Homeಕರ್ನಾಟಕಮೂಲಸೌಕರ್ಯ ಒದಗಿಸಿ, ಇಲ್ಲವೇ ಕರ್ನಾಟಕದೊಂದಿಗೆ ವಿಲೀನ ಮಾಡಿ: ಮಹಾರಾಷ್ಟ್ರದ 11 ಗ್ರಾಮಗಳ ಒತ್ತಾಯ

ಮೂಲಸೌಕರ್ಯ ಒದಗಿಸಿ, ಇಲ್ಲವೇ ಕರ್ನಾಟಕದೊಂದಿಗೆ ವಿಲೀನ ಮಾಡಿ: ಮಹಾರಾಷ್ಟ್ರದ 11 ಗ್ರಾಮಗಳ ಒತ್ತಾಯ

- Advertisement -
- Advertisement -

ಬೆಳಗಾವಿ ಗಡಿ ವಿವಾದದ ಮಧ್ಯೆ ಮಹಾರಾಷ್ಟ್ರದ 11 ಗ್ರಾಮಗಳು ಸೊಲ್ಲಾಪುರ ಜಿಲ್ಲಾಡಳಿತದ ವಿರುದ್ಧ ಸಿಡಿದೆದ್ದಿದ್ದು, ಮೂಲ ಸೌಕರ್ಯ ಒದಗಿಸಿ ಅಥವಾ ಪಕ್ಕದ ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಅನುಮತಿ ನೀಡಿ ಎಂದು ಈ ಗ್ರಾಮಗಳು ಒತ್ತಾಯಿಸಿವೆ.

ಅಕ್ಕಲಕೋಟ ತಾಲೂಕಿನ ಕಲ್ಲಕರ್ಜಾಲ್, ಕೆಗಾಂವ್, ಶೇಗಾಂವ್, ಕೊರ್ಸೆಗಾಂವ್, ಆಳಗೆ, ಧರಸಂಗ್, ಅಂದೇವಾಡಿ (ಖುರ್ದ್), ಹಿಲ್ಲಿ, ದೇವಿಕಾವಠೆ, ಮಂಗ್ರುಲ್, ಶಾವಾಲ್ ಗ್ರಾಮ ಪಂಚಾಯಿತಿಗಳು ತಮ್ಮ ಬೇಡಿಕೆಗಳ ಪಟ್ಟಿಯನ್ನು ಸೊಲ್ಲಾಪುರ ಜಿಲ್ಲಾಧಿಕಾರಿಗೆ ಸಲ್ಲಿಸಿವೆ ಎಂದು ‘ಮಿಂಟ್’ ಜಾಲತಾಣ ವರದಿ ಮಾಡಿದೆ. ಮೂಲ ಸೌಕರ್ಯ ಕಲ್ಪಿಸಿ ಇಲ್ಲವೇ ಕರ್ನಾಟಕದೊಂದಿಗೆ ವಿಲೀನಗೊಳಿಸಲು ಅನುಮತಿ ನೀಡುವಂತೆ ಗ್ರಾಮಗಳು ಜಿಲ್ಲಾಡಳಿತವನ್ನು ಕೋರಿವೆ. ಗ್ರಾಮಗಳು ಸಲ್ಲಿಸಿರುವ ಬೇಡಿಕೆಗಳು ಈವರೆಗೂ ಈಡೇರಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

11 ಗ್ರಾಮಗಳಲ್ಲಿ ಒಂದಾದ ಅಳಗಿಯ ಸರಪಂಚ್ ಸಗುಣಾಬಾಯಿ ಹತ್ತೂರೆ ಪ್ರತಿಕ್ರಿಯಿಸಿ, “ಈ ಪ್ರದೇಶಗಳಲ್ಲಿ ಸರಿಯಾದ ರಸ್ತೆ, ವಿದ್ಯುತ್ ಸರಬರಾಜು ಮತ್ತು ನೀರಿನ ಸಂಪರ್ಕ ಇಲ್ಲ” ಎಂದು ‘ಪಿಟಿಐ’ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

“ನಮ್ಮ ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲದ ಕಾರಣ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಸಿಬ್ಬಂದಿ, ಶಿಕ್ಷಕರು ಗ್ರಾಮಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಸಂಪರ್ಕ ಕೊರತೆಯಿಂದಾಗಿ ಯುವಕರು ಶಿಕ್ಷಣಕ್ಕಾಗಿ ಹಾಗೂ ಇತರೆ ಕೆಲಸಗಳಿಗಾಗಿ ಹೊರಹೋಗಲು ಪರದಾಡುವಂತಾಗಿದೆ” ಎಂದು ಹತ್ತೂರೆ ಆರೋಪಿಸಿದ್ದಾರೆ.

