Homeಮುಖಪುಟವಡ್ಗಾಮ್‌ ಫಲಿತಾಂಶ ಘೋಷಣೆಗೂ ಮುನ್ನವೇ ಜಿಗ್ನೇಶ್ ಸೋತಿದ್ದಾರೆಂದು ಮಾಧ್ಯಮಗಳು ವರದಿ ಪ್ರಕಟಿಸಿದ್ದೇಕೆ?

ವಡ್ಗಾಮ್‌ ಫಲಿತಾಂಶ ಘೋಷಣೆಗೂ ಮುನ್ನವೇ ಜಿಗ್ನೇಶ್ ಸೋತಿದ್ದಾರೆಂದು ಮಾಧ್ಯಮಗಳು ವರದಿ ಪ್ರಕಟಿಸಿದ್ದೇಕೆ?

- Advertisement -
- Advertisement -

ದಲಿತ ಯುವ ನಾಯಕ, ಗುಜರಾತ್‌ನ ವಡ್ಗಾಮ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿಗ್ನೇಶ್ ಮೇವಾನಿ ಸೋತಿದ್ದಾರೆಂದು ಫಲಿತಾಂಶ ಪ್ರಕಟಣೆಗೂ ಮುನ್ನವೇ ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಗುಜರಾತ್‌ನಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋತಿದ್ದರೂ ಜಿಗ್ನೇಶ್‌ ಮೇವಾನಿ ಗೆಲುವಿನ ನಗೆ ಬೀರಿದ್ದಾರೆ. 2017ರ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಮೇವಾನಿ, ಈ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಆರಂಭಿಕ ಹಿನ್ನಡೆಯನ್ನು ಅನುಭವಿಸಿದರೂ ಸವಾಲುಗಳ ನಡುವೆ ಗೆಲುವಿನ ನಗೆಬೀರಿದ್ದಾರೆ. ಕೊನೆಯ ಹಂತದ ಮತ ಎಣಿಕೆಯವರೆಗೂ ಸೋಲು ಗೆಲುವಿನ ಹಾವು ಏಣಿ ನಡೆದಿತ್ತು.

ವಡ್ಗಾಮ್ ಪರಿಶಿಷ್ಟ ಜಾತಿಗಳಿಗೆ ಮೀಸಲಾದ ಕ್ಷೇತ್ರವಾಗಿದ್ದು, ಮುಸ್ಲಿಂ ಮತದಾರರು ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ. ಮುಸ್ಲಿಂ ಮತದಾರರು ಸುಮಾರು 90,000 ಇದ್ದಾರೆಂದು ಅಂದಾಜಿಸಲಾಗಿದೆ. ವಡ್ಗಾಮ್‌ನ 2.94 ಲಕ್ಷ ಮತದಾರರಲ್ಲಿ ಮೂರನೇ ಒಂದು ಭಾಗದಷ್ಟು ಮುಸ್ಲಿಮರಿದ್ದಾರೆ. ಸುಮಾರು 44,000 ದಲಿತ ಮತದಾರರು ಮತ್ತು 15,000 ರಜಪೂತರು ಇದ್ದಾರೆ. ಉಳಿದಂತೆ ಒಬಿಸಿ ಸಮುದಾಯವಿದೆ.

ಶೇ.48 ಮತ ಹಂಚಿಕೆಯೊಂದಿಗೆ ಒಟ್ಟು 94,765 ಮತಗಳನ್ನು ಗಳಿಸುವಲ್ಲಿ ಜಿಗ್ನೇಶ್‌ ಯಶಸ್ವಿಯಾಗಿದ್ದಾರೆ. 89,837 ಮತಗಳನ್ನು ಗಳಿಸಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮಣಿಭಾಯ್ ಜೇತಾಭಾಯಿ ವಘೇಲಾ ಅವರನ್ನು ಸೋಲಿಸಿ 4,922 ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಎಎಪಿ ಅಭ್ಯರ್ಥಿ ದಲ್ಪತ್ ಭಾಟಿಯಾ ಕೂಡ ಈ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು.

