Homeಮುಖಪುಟಮೊರ್ಬಿ ವಿವಾದ: ಜಾಮೀನಿನ ಬಳಿಕ ಟಿಎಂಸಿ ನಾಯಕ ಸಾಕೇತ್‌ ಮತ್ತೆ ಬಂಧನ

ಮೊರ್ಬಿ ವಿವಾದ: ಜಾಮೀನಿನ ಬಳಿಕ ಟಿಎಂಸಿ ನಾಯಕ ಸಾಕೇತ್‌ ಮತ್ತೆ ಬಂಧನ

- Advertisement -
- Advertisement -

ಗುಜರಾತ್‌ನ ಮೋರ್ಬಿ ಸೇತುವೆ ಕುಸಿತದ ಕುರಿತು ಸುಳ್ಳು ಸುದ್ದಿ ಟ್ವೀಟ್ ಮಾಡಿದ ಆರೋಪದಲ್ಲಿ ಬಂಧಿತರಾಗಿದ್ದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ವಕ್ತಾರ ಸಾಕೇತ್ ಗೋಖಲೆ ಅವರಿಗೆ ಜಾಮೀನು ದೊರೆತ ಕೆಲವೇ ಗಂಟೆಗಳಲ್ಲಿ ಅವರನ್ನು ಗುರುವಾರ ಮತ್ತೆ ಬಂಧಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಸೇತುವೆ ಕುಸಿದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದರ ಕುರಿತು ಸುಳ್ಳು ಸುದ್ದಿಯನ್ನು ಹರಡುವ ಮೂಲಕ ‘ಚುನಾವಣೆ ಸಮಯದಲ್ಲಿ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸಲಾಗಿದೆ’ ಎಂಬ ಆರೋಪದ ಮೇಲೆ ಮೊರ್ಬಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಗುರುವಾರ ಸಾಕೇತ್‌ ಅವರರನ್ನು ಬಂಧಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವರದಿಯ ಪ್ರಕಾರ ಮೊದಲ ಪ್ರಕರಣದಲ್ಲಿ ಗೋಖಲೆ ಜಾಮೀನು ಪಡೆದ ‘ಕೇವಲ ಒಂದು ಗಂಟೆ’ ನಂತರ ಹೊಸ ಪ್ರಕರಣವನ್ನು ದಾಖಲಿಸಲಾಗಿದೆ.

ಈ ಪ್ರಕರಣದಲ್ಲಿ ಮಾಡಲಾದ ಆರೋಪಗಳು ಅಹಮದಾಬಾದ್‌ನಲ್ಲಿ ದಾಖಲಾಗಿರುವ ಮೊದಲ ಪ್ರಕರಣದಂತೆಯೇ ಇವೆ. ಮಚ್ಚು ನದಿಯ ಸೇತುವೆ ಕುಸಿದು 141 ಜನರು ಸಾವನ್ನಪ್ಪಿದ ಒಂದು ದಿನದ ನಂತರ ನವೆಂಬರ್ 1 ರಂದು ಪ್ರಧಾನಿ ಮೊರ್ಬಿಗೆ ಭೇಟಿ ನೀಡಿದ್ದರು.

ಡಿಸೆಂಬರ್ 1ರಂದು ಗೋಖಲೆ ಅವರು ಟ್ವೀಟ್ ಮಾಡಿ, “ಮೋದಿಯವರು ಮೊರ್ಬಿಗೆ ಭೇಟಿ ನೀಡಲು 30 ಕೋಟಿ ರೂಪಾಯಿ ಖರ್ಚಾಗಿದೆ ಎಂಬ ವಿಷಯವನ್ನು ಮಾಹಿತಿ ಹಕ್ಕು ಅರ್ಜಿ ಬಹಿರಂಗಪಡಿಸಿದೆ” ಎಂದು ಆರೋಪಿಸಿ ಸುದ್ದಿ ಕ್ಲಿಪ್ಪಿಂಗ್ ಹಂಚಿಕೊಂಡಿದ್ದರು. ಆದರೆ ಪ್ರೆಸ್ ಇನ್‌ಫರ್ಮೇಷನ್ ಬ್ಯೂರೋ (ಪಿಐಬಿ) ಫ್ಯಾಕ್ಟ್‌ಚೆಕ್‌ ಖಾತೆಯು ಈ ಆರೋಪವನ್ನು ನಿರಾಕರಿಸಿತ್ತು.

ಈ ಸುದ್ದಿ ಕ್ಲಿಪ್ಪಿಂಗ್ ಸ್ಥಳೀಯ ಪತ್ರಿಕೆ ಗುಜರಾತ್ ಸಮಾಚಾರ್‌ಗೆ ಸಂಬಂಧಿಸಿದೆ. ಆದರೆ ಪತ್ರಿಕೆಯು ಈ ಸುದ್ದಿಯನ್ನು ಪ್ರಕಟಿಸಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.

