Homeಚಳವಳಿಒಳಮೀಸಲಾತಿ ಜಾರಿಗೆ ಬರಬೇಕು, ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು: DSS ಸಮಾವೇಶದ ನಿರ್ಣಯಗಳು

ಒಳಮೀಸಲಾತಿ ಜಾರಿಗೆ ಬರಬೇಕು, ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು: DSS ಸಮಾವೇಶದ ನಿರ್ಣಯಗಳು

‘ಪಿಟಿಸಿಎಲ್ ಕಾಯ್ದೆ’ ಯನ್ನು ಬಲಪಡಿಸಬೇಕು, ಖಾಸಗಿಯಲ್ಲಿಯೂ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿಯನ್ನು ಜಾರಿಗೊಳಿಸಬೇಕು.

- Advertisement -
- Advertisement -

ಡಿಸೆಂಬರ್ 6, 2022 ರಂದು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನದಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ‘ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ’ ದ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ದಲ್ಲಿ ಮಂಡಿಸಲಾದ ನಿರ್ಣಯಗಳು

1. ಭಾರತದ ವೈವಿದ್ಯಮಯ ಸೌಹಾರ್ಧಯುತ ಸಾಮರಸ್ಯ ಮತ್ತು ಬಹುತ್ವದ ಸಂಸೃತಿಯ ಮೇಲೆ ಮೇಲು -ಕೀಳು, ಸ್ಪೃಶ್ಯ- ಅಸ್ಪೃಶ್ಯ, ಶ್ರೇಷ್ಠತೆ – ಕನಿಷ್ಟತೆಯ ತಾರತಮ್ಯದ ವೈದಿಕಶಾಹಿಯ ಏಕ ಸಂಸೃತಿಯನ್ನು ಹೇರುವಂತಹ ದಬ್ಬಾಳಿಕೆಯ ನೀತಿಯನ್ನು ಈ ಸಾಂಸ್ಕೃತಿಕ ಪ್ರತಿರೋಧ ಸಮಾವೇಶವು ತೀವ್ರವಾಗಿ ಖಂಡಿಸುತ್ತದೆ. ಮತ್ತು ಇಂತಹ ವೈವಿಧ್ಯಮಯ, ಸೌಹಾರ್ದಯುತ, ಸಾಮರಸ್ಯದ ಬಹುತ್ವದ ಸಾಂಸ್ಕೃತಿಕ ಅಸ್ಮಿತೆಯ ಬದುಕನ್ನು ಉಳಿಸಿಕೊಳ್ಳಲು ಈ ಪ್ರತಿರೋಧ ಸಮಾವೇಶವು ಸಂಕಲ್ಪ ಮಾಡುತ್ತದೆ.

2. ಬ್ರಾಹ್ಮಣ್ಯ ಮತ್ತು ಬಂಡವಾಳಶಾಹಿಯ ಸಾಧನದಂತೆ ವರ್ತಿಸುತ್ತಿರುವ ಸರ್ಕಾರದ ನಡೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ. ಇಂತಹ ಚಾತುರ್ವರ್ಣ ಮತ್ತು ಜಾತೀಯತೆ ತಾರತಮ್ಯಗಳನ್ನು ಎತ್ತಿ ಹಿಡಿಯುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸುತ್ತೇವೆ. ಭಾರತದ ಸಂವಿಧಾನ ಎತ್ತಿಹಿಡಿದಿರುವ ಮೂಲಭೂತ ಹಕ್ಕುಗಳನ್ನು ಸಮಸ್ತ ಭಾರತೀಯರೂ ಅನುಭವಿಸುವಂತಹ ವಾತಾವರಣವನ್ನು ಕೇಂದ್ರ ಸರ್ಕಾರ ಖಾತ್ರಿಗೊಳಿಸಬೇಕಿದೆ.

3. ಹಿಂದುಳಿದ ವರ್ಗಗಳಲ್ಲಿ ಇರುವಂತೆ ಪರಿಶಿಷ್ಟ ಜಾತಿ/ವರ್ಗಗಳಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೆ ತರಬೇಕು. ನ್ಯಾ. ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಟ್ಟು ಕಡ್ಡಾಯವಾಗಿ ಅನುಷ್ಟಾನಗೊಳಿಸಬೇಕು.

