Homeಮುಖಪುಟಮೊರ್ಬಿ ವಿವಾದ: ಜಾಮೀನಿನ ಬಳಿಕ ಟಿಎಂಸಿ ನಾಯಕ ಸಾಕೇತ್‌ ಮತ್ತೆ ಬಂಧನ

ಮೊರ್ಬಿ ವಿವಾದ: ಜಾಮೀನಿನ ಬಳಿಕ ಟಿಎಂಸಿ ನಾಯಕ ಸಾಕೇತ್‌ ಮತ್ತೆ ಬಂಧನ

- Advertisement -
- Advertisement -

ಗುಜರಾತ್‌ನ ಮೋರ್ಬಿ ಸೇತುವೆ ಕುಸಿತದ ಕುರಿತು ಸುಳ್ಳು ಸುದ್ದಿ ಟ್ವೀಟ್ ಮಾಡಿದ ಆರೋಪದಲ್ಲಿ ಬಂಧಿತರಾಗಿದ್ದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ವಕ್ತಾರ ಸಾಕೇತ್ ಗೋಖಲೆ ಅವರಿಗೆ ಜಾಮೀನು ದೊರೆತ ಕೆಲವೇ ಗಂಟೆಗಳಲ್ಲಿ ಅವರನ್ನು ಗುರುವಾರ ಮತ್ತೆ ಬಂಧಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಸೇತುವೆ ಕುಸಿದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದರ ಕುರಿತು ಸುಳ್ಳು ಸುದ್ದಿಯನ್ನು ಹರಡುವ ಮೂಲಕ ‘ಚುನಾವಣೆ ಸಮಯದಲ್ಲಿ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸಲಾಗಿದೆ’ ಎಂಬ ಆರೋಪದ ಮೇಲೆ ಮೊರ್ಬಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಗುರುವಾರ ಸಾಕೇತ್‌ ಅವರರನ್ನು ಬಂಧಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವರದಿಯ ಪ್ರಕಾರ ಮೊದಲ ಪ್ರಕರಣದಲ್ಲಿ ಗೋಖಲೆ ಜಾಮೀನು ಪಡೆದ ‘ಕೇವಲ ಒಂದು ಗಂಟೆ’ ನಂತರ ಹೊಸ ಪ್ರಕರಣವನ್ನು ದಾಖಲಿಸಲಾಗಿದೆ.

ಈ ಪ್ರಕರಣದಲ್ಲಿ ಮಾಡಲಾದ ಆರೋಪಗಳು ಅಹಮದಾಬಾದ್‌ನಲ್ಲಿ ದಾಖಲಾಗಿರುವ ಮೊದಲ ಪ್ರಕರಣದಂತೆಯೇ ಇವೆ. ಮಚ್ಚು ನದಿಯ ಸೇತುವೆ ಕುಸಿದು 141 ಜನರು ಸಾವನ್ನಪ್ಪಿದ ಒಂದು ದಿನದ ನಂತರ ನವೆಂಬರ್ 1 ರಂದು ಪ್ರಧಾನಿ ಮೊರ್ಬಿಗೆ ಭೇಟಿ ನೀಡಿದ್ದರು.

ಡಿಸೆಂಬರ್ 1ರಂದು ಗೋಖಲೆ ಅವರು ಟ್ವೀಟ್ ಮಾಡಿ, “ಮೋದಿಯವರು ಮೊರ್ಬಿಗೆ ಭೇಟಿ ನೀಡಲು 30 ಕೋಟಿ ರೂಪಾಯಿ ಖರ್ಚಾಗಿದೆ ಎಂಬ ವಿಷಯವನ್ನು ಮಾಹಿತಿ ಹಕ್ಕು ಅರ್ಜಿ ಬಹಿರಂಗಪಡಿಸಿದೆ” ಎಂದು ಆರೋಪಿಸಿ ಸುದ್ದಿ ಕ್ಲಿಪ್ಪಿಂಗ್ ಹಂಚಿಕೊಂಡಿದ್ದರು. ಆದರೆ ಪ್ರೆಸ್ ಇನ್‌ಫರ್ಮೇಷನ್ ಬ್ಯೂರೋ (ಪಿಐಬಿ) ಫ್ಯಾಕ್ಟ್‌ಚೆಕ್‌ ಖಾತೆಯು ಈ ಆರೋಪವನ್ನು ನಿರಾಕರಿಸಿತ್ತು.

ಈ ಸುದ್ದಿ ಕ್ಲಿಪ್ಪಿಂಗ್ ಸ್ಥಳೀಯ ಪತ್ರಿಕೆ ಗುಜರಾತ್ ಸಮಾಚಾರ್‌ಗೆ ಸಂಬಂಧಿಸಿದೆ. ಆದರೆ ಪತ್ರಿಕೆಯು ಈ ಸುದ್ದಿಯನ್ನು ಪ್ರಕಟಿಸಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.

