Homeಚಳವಳಿಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ನಾಯಕ ಅಂಬೇಡ್ಕರ್: ನಾಗಮೋಹನ್ ದಾಸ್

ಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ನಾಯಕ ಅಂಬೇಡ್ಕರ್: ನಾಗಮೋಹನ್ ದಾಸ್

ನಾವು ಅಂಬೇಡ್ಕರ್ ಬಗ್ಗೆ ಅಹಂ ಬೆಳೆಸಿಕೊಳ್ಳಬಾರದು ಬದಲಿಗೆ ಅಂಬೇಡ್ಕರ್ ಬಗ್ಗೆ ಅರಿವು ಬೆಳೆಸಿಕೊಳ್ಳೋಣ. ಅಂದರೆ ಸಂವಿಧಾನದ ಅರಿವು ನಮ್ಮದಾಗಲಿ

- Advertisement -
- Advertisement -

ಮಹಿಳಾ ಸಮಾನತೆಗಾಗಿ ಹಿಂದೂ ಕೋಡ್ ಬಿಲ್ ರಚಿಸಿ, ಜಾರಿಯಾಗದಿದ್ದಾಗ ಕ್ಯಾಬಿನೆಟ್‌ಗೆ ರಾಜೀನಾಮೆ ನೀಡಿದ ಇತಿಹಾಸದ ಏಕೈಕ ನಾಯಕ ಡಾ.ಬಿ.ಆರ್ ಅಂಬೇಡ್ಕರ್ ಎಂದು ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟೀಸ್ ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು.

ಅಂಬೇಡ್ಕರ್‌ರವರು ಕಾರ್ಮಿಕ ಸಚಿವರಾಗಿ ಈ ದೇಶದ ಕಾರ್ಮಿಕರಿಗೆ ಹಕ್ಕುಗಳನ್ನು ನೀಡಿದರು. ಶ್ರೇಷ್ಟ ವಕೀಲರಾಗಿ, ಅರ್ಥಶಾಸ್ತ್ರಜ್ಞರಾಗಿ, ದಕ್ಷ ಆಡಳಿತಗಾರರಾಗಿ, ಸಂವಿಧಾನ ಶಿಲ್ಪಿಯಾಗಿ, ಮಾನವತಾವಾದಿಯಾಗಿ ಇಡೀ ದೇಶಕ್ಕೆ ಕೊಡುಗೆ ಕೊಟ್ಟವರನ್ನು ಈ ದೇಶ ಮರೆಯಬಾರದು ಎಂದರು.

ನ್ಯಾಷನಲ್ ಕಾಲೇಜು ಮೈದಾನದಲ್ಲಿ ದಲಿತರ ಸಾಂಸ್ಕೃತಿಕ ಪ್ರತಿರೋಧ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  “ಈ ಸಂದರ್ಭದಲ್ಲಿ ಅಂಬೇಡ್ಕರ್‌ರವರಿಗೆ ಸಲಾಮ್ ಹೊಡೆದರೆ ಸಾಲುವುದಿಲ್ಲ, ನಾವು ಅಂಬೇಡ್ಕರ್ ಬಗ್ಗೆ ಅಹಂ ಬೆಳೆಸಿಕೊಳ್ಳಬಾರದು ಬದಲಿಗೆ ಅಂಬೇಡ್ಕರ್ ಬಗ್ಗೆ ಅರಿವು ಬೆಳೆಸಿಕೊಳ್ಳೋಣ. ಅಂದರೆ ಸಂವಿಧಾನದ ಅರಿವು ನಮ್ಮದಾಗಲಿ” ಎಂದರು.

ಅಂಬೇಡ್ಕರ್ ಪರಿನಿಬ್ಬಾಣ ಹೊಂದಿದ ದಿನದಂದೇ ಬಾಬ್ರಿ ಮಸೀದಿಯನ್ನು ಕೆಡವಲಾಯಿತು. ಸಂವಿಧಾನ ಅಂಬೇಡ್ಕರ್‌ರವರು ಬರೆದಿಲ್ಲ ಎಂದು ಸುಳ್ಳು ಹಬ್ಬಿಸಲಾಗಿದೆ. ಸಂವಿಧಾನ ರಚನೆಯಾದ ಬಳಿಕ ಈ ದೇಶವನ್ನು ಕಟ್ಟಲಾಗಿದೆ. ಪ್ರಜಾಪ್ರಭುತ್ವದ ಸಂಸ್ಥೆಗಳಲ್ಲಿ ನಾವೆಲ್ಲರೂ ನೇರವಾಗಿ, ಪರೋಕ್ಷವಾಗಿ ಪಾಲ್ಗೊಳ್ಳುತ್ತಿರುವುದಕ್ಕೆ ಅಂಬೇಡ್ಕರ್ ಅವರು ಬರೆದ ಸಂವಿಧಾನ ಕಾರಣ, ಸಂವಿಧಾನದಿಂದಾಗಿ ದಲಿತ ರಾಷ್ಟ್ರಪತಿ, ಉಪಪ್ರಧಾನಿಯಾದರು. ಹತ್ತು ಹಲವು ಕ್ಷೇತ್ರಗಳಲ್ಲಿ ಸಾಧನೆಗೈಯಲು ಸಂವಿಧಾನ ಕಾರಣ ಎಂದರು.