ವಡ್ಗಾಮ್ ಕ್ಷೇತ್ರದ ಫಲಿತಾಂಶದ ವಿಚಾರದಲ್ಲಿ ಕೆಲವು ಮಾಧ್ಯಮಗಳು ಮಾಡಿದ ಸುಳ್ಳು ಸುದ್ದಿಗಳು ಗಮನ ಸೆಳೆದಿವೆ. ಜಿಗ್ನೇಶ್ ಮೇವಾನಿ ಸೋತಿದ್ದಾರೆಂದು ಅಂತಿಮ ಫಲಿತಾಂಶ ಹೊರಬೀಳುವ ಮೊದಲೇ ಸುಳ್ಳು ಸುದ್ದಿಗಳನ್ನು ಪ್ರಕಟಿಸಿರುವುದು ಅನುಮಾನಗಳಿಗೆ ಆಸ್ಪದ ನೀಡಿದೆ. ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿದ ಬಳಿಕ ಸುದ್ದಿಯನ್ನು ತಿದ್ದಿವೆ ಅಥವಾ ಡಿಲೀಟ್ ಮಾಡಿವೆ. ಆ ಮೂಲಕ ಅಪಹಾಸ್ಯಕ್ಕೆ ಈಡಾಗಿವೆ. ಕನ್ನಡದ ಜನಪ್ರಿಯ ಮಾಧ್ಯಮವಾದ ‘ವಿಜಯಕರ್ನಾಟಕ’, ಇಂಗ್ಲಿಷ್‌ನ ‘ಹಿಂದೂಸ್ತಾನ್ ಟೈಮ್ಸ್‌’, ‘ದಿ ವೀಕ್‌’ ಸಂಸ್ಥೆಯ ಜಾಲತಾಣಗಳಲ್ಲಿ ಜಿಗ್ನೇಶ್ ಸೋತಿರುವುದಾಗಿ ವರದಿ ಪ್ರಕಟಿಸಲಾಗಿತ್ತು.

May be an image of 1 person and text that says "23C ndia World HT Hindustan Times Cities Entertainment Cricket Congress's. Jignesh Mevani loses Vadgam; BJP's Vaghela wins seat Lifestyle Astrology Gujarat Assembly Election Updated on Dec 08, 2022 02:13 PM IST The 42-year-old Dalit leader Jigneshkumar Natvarlal Mevani ost to Congress turncoat and Bharatiya Janata Party candidate Manibhai Vaghela bya marginof 1,525 votes."
ಹಿಂದೂಸ್ತಾನ್ ಟೈಮ್ಸ್‌ ವರದಿ
‘ವಿಜಯ ಕರ್ನಾಟಕ’ ಪತ್ರಿಕೆ ಮಾಡಿದ್ದ ಟ್ವೀಟ್
‘ದಿ ವೀಕ್‌’ ಪ್ರಕಟಿಸಿದ್ದ ಸುದ್ದಿ ಲಿಂಕ್‌

