಇವೆಲ್ಲವೂ ನಮ್ಮ ಹೆಮ್ಮೆ. ದಲಿತ ಸಂಘಟನೆ ವಿಘಟನೆಯಾಗಿವೆ, ಆಯಾಸವಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೇರಿರುವ ಜನಸ್ತೋಮ ನಮ್ಮ ಒಗ್ಗಟ್ಟನ್ನು ಸಾರಿ ಹೇಳಿದೆ ಎಂದರು.

ಹಂಚಿಕೊಂಡು ತಿಂದು ಬೆಳೆದ ದೇಶವಿದು. ಈ ದೇಶ ಯಾವ ಸ್ಥಿತಿ ಹೋಗಿದೆ ನೋಡುಗತ್ತಿದ್ದೇವೆ. ನಮ್ಮ ಸಂಸ್ಕೃತಿ, ಆಹಾರ, ಉದ್ಯೋಗ, ಉಡುಗೆ ತೊಡುಗೆಯನ್ನು ಕಿತ್ತುಕೊಂಡಿದ್ದಾರೆ. ನಮ್ಮ ದೇಸ ಅಕ್ಕಪಕ್ಕದ ದೇಶಕ್ಕಿಂತ ಕೆಳಗೆ ಇಳಕಿಯುತ್ತಿದೆ. ಸಂವಿಧಾನದ ಹೆಸರಲ್ಲಿ ವಂಚನೆ ಮಾಡುತ್ತಿದ್ದಾರೆ. ಸ್ಕಾಲರ್‌ಶಿಪ್ ನಿಲ್ಲಿಸಿ, ಲಕ್ಷಾಂತರ ರೂಪಾಯಿ ಕಾರ್ಪೊರೇಟರ್‌ಗಳ ಸಾಲ ಮನ್ನಾ ಮಾಡುತ್ತಿದ್ದಾರೆ. ಅಂಕಿ- ಅಂಶಗಳನ್ನು ತಡೆದು ಬಡತನ ಇಲ್ಲ ಎನ್ನುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಂಬೇಡ್ಕರ್ ಅಂದು ಮನುಸ್ಮೃತಿಯನ್ನು ಸುಟ್ಟರು. ಆದರೆ ಸಂವಿಧಾನದ ಹೆಸರಲ್ಲಿ ಆಳುವವರು ಇಂದು ಮನುಸ್ಮತಿ ಮತ್ತು ಪಂಚಾಂಗವನ್ನು ಹೇರುತ್ತಿದ್ದಾರೆ. ಅದರ ವಿರುದ್ಧ ದಲಿತರು ಇವತ್ತು ಬೀದಿಳಿದಿದ್ದಾರೆ. ಸಂಘಟನೆಗಳು ಒಂದಾಗಿದ್ದಾರೆ. ಇದಕ್ಕೆ ಕಾರಣವಾದ ಸರ್ಕಾರಕ್ಕೆ ಧನ್ಯವಾದ ಹೇಳಬೇಕು ಎಂದರು.

ರಾಮರಾಜ್ಯದ ಹೆಸರಲ್ಲಿ ಹಿಂಸೆ, ದೌರ್ಜನ್ಯ ಎಸಗುತ್ತಿದ್ದಾರೆ. ಪ್ರಶ್ನೆ ಕೇಳಿದರೆ ಜೈಲಿಗೆ ಹಾಕುತ್ತಿದ್ದಾರೆ. ಆನಂದ್ ತೇಲ್ತುಂಬ್ಡೆಯವರನ್ನು ಎರಡು ವರ್ಷ ಜೈಲಿಗೆ ಹಾಕಿದ್ದಾರೆ. ನ್ಯಾಯ ಕೇಳಿದರೆ ಜೈಲಿಗೆ ಹಾಕುತ್ತಾರೆ. ನೀವು ದೇಶದ್ರೋಹಿಗಳು. ದಲಿತರ ಹಕ್ಕು, ಬಡವರ ಹಕ್ಕು ಕಿತ್ತುಕೊಳ್ಳುತ್ತಿದ್ದೀರಿ. ನೀವು ದೇಶದ್ರೋಹಿಗಳು. ಆರ್ ಎಸ್ ಎಸ್, ಬಿಜೆಪಿ ದೇಶದ್ರೋಹಿಗಳು. ಸತ್ಯ ಹೇಳಿದರೆ ತಪ್ಪು ಎನ್ನುವುದಾದರೆ ನಿಮ್ಮಂಥ ಪಾಖಂಡಿಗಳು ಇನ್ನಾರೂ ಇಲ್ಲ. ಶಾಸ್ತ್ರ ಹೇಳುವವರು ದೇಶ ಕಟ್ಟಿಲ್ಲ. ದಲಿತರು, ತಳಸಮುದಾಯಗಳಾದ ನಾವು ದೇಶ ಕಟ್ಟಿದ್ದೇವೆ ಎಂದರು.

