Homeಮುಖಪುಟಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆ: ಗೆಲುವಿನತ್ತ ಕಾಂಗ್ರೆಸ್ ಹೆಜ್ಜೆ

ಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆ: ಗೆಲುವಿನತ್ತ ಕಾಂಗ್ರೆಸ್ ಹೆಜ್ಜೆ

- Advertisement -
- Advertisement -

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾದ ಮೂರು ಗಂಟೆಗಳಿಗೂ ಹೆಚ್ಚು ಸಮಯದ ನಂತರ ಬಿಜೆಪಿ ಹಿನ್ನಡೆ ಕಾಣುತ್ತಿದೆ. ಕೆಲವೇ ಕ್ಷಣಗಳ ಹಿಂದೆ, ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಹಿಂದಿಕ್ಕಿ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಇದೇ ವೇಳೆ ಬಿಜೆಪಿ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಯು ಕಾಂಗ್ರೆಸ್‌ಗಿಂತ ಸ್ವಲ್ಪ ಹೆಚ್ಚಿನ ಹಿಡಿತ ಸಾಧಿಸುವುದಾಗಿ ಎಕ್ಸಿಟ್ ಪೋಲ್‌ಗಳು ಹೇಳಿದ್ದವು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಮೂರು ದಶಕಗಳ ರಾಜಕೀಯ ಸಂಪ್ರದಾಯವೇ ತಲೆಕೆಳಗಾಗುತ್ತದೆ. ಏಕೆಂದರೆ ಒಮ್ಮೆ ಬಿಜೆಪಿ, ಒಮ್ಮೆ ಕಾಂಗ್ರೆಸ್ ಗೆಲ್ಲುತ್ತಿರುವುದು ಇಲ್ಲಿನ ಸಂಪ್ರದಾಯವಾಗಿದೆ. ಆದರೆ ಹಿಮಾಚಲದಲ್ಲಿ ಸರ್ಕಾರ ಬದಲಾಗಲಿದೆಯೇ ಹೊರತು ರಿವಾಜ್ (ಸಂಪ್ರದಾಯ) ಅಲ್ಲ ಎಂದು ಕಾಂಗ್ರೆಸ್ ಪುನರುಚ್ಚರಿಸಿದೆ.

ಸೋಮವಾರ ಹೊರಬಿದ್ದ ಎಕ್ಸಿಟ್ ಪೋಲ್‌ಗಳು ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ 24-41 ಸೀಟುಗಳನ್ನು ಮತ್ತು ಕಾಂಗ್ರೆಸ್‌ಗೆ 20-40 ಸೀಟುಗಳನ್ನು ನೀಡಿದ್ದವು. 68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಪಕ್ಷಕ್ಕೆ 35 ಸ್ಥಾನಗಳ ಅಗತ್ಯವಿದೆ. ಹೆಚ್ಚಿನ ಎಕ್ಸಿಟ್ ಪೋಲ್‌ಗಳು ಗುಡ್ಡಗಾಡು ರಾಜ್ಯದಲ್ಲಿ ಬಿಜೆಪಿ ಗರಿಷ್ಠ 40 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿವೆ. ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಪಕ್ಷವು 30-40 ಸ್ಥಾನಗಳನ್ನು, ಬಿಜೆಪಿ 24-34 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ.

ಹಿಮಾಚಲಪ್ರದೇಶದ 68 ಸ್ಥಾನಗಳಿಗೆ ಒಂದೇ ಹಂತದಲ್ಲಿ ನವೆಂಬರ್ 12 ರಂದು ಮತದಾನ ನಡೆದಿತ್ತು.

ಹರಿಯಾಣ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಕುಲದೀಪ್ ಸಿಂಗ್ ರಾಥೋಡ್ ಅವರು ಸಿಪಿಎಂನ ರಾಕೇಶ್ ಸಿಂಘಾ ಅವರಿಗಿಂತ ಕಡಿಮೆ (67 ಮತಗಳು) ಮುನ್ನಡೆ ಸಾಧಿಸಿದ್ದಾರೆ.