ಸುಳ್ಳು ಸುದ್ದಿ ವರದಿ ಮಾಡಿದ ಬಳಿಕ ಮಾಧ್ಯಮಗಳು ಮಾಹಿತಿಯನ್ನು ತಿದ್ದಿವೆ. ಆದರೆ ವರದಿಗಳನ್ನು ಸರಿಪಡಿಸುವ ಮೊದಲೇ ಓದುಗರು ಹಂಚಿಕೊಂಡಿರುವ ಸುದ್ದಿಯ ಸ್ಕ್ರೀನ್‌ ಶಾಟ್‌ಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ನಂಬಿಕಾರ್ಹ ಸುದ್ದಿ ಜಾಲತಾಣಗಳೇ ಸುಳ್ಳು ಸುದ್ದಿಪ್ರಕಟಿಸಿರುವುದು ಏತಕ್ಕೆಂಬ ಪ್ರಶ್ನೆ ಉಳಿದಿದೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಯುವ ಹೋರಾಟಗಾರ ಸರೋವರ್‌ ಬೆಂಕಿಕೆರೆ, “ಕೆಲವು ಮಾಧ್ಯಮಗಳಲ್ಲಿ ಬಂದ ವರದಿಯನ್ನು ನಿಜವೆಂದೇ ಭಾವಿಸಿದ್ದೆವು. ಜಿಗ್ನೇಶ್ ಸೋತಿದ್ದಾರೆಂದು ನಿರಾಶೆಯಾಗಿತ್ತು. ಊನಾ ಚಳವಳಿಯ ಮೂಲಕ ಮುಂಚೂಣಿಗೆ ಬಂದ ಮೇವಾನಿ ಅವರನ್ನು ಸೋಲಿಸಲು ಬಿಜೆಪಿ ಶತಪ್ರಯತ್ನ ಮಾಡಿರುವುದನ್ನು ಗಮನಿಸಿದ್ದೆವು. ಆದರೆ ಮಾಧ್ಯಮಗಳಿಗೂ ಈ ಧಾವಂತವಿದೆ ಎಂಬ ಭಾವನೆಯನ್ನು ಅವುಗಳು ಪ್ರಕಟಿಸಿದ ಸುದ್ದಿಗಳು ಧ್ವನಿಸಿದವು. ಅಂತಿಮವಾಗಿ ಜಿಗ್ನೇಶ್ ಗೆಲುವು ಸಾಧಿಸಿದ್ದಾರೆಂದು ವರದಿಗಳು ಬಂದಾಗ, ಗೊಂದಲ ಉಂಟಾಯಿತು. ಜಿಗ್ನೇಶ್ ಸೋತಿದ್ದಾರೋ, ಗೆದ್ದಿದ್ದಾರೋ ಎಂದು ಮತ್ತೆ ಮತ್ತೆ ಹಲವು ಸುದ್ದಿವಾಹಿನಿಗಳ ವರದಿಗಳನ್ನು ಪರಿಶೀಲಿಸಬೇಕಾಯಿತು. ಮಾಧ್ಯಮಗಳು ಪಕ್ಷಪಾತಿಯಾಗಿ ವರದಿಯನ್ನು ಪ್ರಕಟಿಸಿವೆಯೇ ಎಂಬ ಅನುಮಾನ ಕಾಡಿತು. ವರದಿ ಬರೆಯುವ ಮುನ್ನ ಮಾಹಿತಿಯನ್ನು ಖಚಿತಪಡಿಸಿಕೊಳ್ಳುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಮುಗ್ದ ಓದುಗರನ್ನು ದಿಕ್ಕುತಪ್ಪಿಸಬಾರದು” ಎಂದು ಆಶಿಸಿದರು.

“ಜಿಗ್ನೇಶ್ ಮೇವಾನಿಯವರನ್ನು ಹೇಗಾದರೂ ಸರಿ (ಕಳ್ಳ ದಾರಿಯಿಂದ) ಸೋಲಿಸಿಯೇ ಸೋಲಿಸುತ್ತೇವೆ ಎಂಬ ಮಾಹಿತಿಯನ್ನು ಬಿಜೆಪಿಯವರು ಮಾಧ್ಯಮಗಳಿಗೆ ಮೊದಲೇ ತಿಳಿಸಿರುವ ಸಾಧ್ಯತೆಯೂ ಇರಬಹುದು, ಅದಕ್ಕಾಗಿಯೇ ಮಾಧ್ಯಮಗಳು ಹೀಗೆ ಸುದ್ದಿ ಮಾಡಿರಲು ಸಾಧ್ಯವಿದೆ” ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...