Homeಚಳವಳಿದಲಿತರ ಪಾದಸ್ಪರ್ಶದಿಂದ ಬಸವನಗುಡಿ ಶಾಪ ವಿಮುಕ್ತಿಯಾಗಿದೆ: ಮಾವಳ್ಳಿ ಶಂಕರ್

ದಲಿತರ ಪಾದಸ್ಪರ್ಶದಿಂದ ಬಸವನಗುಡಿ ಶಾಪ ವಿಮುಕ್ತಿಯಾಗಿದೆ: ಮಾವಳ್ಳಿ ಶಂಕರ್

ಅಮಿತ್ ಶಾ ಚರಿತ್ರೆ ಹೊಸದಾಗಿ ಬರೆಯುತ್ತೇವೆ ಎನ್ನುತ್ತಾರೆ. ನೀವೇನು ಚರಿತ್ರೆ ಬರೆಯುವುದು? ಸಿಂಹಗಳ ಚರಿತ್ರೆಯನ್ನು ಸಿಂಹಗಳೇ ಬರೆಯುತ್ತೇವೆ. ನರಿಗಳಲ್ಲ...

- Advertisement -
- Advertisement -

ಬಸವನಗುಡಿಗೆ ತಟ್ಟಿದ್ದ ಶಾಪ ನಿಮ್ಮ ಪಾದಗಳ ಸ್ಪರ್ಶದಿಂದ ಮುಕ್ತಿಯಾಗಿದೆ. ಈ ದೇಶವನ್ನು ನಾವು ಕಟ್ಟಿದ್ದೇವೆ. ಅಶ್ವಿನಿ ಎಂಬ ಹೆಣ್ಣು ಮಗಳು ವಿಶ್ವಸಂಸ್ಥೆಗೆ ಹೋಗಿದ್ದಾಳೆ. ಬಾಬಾ ಸಾಹೇಬರು ಭೌತಿಕವಾಗಿ ಇಲ್ಲ. ಆದರೆ ಸಂವಿಧಾನದ ಮೂಲಕ ಅವರು ಜೀವಂತವಾಗಿದ್ದಾರೆ. ಅಂತಹ ಸಂವಿಧಾನವನ್ನು ರಕ್ಷಣೆ ಮಾಡಬೇಕಾಗಿರುವುದು ನಮ್ಮ ಹೊಣೆ ಎಂದು ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಅಭಿಪ್ರಾಯಪಟ್ಟರು.

ಬುದ್ಧನ ಕ್ರಾಂತಿಯನ್ನು ಪುಷ್ಯಶುಂಗ ಕುಟಿಲ ಬುದ್ದಿಯಿಂದ ಪ್ರತಿ ಕ್ರಾಂತಿ ಮೂಲಕ ತಡೆದು, ಬುದ್ದರನ್ನೇ ದೇಶದಿಂದ ಓಡಿಸಿದನು. ಆದರೆ ಅಂಬೇಡ್ಕರ್ ಬುದ್ಧನನ್ನು ವಾಪಸ್ ತಂದರು. ಆದರೆ ಮನುವಾದಿಗಳು ಈಗ ಭೂತಚೇಷ್ಟೇ ಮತ್ತೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಶ್ಮೀರ್ ಫೈಲ್ಸ್ ಎನ್ನುತ್ತಾರೆ. ಇಲ್ಲಿ ದಲಿತ್ ಫೈಲ್ಸ್ ಇಲ್ಲಿದೆ ನೋಡಿ. ಬಿಲ್ಕಿಸ್ ಬಾನೋ ಫೈಲ್ಸ್ ಎಲ್ಲಿಗೆ ಹೋಯಿತಪ್ಪ? ಕಾಂಗನಾ ರಾಣವತ್ ಗೆ ಜೆಡ್ ಪ್ಲಸ್ ಸೆಕ್ಯುರಿಟಿ, ನಮಗೆ ರಕ್ಷಣೆ ಇಲ್ಲ. ಕಾಶ್ಮೀರ್ ಫೈಲ್ಸ್ ಎನ್ನುತ್ತೀರಾ? ಎಲ್ಲಿ ನಮ್ಮ ಕಂಪಾಲಪಲ್ಲಿ ಫೈಲ್ಸ್, ಖೈರ್ಲಾಂಜಿ ದಲಿತ ಫೈಲ್ಸ್ ಎಂದು ಪ್ರಶ್ನಿಸಿದರು.