ಸಂವಿಧಾನ ಆಶಯಗಳನ್ನು ಬುಡಮೇಲು ಮಾಡಲು ಹೊರಟಿದ್ದೀರಿ. ಬಿಕ್ಷುಕರ ಮೇಲೆ ಜಿಎಸ್ ಟಿ ಹಾಕುತ್ತಿದ್ದೀರಿ. ಈ ದೇಶವನ್ನು ಲೂಟಿ ಹೊಡೆಯುತ್ತಿರುವವರನ್ನು ಏಕೆ ಪ್ರಶ್ನಿಸುತ್ತಿಲ್ಲ. ಈ ವಂಚಕರನ್ನು ಚುನಾವಣೆ ಮೂಲಕ ಕಿತ್ತು ಎಸಯನಬೇಕಾಗಿದೆ. ಒನ್ ಮ್ಯಾನ್ ಒನ್ ವೋಟು ನಮ್ಮ ತಂದೆ ಅಂಬೇಡ್ಕರ್ ಕೊಟ್ಟಿದ್ದೇ ಹೊರತು ಯಾರೋ ವೈದಿಕರಲ್ಲ. ನ್ಯಾಯ ಕೇಳುವುದು, ಹಕ್ಕಿಗಾಗಿ ಹೋರಾಡುವುದು ದೇಶದ್ರೋಹವಲ್ಲ. ಸುಳ್ಳು ಹೇಳಿ, ಮೋಸ ಮಾಡುವ ಕೋಮುವಾದಿಗಳೇ ಅತಿ ದೊಡ್ಡ ದೇಶದ್ರೋಹಿಗಳು. ನಮ್ಮ ಓಟಿನ ಮೂಲಕ ನಿಮ್ಮನ್ನು ಸೋಲಿಸಿ ಮನೆಗೆ ಕಳಿಸುತ್ತೇವೆ. ಬಾಬಾ ಸಾಹೇಬರು ಕೊಟ್ಟ ಒಂದು ಓಟಿನ ಹಕ್ಕಿನಿಂದ ನಿಮ್ಮ ಸೋಲಿಸುತ್ತೇವೆ ಎಂದರು.

ಹತ್ತು ಸಂಘಟನೆಯ ನಾಯಕರು ವೇದಿಕೆ ಮೇಲೆ ನಿಂತಿದ್ದಾರೆ. ಇದು ಇಲ್ಲಿಗೆ ನಿಲ್ಲುವುದಿಲ್ಲ. ಇದು ಮುಂದುವರಿಯುತ್ತದೆ. ಜಾತ್ಯತೀತರು ಎಲ್ಲರನ್ನೂ ಒಳಗೊಳ್ಳುತ್ತೇವೆ. ಮನುವಾದಿಗಳ ಪರ, ಸಂವಿಧಾನ ವಿರೋಧಿಗಳ ಜೊತೆ ನಿಂತವರನ್ನು ಬಿಟ್ಟು ನಾವು ಒಂದಾಗುಗುತ್ತೇವೆ. ನಾವೆಲ್ಲ ಒಂದಾಗದಿದ್ದರೆ ರೌರವ ನರಕಕ್ಕೆ ಹೋಗುತ್ತೇವೆ ಎಂದರು.

ಬಾಬಾಸಾಹೇಬರ, ಬುದ್ದರ ತತ್ವ ಸಿದ್ದಾಂತಗಳನ್ನು ನಂಬಿ ಬರುವವರಿಗೆ ನಮ್ಮಲ್ಲಿ ಮುಕ್ತ ಪ್ರವೇಶವಿದೆ. ನಾವು ಯಾರನ್ನೂ ಹೊರಗಡೆ ಇಡುವುದಿಲ್ಲ. ಆದರೆ ಕೋಮುವಾದಿಗಳೊಂದಗೆ ಹೋದವರಿಗೆ ನಮ್ಮಲ್ಲಿ ಪ್ರವೇಶವಿಲ್ಲ. ನಾಲ್ಕು ಪರ್ಸೆಂಟ್ ಇರುವವರಿಗೆ ಹತ್ತು ಪರ್ಸೆಂಟ್ ಮೀಸಲಾತಿ ಕೊಡುತ್ತಿದ್ದಿರಿ. ಆತ್ಮ ವಂಚಕರು ನೀವು, ನಿಮ್ಮನ್ನು ಸೋಲಿಸುತ್ತೇವೆ ಎಂದರು.

ಇದನ್ನೂ ಓದಿ: ಕರ್ನಾಟಕವನ್ನು ಯುಪಿ, ಗುಜರಾತ್, ಬಿಹಾರ ಮಾಡಲು ಬಿಡುವುದಿಲ್ಲ: ಸಿ ಬಸವಲಿಂಗಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...