“ಇಂದು ಬೆಲೆ ಏರಿಕೆಯಾಗುತ್ತಿದೆ. ಸರ್ಕಾರಕ್ಕೆ ಪ್ರಜ್ಞೆ ಇಲ್ಲ. ಪ್ರಶ್ನೆ ಮಾಡಿದರೆ ಯುಎಪಿಎ ಹಾಕುತ್ತಿದ್ದಾರೆ. ಎನ್ಕೌಂಟರ್ ಮಾಡುತ್ತಿದ್ದಾರೆ. ಪಿಟಿಸಿಎಲ್ ಕಾಯ್ದೆ ಅಪ್ರಸ್ತುತ ಮಾಡಲಾಗುತ್ತಿದೆ. ಖಾಸಗೀಕರಣ ಹೆಚ್ಚಾಗುತ್ತಿದ್ದೆ. ಮೀಸಲಾತಿ ಅಪ್ರಸ್ತುತ ಮಾಡುತ್ತಿದ್ದಾರೆ. ಮೀಸಲಾತಿ ಹೆಚ್ಚಳ ಕುರಿತು ಶಿಪಾರಸ್ಸು ಮಾಡಲು ಒಪ್ಪಿಕೊಂಡಿದ್ದೆ. ಆದರೆ ದೇಶದಲ್ಲಿ-ರಾಜ್ಯದಲ್ಲಿ ಖಾಲಿ ಹುದ್ದೆಗಳು ಭರ್ತಿಯಾಗಿಲ್ಲ. ಹಾಗಾಗಿ ಎಷ್ಟು ಮೀಸಲಾತಿ ಹೆಚ್ಚಿಸಿದರೂ ಏನು ಪ್ರಯೋಜನ? ಖಾಲಿ ಹುದ್ದೆಗಳನ್ನು ತುಂಬಬೇಕು. ಮೀಸಲಾತಿ ಹೆಚ್ಚಿಸಿದರೂ ಖಾಸಗೀಕರಣ ಹೆಚ್ಚುತ್ತಿದೆ. ಇದರ ವಿರುದ್ಧ ಹೋರಾಟ ಮಾಡಬೇಕಾಗಿದೆ” ಎಂದರು.

ಜನರ ಸಮಸ್ಯೆಗಳಿಗೆ ಜನಪರ ಹೋರಾಟಗಳೇ ಮದ್ದು. ಒಬ್ಬೊಬ್ಬರಾಗಿಯೇ ಮಾತನಾಡಿದರೆ ಸರ್ಕಾರಕ್ಕೆ ಕೇಳಿಸಲ್ಲ. ನಾವೆಲ್ಲ ದಲಿತ ಸಂಘಟನೆಗಳು ಸೈದ್ಧಾಂತಿಕ ನೆಲಗಟ್ಟಿನಲ್ಲಿ ಒಂದಾಗಬೇಕು. ಅಂಬೇಡ್ಕರ್ ದಾರಿಯೇ ನಮ್ಮ ತಾತ್ವಿಕ ನೆಲಗಟ್ಟು. ಸಂವಿಧಾನವನ್ನು ಉಳಿಸಿಕೊಳ್ಳಬೇಕು. ನಾವು ಗಳಿಸಿದ್ದನ್ನು ಕಳೆದುಕೊಳ್ಳುವ ಕಾಲಘಟ್ಟದಲ್ಲಿದ್ದೇವೆ. ನಾವೆಲ್ಲ ಒಟ್ಟಿಗೆ ಸೇರಿ ಹೋರಾಡಿದರೆ ಮಾತ್ರ ಗಳಿಸಿದ್ದನ್ನು ಉಳಿಸಿಕೊಳ್ಳಲು ಸಾಧ್ಯ ಎಂದರು.

ಕೋಮುವಾದ ರಾರಾಜಿಸಿದ್ದಲ್ಲಿ ನಾವು ಬಾಯಿಗೆ ಬೀಗ ಹಾಕಿಕೊಂಡು ಇರಬೇಕಾಗುತ್ತದೆ. ಇಂದು ಮುಸ್ಲಿಮರು ಮಾರಾಟ ಮಾಡುವಂತಿಲ್ಲ ಎನ್ನುತ್ತಿದ್ದಾರೆ. ನಾಳೆ ದಲಿತರು ದೇವಾಲಯದ ಬಳಿ ತೆಂಗಿನಕಾಯಿ ಮಾರುವಂತಿಲ್ಲ, ಹೂ ಮಾರುವಂತಿಲ್ಲ ಎನ್ನುತ್ತಾರೆ. ಎಚ್ಚರ ವಹಿಸಬೇಕು ಎಂದರು.

ಇದನ್ನೂ ಓದಿ; ಸಂಘರ್ಷ ನಡೆಸುವುದು ನಮ್ಮ ಹಕ್ಕು: ರಮಾಬಾಯಿ ಅಂಬೇಡ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...