Homeಮುಖಪುಟಎನ್.ಹೆಚ್ 10 ಸಿನಿಮಾದ ಕಥೆ: ಭಾರತ ಪ್ರಕಾಶಿಸುತ್ತಿದೆ - ಹಳ್ಳಿಗಳು ಕಗ್ಗತ್ತಲೆಯಲ್ಲಿವೆ

ಎನ್.ಹೆಚ್ 10 ಸಿನಿಮಾದ ಕಥೆ: ಭಾರತ ಪ್ರಕಾಶಿಸುತ್ತಿದೆ – ಹಳ್ಳಿಗಳು ಕಗ್ಗತ್ತಲೆಯಲ್ಲಿವೆ

- Advertisement -
- Advertisement -

“ಆರ್ಟಿಕಲ್ 15” ಸಿನೆಮಾ ಆರಂಭವಾಗುವುದೇ 8 ಲೈನ್ ಹೆದ್ದಾರಿಯನ್ನು ತೋರಿಸುವುದರ ಮೂಲಕ. ನಂತರ ಇದು ಒಳಹಾದಿ ಮೂಲಕ ಹಳ್ಳಿಗಳಿಗೆ ತೆರಳುತ್ತದೆ. ಹಳ್ಳಿಗಳಲ್ಲಿನ ಜಾತೀಯತೆ ಸ್ವರೂಪ ಹೇಗಿದೆ ಎಂಬುದನ್ನು ಬಿಚ್ಚಿಡುತ್ತಾ ಹೋಗುತ್ತದೆ. ನಿರ್ದೇಶಕ ಸಿನ್ಹಾ ಆರಂಭದಲ್ಲಿಯೇ ತೋರಿಸುವ ರಾಷ್ಟ್ರೀಯ ಹೆದ್ದಾರಿ ಕೂಡ ಸಾಂಕೇತಿಕ. ಹಿಂದೆ ಈ ರಸ್ತೆ ಬದಿಗಳಲ್ಲಿ “ಭಾರತ ಪ್ರಕಾಶಿಸುತ್ತಿದೆ” ಎಂಬ ಬೃಹತ್ ಫಲಕ ಕಾಣುತ್ತಿತ್ತು. ಇದರ ಅಣಕವನ್ನು ಈ ಸಿನೆಮಾ ಮಾಡುತ್ತದೆ. ಇದು ಬಹು ಪರಿಣಾಮಕಾರಿ.

ಇಂಥದ್ದೇ ಅಣಕವನ್ನು ಕೆಲವರ್ಷಗಳ ಹಿಂದೆ ತೆರೆಕಂಡ ಎನ್.ಹೆಚ್. 10 ಕೂಡ ಮಾಡಿತ್ತು. ವಿಶಾಲವಾದ, ಜಗಮಗಿಸುವ ನುಣ್ಣನೆಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿಯೇ ಇರುವ ಹಳ್ಳಿಗಳಲ್ಲಿ ಜಾತೀಯತೆಯ ಭೀಕರ ಕಬಂಧಬಾಹು ಹೇಗಿದೆ ಎಂಬುದನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ.

ಈ ನಿಟ್ಟಿನಲ್ಲಿ ಹಿಂದಿ ಸಿನೆಮಾ ಎನ್.ಎಚ್. 10 ಅನೇಕ ಕಾರಣಗಳಿಗೆ ಮುಖ್ಯವಾಗುತ್ತದೆ. ಅಂತರ್ಜಾತಿಯ ಪ್ರೇಮಿಗಳ ಆತಂಕ, ನಗರಗಳಲ್ಲಿನ ದುಡಿಯುವ ಮಹಳೆಯರ ಅಭದ್ರತೆ, ಅಸಹಾಯಕ ಆಗಿರುವ ಪೊಲೀಸ್, ಅಪರಾಧಗಳಿಗೆ ‘ಹೆದ್ದಾರಿ’ ಆಗಿರುವ ಹೆದ್ದಾರಿಗಳು, ‘ಭಾರತ ಪ್ರಕಾಶಿಸುತ್ತಿದೆ’ ಎಂಬ ಹಣೆಪಟ್ಟಿ ಹೊತ್ತ ರಾಷ್ಟ್ರೀಯ ಹೆದ್ದಾರಿ ಮಗ್ಗುಲುಗಳಲ್ಲಿ ಇರುವ ಹಳ್ಳಿಗಳಲ್ಲಿನ ಜಾತೀಯತೆ ಕಾರಣದಿಂದ ಕೊಳೆತ ಮನಸುಗಳು, ಫ್ಯೂಡಲ್ ಸಿಸ್ಟಂ ನೆರಳಿಗೆ ನೆರಳಾಗಿರುವ ಪೊಲೀಸ್ ಮತ್ತು ಇವೆಲ್ಲದರ ಜೊತೆಗೆ ವಿದ್ಯಾವಂತ ಪುರುಷರ ನಿಸತ್ವ ‘ಇಗೋ’.

