Homeಮುಖಪುಟತೂಗು ಸೇತುವೆ ದುರಂತದ ಮೊರ್ಬಿಯಲ್ಲಿ ಗೆಲುವಿನತ್ತ ಬಿಜೆಪಿ ಅಭ್ಯರ್ಥಿ

ತೂಗು ಸೇತುವೆ ದುರಂತದ ಮೊರ್ಬಿಯಲ್ಲಿ ಗೆಲುವಿನತ್ತ ಬಿಜೆಪಿ ಅಭ್ಯರ್ಥಿ

- Advertisement -
- Advertisement -

ಗುಜರಾತ್‌ನಲ್ಲಿ ಬಿಜೆಪಿ ಅಭೂತಪೂರ್ವ ದಿಗ್ವಿಜಯ ಸಾಧಿಸುತ್ತಿದ್ದು ಮೊರ್ಬಿಯಲ್ಲಿ ಗೆಲುವಿನತ್ತ ಮುನ್ನುಗ್ಗುತ್ತಿದೆ. ಭೀಕರ ಸೇತುವೆ ಕುಸಿತದಿಂದಾಗಿ 130ಕ್ಕೂ ಹೆಚ್ಚು ಜನರ ದುರ್ಮಣದ ಮೂಲಕ ಸುದ್ದಿಯಾಗಿದ್ದ ಮೊರ್ಬಿಯಲ್ಲಿ ಬಿಜೆಪಿ ಗೆಲುವಿನತ್ತ ಹೆಜ್ಜೆ ಇರಿಸಿದೆ.

ಅಕ್ಟೋಬರ್ 30ರಂದು ಘಟಿಸಿದ ಭೀಕರ ಸೇತುವೆ ಕುಸಿತದಲ್ಲಿ 130ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಸೇತುವೆ ದುರಂತದ ನಂತರ ಗಮನ ಸೆಳೆದಿದ್ದ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿರುವ ಬಿಜೆಪಿಯ ಕಾಂತಿಭಾಯಿ ಅಮೃತಿಯಾ ಅವರು ಗೆಲುವಿನ ಹಾದಿಯಲ್ಲಿದ್ದಾರೆ.

ಸೇತುವೆ ದುರಸ್ತಿ ಮತ್ತು ನಿರ್ವಹಣೆಯ ಕೆಲಸವನ್ನು ಖಾಸಗಿ ಸಂಸ್ಥೆಗೆ ವಹಿಸುವಾಗ ನಿಯಮಗಳನ್ನು ಸ್ಥಳೀಯ ಆಡಳಿತ ಉಲ್ಲಂಘಿಸಿದೆ ಎಂದು ಆರೋಪಿಸಲಾಗಿತ್ತು. ಸೇತುವೆ ದುರಂತದ ಬಳಿಕ ಅಮೃತಿಯಾ ಅವರು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಓಡಾಡುತ್ತಿದ್ದ ವಿಡಿಯೊ ವೈರಲ್ ಆಗಿತ್ತು. ಜಯಂತಿ ಪಟೇಲ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಆಮ್ ಆದ್ಮಿ ಪಕ್ಷವು ಪಂಕಜ್ ರಣಸಾರಿಯಾ ಅವರನ್ನು ಕಣಕ್ಕಿಳಿಸಿದೆ.

ಪ್ರಾಥಮಿಕವಾಗಿ ಗಡಿಯಾರ ತಯಾರಕ ಸಂಸ್ಥೆ ಎಂದು ಕರೆಯಲ್ಪಡುವ ಒರೆವಾ ಕಂಪನಿಗೆ ವಸಾಹತುಶಾಹಿ ಕಾಲದ ಸೇತುವೆಯ ದುರಸ್ತಿ ಕೆಲಸವನ್ನು ವಹಿಸಲಾಗಿತ್ತು. ಆದರೆ ಕಂಪನಿಯ ಮಾಲೀಕರನ್ನು ಇನ್ನೂ ಬಂಧಿಸಬೇಕಿದೆ.

ಪಾಟಿದಾರ್ ಪ್ರಾಬಲ್ಯವಿರುವ ಮೊರ್ಬಿ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಬ್ರಿಜೇಶ್ ಮಿರ್ಜಾ ಬದಲಿಗೆ ಮಾಜಿ ಶಾಸಕ ಕಾಂತಿಲಾಲ್ ಅಮೃತಿಯ ಅವರನ್ನು ಬಿಜೆಪಿ ಕಣಕ್ಕಿಳಿಸಿತ್ತು.

ಗುಜರಾತಿನ ಶತಮಾನದಷ್ಟು ಹಳೆಯದಾದ ಸೇತುವೆಯ ನವೀಕರಣ ನಡೆಸಿದ ಖಾಸಗಿ ಸಂಸ್ಥೆಯು ಕೆಲವು ಹಳೆಯ ತಂತಿಗಳನ್ನೂ ತನ್ನ ಏಳು ತಿಂಗಳ ನವೀಕರಣದ ಸಮಯದಲ್ಲಿ ಬದಲಿಸಿಲ್ಲ ಎಂದು ಮೂಲಗಳು ತಿಳಿಸಿದ್ದವು.

‘ಸೇತುವೆಯನ್ನು ನವೀಕರಿಸಿದ ಗುಜರಾತ್ ಮೂಲದ ಗಡಿಯಾರ ತಯಾರಿಕಾ ಒರೆವಾ ಸಂಸ್ಥೆಗೆ ಮಾರ್ಚ್‌ನಲ್ಲಿ ಮೋರ್ಬಿ ನಗರ ಪುರಸಭೆಯಿಂದ ಗುತ್ತಿಗೆ ನೀಡಲಾಯಿತು. ಆದರೆ ಯಾವುದೇ ಟೆಂಡರ್ ನೀಡುವ ಕ್ರಮ ಜರುಗಿಸಿರಲಿಲ್ಲ’ ಎಂದು ಒಪ್ಪಂದದ ಕಡತಗಳು ಹೇಳುತ್ತಿವೆ. ಸೇತುವೆಯಲ್ಲಿ ಕಟ್ಟಲಾಗಿದ್ದ ಕೆಲವು ಹಳೆಯ ತಂತಿಗಳನ್ನು ನವೀಕರಣದ ನಂತರವೂ ಉಳಿಸಿಕೊಳ್ಳಲಾಗಿದೆ ಎಂಬ ಸಂಗತಿ ಹೊರಬಿದ್ದಿತ್ತು.

“ಸೇತುವೆಯನ್ನು ಮತ್ತೆ ತೆರೆಯುವ ಬಗ್ಗೆ ಓರೆವಾ ಸಂಸ್ಥೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿರಲಿಲ್ಲ. ಹಾಗೆ ಮಾಡಲು ಕಂಪನಿಗೆ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡಲಾಗಿಲ್ಲ” ಎಂದು ಪುರಸಭೆಯ ಮುಖ್ಯಾಧಿಕಾರಿ ಸಂದೀಪ್‌ಸಿಂಗ್ ಝಾಲಾ ಹೇಳಿದ್ದರು.

ಓರೆವಾ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ಭಾಯ್ ಪಟೇಲ್ ಮಾತನಾಡುತ್ತಾ, “ಕಂಪನಿಯು ₹ 2 ಕೋಟಿ ವೆಚ್ಚದಲ್ಲಿ 100 ರಷ್ಟು ನವೀಕರಣವನ್ನು ನೆರವೇರಿಸಿದೆ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...