Homeಮುಖಪುಟವಡ್ಗಾಮ್‌ ಫಲಿತಾಂಶ ಘೋಷಣೆಗೂ ಮುನ್ನವೇ ಜಿಗ್ನೇಶ್ ಸೋತಿದ್ದಾರೆಂದು ಮಾಧ್ಯಮಗಳು ವರದಿ ಪ್ರಕಟಿಸಿದ್ದೇಕೆ?

ವಡ್ಗಾಮ್‌ ಫಲಿತಾಂಶ ಘೋಷಣೆಗೂ ಮುನ್ನವೇ ಜಿಗ್ನೇಶ್ ಸೋತಿದ್ದಾರೆಂದು ಮಾಧ್ಯಮಗಳು ವರದಿ ಪ್ರಕಟಿಸಿದ್ದೇಕೆ?

- Advertisement -
- Advertisement -

ದಲಿತ ಯುವ ನಾಯಕ, ಗುಜರಾತ್‌ನ ವಡ್ಗಾಮ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿಗ್ನೇಶ್ ಮೇವಾನಿ ಸೋತಿದ್ದಾರೆಂದು ಫಲಿತಾಂಶ ಪ್ರಕಟಣೆಗೂ ಮುನ್ನವೇ ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಗುಜರಾತ್‌ನಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋತಿದ್ದರೂ ಜಿಗ್ನೇಶ್‌ ಮೇವಾನಿ ಗೆಲುವಿನ ನಗೆ ಬೀರಿದ್ದಾರೆ. 2017ರ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಮೇವಾನಿ, ಈ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಆರಂಭಿಕ ಹಿನ್ನಡೆಯನ್ನು ಅನುಭವಿಸಿದರೂ ಸವಾಲುಗಳ ನಡುವೆ ಗೆಲುವಿನ ನಗೆಬೀರಿದ್ದಾರೆ. ಕೊನೆಯ ಹಂತದ ಮತ ಎಣಿಕೆಯವರೆಗೂ ಸೋಲು ಗೆಲುವಿನ ಹಾವು ಏಣಿ ನಡೆದಿತ್ತು.

ವಡ್ಗಾಮ್ ಪರಿಶಿಷ್ಟ ಜಾತಿಗಳಿಗೆ ಮೀಸಲಾದ ಕ್ಷೇತ್ರವಾಗಿದ್ದು, ಮುಸ್ಲಿಂ ಮತದಾರರು ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ. ಮುಸ್ಲಿಂ ಮತದಾರರು ಸುಮಾರು 90,000 ಇದ್ದಾರೆಂದು ಅಂದಾಜಿಸಲಾಗಿದೆ. ವಡ್ಗಾಮ್‌ನ 2.94 ಲಕ್ಷ ಮತದಾರರಲ್ಲಿ ಮೂರನೇ ಒಂದು ಭಾಗದಷ್ಟು ಮುಸ್ಲಿಮರಿದ್ದಾರೆ. ಸುಮಾರು 44,000 ದಲಿತ ಮತದಾರರು ಮತ್ತು 15,000 ರಜಪೂತರು ಇದ್ದಾರೆ. ಉಳಿದಂತೆ ಒಬಿಸಿ ಸಮುದಾಯವಿದೆ.

ಶೇ.48 ಮತ ಹಂಚಿಕೆಯೊಂದಿಗೆ ಒಟ್ಟು 94,765 ಮತಗಳನ್ನು ಗಳಿಸುವಲ್ಲಿ ಜಿಗ್ನೇಶ್‌ ಯಶಸ್ವಿಯಾಗಿದ್ದಾರೆ. 89,837 ಮತಗಳನ್ನು ಗಳಿಸಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮಣಿಭಾಯ್ ಜೇತಾಭಾಯಿ ವಘೇಲಾ ಅವರನ್ನು ಸೋಲಿಸಿ 4,922 ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಎಎಪಿ ಅಭ್ಯರ್ಥಿ ದಲ್ಪತ್ ಭಾಟಿಯಾ ಕೂಡ ಈ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು.