ಕಾರ್ಪೊರೇಟ್ ಕಂಪನಿಗಳಲ್ಲಿ ಸಮಯದ ಪರಿಮಿತಿ ಇಲ್ಲದೆ ದುಡಿಯುತ್ತಾ ಅಭದ್ರತೆ ಕಾರಣಕ್ಕೆ ಸದಾ ಆತಂಕದಲ್ಲಿ ನೆರಳಿನಲ್ಲಿರುವ ಮಹಿಳೆಯರ ಪ್ರತಿನಿಧಿಯಂತೆ ಈ ಚಿತ್ರದ ಮೀರಾ ಕಾಣುತ್ತಾಳೆ. ತಡರಾತ್ರಿಗಳಲ್ಲಿಯೂ ಕಚೇರಿಗೆ ತೆರಳಬೇಕಾದ ಅನಿವಾರ್ಯತೆ ಇವರ ನೆಮ್ಮದಿ ಕಸಿದುಕೊಳ್ಳುತ್ತದೆ. ಆಗಬಹುದಾದ ಅನಾಹುತಗಳ ಅರಿವಿಲ್ಲದೆ ಮಹಾನಗರಗಳಲ್ಲಿ ತಡರಾತ್ರಿ ವಹಿವಾಟು ಜಾರಿಯಲ್ಲಿರಬೇಕು ಎಂದು ಹಂಬಲಿಸುವ ವ್ಯಕ್ತಿಗಳನ್ನು ಪ್ರತಿನಿಧಿಸುವ ಪಾತ್ರವೊಂದರ ವಿವರ ಸಂಕ್ಷಿಪ್ತವಾಗಿದ್ದರೂ ಪರಿಣಾಮಕಾರಿಯಾಗಿ ಚಿತ್ರಿತವಾಗಿದೆ.

ಎಗ್ಗಿಲ್ಲದೆ ಬೆಳೆದ, ಬೆಳೆಯುತ್ತಿರುವ ಮಹಾನಗರಗಳು, ಇದರ ಫಾಯಿದೆ ತೆಗೆದುಕೊಳ್ಳುತ್ತಿರುವ ಪುಂಡು-ಫೋಕರಿಗಳು, ಇವರನ್ನು ನಿಯಂತ್ರಿಸಲಾಗದ ಅಸಹಾಯಕರಾದ ಪೊಲೀಸರು, ಇಂಥ ಪೊಲೀಸರ ಪ್ರತಿನಿಧಿಯಂತೆ ಕಾಣುವ ಠಾಣಾಧಿಕಾರಿಯಿಂದ ಸ್ವಯಂರಕ್ಷಣೆಗಾಗಿ ಗನ್ ತೆಗೆದುಕೊಳ್ಳುವಂತೆ ಮೀರಾ ಮತ್ತು ನೈಲ್ ಭೂಪಾಲನ್ ದಂಪತಿಗೆ ಶಿಫಾರಸು.

ಮೀರಾ ಕೈಗೆ ಗನ್ ಬರುತ್ತದೆ. ರಕ್ಷಣೆ ಸಲುವಾಗಿ ತೆಗೆದುಕೊಳ್ಳುವ ಗನ್ ಇವರ ಅಭದ್ರತೆಗೂ ಕಾರಣವಾಗುತ್ತದೆ. ಈ ಮೂಲಕ ಎಲ್ಲೆಡೆ ಮೊಬೈಲ್, ಇಂಟರ್ನೆಟ್ ನೆಟ್ ವರ್ಕ್. ಅಲ್ಲಲ್ಲಿ ಪೊಲೀಸ್ ಠಾಣೆಗಳು ಇರುವ ನುಣ್ಣನೆ ಮೈ ಹೊದ್ದ ಹೆದ್ದಾರಿ ಬದಿಯ ಹಳ್ಳಿಗಳಲ್ಲಿ ಇಂದಿಗೂ ಜಾರಿಯಲ್ಲಿರುವ ಅಮಾನುಷ ‘ಮಾರ್ಯಾದಾ ಹತ್ಯೆ’ ಅನಾವರಣಗೊಳ್ಳುತ್ತದೆ.