4. ಪರಿಶಿಷ್ಟ ಜಾತಿ/ವರ್ಗಗಳಿಗೆ SCSP/TSP ಕಾಯ್ದೆಯ ಅನುಗುಣವಾಗಿ ರಾಜ್ಯ ಬಜೆಟ್ಟಿನ ಶೇ. 24.10 ಯಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು. ಈ ಅನುದಾನವನ್ನು ಸಂಪೂರ್ಣವಾಗಿ ‘ಏಕಗವಾಕ್ಷಿ ಯೋಜನೆ’ ಯಲ್ಲಿ ಅನುಷ್ಟಾನಗೊಳಿಸಬೇಕು. ದಲಿತರ ಅವಶ್ಯಕತೆಗೆ ತಕ್ಕಂತೆ ಯೋಜನೆ ರೂಪಿಸುವುದರ ಮೂಲಕ ಅನುದಾನ ದುರ್ಬಳಕೆಯನ್ನು ಕೂಡಲೇ ನಿಲ್ಲಿಸಬೇಕು. ಇತರೆ ವೆಚ್ಚಕ್ಕಾಗಿ ಹಣ ಬಳಸಲು ಅವಕಾಶವಿರುವ ‘7ಡಿ ಸೆಕ್ಷನ್’ ಅನ್ನು ಕಾಯ್ದೆಯಿಂದ ತೆಗೆದುಹಾಕಬೇಕು. ಕೇಂದ್ರ ಸರ್ಕಾರವೂ ಸಹ ಇದೇ ಮಾದರಿಯ ಕಾಯ್ದೆಯನ್ನು ರೂಪಿಸಬೇಕು.

5. ಕೇವಲ ಆರ್ಥಿಕ ಮಾನದಂಡದಲ್ಲಿ ಎಸ್ಸಿ/ಎಸ್ಟಿ/ಒಬಿಸಿ ಯವರನ್ನು ಹೊರತುಪಡಿಸಿ ವಾರ್ಷಿಕ 8 ಲಕ್ಷ ವರಮಾನವಿರುವ ಮೇಲ್ಜಾತಿಯವರಿಗೆ ನೀಡಿರುವ EWS ಮೀಸಲಾತಿಯನ್ನು ಈ ವೇದಿಕೆ ಖಡಾಖಂಡಿತವಾಗಿ ವಿರೋಧಿಸುತ್ತದೆ. ಈ ಅಸಂವಿಧಾನಿಕ ತಿದ್ದುಪಡಿಯನ್ನು ರದ್ದುಗೊಳಿಸಬೇಕು. ಖಾಸಗಿಯಲ್ಲಿಯೂ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿಯನ್ನು ಜಾರಿಗೊಳಿಸಬೇಕು.

6. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಬಹುಕಾಲದಿಂದ ಖಾಲಿಯಾಗಿಯೇ ಉಳಿದಿರುವ ಲಕ್ಷಾಂತರ ಎಸ್ಸಿ/ಎಸ್ಟಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಿಕೊಳ್ಳಬೇಕು. ಹೊರಗುತ್ತಿಗೆ ನೇಮಕಾತಿಯನ್ನು ರದ್ದುಗೊಳಿಸಬೇಕು. ಖಾಲಿ ಹುದ್ದೆಗಳನ್ನು ಕೂಡಲೇ ತುಂಬಬೇಕು.

7. ‘ಪಿಟಿಸಿಎಲ್ ಕಾಯ್ದೆ’ ಯನ್ನು ಬಲಪಡಿಸಬೇಕು. ದಲಿತರ ಭೂಮಿಯು ದಲಿತರಲ್ಲಿಯೇ ಉಳಿಯುವಂತೆ ಮಾಡಬೇಕು. ಈ ಕಾಯ್ದೆಯ ಮೂಲ ಉದ್ದೇಶವಾದ ‘ದಲಿತರು ಭೂಮಿ ಹೊಂದುವ’ ಗುರಿಯನ್ನು ಸಮರ್ಥವಾಗಿ ಅನುಷ್ಟಾನಕ್ಕೆ ತರಬೇಕು.

8. ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಗೋಹತ್ಯಾ ನಿಷೇಧ ಕಾಯ್ದೆ’ ಮತ್ತು ‘ಮತಾಂತರ ನಿಷೇಧ ಕಾಯ್ದೆ’ ಗಳನ್ನು ಈ ಕೂಡಲೇ ರದ್ದುಗೊಳಿಸಬೇಕು.

9. ಎಸ್ಸಿ/ಎಸ್ಟಿ ಅಲೆಮಾರಿ, ಅರೆ-ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಹಾಗೂ ಪ್ರತ್ಯೇಕ ಆಯೋಗವನ್ನು ರಚಿಸಿ ಕಾಲಕಾಲಕ್ಕೆ ಸಮೀಕ್ಷೆ ಮಾಡಿ ಸೌಲಭ್ಯ ಒದಗಿಸಬೇಕು. ಡಿಎನ್‌ಟಿ (ಡಿನೋಟಿಫೈ ಟ್ರೆಬ್ಸ್) ಸಮುದಾಯಗಳಿಗೆ ವಿಶೇಷ ಸೌಲಭ್ಯ ಒದಗಿಸಬೇಕು.

