Homeಕರ್ನಾಟಕಸದನದಲ್ಲಿ ಮಿಂಚಿದ ಬಸವ ಪ್ರಣೀತ ಶಾಸಕ ನಾರಾಯಣರಾವ್

ಸದನದಲ್ಲಿ ಮಿಂಚಿದ ಬಸವ ಪ್ರಣೀತ ಶಾಸಕ ನಾರಾಯಣರಾವ್

- Advertisement -
- Advertisement -

ಬಸವ ಪ್ರಣೀತ ಲಿಂಗಾಯತನಾದ ಶಾಸಕ ನಾರಾಯಣರಾವ್

ಬಸವ ಕಲ್ಯಾಣದ ಶಾಸರ ಬಿ.ನಾರಾಯಣರಾವ್ ನಿನ್ನೆ ದಿನ ವಿಧಾನಸೌಧದಲ್ಲಿ ಆಡಿದ ಮನಪೂರ್ವಕವಾದ ಮಾತುಗಳಿಗೆ ಎಲ್ಲಿಲ್ಲದ ಪ್ರಶಂಸೆಯ ಸುರಿಮಳೆ ನಡೆದಿದೆ. ಮೂಲತಃ ಶರಣರ ಅಂಬಿಗರ ಚೌಡಯ್ಯನವರ ಚಾಟಿ ಏಟು, ಒಳ ಹೊಡೆತಗಳು ಅವರ ಮಾತುಗಳಲ್ಲಿ ನಾವು ಧಾರಾಳವಾಗಿ ಕಾಣಬಹುದು. ಶಾಸಕ ಬಿ.ನಾರಾಯಣರಾವ್ ಬಸವಕಲ್ಯಾಣದ ಜನತೆಯೆ ಬಲ್ಲಂತೆ ಸಾದಾ ಸೀದಾ ಜೀವನ ನಿರ್ವಹಿಸುವ, ನಿಗರ್ವಿ ಶಾಸಕ. ಯಾರಾದರೂ ಮಾತಾಡಿಸಬಹುದಾಗಿ, ಮತ್ತಾರಾದರೂ ತಕರಾರು ತೆಗೆಯಬಹುದಾದ ಸರಳತೆಯನ್ನು ಮೈಗೂಡಿಸಿಕೊಂಡವರು.

ಶರಣರ ವಿಚಾರಗಳೆ ಹಾಗೆ. ಒಂದು ಒಂದು ಸಲ ಅವುಗಳ ಸಮೀಪಕ್ಕೆ ಬರಬೇಕು ಅಷ್ಟೇ : ಅನಂತರ ಅವರಿಗೆ ಅರಿವಿಲ್ಲದೆ ಅವರೊಳಗೆ ಚಿಂತನೆ, ಸಾಮಾಜಿಕ ಕಾಳಜಿ, ನಿಜವಾದ ಧಾರ್ಮಿಕ ಪ್ರಜ್ಞೆಗಳು ಹುಟ್ಟಿಕೊಳ್ಳಲು ಆರಂಭವಾಗುತ್ತವೆ. ನಮಗೆ ಗೊತ್ತಿಲ್ಲದೆ ಪ್ರತಿಭಟಿಸುವ ಮನಸ್ಸು, ವಸ್ತು ಸ್ಥಿತಿಯನ್ನು ಅವಲೋಕಿಸಿ ಸೂಕ್ತ ಸಮಯದಲ್ಲಿ ಸರಿಯಾದ ಮಾತನಾಡುವ ಕಸುವು ತಂತಾನೆ ಉಂಟಾಗುತ್ತದೆ.