ಈ ಗ್ರಾಮಗಳಿಗೆ ಸರಕಾರ ಮೂಲ ಸೌಕರ್ಯ ಕಲ್ಪಿಸಿ ಇಲ್ಲವೇ ಕರ್ನಾಟಕದೊಂದಿಗೆ ವಿಲೀನಗೊಳಿಸಲು ಅವಕಾಶ ಮಾಡಿಕೊಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಸಲ್ಲಿಸಲು ಗ್ರಾಮ ಪಂಚಾಯಿತಿಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹಿಲ್ಲಿ ಗ್ರಾಮದ ಮತ್ತೋರ್ವ ಸರಪಂಚ್ ಕೂಡ ಗ್ರಾಮಗಳ ಶೋಚನೀಯ ಸ್ಥಿತಿ ಕುರಿತು ಮಾತನಾಡಿದ್ದಾರೆ. ಸರಪಂಚ್‌ ಅಪ್ಪಾಸಾಹೇಬ ಶಟ್ಗರ್‌‌ ಮಾತನಾಡಿ, “ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ರಸ್ತೆ ಸಂಪರ್ಕ ಹದಗೆಟ್ಟಿದೆ” ಎಂದಿದ್ದಾರೆ.

“ಉಜನಿ ಅಣೆಕಟ್ಟಿನಿಂದ ಮುಂಗಾರು ಹಂಗಾಮಿನಲ್ಲಿ ಸಾಕಷ್ಟು ನೀರು ಬಿಡುಗಡೆಯಾಗುತ್ತಿದ್ದು, ಸಮರ್ಪಕ ನಿರ್ವಹಣೆ ಮಾಡದ ಕಾರಣ ಕಬ್ಬಿನ ಗದ್ದೆಗಳು, ಮನೆಗಳು ಜಲಾವೃತವಾಗುತ್ತವೆ. ಆದರೆ ಬೇಸಿಗೆಯಲ್ಲಿ ನಮ್ಮ ಪ್ರದೇಶಗಳಿಗೆ ನೀರು ಬಿಡುತ್ತಿಲ್ಲ.ನೀರಿಗಾಗಿ ಸಂಬಂಧಪಟ್ಟ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಮೊರೆ ಹೋಗಬೇಕಾಗಿದೆ” ಎಂದು ಶಟ್ಗರ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ: ಚಿತ್ರಗಳಲ್ಲಿ ನೋಡಿರಿ

ಶಾಲೆಯ ಮೂಲಸೌಕರ್ಯಗಳು ಅಸಮರ್ಪಕವಾಗಿದೆ ಮತ್ತು ಆರೋಗ್ಯ ವ್ಯವಸ್ಥೆಯು ಸಹ ಸರಿಯಾಗಿಲ್ಲ ಎಂದು ದೂರಿರುವ ಅವರು, “ಕರ್ನಾಟಕದಲ್ಲಿ ಮೋಟಾರು ರಸ್ತೆಗಳು, ಬೀದಿ ದೀಪಗಳು ಮತ್ತು ಸಮರ್ಪಕ ವಿದ್ಯುತ್ ಪೂರೈಕೆಯಂತಹ ಎಲ್ಲಾ ಮೂಲಭೂತ ಸೌಲಭ್ಯಗಳು ಲಭ್ಯವಿವೆ” ಎಂದು ತಿಳಿಸಿದ್ದಾರೆ.

“ನಮಗೆ ಕರ್ನಾಟಕದ ಬಗ್ಗೆ ಯಾವುದೇ ಪ್ರೀತಿ ಇಲ್ಲ, ಆದರೆ ನಾವು ಎಷ್ಟು ದಿನ ಈ ಅನ್ಯಾಯವನ್ನು ಎದುರಿಸಲಿ? 75 ವರ್ಷಗಳು ಕಳೆದಿವೆ” ಎಂದು ವಿಷಾದಿಸಿದ್ದಾರೆ.

“ಮಹಾರಾಷ್ಟ್ರ ಸರ್ಕಾರವು ಹಳ್ಳಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿದರೆ ಪಕ್ಕದ ರಾಜ್ಯವಾದ ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...