ವಡ್ಗಾಮ್ ಕ್ಷೇತ್ರದ ಫಲಿತಾಂಶದ ವಿಚಾರದಲ್ಲಿ ಕೆಲವು ಮಾಧ್ಯಮಗಳು ಮಾಡಿದ ಸುಳ್ಳು ಸುದ್ದಿಗಳು ಗಮನ ಸೆಳೆದಿವೆ. ಜಿಗ್ನೇಶ್ ಮೇವಾನಿ ಸೋತಿದ್ದಾರೆಂದು ಅಂತಿಮ ಫಲಿತಾಂಶ ಹೊರಬೀಳುವ ಮೊದಲೇ ಸುಳ್ಳು ಸುದ್ದಿಗಳನ್ನು ಪ್ರಕಟಿಸಿರುವುದು ಅನುಮಾನಗಳಿಗೆ ಆಸ್ಪದ ನೀಡಿದೆ. ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿದ ಬಳಿಕ ಸುದ್ದಿಯನ್ನು ತಿದ್ದಿವೆ ಅಥವಾ ಡಿಲೀಟ್ ಮಾಡಿವೆ. ಆ ಮೂಲಕ ಅಪಹಾಸ್ಯಕ್ಕೆ ಈಡಾಗಿವೆ. ಕನ್ನಡದ ಜನಪ್ರಿಯ ಮಾಧ್ಯಮವಾದ ‘ವಿಜಯಕರ್ನಾಟಕ’, ಇಂಗ್ಲಿಷ್‌ನ ‘ಹಿಂದೂಸ್ತಾನ್ ಟೈಮ್ಸ್‌’, ‘ದಿ ವೀಕ್‌’ ಸಂಸ್ಥೆಯ ಜಾಲತಾಣಗಳಲ್ಲಿ ಜಿಗ್ನೇಶ್ ಸೋತಿರುವುದಾಗಿ ವರದಿ ಪ್ರಕಟಿಸಲಾಗಿತ್ತು.

May be an image of 1 person and text that says "23C ndia World HT Hindustan Times Cities Entertainment Cricket Congress's. Jignesh Mevani loses Vadgam; BJP's Vaghela wins seat Lifestyle Astrology Gujarat Assembly Election Updated on Dec 08, 2022 02:13 PM IST The 42-year-old Dalit leader Jigneshkumar Natvarlal Mevani ost to Congress turncoat and Bharatiya Janata Party candidate Manibhai Vaghela bya marginof 1,525 votes."
ಹಿಂದೂಸ್ತಾನ್ ಟೈಮ್ಸ್‌ ವರದಿ
‘ವಿಜಯ ಕರ್ನಾಟಕ’ ಪತ್ರಿಕೆ ಮಾಡಿದ್ದ ಟ್ವೀಟ್
‘ದಿ ವೀಕ್‌’ ಪ್ರಕಟಿಸಿದ್ದ ಸುದ್ದಿ ಲಿಂಕ್‌