ಕುಂಡಲಿ ಬಂದು ಕೀಡಿಯನು ಕುಂಡಲಿಯ ಮಾಡಿತ್ತಯ್ಯಾ

ಅಗ್ನಿ ಬಂದು ಕಾಷ್ಠವ ಅಗ್ನಿಯ ಮಾಡಿತ್ತಯ್ಯಾ

ಮಹೇಶ ಬಂದು ಭಕ್ತನ ಮಹೇಶನ ಮಾಡಿ

ಗಮನಿಸಿದನಯ್ಯಾ ಕಪಿಸಿದ್ಧ ಮಲ್ಲಿಕಾರ್ಜುನಾ

ಎಂಬಂತೆ ಒಂದೆ ಒಂದು ಸಲ ಶರಣರ ವಿಚಾರಧಾರೆಯತ್ತ ಇಣುಕಿ ನೋಡಿದರೂ ಸಾಕು. ಖಂಡಿತವಾಗಿ ಕೀಡೆ ಕುಂಡಲಿಯಾಗುತ್ತದೆ. ಬೆಂಕಿ ಕಟ್ಟಿಗೆಯ ಸಮೀಪ ಬಂದು ಕಟ್ಟಿಗೆಯನ್ನು ಹೇಗೆ ಬೆಂಕಿ ಮಾಡಬಲ್ಲುದೋ ಹಾಗೆ. ಮಹೇಶ ಬಂದು ಭಕ್ತನ ಮಹೇಶ ಸ್ಥಲಕ್ಕೆ ಕರೆದುಕೊಂಡು ಹೋಗುವಂತೆ ಎಂಬ ಸೊನ್ನಲಾಪುರದ ಶರಣ ಸಿದ್ಧರಾಮಯ್ಯನ ಮಾತಿನಲ್ಲಿ ಬಹುದೊಡ್ಡ ಇತಿಹಾಸವಿದೆ.

ಬಸವರಾಜ ಪಾಟೀಲ ಅಷ್ಟೂರೆ, ಖೂಬಾ ಅವರ ನಡುವೆ ಗೆದ್ದು ಬರುವುದು ಅಷ್ಟು ಸುಲಭದ ಮಾತಲ್ಲ. ಶಾಸಕ ನಾರಾಣಯರಾವ್ ರಾಜಕೀಯ ಘಟಾನು ಘಟಿಗಳ ನಡುವೆಯೂ ಗೆದ್ದು ಬರುವ ಛಾತಿಯನ್ನು ಇಟ್ಟುಕೊಳ್ಳಲು ಸಾಧ್ಯವಾದುದು ಅವರ ಬದ್ಧತೆಗೆ. ಜನ ಸಾಮಾನ್ಯನೊಂದಿಗೆ ಬೆರೆತು ಅವರೊಳಗೆ ಒಂದಾಗುವ ಕ್ರಿಯೆಗೆ. ಬಹುತೇಕ ರಾಜಕಾರಣಿಗಳಿಗೆ ವಿಚಾರವೆಂಬುದು ಇರುವುದಿಲ್ಲ. ಆ ವಿಚಾರಗಳನ್ನು ಅವರಲ್ಲಿ ದೀಪ ಹಚ್ಚಿ ಹುಡುಕಬೇಕು. ಆದರೆ ಈ ನಾರಾಯಣರಾವ್ ಮಾತ್ರ ಬಸವಾದಿ ಶಿವಶರಣರ ವಿಚಾರಗಳನ್ನು ಅರಿತುಕೊಂಡು ಅವುಗಳನ್ನು ಆಚರಿಸುವತ್ತ ಆಸಕ್ತಿ ತೋರಿಸಿದ್ದಾರೆ.

ಹೀಗಾಗಿಯೇ ವಿಧಾನಸೌಧದಲ್ಲಿ ಎಲ್ಲಾ ಸದಸ್ಯರಿಗೂ ಅರಿವು ಮೂಡಿಸುವ ಅನುಭಾವದ ಮಾತುಗಳನ್ನು ಹೇಳಿದ್ದಾರೆ. ಜಗತ್ತಿಗೆ ಮೊಟ್ಟ ಮೊದಲು ಪ್ರಜಾಪ್ರಭುತ್ವದ ಆಡಳಿತ ತಂದದ್ದು ಬ್ರಿಟನ್ ದೇಶ ಅಲ್ಲ, ನಮ್ಮ ರಾಜ್ಯದ ಬಸವ ಕಲ್ಯಾಣ ಎಂಬುದುನ್ನು ಅವರು ಒತ್ತಿ ಒತ್ತಿ ಹೇಳಿದ್ದಾರೆ. ತನ್ನ ರಾಜ್ಯದಲ್ಲಿ ಯಾರೂ ಹಸಿವಿನಿಂದ ಕಂಗಾಲಾಗಿ ಸಾಯಬಾರದು ಎಂದು ಅರಿತುಕೊಂಡ ಬಸವಣ್ಣನವರು ದಾಸೋಹ ಪರಿಕಲ್ಪನೆಯನ್ನು ಜಾರಿಗೆ ತಂದರು ಎಂದು ನೆನಪಿಸಿಕೊಂಡಿದ್ದಾರೆ. ಜಾತಿ ಮತ ಪಂಥವೆನ್ನದೆ, ಗಂಡು ಹೆಣ್ಣು ಎಂಬ ತರತಮಭಾವನೆ ಇಟ್ಟುಕೊಳ್ಳದೆ ಅಂದು ಕಲ್ಯಾಣದಲ್ಲಿ ಬಸವಣ್ಣ ಅನುಭವ ಮಂಟಪ ಕಟ್ಟಿದರು. ಈ ಅನುಭವ ಮಂಟಪವನ್ನು ಮತ್ತೆ ಪುನರ್ ನಿರ್ಮಿಸುವ ಮೂಲಕ ಜನ ಸಾಮಾನ್ಯರಿಗೆ ಪ್ರೇರಣೆ ಒದಗಿಸುವುದು ಸರಕಾರದ ಕರ್ತವ್ಯ ಎಂದು ನಾರಾಯಣರಾವ್ ಒತ್ತಿ ಹೇಳಿದರು.

