Homeಮುಖಪುಟರಾಷ್ಟ್ರೀಯ ಪಕ್ಷವಾದ ಆಪ್: ಮಾನದಂಡಗಳು ಮತ್ತು ಇತರೆ ರಾಷ್ಟ್ರೀಯ ಪಕ್ಷಗಳಿವು

ರಾಷ್ಟ್ರೀಯ ಪಕ್ಷವಾದ ಆಪ್: ಮಾನದಂಡಗಳು ಮತ್ತು ಇತರೆ ರಾಷ್ಟ್ರೀಯ ಪಕ್ಷಗಳಿವು

- Advertisement -
- Advertisement -

ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟಗೊಂಡಿದೆ. ಬಿಜೆಪಿ 156 ಸ್ಥಾನಗಳಲ್ಲಿ ಗೆದ್ದು ದಾಖಲೆ ನಿರ್ಮಿಸಿದೆ. ಕಾಂಗ್ರೆಸ್ 17 ಸ್ಥಾನಗಳಿಗೆ ಕುಸಿದು ಮುಖಭಂಗ ಅನುಭವಿಸಿದೆ. ಭರ್ಜರಿ ಪ್ರಚಾರ ನಡೆಸಿದ್ದ ಮತ್ತು ಮಾಧ್ಯಮಗಳಲ್ಲಿ ಮಿಂಚಿದ್ದ ಆಪ್ 5 ಸ್ಥಾನಗಳಲ್ಲಿ ಗೆದ್ದು ಗುಜರಾತ್‌ನಲ್ಲಿ ಖಾತೆ ತೆರೆದಿದೆ. ಈ ಚುನಾವಣೆಯ ಫಲಿತಾಂಶವನ್ನು ಆಮ್ ಆದ್ಮಿ ಪಕ್ಷ ಸಹ ಸಂಭ್ರಮಿಸುತ್ತಿದೆ. ಏಕೆಂದರೆ ಅದು ಶೇ.13 ರಷ್ಟು ಮತಗಳನ್ನು ಗಳಿಸುವ ಮೂಲಕ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದುಕೊಂಡಿದೆ.

ರಾಷ್ಟ್ರೀಯ ಪಕ್ಷವೆಂದರೇನು?

ಯಾವುದೇ ಒಂದು ಪಕ್ಷವು ಒಂದು ನಿರ್ದಿಷ್ಟ ರಾಜ್ಯ ಅಥವಾ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ದೇಶವ್ಯಾಪಿ ಅಸ್ತಿತ್ವ ಹೊಂದಿದೆ ಎಂಬುದನ್ನು ಸೂಚಿಸಲು ರಾಷ್ಟ್ರೀಯ ಪಕ್ಷ ಎಂದು ಕರೆಯಲಾಗುತ್ತದೆ. ನಿರ್ದಿಷ್ಟ ರಾಜ್ಯ/ಪ್ರದೇಶಕ್ಕೆ ಸೀಮಿತವಾಗಿರುವ ಪ್ರಾದೇಶಿಕ ಪಕ್ಷಕ್ಕೆ ವಿರುದ್ಧವಾಗಿ ‘ರಾಷ್ಟ್ರೀಯವಾಗಿ’ ಅಸ್ತಿತ್ವ ಹೊಂದಿರುವುದು ರಾಷ್ಟ್ರೀಯ ಪಕ್ಷವಾಗುತ್ತದೆ. ಉದಾಹರಗೆ ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಾಗಿವೆ. ಕೆಲವು ಸಂದರ್ಭಗಳಲ್ಲಿ ಕಮ್ಯುನಿಷ್ಟ್ ಪಕ್ಷಗಳು, ಬಿಎಸ್‌ಪಿ ಸಹ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದವು.

ತಮಿಳುನಾಡಿನ ಡಿಎಂಕೆ, ಒಡಿಶಾದಲ್ಲಿ ಬಿಜೆಡಿ, ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ಸಿಪಿ, ಬಿಹಾರದಲ್ಲಿ ಆರ್‌ಜೆಡಿ ಅಥವಾ ತೆಲಂಗಾಣದಲ್ಲಿ ಟಿಆರ್‌ಎಸ್‌ನಂತಹ ಕೆಲವು ಪಕ್ಷಗಳು ತಮ್ಮ ತಮ್ಮ ರಾಜ್ಯದಲ್ಲಿ ಪ್ರಬಲವಾಗಿದ್ದರೂ ಸಹ ಅವು ರಾಷ್ಟ್ರೀಯ ಪಕ್ಷಗಳೆನಿಸಿಕೊಳ್ಳದೆ ಪ್ರಾದೇಶಿಕ ಪಕ್ಷ ಎಂದು ಕರೆಸಿಕೊಳ್ಳುತ್ತವೆ.

ರಾಷ್ಟ್ರೀಯ ಪಕ್ಷ ಎಂದು ಗುರುತಿಸಿಕೊಳ್ಳಲು ಇರುವ ಮಾನದಂಡಗಳು

ಚುನಾವಣಾ ಆಯೋಗವು ಒಂದು ಪಕ್ಷವನ್ನು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ತಾಂತ್ರಿಕ ಮಾನದಂಡವನ್ನು ವಿಧಿಸಿದೆ. ಒಂದು ಪಕ್ಷವು ಕಾಲಕಾಲಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯಬಹುದು ಅಥವಾ ಕಳೆದುಕೊಳ್ಳಬಹುದು. ಇದು ಈ ನಿಗದಿಪಡಿಸಿದ ಷರತ್ತುಗಳನ್ನು ಪೂರೈಸುವುದರ ಮೇಲೆ ಅವಲಂಬಿಸಿರುತ್ತದೆ

ನಮ್ಮ ದೇಶದ ಯಾವುದೇ ಪಕ್ಷವು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯಲು ಈ ಕೆಳಗಿನ ಮೂರು ಮಾನದಂಡಗಳನ್ನು ಹೊಂದಿರಬೇಕಾಗುತ್ತದೆ.