ಹಿಮಾಚಲದ ಶಿಮ್ಲಾ ಜಿಲ್ಲೆಯಲ್ಲಿ ಎಂಟು ಕ್ಷೇತ್ರಗಳಿವೆ. ಇದು ಸೇಬುಬೆಳೆಗಾರರ ಪ್ರದೇಶವಾಗಿದೆ. ಈ ಪೈಕಿ ಸದ್ಯ 5ರಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಇದರಲ್ಲಿ ರೋಹ್ರು, ಥಿಯೋಗ್ ಮತ್ತು ಶಿಮ್ಲಾ ಸೇರಿವೆ. ಬಿಜೆಪಿ ಮುಖಂಡ ನರೇಂದ್ರ ಬ್ರಗ್ತಾ ಅವರ ನಿಧನದ ನಂತರ ತೆರವಾದ ಜುಬ್ಬಲ್ ಕೊಟ್‌ಖಾಯ್ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿತ್ತು. ಒಮ್ಮೆ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿರುವ ರಾಂಪುರದಲ್ಲಿ ಬಿಜೆಪಿ ಅಲ್ಪ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದೆ. ಆ್ಯಪಲ್ ಬೆಲ್ಟ್ ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಮಾಜಿ ಸಿಎಂ ಪ್ರೇಮ್ ಕುಮಾರ್ ಧುಮಾಲ್ ಅವರ ಅಧಿಕಾರಾವಧಿಯಲ್ಲಿ ಬಿಜೆಪಿ ಈ ಪ್ರದೇಶದಲ್ಲಿ ಖಾತೆ ತೆರೆದಿತ್ತು.

ಡಾಲ್‌ಹೌಸಿಯಲ್ಲಿ ಕಾಂಗ್ರೆಸ್‌ನ ಆರು ಬಾರಿ ಶಾಸಕಿಯಾಗಿರುವ ಆಶಾ ತಿವಾರಿ ಅವರು ಬಿಜೆಪಿಯ ಡಿಎಸ್ ಠಾಕೂರ್ ವಿರುದ್ಧ ಹಿನ್ನಡೆ ಸಾಧಿಸಿದ್ದಾರೆ.

ಪ್ರತಿ ಐದು ವರ್ಷಗಳಿಗೊಮ್ಮೆ ಪರ್ಯಾಯ ಪಕ್ಷಗಳನ್ನು ಆಯ್ಕೆ ಮಾಡುವ ಹಿಮಾಚಲ ಪ್ರದೇಶದ ರಾಜಕೀಯ ಕುತೂಹಲ ಕೆರಳಿಸಿದೆ. ಆಪರೇಷನ್‌ ಕಮಲದ ಭೀತಿಯು ಕಾಂಗ್ರೆಸ್ ಪಕ್ಷಕ್ಕಿದೆ.

ಚುನಾವಣೆಯ ನಂತರದ ಸನ್ನಿವೇಶವನ್ನು ನಿರ್ವಹಿಸಲು ಬಿಜೆಪಿ ಈಗಾಗಲೇ ತನ್ನ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ಶಿಮ್ಲಾಕ್ಕೆ ಕಳುಹಿಸಿದೆ. ಬಿಜೆಪಿ ಶಾಸಕರು ಖರೀದಿಯಾಗದಂತೆ ನೋಡಿಕೊಳ್ಳುವುದು ಅಥವಾ ಸಮಯ ಬಿದ್ದರೆ ಇತರ ಶಾಸಕರನ್ನು ಬಿಜೆಪಿಯತ್ತ ಸೆಳೆಯುವುದು ಅವರ ಜವಾಬ್ದಾರಿಯಾಗಿದೆ ಎಂದು ಹೇಳಲಾಗುತ್ತಿದೆ.

ಈ ಸಮಯದಲ್ಲಿ ಐವರು ಸ್ವತಂತ್ರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಫಲಿತಾಂಶಗಳನ್ನು ಘೋಷಿಸಿದ ನಂತರ ಈ ಸ್ವತಂತ್ರ ಅಭ್ಯರ್ಥಿಗಳು ಪ್ರಮುಖ ಪಾತ್ರವನ್ನು ವಹಿಸುತ್ತಾರೆ.

ಪ್ರಮುಖ ಸ್ಥಾನವಾದ ಕಸುಂಪ್ಟಿ ಪ್ರಸ್ತುತ ಕಾಂಗ್ರೆಸ್‌ನ ಅನಿರುದ್ಧ್ ಸಿಂಗ್ ಪರವಾಗಿ ಹೋಗುತ್ತಿದೆ. ಅವರು ಬಿಜೆಪಿಯ ಸುರೇಶ್ ಭಾರದ್ವಾಜ್ ಅವರಿಗಿಂತ ಸುಮಾರು 4,500 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...