Homeಚಳವಳಿದಲಿತರ ಪಾದಸ್ಪರ್ಶದಿಂದ ಬಸವನಗುಡಿ ಶಾಪ ವಿಮುಕ್ತಿಯಾಗಿದೆ: ಮಾವಳ್ಳಿ ಶಂಕರ್

ದಲಿತರ ಪಾದಸ್ಪರ್ಶದಿಂದ ಬಸವನಗುಡಿ ಶಾಪ ವಿಮುಕ್ತಿಯಾಗಿದೆ: ಮಾವಳ್ಳಿ ಶಂಕರ್

ಅಮಿತ್ ಶಾ ಚರಿತ್ರೆ ಹೊಸದಾಗಿ ಬರೆಯುತ್ತೇವೆ ಎನ್ನುತ್ತಾರೆ. ನೀವೇನು ಚರಿತ್ರೆ ಬರೆಯುವುದು? ಸಿಂಹಗಳ ಚರಿತ್ರೆಯನ್ನು ಸಿಂಹಗಳೇ ಬರೆಯುತ್ತೇವೆ. ನರಿಗಳಲ್ಲ...

- Advertisement -
- Advertisement -

ಬಸವನಗುಡಿಗೆ ತಟ್ಟಿದ್ದ ಶಾಪ ನಿಮ್ಮ ಪಾದಗಳ ಸ್ಪರ್ಶದಿಂದ ಮುಕ್ತಿಯಾಗಿದೆ. ಈ ದೇಶವನ್ನು ನಾವು ಕಟ್ಟಿದ್ದೇವೆ. ಅಶ್ವಿನಿ ಎಂಬ ಹೆಣ್ಣು ಮಗಳು ವಿಶ್ವಸಂಸ್ಥೆಗೆ ಹೋಗಿದ್ದಾಳೆ. ಬಾಬಾ ಸಾಹೇಬರು ಭೌತಿಕವಾಗಿ ಇಲ್ಲ. ಆದರೆ ಸಂವಿಧಾನದ ಮೂಲಕ ಅವರು ಜೀವಂತವಾಗಿದ್ದಾರೆ. ಅಂತಹ ಸಂವಿಧಾನವನ್ನು ರಕ್ಷಣೆ ಮಾಡಬೇಕಾಗಿರುವುದು ನಮ್ಮ ಹೊಣೆ ಎಂದು ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಅಭಿಪ್ರಾಯಪಟ್ಟರು.

ಬುದ್ಧನ ಕ್ರಾಂತಿಯನ್ನು ಪುಷ್ಯಶುಂಗ ಕುಟಿಲ ಬುದ್ದಿಯಿಂದ ಪ್ರತಿ ಕ್ರಾಂತಿ ಮೂಲಕ ತಡೆದು, ಬುದ್ದರನ್ನೇ ದೇಶದಿಂದ ಓಡಿಸಿದನು. ಆದರೆ ಅಂಬೇಡ್ಕರ್ ಬುದ್ಧನನ್ನು ವಾಪಸ್ ತಂದರು. ಆದರೆ ಮನುವಾದಿಗಳು ಈಗ ಭೂತಚೇಷ್ಟೇ ಮತ್ತೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಶ್ಮೀರ್ ಫೈಲ್ಸ್ ಎನ್ನುತ್ತಾರೆ. ಇಲ್ಲಿ ದಲಿತ್ ಫೈಲ್ಸ್ ಇಲ್ಲಿದೆ ನೋಡಿ. ಬಿಲ್ಕಿಸ್ ಬಾನೋ ಫೈಲ್ಸ್ ಎಲ್ಲಿಗೆ ಹೋಯಿತಪ್ಪ? ಕಾಂಗನಾ ರಾಣವತ್ ಗೆ ಜೆಡ್ ಪ್ಲಸ್ ಸೆಕ್ಯುರಿಟಿ, ನಮಗೆ ರಕ್ಷಣೆ ಇಲ್ಲ. ಕಾಶ್ಮೀರ್ ಫೈಲ್ಸ್ ಎನ್ನುತ್ತೀರಾ? ಎಲ್ಲಿ ನಮ್ಮ ಕಂಪಾಲಪಲ್ಲಿ ಫೈಲ್ಸ್, ಖೈರ್ಲಾಂಜಿ ದಲಿತ ಫೈಲ್ಸ್ ಎಂದು ಪ್ರಶ್ನಿಸಿದರು.

