Homeಮುಖಪುಟಗುಜರಾತ್‌ನಲ್ಲಿ ಎಎಪಿಯವರು ಕಾಂಗ್ರೆಸ್ ಮತ ಕಬಳಿಸಿದ್ದಾರೆ: ಸಿದ್ದರಾಮಯ್ಯ

ಗುಜರಾತ್‌ನಲ್ಲಿ ಎಎಪಿಯವರು ಕಾಂಗ್ರೆಸ್ ಮತ ಕಬಳಿಸಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ಗುಜರಾತ್‌ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ಇಲ್ಲ. ಆಮ್‌ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ, ಬಹುತೇಕ ಕ್ಷೇತ್ರಗಳಲ್ಲಿ ನಮ್ಮ ಮತಗಳನ್ನೇ ಕಬಳಿಸಿದ್ದಾರೆ. ಇದು ಬಿಜೆಪಿಯ ಗೆಲುವಿಗೆ ಹೆಚ್ಚು ಸಹಕಾರಿಯಾಗಿದೆ ಎಂಬುದರಲ್ಲಿ ಯಾವ ಸಂಶಯವಿಲ್ಲ. ಹಿಮಾಚಲ ಪ್ರದೇಶದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದುದ್ದು ನಮಗೆ ಸ್ವಲ್ಪ ಮಟ್ಟಿಗೆ ಅನುಕೂಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ಗುಜರಾತ್‌ ಹಾಗೂ ಹಿಮಾಚಲಪ್ರದೇಶದ ವಿಧಾನಸಭೆ ಚುನಾವಣೆ ಕುರಿತು ಪ್ರತಿಕ್ರಿಯಿಸಿರುವ ಅವರು, “ಒಂದು ರಾಜ್ಯದ ಚುನಾವಣಾ ಫಲಿತಾಂಶ ಇನ್ನೊಂದು ರಾಜ್ಯದ ಚುನಾವಣಾ ಫಲಿತಾಂಶದ ಮೇಲೆ ಯಾವ ಪ್ರಭಾವವನ್ನೂ ಬೀರಲ್ಲ. ಹಾಗೆ ಯೋಚಿಸುವುದಾದರೆ ದೆಹಲಿ ಪಾಲಿಕೆ ಚುನಾವಣೆಯ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪ್ರಭಾವ ಬೀರುತ್ತದಾ? ಆಯಾ ರಾಜ್ಯದ ಸಮಸ್ಯೆಗಳು ಮತ್ತು ಸ್ಥಳೀಯ ವಿಚಾರಗಳ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ. ನಮ್ಮ ರಾಜ್ಯದಲ್ಲಿ ಅತೀ ಭ್ರಷ್ಟ ಸರ್ಕಾರವಿದೆ, ಇಲ್ಲಿ ಕಾಂಗ್ರೆಸ್‌ ಪಕ್ಷ ಸಂಘಟನಾ ದೃಷ್ಟಿಯಿಂದ ಹೆಚ್ಚು ಶಕ್ತಿಶಾಲಿಯಾಗಿದೆ. ಹಾಗಾಗಿ ಗುಜರಾತ್‌ ಚುನಾವಣಾ ಫಲಿತಾಂಶ ಇಲ್ಲಿನ ಚುನಾವಣೆಯ ಮೇಲೆ ಯಾವ ಪ್ರಭಾವ ಬೀರದು” ಎಂದು ತಿಳಿಸಿದ್ದಾರೆ.

“ಗುಜರಾತಿನಲ್ಲಿ ಬಿಜೆಪಿ ಪಕ್ಷವೇ ಆಮ್‌ ಆದ್ಮಿ ಪಕ್ಷಕ್ಕೆ ಹಣ ನೀಡಿ ಕಾಂಗ್ರೆಸ್‌ ಮತಗಳನ್ನು ಒಡೆಯುವ ತಂತ್ರ ಮಾಡಿದೆ ಎಂಬ ಸುದ್ದಿ ಇದೆ. ಇದೇ ರೀತಿ ಜೆಡಿಎಸ್‌ ಜೊತೆ ಬಿಜೆಪಿ ನಮ್ಮ ರಾಜ್ಯದಲ್ಲಿ ತಂತ್ರಗಾರಿಕೆ ಮಾಡಬಹುದು, ಆದರೆ ಇದರಿಂದ ಅವರಿಬ್ಬರಿಗೂ ಯಾವ ಲಾಭವಾಗಲ್ಲ” ಎಂದಿದ್ದಾರೆ.

“ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ. ರಾಜ್ಯ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ, ನಿಷ್ಕ್ರಿಯತೆ ಇವುಗಳು ಚುನಾವಣೆಯಲ್ಲಿ ಮುಖ್ಯವಾಗಲಿದೆ. ಲಂಚ ನೀಡದೆ ಯಾವ ಕೆಲಸಗಳು ಇಲ್ಲಿ ಆಗುತ್ತಿಲ್ಲ. 40% ಕಮಿಷನ್‌ ಸರ್ಕಾರ ಗುಜರಾತ್‌ ನಲ್ಲಿ ಇದೆ ಯಾರೂ ಹೇಳಿಲ್ಲ, ಆದರೆ ರಾಜ್ಯದ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರ ಎಂದು ಕುಖ್ಯಾತಿ ಗಳಿಸಿದೆ” ಎಂದು ಟೀಕಿಸಿದ್ದಾರೆ.

“ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಯಾವ ತಂತ್ರಗಾರಿಕೆಯೂ ಬೇಡ, ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ. ಈ ಬಾರಿ ಬಿಜೆಪಿಯನ್ನು ಸೋಲಿನಿಂದ ಕಾಪಾಡಲು ಯಾರಿಂದಲೂ ಸಾಧ್ಯವಿಲ್ಲ. ನರೇಂದ್ರ ಮೋದಿ ಅವರು ವಾಸ ಮಾಡುವ ದೆಹಲಿಯಲ್ಲೇ ಅವರ ಹವಾ ಇಲ್ಲ. ಇನ್ನು ಇಲ್ಲಿ ಇರೋಕೆ ಸಾಧ್ಯನಾ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...