Homeಮುಖಪುಟತೂಗು ಸೇತುವೆ ದುರಂತದ ಮೊರ್ಬಿಯಲ್ಲಿ ಗೆಲುವಿನತ್ತ ಬಿಜೆಪಿ ಅಭ್ಯರ್ಥಿ

ತೂಗು ಸೇತುವೆ ದುರಂತದ ಮೊರ್ಬಿಯಲ್ಲಿ ಗೆಲುವಿನತ್ತ ಬಿಜೆಪಿ ಅಭ್ಯರ್ಥಿ

- Advertisement -
- Advertisement -

ಗುಜರಾತ್‌ನಲ್ಲಿ ಬಿಜೆಪಿ ಅಭೂತಪೂರ್ವ ದಿಗ್ವಿಜಯ ಸಾಧಿಸುತ್ತಿದ್ದು ಮೊರ್ಬಿಯಲ್ಲಿ ಗೆಲುವಿನತ್ತ ಮುನ್ನುಗ್ಗುತ್ತಿದೆ. ಭೀಕರ ಸೇತುವೆ ಕುಸಿತದಿಂದಾಗಿ 130ಕ್ಕೂ ಹೆಚ್ಚು ಜನರ ದುರ್ಮಣದ ಮೂಲಕ ಸುದ್ದಿಯಾಗಿದ್ದ ಮೊರ್ಬಿಯಲ್ಲಿ ಬಿಜೆಪಿ ಗೆಲುವಿನತ್ತ ಹೆಜ್ಜೆ ಇರಿಸಿದೆ.

ಅಕ್ಟೋಬರ್ 30ರಂದು ಘಟಿಸಿದ ಭೀಕರ ಸೇತುವೆ ಕುಸಿತದಲ್ಲಿ 130ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಸೇತುವೆ ದುರಂತದ ನಂತರ ಗಮನ ಸೆಳೆದಿದ್ದ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿರುವ ಬಿಜೆಪಿಯ ಕಾಂತಿಭಾಯಿ ಅಮೃತಿಯಾ ಅವರು ಗೆಲುವಿನ ಹಾದಿಯಲ್ಲಿದ್ದಾರೆ.

ಸೇತುವೆ ದುರಸ್ತಿ ಮತ್ತು ನಿರ್ವಹಣೆಯ ಕೆಲಸವನ್ನು ಖಾಸಗಿ ಸಂಸ್ಥೆಗೆ ವಹಿಸುವಾಗ ನಿಯಮಗಳನ್ನು ಸ್ಥಳೀಯ ಆಡಳಿತ ಉಲ್ಲಂಘಿಸಿದೆ ಎಂದು ಆರೋಪಿಸಲಾಗಿತ್ತು. ಸೇತುವೆ ದುರಂತದ ಬಳಿಕ ಅಮೃತಿಯಾ ಅವರು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಓಡಾಡುತ್ತಿದ್ದ ವಿಡಿಯೊ ವೈರಲ್ ಆಗಿತ್ತು. ಜಯಂತಿ ಪಟೇಲ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಆಮ್ ಆದ್ಮಿ ಪಕ್ಷವು ಪಂಕಜ್ ರಣಸಾರಿಯಾ ಅವರನ್ನು ಕಣಕ್ಕಿಳಿಸಿದೆ.

ಪ್ರಾಥಮಿಕವಾಗಿ ಗಡಿಯಾರ ತಯಾರಕ ಸಂಸ್ಥೆ ಎಂದು ಕರೆಯಲ್ಪಡುವ ಒರೆವಾ ಕಂಪನಿಗೆ ವಸಾಹತುಶಾಹಿ ಕಾಲದ ಸೇತುವೆಯ ದುರಸ್ತಿ ಕೆಲಸವನ್ನು ವಹಿಸಲಾಗಿತ್ತು. ಆದರೆ ಕಂಪನಿಯ ಮಾಲೀಕರನ್ನು ಇನ್ನೂ ಬಂಧಿಸಬೇಕಿದೆ.

ಪಾಟಿದಾರ್ ಪ್ರಾಬಲ್ಯವಿರುವ ಮೊರ್ಬಿ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಬ್ರಿಜೇಶ್ ಮಿರ್ಜಾ ಬದಲಿಗೆ ಮಾಜಿ ಶಾಸಕ ಕಾಂತಿಲಾಲ್ ಅಮೃತಿಯ ಅವರನ್ನು ಬಿಜೆಪಿ ಕಣಕ್ಕಿಳಿಸಿತ್ತು.

ಗುಜರಾತಿನ ಶತಮಾನದಷ್ಟು ಹಳೆಯದಾದ ಸೇತುವೆಯ ನವೀಕರಣ ನಡೆಸಿದ ಖಾಸಗಿ ಸಂಸ್ಥೆಯು ಕೆಲವು ಹಳೆಯ ತಂತಿಗಳನ್ನೂ ತನ್ನ ಏಳು ತಿಂಗಳ ನವೀಕರಣದ ಸಮಯದಲ್ಲಿ ಬದಲಿಸಿಲ್ಲ ಎಂದು ಮೂಲಗಳು ತಿಳಿಸಿದ್ದವು.

‘ಸೇತುವೆಯನ್ನು ನವೀಕರಿಸಿದ ಗುಜರಾತ್ ಮೂಲದ ಗಡಿಯಾರ ತಯಾರಿಕಾ ಒರೆವಾ ಸಂಸ್ಥೆಗೆ ಮಾರ್ಚ್‌ನಲ್ಲಿ ಮೋರ್ಬಿ ನಗರ ಪುರಸಭೆಯಿಂದ ಗುತ್ತಿಗೆ ನೀಡಲಾಯಿತು. ಆದರೆ ಯಾವುದೇ ಟೆಂಡರ್ ನೀಡುವ ಕ್ರಮ ಜರುಗಿಸಿರಲಿಲ್ಲ’ ಎಂದು ಒಪ್ಪಂದದ ಕಡತಗಳು ಹೇಳುತ್ತಿವೆ. ಸೇತುವೆಯಲ್ಲಿ ಕಟ್ಟಲಾಗಿದ್ದ ಕೆಲವು ಹಳೆಯ ತಂತಿಗಳನ್ನು ನವೀಕರಣದ ನಂತರವೂ ಉಳಿಸಿಕೊಳ್ಳಲಾಗಿದೆ ಎಂಬ ಸಂಗತಿ ಹೊರಬಿದ್ದಿತ್ತು.

“ಸೇತುವೆಯನ್ನು ಮತ್ತೆ ತೆರೆಯುವ ಬಗ್ಗೆ ಓರೆವಾ ಸಂಸ್ಥೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿರಲಿಲ್ಲ. ಹಾಗೆ ಮಾಡಲು ಕಂಪನಿಗೆ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡಲಾಗಿಲ್ಲ” ಎಂದು ಪುರಸಭೆಯ ಮುಖ್ಯಾಧಿಕಾರಿ ಸಂದೀಪ್‌ಸಿಂಗ್ ಝಾಲಾ ಹೇಳಿದ್ದರು.

ಓರೆವಾ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ಭಾಯ್ ಪಟೇಲ್ ಮಾತನಾಡುತ್ತಾ, “ಕಂಪನಿಯು ₹ 2 ಕೋಟಿ ವೆಚ್ಚದಲ್ಲಿ 100 ರಷ್ಟು ನವೀಕರಣವನ್ನು ನೆರವೇರಿಸಿದೆ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...