ಕುವೆಂಪು ಹೇಳುತ್ತಿದ್ದರು, ನಾವು ಹಿಂದೂ ಅಲ್ಲ, ಹಿಂದೂ ಅಲ್ಲ ಎನ್ನುತ್ತಿದ್ದರು. ನೀವು ಏನು ಹೇಳುತ್ತೀರಿ? ಹಿಂದೂ ಧರ್ಮದ ಹೆಸರಿನಲ್ಲಿ ನಿಮ್ಮ ತಿನ್ನುವ ಆಹಾರವನ್ನು ಅವರು ನಿರ್ಧಾರ ಮಾಡುತ್ತಿದ್ದಾರೆ ಇದು ತಪ್ಪಬೇಕು ಎಂದರು.

ಗೋಹತ್ಯೆ ನಿಷೇಧ ಮಾಡುತ್ತೇವೆ ಅನ್ನುತ್ತಾರೆ ನರೇಂದ್ರ ಮೋದಿಯವರು. ಏನು ಮೋದಿ ಮನೆಯಲ್ಲಿ, ಬೊಮ್ಮಾಯಿ ಮನೆಯಲ್ಲಿ ದನ ಸಾಕಿಕೊಂಡಿದ್ದೀರಾ? ನಮ್ಮ ದಲಿತರ, ರೈತರ ಮೇಲೆ ನಿಮ್ಮ ಪ್ರಹಾರವನ್ನು ಒಪ್ಪುವುದಿಲ್ಲ ಎಂದರು.

ರಾಜಸ್ಥಾನದಲ್ಲಿ ದಲಿತ ಮಗು ನೀರು ಕುಡಿದಿದ್ದಕ್ಕೆ ಕೊಂದರಿ? ಬಿಲ್ಕಿಸ್ ಬಾನೋ ಅತ್ಯಾಚಾರ ಮಾಡಿ, ಅವರ ಮಗುವನ್ನು ಕೊಂದಿದ್ದೀರಿ. ಆದರೆ ನೀವು ಎಷ್ಟೇ ದಾಳಿ ಮಾಡಿದರೂ ಸಹ ನಾವು ಎದ್ದು ಬರುತ್ತೇವೆ. ನಾವು ಬಾಬಾ ಸಾಹೇಬರ ಕುಡಿಗಳು ಎಂದು ಗುಡುಗಿದರು.

ನಾವು ದೇಶದ್ರೋಹಿಗಳಾಗಿಲ್ಲ, ಬಂದೂಕು ಹಿಡಿದಿಲ್ಲ. ಯಾರನ್ನು ತುಳಿದಿಲ್ಲ. ಆದರೆ ಈ RSS ನವರು ಬಂದೂಕು ಹಿಡಿದಿದ್ದಾರೆ. ಈ ಶನಿಸಂತಾನವನ್ನು ಮುಗಿಸಬೇಕಾಗಿದೆ. ನಾವು ಏಕಲವ್ಯನ ವಂಶಸ್ಥರು, ಹೆಬ್ಬರಳನ್ನು ಕಿತ್ತುಕೊಂಡರೂ ಸಹ ನಾವು ಮತ್ತೆ ಮತ್ತೆ ಬಿಲ್ಲು ಹಿಡಿಯುತ್ತೇವೆ. ನಾವು ದೇಶವನ್ನು ಕಟ್ಟಿದವರು. ನೀಲಿಯ ದಂಡು ಬೆಂಗಳೂರಿಗೆ ಬಂದಿದೆ ಎಂದರು.

ಇಡಬ್ಲೂಎಸ್ ಮೀಸಲಾತಿ ಹತ್ತು ಪರ್ಸೆಂಟ್ ಕೊಟ್ಟಿದ್ದೀರಿ. ಅಂದರೆ ಮೀಸಲಾತಿ ನಿಮ್ಮ ಅಪ್ಪನದ್ದಾ? ನಾವು ಮೋದಿಯನ್ನು ಬೈಯೋದ್ದಲ್ಲ, ಬಿಜೆಪಿ ಸಂಘಪರಿವಾರದ ಗುಲಾಮಗಿರಿಯನ್ನು ಮಾಡುತ್ತಿರುವ ದಲಿತ ಎಂಪಿಗಳನ್ನು ಬೈಯ್ಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಮಿತ್ ಶಾ ಚರಿತ್ರೆ ಹೊಸದಾಗಿ ಬರೆಯುತ್ತೇವೆ ಎನ್ನುತ್ತಾರೆ. ಮುಸಲ್ಮಾನರ ಬೂತ ತೋರುಸುತ್ತಿದ್ದಾರೆ. ಅಮಿತ್ ಶಾರವರೆ ನೀವೇನು ಚರಿತ್ರೆ ಬರೆಯುವುದು? ಸಿಂಹಗಳ ಚರಿತ್ರೆಯನ್ನು ಸಿಂಹಗಳೇ ಬರೆಯುತ್ತೇವೆ. ನರಿಗಳು ಬರೆಯಬೇಕಿಲ್ಲ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ; ಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ನಾಯಕ ಅಂಬೇಡ್ಕರ್: ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...