ಪೊಳ್ಳು ಇಗೋ:

ಮಹಾನಗರಗಳ ವಿದ್ಯಾವಂತ ಯುವಕರಲ್ಲಿ ಸಂಗಾತಿಯನ್ನು ಮೆಚ್ಚಿಸುವ, ಹೀರೋಯಿಸಂ ತೋರಿಸುವ ತವಕ ಹೆಚ್ಚಿರುತ್ತದೆ. ಆದರೆ ಹೀಗೆ ಮಾಡಲು ಹೋಗುವ ಮುನ್ನ ಜೊತೆಗಿರುವ; ತನ್ನನ್ನೆ ನಂಬಿದ ಸಂಗಾತಿಯ ಭದ್ರತೆ ಜೊತೆಗೆ ತನ್ನ ಬಲಾಬಲ ಬಗ್ಗೆ ಯೋಚಿಸದೆ ದುಡುಕುವವವರ ಪ್ರತಿನಿಧಿಯಂತೆ ನೈಲ್ ಭೂಪಾಲನ್ ಕಾಣುತ್ತಾನೆ.

ಢಾಭಾ ಆವರಣದಲ್ಲಿ ಯುವ ಪ್ರೇಮಿಗಳಿಬ್ಬರನ್ನು ಥಳಿಸುತ್ತಿರುವ ಗ್ಯಾಂಗಿನ ಕೃತ್ಯವನ್ನು ಹಳ್ಳಿಗರು, ಪ್ರಯಾಣಿಕರು ಮೌನವಾಗಿ ನೋಡುತ್ತಿರುತ್ತಾರೆ. ಭೂಪಾಲನ್ ಇದನ್ನು ಪ್ರಶ್ನಿಸಿ ಏಟು ತಿನ್ನುತ್ತಾನೆ. ಆದರೆ ಅಲ್ಲೆ ಮರು ಏಟು ಹಾಕದೆ ಗ್ಯಾಂಗಿನ ಬೆನ್ನು ಹತ್ತುತ್ತಾನೆ. ಇದಕ್ಕೆ ಕಾರಣ  ಜೊತೆಗಿರುವ ಗನ್ ನೀಡಿದ ಧೈರ್ಯ. ಪತ್ನಿ ಪರಿಪರಿಯಾಗಿ ಬೇಡಿಕೊಂಡರೂ ಈತ ತನ್ನ ಇಗೋ ಬಿಡುವುದಿಲ್ಲ.

ಜೊತೆಗಿರುವ ಗನ್ ಅನ್ನು ಯುವಪ್ರೇಮಿಗಳು ಮತ್ತು ತನ್ನನ್ನು ರಕ್ಷಿಸಿಕೊಳ್ಳಲು ಈತ ಬಳಸುತ್ತಾನೆಯೇ ? ಅದು ಇಲ್ಲ. ಗ್ಯಾಂಗಿನ ಕೃತ್ಯವನ್ನು ಅಸಹಾಯಕನಂತೆ ನೋಡುತ್ತಾನೆ. ಪಾರಾಗುವ ಯತ್ನದಲ್ಲಿ ತಾನೂ ಅವರಿಗೆ ಸಿಕ್ಕಿ ಬೀಳುವುದಲ್ಲದೆ ಪತ್ನಿಯೂ ಸಿಲುಕಿಕೊಳ್ಳುವಂತೆ ಮಾಡುತ್ತಾನೆ. ಮತ್ತೆ ಪಾರಾಗುವ ಯತ್ನ ಮಾಡುತ್ತಾನೆ. ಆಗ ಘಟಿಸುವುದೆ ಬೇರೆ…

ಜಾತಿಯ ಮರ್ಯಾದೆ ಕಾರಣಕ್ಕೆ ತನ್ನ ಒಡ ಹುಟ್ಟಿದ ತಂಗಿ ಮತ್ತು ಈಕೆಯ ಪ್ರೇಮಿಯನ್ನು ಕೊಲ್ಲುವ ಸತ್ಬೀರ್ ಇಂಥವರೆಲ್ಲರ ಪ್ರತಿನಿಧಿಯಾಗಿ ಕಾಣುತ್ತಾನೆ. ಈ ಕೃತ್ಯಕ್ಕೆ ಸಾಕ್ಷಿಯಾದ ದಂಪತಿಗಳನ್ನು ಮುಗಿಸಲು ಇವನು ಮತ್ತಿವನ ತಂಡ ಬೆನ್ನು ಬೀಳುತ್ತದೆ. ಈ ಕೊಲೆಗಡುಕರಿಂದ ಪಾರಾಗುತ್ತಾ ಮತ್ತೆಮತ್ತೆ ಅಂಥವರೊಂದಿಗೆ ನೆಂಟು ಇರುವವರ ಹಿಡಿತಕ್ಕೆ ಸಿಲುಕಿ ಮತ್ತೆ ಅವರಿಂದ ಪಾರಾಗುತ್ತಾ ಮತ್ತೆ ಅಂಥವರ ಕೈಗೆ ಸಿಲುಕುವ ಮೀರಾ ಸ್ಥಿತಿ ತಲ್ಲಣ ಮೂಡಿಸುತ್ತದೆ.