ಜೊತೆಗೆ ಇಂದಿನ ರಾಜಕೀಯ ತೀರಾ ಬಗ್ಗಡಗೊಂಡು ಹೋಗಿದೆ. ಕೋಟಿ ಕೋಟಿಗಳನ್ನು ಖರ್ಚು ಮಾಡಿ ಗೆದ್ದು ಬರುವ ಸ್ಥಿತಿ ನಿರ್ಮಾಣವಾಗಿದೆ. ಶ್ರೀಸಾಮಾನ್ಯ ಹೀಗೆ ಗೆದ್ದು ಬರಲು ಸಾಧ್ಯವೆ ? ಎಂಬ ಆತ್ಮಾವಲೋಕನದ ನುಡಿಗಳನ್ನು ಆಡುವ ಮೂಲಕ ವಿಧಾನಸಭೆಯ ಸದಸ್ಯರ ಮನವನ್ನು ಅಲ್ಲಾಡಿಸಿಬಿಟ್ಟಿದ್ದಾರೆ.

ಬಸವಣ್ಣನವರ ಬಗೆಗೆ ಮಾತಾಡುವುದೆ ಒಂದು ಸಾಹಸ ಎಂದು ಜಾತಿ ಲಿಂಗಾಯತರು ಅವಲತ್ತುಕೊಳ್ಳುವ ಈ ಸಂದರ್ಭದಲ್ಲಿ ನಿಜವಾದ ಬಸವ ಪ್ರಣೀತ ಲಿಂಗಾಯತನಾದ ನಾರಾಣರಾವ್ ಮಾತಾಡುವುದು ಹೆಚ್ಚು ಸೂಕ್ತವಾಗಿದೆ. ಇದಲ್ಲದೆ ಇತಿಹಾಸದ ಪುಟಗಳನ್ನು ತೆಗೆದು ನೋಡಿದಾಗಲೂ ಸಹ ಬಸವಾದಿ ಶರಣರ ಕುರಿತು, ಅವರ ವಚನಗಳ ಕುರಿತು ಆಸಕ್ತಿ ತಳೆದವರು ಅನ್ಯ ಮತದವರು. ಹರ್ಡೇಕರ ಮಂಜಪ್ಪ, ಫ.ಗು. ಹಳಕಟ್ಟಿ, ಅನಕೃ, ಆರ್.ಆರ್.ದಿವಾಕರ್, ಎಂ.ಆರ್.ಶ್ರೀನಿವಾಸ ಮೂರ್ತಿ ಮೊದಲಾದವರು ಆಸಕ್ತಿ ತಳೆದರೆಂದೆ ನಮಗಿಂದು ವಚನ ಸಾಹಿತ್ಯವೆಂಬ ಸಕಲ ಜೀವಪ್ರೇಮದ, ವಿಶ್ವ ಹೃದಯಿಯಾದ ವಚನ ಸಾಹಿತ್ಯ ದಕ್ಕಿದೆ.

ನಾರಾಯಣರಾವ್‍ರ ಕೌಟುಂಬಿಕ ಕಲಹಗಳೇನೇ ಇದ್ದರೂ ಸಾಮಾಜಿಕವಾಗಿ ಅವರ ಬದ್ಧತೆ, ವೈಚಾರಿಕ ನಿಲುವುಗಳನ್ನು ಕರ್ನಾಟಕದ ಜನತೆ ಭರವಸೆಯಿಂದ ನೋಡುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Basavaraj patil ashture alla. Basavaraj patil attur. Dr Basavaraj patil ashtur ennuva mattobba BJP leader. In last assembly election he (ashture) contested from Bidar (south) constituency on BJP ticket. Attur is ex minister.

  2. Basavaraj patil ashture alla. Basavaraj patil attur. Dr Basavaraj patil ashtur ennuva mattobba BJP leader. In last assembly election he (ashture) contested from Bidar (south) constituency on BJP ticket. Attur is ex minister.

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...