ಕನಿಷ್ಟ ನಾಲ್ಕು ರಾಜ್ಯಗಳ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ತಲಾ 6% ಗಿಂತ ಹೆಚ್ಚಿನ ಮತಪ್ರಮಾಣ ಪಡೆಯದಿರಬೇಕು. ಜೊತೆಗೆ ಇತ್ತೀಚಿನ ನಾಲ್ಕು ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಿರಬೇಕು.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಗಳಲ್ಲಿ ಕನಿಷ್ಟ 2% ರಷ್ಟು ಸೀಟುಗಳನ್ನು ಗೆದ್ದಿರಬೇಕು. ಕನಿಷ್ಟ ಮೂರು ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳಿರಬೇಕು

ರಾಜ್ಯ ಪಕ್ಷ ಎಂದು ಕನಿಷ್ಟ ನಾಲ್ಕು ರಾಜ್ಯಗಳಲ್ಲಿ ಮಾನ್ಯತೆ ಪಡೆದಿರಬೇಕು

ಈ ಮಾನದಂಡಗಳ ಅನ್ವಯ ಆಪ್ ಸದ್ಯಕ್ಕೆ ದೆಹಲಿ, ಪಂಜಾಬ್ ಮತ್ತು ಗೋವಾ ರಾಜ್ಯಗಳಲ್ಲಿ ರಾಜ್ಯಪಕ್ಷದ ಮಾನ್ಯತೆ ಪಡೆದಿದೆ. ಗುಜರಾತ್‌ನಲ್ಲಿ ಶೇ.13 ರಷ್ಟು ಮತಗಳು ಮತ್ತು 5 ಸೀಟುಗಳು ಗೆದ್ದ ಕಾರಣ ಅದು ಅಲ್ಲಿಯೂ ರಾಜ್ಯ ಪಕ್ಷ ಎಂಬ ಮಾನ್ಯತೆ ಪಡೆಯುವುದರಿಂದ ಅದು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುತ್ತದೆ.

ಇದುವರೆಗೂ ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆದ ಪಕ್ಷಗಳು

ಕಾಂಗ್ರೆಸ್, ಬಿಜೆಪಿ, ಟಿಎಂಸಿ, ಸಿಪಿಐ(ಎಂ), ಸಿಪಿಐ, ಎನ್‌ಸಿಪಿ, ಬಿಎಸ್‌ಪಿ, ಕನ್ರಾಡ್ ಸಂಗ್ಮ ನೇತೃತ್ವದ ಎನ್‌ಪಿಪಿ ಪಕ್ಷಗಳು 2019ರಲ್ಲಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದವು. 9ನೇ ಪಕ್ಷವಾಗಿ ಆಪ್ ಗುರುತಿಸಿಕೊಳ್ಳಲಿದೆ.

2012ರ ಭ್ರಷ್ಟಾಚಾರ ವಿರೋಧಿ ಚಳವಳಿ (ಜನ ಲೋಕಪಾಲ್ ಮಸೂದೆ ಜಾರಿಗಾಗಿ ನಡೆದ ಹೋರಾಟ) ಯ ಸಂದರ್ಭದಲ್ಲಿ ಹುಟ್ಟಿದ ಆಪ್ 2013ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಿ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತು. ಆ ಮೂಲಕ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ ಜೊತೆಗೂಡಿ ಅಧಿಕಾರ ಹಿಡಿದ ಅದು ಕೇವಲ 49 ದಿನಗಳಲ್ಲಿ ಸರ್ಕಾರ ವಿಸರ್ಜಿಸಿತು.

ಆನಂತರ 2015ರಲ್ಲಿ ದೆಹಲಿಯಲ್ಲಿ ಪ್ರಚಂಡ ಬಹುಮತದೊಂದಿಗೆ ಅಧಿಕಾರ ಹಿಡಿಯಿತು. ನಂತರ 2020ರಲ್ಲಿಯೂ ಮರಳಿ ಅಧಿಕಾರದಲ್ಲಿದೆ. ಆನಂತರ 2022 ಪಂಜಾಬ್‌ನಲ್ಲಿಯೂ ಭಾರೀ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ಗೋವಾದಲ್ಲಿ ಎರಡು ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದ ಅದು ಇತ್ತೀಚಿಗೆ ದೆಹಲಿಯ ಎಂಸಿಡಿ( ಮುನಿಸಿಪಲ್ ಕಾರ್ಪೋರೇಷನ್‌)ನಲ್ಲಿಯೂ ಜಯಭೇರಿ ಬಾರಿಸಿತ್ತು. ಸದ್ಯ ಗುಜರಾತ್‌ನಲ್ಲಿ 5 ಸೀಟುಗಳನ್ನು ಗೆದ್ದಿದೆ.

ಇದನ್ನೂ ಓದಿ; ಭರ್ಜರಿ ಜಯ ಸಾಧಿಸಿದ ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...