Homeಮುಖಪುಟರಾಷ್ಟ್ರೀಯ ಪಕ್ಷವಾದ ಆಪ್: ಮಾನದಂಡಗಳು ಮತ್ತು ಇತರೆ ರಾಷ್ಟ್ರೀಯ ಪಕ್ಷಗಳಿವು

ರಾಷ್ಟ್ರೀಯ ಪಕ್ಷವಾದ ಆಪ್: ಮಾನದಂಡಗಳು ಮತ್ತು ಇತರೆ ರಾಷ್ಟ್ರೀಯ ಪಕ್ಷಗಳಿವು

- Advertisement -
- Advertisement -

ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟಗೊಂಡಿದೆ. ಬಿಜೆಪಿ 156 ಸ್ಥಾನಗಳಲ್ಲಿ ಗೆದ್ದು ದಾಖಲೆ ನಿರ್ಮಿಸಿದೆ. ಕಾಂಗ್ರೆಸ್ 17 ಸ್ಥಾನಗಳಿಗೆ ಕುಸಿದು ಮುಖಭಂಗ ಅನುಭವಿಸಿದೆ. ಭರ್ಜರಿ ಪ್ರಚಾರ ನಡೆಸಿದ್ದ ಮತ್ತು ಮಾಧ್ಯಮಗಳಲ್ಲಿ ಮಿಂಚಿದ್ದ ಆಪ್ 5 ಸ್ಥಾನಗಳಲ್ಲಿ ಗೆದ್ದು ಗುಜರಾತ್‌ನಲ್ಲಿ ಖಾತೆ ತೆರೆದಿದೆ. ಈ ಚುನಾವಣೆಯ ಫಲಿತಾಂಶವನ್ನು ಆಮ್ ಆದ್ಮಿ ಪಕ್ಷ ಸಹ ಸಂಭ್ರಮಿಸುತ್ತಿದೆ. ಏಕೆಂದರೆ ಅದು ಶೇ.13 ರಷ್ಟು ಮತಗಳನ್ನು ಗಳಿಸುವ ಮೂಲಕ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದುಕೊಂಡಿದೆ.

ರಾಷ್ಟ್ರೀಯ ಪಕ್ಷವೆಂದರೇನು?

ಯಾವುದೇ ಒಂದು ಪಕ್ಷವು ಒಂದು ನಿರ್ದಿಷ್ಟ ರಾಜ್ಯ ಅಥವಾ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ದೇಶವ್ಯಾಪಿ ಅಸ್ತಿತ್ವ ಹೊಂದಿದೆ ಎಂಬುದನ್ನು ಸೂಚಿಸಲು ರಾಷ್ಟ್ರೀಯ ಪಕ್ಷ ಎಂದು ಕರೆಯಲಾಗುತ್ತದೆ. ನಿರ್ದಿಷ್ಟ ರಾಜ್ಯ/ಪ್ರದೇಶಕ್ಕೆ ಸೀಮಿತವಾಗಿರುವ ಪ್ರಾದೇಶಿಕ ಪಕ್ಷಕ್ಕೆ ವಿರುದ್ಧವಾಗಿ ‘ರಾಷ್ಟ್ರೀಯವಾಗಿ’ ಅಸ್ತಿತ್ವ ಹೊಂದಿರುವುದು ರಾಷ್ಟ್ರೀಯ ಪಕ್ಷವಾಗುತ್ತದೆ. ಉದಾಹರಗೆ ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಾಗಿವೆ. ಕೆಲವು ಸಂದರ್ಭಗಳಲ್ಲಿ ಕಮ್ಯುನಿಷ್ಟ್ ಪಕ್ಷಗಳು, ಬಿಎಸ್‌ಪಿ ಸಹ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದವು.

ತಮಿಳುನಾಡಿನ ಡಿಎಂಕೆ, ಒಡಿಶಾದಲ್ಲಿ ಬಿಜೆಡಿ, ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ಸಿಪಿ, ಬಿಹಾರದಲ್ಲಿ ಆರ್‌ಜೆಡಿ ಅಥವಾ ತೆಲಂಗಾಣದಲ್ಲಿ ಟಿಆರ್‌ಎಸ್‌ನಂತಹ ಕೆಲವು ಪಕ್ಷಗಳು ತಮ್ಮ ತಮ್ಮ ರಾಜ್ಯದಲ್ಲಿ ಪ್ರಬಲವಾಗಿದ್ದರೂ ಸಹ ಅವು ರಾಷ್ಟ್ರೀಯ ಪಕ್ಷಗಳೆನಿಸಿಕೊಳ್ಳದೆ ಪ್ರಾದೇಶಿಕ ಪಕ್ಷ ಎಂದು ಕರೆಸಿಕೊಳ್ಳುತ್ತವೆ.

ರಾಷ್ಟ್ರೀಯ ಪಕ್ಷ ಎಂದು ಗುರುತಿಸಿಕೊಳ್ಳಲು ಇರುವ ಮಾನದಂಡಗಳು

ಚುನಾವಣಾ ಆಯೋಗವು ಒಂದು ಪಕ್ಷವನ್ನು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ತಾಂತ್ರಿಕ ಮಾನದಂಡವನ್ನು ವಿಧಿಸಿದೆ. ಒಂದು ಪಕ್ಷವು ಕಾಲಕಾಲಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯಬಹುದು ಅಥವಾ ಕಳೆದುಕೊಳ್ಳಬಹುದು. ಇದು ಈ ನಿಗದಿಪಡಿಸಿದ ಷರತ್ತುಗಳನ್ನು ಪೂರೈಸುವುದರ ಮೇಲೆ ಅವಲಂಬಿಸಿರುತ್ತದೆ

ನಮ್ಮ ದೇಶದ ಯಾವುದೇ ಪಕ್ಷವು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯಲು ಈ ಕೆಳಗಿನ ಮೂರು ಮಾನದಂಡಗಳನ್ನು ಹೊಂದಿರಬೇಕಾಗುತ್ತದೆ.