ಪಾರಾಗುವ ಹಾದಿಯಲ್ಲಿ ಇಂದಿಗೂ ಭಾರತದ ಅನೇಕ ಹಳ್ಳಿಗಳಲ್ಲಿ ಜಾರಿಯಲ್ಲಿರುವ ಫ್ಯೂಡಲ್ ಸಂಸ್ಕೃತಿ, ಜಾತೀಯ ದರ್ಬಾರು, ಪಾಳೆಗಾರಿಕೆ ಮನೋಭಾವದ ಸರಪಂಚರು ಮತ್ತು ಅಸಹಾಯಕತೆಯಿಂದ ಇಂಥವರ ಸೇವಕರಂತೆ ಆಡುವ ಪೊಲೀಸರ ಚಿತ್ರಣ ದೊರೆಯುತ್ತದೆ. ಅಸಹಾಯಕವಾಗಿ ಕಾಣುವ ಮೀರಾ ತನ್ನ ಪ್ರಾಣ ಲೆಕ್ಕಿಸದೆ ಕೊಲೆಗಡುಕರನ್ನು ಬೇಟೆಯಾಡುವ ರೀತಿ ಬಹು ಪರಿಣಾಮಕಾರಿಯಾಗಿ ಚಿತ್ರಿತವಾಗಿದೆ. ಈ ಮೂಲಕ ಹೆಣ್ಣಿನಲ್ಲಿರುವ ಕೆಚ್ಚು, ರೋಷ ಸೂಕ್ತ ರೀತಿಯಲ್ಲಿ ಚಿತ್ರಿತವಾಗಿದೆ.

ಸಮಕಾಲೀನ ಭಾರತೀಯ ಸಮಾಜದ ಹುಳುಕಗಳನ್ನು ಎತ್ತಿ ತೋರಿಸುವ ಹಾದಿಯಲ್ಲಿ ಎನ್.ಎಚ್. 10 ಡಾಕ್ಯುಮೆಂಟರಿಯಾಗಿಲ್ಲ. ಜನಪ್ರಿಯ ಸಿನೆಮಾದ ಪರಿಭಾಷೆಯಲ್ಲಿಯೆ ತಾನು ಹೇಳಬೇಕಾದ ಸಂಗತಿಗಳನ್ನು ನಿರ್ದೇಶಕ ನವದೀಪ್ ಸಿಂಗ್ ಹೇಳಿದ್ದಾರೆ. ಚಿತ್ರಕಥೆಯಲ್ಲಿರುವ ಬಿಗಿ, ಕ್ಯಾಮರಾ ಕೆಲಸ ಜೊತೆಗೆ ಎಲ್ಲ ಕಲಾವಿದರ ಅಭಿನಯ ಸಿನೆಮಾವನ್ನು ಕೊನೆಯವರೆಗೂ ನೋಡಿಸಿಕೊಂಡು ಹೋಗುತ್ತದೆ.

ವಿಶೇಷವಾಗಿ ಅನುಷ್ಕಾ ಶರ್ಮ ಅಭಿನಯ ಗಮನ ಸೆಳೆಯುತ್ತದೆ. ದೊಡ್ಡ ವಹಿವಾಟು ಇರುವ ಕಂಪನಿ ಅಧಿಕಾರಿಯಾಗಿ, ತಡರಾತ್ರಿಯಲ್ಲಿ ದಾಳಿ ಮಾಡುವ ಕಾಮಂಧರಿಂದ ಪಾರಾಗುವ ಹೆಣ್ಣಾಗಿ, ಪತಿಯನ್ನು ರಕ್ಷಿಸಿಕೊಳ್ಳಲು ಯತ್ನಿಸುವ ಪತ್ನಿಯಾಗಿ, ನಗರದತ್ತ ಧಾವಿಸಿ ಹೋಗಲು ಆಸ್ಪದ ದೊರೆತರೂ ಕೊಲೆಗಡುಕರ ದಮನಕ್ಕೆ ಹೊರಡುವ ದುರ್ಗೆಯಾಗಿ ಇವರು ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...