ಕುವೆಂಪು ಹೇಳುತ್ತಿದ್ದರು, ನಾವು ಹಿಂದೂ ಅಲ್ಲ, ಹಿಂದೂ ಅಲ್ಲ ಎನ್ನುತ್ತಿದ್ದರು. ನೀವು ಏನು ಹೇಳುತ್ತೀರಿ? ಹಿಂದೂ ಧರ್ಮದ ಹೆಸರಿನಲ್ಲಿ ನಿಮ್ಮ ತಿನ್ನುವ ಆಹಾರವನ್ನು ಅವರು ನಿರ್ಧಾರ ಮಾಡುತ್ತಿದ್ದಾರೆ ಇದು ತಪ್ಪಬೇಕು ಎಂದರು.

ಗೋಹತ್ಯೆ ನಿಷೇಧ ಮಾಡುತ್ತೇವೆ ಅನ್ನುತ್ತಾರೆ ನರೇಂದ್ರ ಮೋದಿಯವರು. ಏನು ಮೋದಿ ಮನೆಯಲ್ಲಿ, ಬೊಮ್ಮಾಯಿ ಮನೆಯಲ್ಲಿ ದನ ಸಾಕಿಕೊಂಡಿದ್ದೀರಾ? ನಮ್ಮ ದಲಿತರ, ರೈತರ ಮೇಲೆ ನಿಮ್ಮ ಪ್ರಹಾರವನ್ನು ಒಪ್ಪುವುದಿಲ್ಲ ಎಂದರು.

ರಾಜಸ್ಥಾನದಲ್ಲಿ ದಲಿತ ಮಗು ನೀರು ಕುಡಿದಿದ್ದಕ್ಕೆ ಕೊಂದರಿ? ಬಿಲ್ಕಿಸ್ ಬಾನೋ ಅತ್ಯಾಚಾರ ಮಾಡಿ, ಅವರ ಮಗುವನ್ನು ಕೊಂದಿದ್ದೀರಿ. ಆದರೆ ನೀವು ಎಷ್ಟೇ ದಾಳಿ ಮಾಡಿದರೂ ಸಹ ನಾವು ಎದ್ದು ಬರುತ್ತೇವೆ. ನಾವು ಬಾಬಾ ಸಾಹೇಬರ ಕುಡಿಗಳು ಎಂದು ಗುಡುಗಿದರು.

ನಾವು ದೇಶದ್ರೋಹಿಗಳಾಗಿಲ್ಲ, ಬಂದೂಕು ಹಿಡಿದಿಲ್ಲ. ಯಾರನ್ನು ತುಳಿದಿಲ್ಲ. ಆದರೆ ಈ RSS ನವರು ಬಂದೂಕು ಹಿಡಿದಿದ್ದಾರೆ. ಈ ಶನಿಸಂತಾನವನ್ನು ಮುಗಿಸಬೇಕಾಗಿದೆ. ನಾವು ಏಕಲವ್ಯನ ವಂಶಸ್ಥರು, ಹೆಬ್ಬರಳನ್ನು ಕಿತ್ತುಕೊಂಡರೂ ಸಹ ನಾವು ಮತ್ತೆ ಮತ್ತೆ ಬಿಲ್ಲು ಹಿಡಿಯುತ್ತೇವೆ. ನಾವು ದೇಶವನ್ನು ಕಟ್ಟಿದವರು. ನೀಲಿಯ ದಂಡು ಬೆಂಗಳೂರಿಗೆ ಬಂದಿದೆ ಎಂದರು.

ಇಡಬ್ಲೂಎಸ್ ಮೀಸಲಾತಿ ಹತ್ತು ಪರ್ಸೆಂಟ್ ಕೊಟ್ಟಿದ್ದೀರಿ. ಅಂದರೆ ಮೀಸಲಾತಿ ನಿಮ್ಮ ಅಪ್ಪನದ್ದಾ? ನಾವು ಮೋದಿಯನ್ನು ಬೈಯೋದ್ದಲ್ಲ, ಬಿಜೆಪಿ ಸಂಘಪರಿವಾರದ ಗುಲಾಮಗಿರಿಯನ್ನು ಮಾಡುತ್ತಿರುವ ದಲಿತ ಎಂಪಿಗಳನ್ನು ಬೈಯ್ಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಮಿತ್ ಶಾ ಚರಿತ್ರೆ ಹೊಸದಾಗಿ ಬರೆಯುತ್ತೇವೆ ಎನ್ನುತ್ತಾರೆ. ಮುಸಲ್ಮಾನರ ಬೂತ ತೋರುಸುತ್ತಿದ್ದಾರೆ. ಅಮಿತ್ ಶಾರವರೆ ನೀವೇನು ಚರಿತ್ರೆ ಬರೆಯುವುದು? ಸಿಂಹಗಳ ಚರಿತ್ರೆಯನ್ನು ಸಿಂಹಗಳೇ ಬರೆಯುತ್ತೇವೆ. ನರಿಗಳು ಬರೆಯಬೇಕಿಲ್ಲ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ; ಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ನಾಯಕ ಅಂಬೇಡ್ಕರ್: ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...