ಗೋಖಲೆ ಅವರನ್ನು ಮೊದಲು ಡಿಸೆಂಬರ್ 5 ರಂದು ರಾಜಸ್ಥಾನದ ಜೈಪುರದಲ್ಲಿ ಗುಜರಾತ್ ಪೊಲೀಸರು ಬಂಧಿಸಿದ್ದರು. ಅವರನ್ನು ಅಹಮದಾಬಾದ್‌ಗೆ ಕರೆತಂದ ನಂತರ ಔಪಚಾರಿಕವಾಗಿ ಅರೆಸ್ಟ್‌ ಮಾಡಲಾಯಿತು. ನಂತರ ಡಿಸೆಂಬರ್ 8 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ರಾಜಕೀಯ ಮೈಲೇಜ್ ಪಡೆಯುವುದಕ್ಕಾಗಿ ಮೋದಿಯವರ ಮೋರ್ಬಿ ಭೇಟಿಯ ಬಗ್ಗೆ ಗೋಖಲೆ ಸುಳ್ಳು ಸುದ್ದಿಯನ್ನು ಟ್ವೀಟ್ ಮಾಡಿದ್ದಾರೆ ಎಂದು ಗುಜರಾತ್ ಪೊಲೀಸರು ಆರೋಪಿಸಿದ್ದರು.

ಗುರುವಾರ, ತೃಣಮೂಲ ಕಾಂಗ್ರೆಸ್ ವಕ್ತಾರರಿಗೆ ಅಹಮದಾಬಾದ್ ನ್ಯಾಯಾಲಯವು ಪ್ರಕರಣದಲ್ಲಿ ಜಾಮೀನು ನೀಡಿತು. ಪಕ್ಷದ ಸಂಸದ ಡೆರೆಕ್ ಒ’ಬ್ರಿಯಾನ್ ಗುರುವಾರ ಸಂಜೆ 4.47 ಕ್ಕೆ ಜಾಮೀನಿನ ಬಗ್ಗೆ ಟ್ವೀಟ್ ಮಾಡಿದ್ದಾರೆ. ಆದಾಗ್ಯೂ, ಐದು ಗಂಟೆಗಳ ನಂತರ, ರಾತ್ರಿ 8.45ಕ್ಕೆ ಗೋಖಲೆಯನ್ನು ಮತ್ತೆ ಬಂಧಿಸಲಾಯಿತು ಎಂದು ಒ’ಬ್ರಿಯಾನ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಯಾವುದೇ ಸೂಚನೆ ಅಥವಾ ವಾರಂಟ್ ಇಲ್ಲದೆ ವಕ್ತಾರರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ‘ಅಜ್ಞಾತ ಸ್ಥಳ’ಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಎರಡನೇ ಪ್ರಕರಣದಲ್ಲಿ, ಗೋಖಲೆ ವಿರುದ್ಧ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125ರ (ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಮೊರ್ಬಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯೊಬ್ಬರು, ಪ್ರಥಮ ಮಾಹಿತಿ ವರದಿಯನ್ನು ಸಲ್ಲಿಸಿದ್ದಾರೆ. ಗುಜರಾತ್‌ನಲ್ಲಿ ರಾಜ್ಯ ಚುನಾವಣೆಗಳ ಕಾರಣ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲಿ ಗೋಖಲೆ ಅವರು ಸುಳ್ಳು ಸುದ್ದಿಯನ್ನು ಟ್ವೀಟ್ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.

ಏತನ್ಮಧ್ಯೆ, ತೃಣಮೂಲ ಕಾಂಗ್ರೆಸ್ ಪಕ್ಷವು ಐದು ಸದಸ್ಯರ ನಿಯೋಗವನ್ನು ಮೊರ್ಬಿಗೆ ಕಳುಹಿಸಿದೆ. “ಮೊರ್ಬಿ ದುರಂತಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನೂ ಈವರೆಗೆ ಬಂಧಿಸಿಲ್ಲ. ಆದರೆ ಸತ್ಯ ಹೇಳುವವರಿಗೆ ಕಿರುಕುಳ ನೀಡಲಾಗುತ್ತಿದೆ” ಎಂದು ಪಕ್ಷವು ಟ್ವೀಟ್ ಮಾಡಿದೆ. “ನಾವು ಸಾಕೇತ್ ಗೋಖಲೆ ಅವರ ಪರವಾಗಿ ನಿಲ್ಲುತ್ತೇವೆ ಮತ್ತು ನಾವು ನಮ್ಮ ಎಲ್ಲಾ ಶಕ್ತಿಯೊಂದಿಗೆ ಹೋರಾಡುತ್ತೇವೆ” ಎಂದು ಪ್ರತಿಕ್ರಿಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...