10. ರಾಜ್ಯ ಸರ್ಕಾರ ಜಾರಿಗೊಳಿಸಿರುವ ರೈತಾಪಿ ಜನರ ವಿರೋಧಿ ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎ.ಪಿ.ಎಮ್.ಸಿ.ತಿದ್ದುಪಡಿ ಕಾಯ್ದೆ ಹಾಗೂ ವಿದ್ಯುತ್ ಖಾಸಗೀಕರಣ ಮಸೂದೆಯನ್ನು ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಈ ಕೂಡಲೇ ರದ್ದುಗೊಳಿಸಬೇಕು.

11. ಒಕ್ಕೂಟ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅನುಷ್ಟಾನಕ್ಕೆ ತಂದಿರುವ, ಅಸಮಾನತೆಯನ್ನು ಹಾಗೂ ಚಾತುರ್ವರ್ಣ ಪದ್ಧತಿಯನ್ನು ಎತ್ತಿ ಹಿಡಿಯುವ ರಾಷ್ಟ್ರೀಯ ಶಿಕ್ಷಣ ನೀತಿ – 2020 ಅನ್ನು ಈ ಕೂಡಲೇ ರದ್ದುಗೊಳಿಸಬೇಕು.

12. ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ದಲಿತ ಮಕ್ಕಳಿಗೆ ಸ್ಕಾಲರ್‌ಶಿಪ್ ನಿಲ್ಲಿಸುವ ಯೋಚನೆಯನ್ನು ಕೂಡಲೇ ಕೈ ಬಿಡಬೇಕು. ಎಸ್ಸಿ/ಎಸ್ಟಿ ಮೀಸಲಾತಿಗೆ ನಿಗದಿಪಡಿಸುರುವ ವಾರ್ಷಿಕ ಆದಾಯ ಮಿತಿಯನ್ನು 10 ಲಕ್ಷಕ್ಕೆ ಏರಿಸಬೇಕೆಂದು ಒತ್ತಾಯಿಸುತ್ತೇವೆ.

13. ಹತ್ತು ನಿಮಿಷಕ್ಕೊಂದು ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ನ್ಯಾಯಾಲಯಗಳಲ್ಲಿ ಶೇ.96 ರಷ್ಟು ಅಟ್ರಾಸಿಟಿ ಕಾಯ್ದೆಯಡಿಯ ಪ್ರಕರಣಗಳು ಬಾಕಿ ಉಳಿದಿವೆ. ಈ ಕಾಯ್ದೆಯಡಿ ಶಿಕ್ಷೆ ನೀಡುವ ಪ್ರಮಾಣ ತೀರ ಕಡಿಮೆ ಇದೆ. ಒಕ್ಕೂಟ ಹಾಗೂ ರಾಜ್ಯ ಸರ್ಕಾರಗಳ ಈ ಉದ್ದೇಶಪೂರ್ವಕ ನಿರ್ಲಕ್ಯವನ್ನು ಖಂಡಿಸುತ್ತೇವೆ. ಈ ಕೂಡಲೇ ದಲಿತರಿಗೆ ಭದ್ರತೆ ಹಾಗೂ ರಕ್ಷಣೆ ಒದಗಿಸಲು ಆಗ್ರಹಿಸುತ್ತೇವೆ.

14. ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು. ಈ ಎರಡೂ ವೃತ್ತಿಗಳಲ್ಲಿ ಮೀಸಲಾತಿ ನೀತಿಯನ್ನು ಅನುಷ್ಟಾನಕ್ಕೆ ತರಬೇಕು. ಮಲ ಹೊರುವ ಪದ್ಧತಿ ನಿಷೇಧಗೊಂಡಿದ್ದರೂ ಸಹ ನೂರಾರು ಸಾವುಗಳು ಇದರಿಂದ ಸಂಭವಿಸಿದೆ. ಇಡೀ ದೇಶವೇ ತಲೆತಗ್ಗಿಸುವಂತೆ ಮಾಡಿದೆ. ಮಲ ಹೊರುವ ಪದ್ಧತಿ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಟಾನಕ್ಕೆ ತರಲು ಆಗ್ರಹಿಸುತ್ತೇವೆ.

15. ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದಿರುವ ಕೋಮುವಾದಿ ದೌರ್ಜನ್ಯಗಳನ್ನು ಖಂಡಿಸುತ್ತೇವೆ. ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಕನ್ನಡ ನಾಡಿನ ಬಹುತ್ವವನ್ನು ಹಾಳುಗೆಡುವುತ್ತಿರುವ ಕೋಮುವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...