ಕನಿಷ್ಟ ನಾಲ್ಕು ರಾಜ್ಯಗಳ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ತಲಾ 6% ಗಿಂತ ಹೆಚ್ಚಿನ ಮತಪ್ರಮಾಣ ಪಡೆಯದಿರಬೇಕು. ಜೊತೆಗೆ ಇತ್ತೀಚಿನ ನಾಲ್ಕು ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಿರಬೇಕು.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಗಳಲ್ಲಿ ಕನಿಷ್ಟ 2% ರಷ್ಟು ಸೀಟುಗಳನ್ನು ಗೆದ್ದಿರಬೇಕು. ಕನಿಷ್ಟ ಮೂರು ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳಿರಬೇಕು

ರಾಜ್ಯ ಪಕ್ಷ ಎಂದು ಕನಿಷ್ಟ ನಾಲ್ಕು ರಾಜ್ಯಗಳಲ್ಲಿ ಮಾನ್ಯತೆ ಪಡೆದಿರಬೇಕು

ಈ ಮಾನದಂಡಗಳ ಅನ್ವಯ ಆಪ್ ಸದ್ಯಕ್ಕೆ ದೆಹಲಿ, ಪಂಜಾಬ್ ಮತ್ತು ಗೋವಾ ರಾಜ್ಯಗಳಲ್ಲಿ ರಾಜ್ಯಪಕ್ಷದ ಮಾನ್ಯತೆ ಪಡೆದಿದೆ. ಗುಜರಾತ್‌ನಲ್ಲಿ ಶೇ.13 ರಷ್ಟು ಮತಗಳು ಮತ್ತು 5 ಸೀಟುಗಳು ಗೆದ್ದ ಕಾರಣ ಅದು ಅಲ್ಲಿಯೂ ರಾಜ್ಯ ಪಕ್ಷ ಎಂಬ ಮಾನ್ಯತೆ ಪಡೆಯುವುದರಿಂದ ಅದು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುತ್ತದೆ.

ಇದುವರೆಗೂ ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆದ ಪಕ್ಷಗಳು

ಕಾಂಗ್ರೆಸ್, ಬಿಜೆಪಿ, ಟಿಎಂಸಿ, ಸಿಪಿಐ(ಎಂ), ಸಿಪಿಐ, ಎನ್‌ಸಿಪಿ, ಬಿಎಸ್‌ಪಿ, ಕನ್ರಾಡ್ ಸಂಗ್ಮ ನೇತೃತ್ವದ ಎನ್‌ಪಿಪಿ ಪಕ್ಷಗಳು 2019ರಲ್ಲಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದವು. 9ನೇ ಪಕ್ಷವಾಗಿ ಆಪ್ ಗುರುತಿಸಿಕೊಳ್ಳಲಿದೆ.

2012ರ ಭ್ರಷ್ಟಾಚಾರ ವಿರೋಧಿ ಚಳವಳಿ (ಜನ ಲೋಕಪಾಲ್ ಮಸೂದೆ ಜಾರಿಗಾಗಿ ನಡೆದ ಹೋರಾಟ) ಯ ಸಂದರ್ಭದಲ್ಲಿ ಹುಟ್ಟಿದ ಆಪ್ 2013ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಿ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತು. ಆ ಮೂಲಕ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ ಜೊತೆಗೂಡಿ ಅಧಿಕಾರ ಹಿಡಿದ ಅದು ಕೇವಲ 49 ದಿನಗಳಲ್ಲಿ ಸರ್ಕಾರ ವಿಸರ್ಜಿಸಿತು.

ಆನಂತರ 2015ರಲ್ಲಿ ದೆಹಲಿಯಲ್ಲಿ ಪ್ರಚಂಡ ಬಹುಮತದೊಂದಿಗೆ ಅಧಿಕಾರ ಹಿಡಿಯಿತು. ನಂತರ 2020ರಲ್ಲಿಯೂ ಮರಳಿ ಅಧಿಕಾರದಲ್ಲಿದೆ. ಆನಂತರ 2022 ಪಂಜಾಬ್‌ನಲ್ಲಿಯೂ ಭಾರೀ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ಗೋವಾದಲ್ಲಿ ಎರಡು ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದ ಅದು ಇತ್ತೀಚಿಗೆ ದೆಹಲಿಯ ಎಂಸಿಡಿ( ಮುನಿಸಿಪಲ್ ಕಾರ್ಪೋರೇಷನ್‌)ನಲ್ಲಿಯೂ ಜಯಭೇರಿ ಬಾರಿಸಿತ್ತು. ಸದ್ಯ ಗುಜರಾತ್‌ನಲ್ಲಿ 5 ಸೀಟುಗಳನ್ನು ಗೆದ್ದಿದೆ.

ಇದನ್ನೂ ಓದಿ; ಭರ್ಜರಿ ಜಯ ಸಾಧಿಸಿದ ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...