Homeಮುಖಪುಟಗುಜರಾತ್‌ನಲ್ಲಿ ಎಎಪಿಯವರು ಕಾಂಗ್ರೆಸ್ ಮತ ಕಬಳಿಸಿದ್ದಾರೆ: ಸಿದ್ದರಾಮಯ್ಯ

ಗುಜರಾತ್‌ನಲ್ಲಿ ಎಎಪಿಯವರು ಕಾಂಗ್ರೆಸ್ ಮತ ಕಬಳಿಸಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ಗುಜರಾತ್‌ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ಇಲ್ಲ. ಆಮ್‌ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ, ಬಹುತೇಕ ಕ್ಷೇತ್ರಗಳಲ್ಲಿ ನಮ್ಮ ಮತಗಳನ್ನೇ ಕಬಳಿಸಿದ್ದಾರೆ. ಇದು ಬಿಜೆಪಿಯ ಗೆಲುವಿಗೆ ಹೆಚ್ಚು ಸಹಕಾರಿಯಾಗಿದೆ ಎಂಬುದರಲ್ಲಿ ಯಾವ ಸಂಶಯವಿಲ್ಲ. ಹಿಮಾಚಲ ಪ್ರದೇಶದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದುದ್ದು ನಮಗೆ ಸ್ವಲ್ಪ ಮಟ್ಟಿಗೆ ಅನುಕೂಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ಗುಜರಾತ್‌ ಹಾಗೂ ಹಿಮಾಚಲಪ್ರದೇಶದ ವಿಧಾನಸಭೆ ಚುನಾವಣೆ ಕುರಿತು ಪ್ರತಿಕ್ರಿಯಿಸಿರುವ ಅವರು, “ಒಂದು ರಾಜ್ಯದ ಚುನಾವಣಾ ಫಲಿತಾಂಶ ಇನ್ನೊಂದು ರಾಜ್ಯದ ಚುನಾವಣಾ ಫಲಿತಾಂಶದ ಮೇಲೆ ಯಾವ ಪ್ರಭಾವವನ್ನೂ ಬೀರಲ್ಲ. ಹಾಗೆ ಯೋಚಿಸುವುದಾದರೆ ದೆಹಲಿ ಪಾಲಿಕೆ ಚುನಾವಣೆಯ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪ್ರಭಾವ ಬೀರುತ್ತದಾ? ಆಯಾ ರಾಜ್ಯದ ಸಮಸ್ಯೆಗಳು ಮತ್ತು ಸ್ಥಳೀಯ ವಿಚಾರಗಳ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ. ನಮ್ಮ ರಾಜ್ಯದಲ್ಲಿ ಅತೀ ಭ್ರಷ್ಟ ಸರ್ಕಾರವಿದೆ, ಇಲ್ಲಿ ಕಾಂಗ್ರೆಸ್‌ ಪಕ್ಷ ಸಂಘಟನಾ ದೃಷ್ಟಿಯಿಂದ ಹೆಚ್ಚು ಶಕ್ತಿಶಾಲಿಯಾಗಿದೆ. ಹಾಗಾಗಿ ಗುಜರಾತ್‌ ಚುನಾವಣಾ ಫಲಿತಾಂಶ ಇಲ್ಲಿನ ಚುನಾವಣೆಯ ಮೇಲೆ ಯಾವ ಪ್ರಭಾವ ಬೀರದು” ಎಂದು ತಿಳಿಸಿದ್ದಾರೆ.

“ಗುಜರಾತಿನಲ್ಲಿ ಬಿಜೆಪಿ ಪಕ್ಷವೇ ಆಮ್‌ ಆದ್ಮಿ ಪಕ್ಷಕ್ಕೆ ಹಣ ನೀಡಿ ಕಾಂಗ್ರೆಸ್‌ ಮತಗಳನ್ನು ಒಡೆಯುವ ತಂತ್ರ ಮಾಡಿದೆ ಎಂಬ ಸುದ್ದಿ ಇದೆ. ಇದೇ ರೀತಿ ಜೆಡಿಎಸ್‌ ಜೊತೆ ಬಿಜೆಪಿ ನಮ್ಮ ರಾಜ್ಯದಲ್ಲಿ ತಂತ್ರಗಾರಿಕೆ ಮಾಡಬಹುದು, ಆದರೆ ಇದರಿಂದ ಅವರಿಬ್ಬರಿಗೂ ಯಾವ ಲಾಭವಾಗಲ್ಲ” ಎಂದಿದ್ದಾರೆ.

“ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ. ರಾಜ್ಯ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ, ನಿಷ್ಕ್ರಿಯತೆ ಇವುಗಳು ಚುನಾವಣೆಯಲ್ಲಿ ಮುಖ್ಯವಾಗಲಿದೆ. ಲಂಚ ನೀಡದೆ ಯಾವ ಕೆಲಸಗಳು ಇಲ್ಲಿ ಆಗುತ್ತಿಲ್ಲ. 40% ಕಮಿಷನ್‌ ಸರ್ಕಾರ ಗುಜರಾತ್‌ ನಲ್ಲಿ ಇದೆ ಯಾರೂ ಹೇಳಿಲ್ಲ, ಆದರೆ ರಾಜ್ಯದ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರ ಎಂದು ಕುಖ್ಯಾತಿ ಗಳಿಸಿದೆ” ಎಂದು ಟೀಕಿಸಿದ್ದಾರೆ.

“ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಯಾವ ತಂತ್ರಗಾರಿಕೆಯೂ ಬೇಡ, ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ. ಈ ಬಾರಿ ಬಿಜೆಪಿಯನ್ನು ಸೋಲಿನಿಂದ ಕಾಪಾಡಲು ಯಾರಿಂದಲೂ ಸಾಧ್ಯವಿಲ್ಲ. ನರೇಂದ್ರ ಮೋದಿ ಅವರು ವಾಸ ಮಾಡುವ ದೆಹಲಿಯಲ್ಲೇ ಅವರ ಹವಾ ಇಲ್ಲ. ಇನ್ನು ಇಲ್ಲಿ ಇರೋಕೆ ಸಾಧ್ಯನಾ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...