ಗೋಖಲೆ ಅವರನ್ನು ಮೊದಲು ಡಿಸೆಂಬರ್ 5 ರಂದು ರಾಜಸ್ಥಾನದ ಜೈಪುರದಲ್ಲಿ ಗುಜರಾತ್ ಪೊಲೀಸರು ಬಂಧಿಸಿದ್ದರು. ಅವರನ್ನು ಅಹಮದಾಬಾದ್‌ಗೆ ಕರೆತಂದ ನಂತರ ಔಪಚಾರಿಕವಾಗಿ ಅರೆಸ್ಟ್‌ ಮಾಡಲಾಯಿತು. ನಂತರ ಡಿಸೆಂಬರ್ 8 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ರಾಜಕೀಯ ಮೈಲೇಜ್ ಪಡೆಯುವುದಕ್ಕಾಗಿ ಮೋದಿಯವರ ಮೋರ್ಬಿ ಭೇಟಿಯ ಬಗ್ಗೆ ಗೋಖಲೆ ಸುಳ್ಳು ಸುದ್ದಿಯನ್ನು ಟ್ವೀಟ್ ಮಾಡಿದ್ದಾರೆ ಎಂದು ಗುಜರಾತ್ ಪೊಲೀಸರು ಆರೋಪಿಸಿದ್ದರು.

ಗುರುವಾರ, ತೃಣಮೂಲ ಕಾಂಗ್ರೆಸ್ ವಕ್ತಾರರಿಗೆ ಅಹಮದಾಬಾದ್ ನ್ಯಾಯಾಲಯವು ಪ್ರಕರಣದಲ್ಲಿ ಜಾಮೀನು ನೀಡಿತು. ಪಕ್ಷದ ಸಂಸದ ಡೆರೆಕ್ ಒ’ಬ್ರಿಯಾನ್ ಗುರುವಾರ ಸಂಜೆ 4.47 ಕ್ಕೆ ಜಾಮೀನಿನ ಬಗ್ಗೆ ಟ್ವೀಟ್ ಮಾಡಿದ್ದಾರೆ. ಆದಾಗ್ಯೂ, ಐದು ಗಂಟೆಗಳ ನಂತರ, ರಾತ್ರಿ 8.45ಕ್ಕೆ ಗೋಖಲೆಯನ್ನು ಮತ್ತೆ ಬಂಧಿಸಲಾಯಿತು ಎಂದು ಒ’ಬ್ರಿಯಾನ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಯಾವುದೇ ಸೂಚನೆ ಅಥವಾ ವಾರಂಟ್ ಇಲ್ಲದೆ ವಕ್ತಾರರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ‘ಅಜ್ಞಾತ ಸ್ಥಳ’ಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಎರಡನೇ ಪ್ರಕರಣದಲ್ಲಿ, ಗೋಖಲೆ ವಿರುದ್ಧ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125ರ (ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಮೊರ್ಬಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯೊಬ್ಬರು, ಪ್ರಥಮ ಮಾಹಿತಿ ವರದಿಯನ್ನು ಸಲ್ಲಿಸಿದ್ದಾರೆ. ಗುಜರಾತ್‌ನಲ್ಲಿ ರಾಜ್ಯ ಚುನಾವಣೆಗಳ ಕಾರಣ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲಿ ಗೋಖಲೆ ಅವರು ಸುಳ್ಳು ಸುದ್ದಿಯನ್ನು ಟ್ವೀಟ್ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.

ಏತನ್ಮಧ್ಯೆ, ತೃಣಮೂಲ ಕಾಂಗ್ರೆಸ್ ಪಕ್ಷವು ಐದು ಸದಸ್ಯರ ನಿಯೋಗವನ್ನು ಮೊರ್ಬಿಗೆ ಕಳುಹಿಸಿದೆ. “ಮೊರ್ಬಿ ದುರಂತಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನೂ ಈವರೆಗೆ ಬಂಧಿಸಿಲ್ಲ. ಆದರೆ ಸತ್ಯ ಹೇಳುವವರಿಗೆ ಕಿರುಕುಳ ನೀಡಲಾಗುತ್ತಿದೆ” ಎಂದು ಪಕ್ಷವು ಟ್ವೀಟ್ ಮಾಡಿದೆ. “ನಾವು ಸಾಕೇತ್ ಗೋಖಲೆ ಅವರ ಪರವಾಗಿ ನಿಲ್ಲುತ್ತೇವೆ ಮತ್ತು ನಾವು ನಮ್ಮ ಎಲ್ಲಾ ಶಕ್ತಿಯೊಂದಿಗೆ ಹೋರಾಡುತ್ತೇವೆ” ಎಂದು ಪ್ರತಿಕ್ರಿಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...