ಸುಳ್ಳು ಸುದ್ದಿ ವರದಿ ಮಾಡಿದ ಬಳಿಕ ಮಾಧ್ಯಮಗಳು ಮಾಹಿತಿಯನ್ನು ತಿದ್ದಿವೆ. ಆದರೆ ವರದಿಗಳನ್ನು ಸರಿಪಡಿಸುವ ಮೊದಲೇ ಓದುಗರು ಹಂಚಿಕೊಂಡಿರುವ ಸುದ್ದಿಯ ಸ್ಕ್ರೀನ್‌ ಶಾಟ್‌ಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ನಂಬಿಕಾರ್ಹ ಸುದ್ದಿ ಜಾಲತಾಣಗಳೇ ಸುಳ್ಳು ಸುದ್ದಿಪ್ರಕಟಿಸಿರುವುದು ಏತಕ್ಕೆಂಬ ಪ್ರಶ್ನೆ ಉಳಿದಿದೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಯುವ ಹೋರಾಟಗಾರ ಸರೋವರ್‌ ಬೆಂಕಿಕೆರೆ, “ಕೆಲವು ಮಾಧ್ಯಮಗಳಲ್ಲಿ ಬಂದ ವರದಿಯನ್ನು ನಿಜವೆಂದೇ ಭಾವಿಸಿದ್ದೆವು. ಜಿಗ್ನೇಶ್ ಸೋತಿದ್ದಾರೆಂದು ನಿರಾಶೆಯಾಗಿತ್ತು. ಊನಾ ಚಳವಳಿಯ ಮೂಲಕ ಮುಂಚೂಣಿಗೆ ಬಂದ ಮೇವಾನಿ ಅವರನ್ನು ಸೋಲಿಸಲು ಬಿಜೆಪಿ ಶತಪ್ರಯತ್ನ ಮಾಡಿರುವುದನ್ನು ಗಮನಿಸಿದ್ದೆವು. ಆದರೆ ಮಾಧ್ಯಮಗಳಿಗೂ ಈ ಧಾವಂತವಿದೆ ಎಂಬ ಭಾವನೆಯನ್ನು ಅವುಗಳು ಪ್ರಕಟಿಸಿದ ಸುದ್ದಿಗಳು ಧ್ವನಿಸಿದವು. ಅಂತಿಮವಾಗಿ ಜಿಗ್ನೇಶ್ ಗೆಲುವು ಸಾಧಿಸಿದ್ದಾರೆಂದು ವರದಿಗಳು ಬಂದಾಗ, ಗೊಂದಲ ಉಂಟಾಯಿತು. ಜಿಗ್ನೇಶ್ ಸೋತಿದ್ದಾರೋ, ಗೆದ್ದಿದ್ದಾರೋ ಎಂದು ಮತ್ತೆ ಮತ್ತೆ ಹಲವು ಸುದ್ದಿವಾಹಿನಿಗಳ ವರದಿಗಳನ್ನು ಪರಿಶೀಲಿಸಬೇಕಾಯಿತು. ಮಾಧ್ಯಮಗಳು ಪಕ್ಷಪಾತಿಯಾಗಿ ವರದಿಯನ್ನು ಪ್ರಕಟಿಸಿವೆಯೇ ಎಂಬ ಅನುಮಾನ ಕಾಡಿತು. ವರದಿ ಬರೆಯುವ ಮುನ್ನ ಮಾಹಿತಿಯನ್ನು ಖಚಿತಪಡಿಸಿಕೊಳ್ಳುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಮುಗ್ದ ಓದುಗರನ್ನು ದಿಕ್ಕುತಪ್ಪಿಸಬಾರದು” ಎಂದು ಆಶಿಸಿದರು.

“ಜಿಗ್ನೇಶ್ ಮೇವಾನಿಯವರನ್ನು ಹೇಗಾದರೂ ಸರಿ (ಕಳ್ಳ ದಾರಿಯಿಂದ) ಸೋಲಿಸಿಯೇ ಸೋಲಿಸುತ್ತೇವೆ ಎಂಬ ಮಾಹಿತಿಯನ್ನು ಬಿಜೆಪಿಯವರು ಮಾಧ್ಯಮಗಳಿಗೆ ಮೊದಲೇ ತಿಳಿಸಿರುವ ಸಾಧ್ಯತೆಯೂ ಇರಬಹುದು, ಅದಕ್ಕಾಗಿಯೇ ಮಾಧ್ಯಮಗಳು ಹೀಗೆ ಸುದ್ದಿ ಮಾಡಿರಲು ಸಾಧ್ಯವಿದೆ” ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...