Homeಮುಖಪುಟಮೊರ್ಬಿ ವಿವಾದ: ಜಾಮೀನಿನ ಬಳಿಕ ಟಿಎಂಸಿ ನಾಯಕ ಸಾಕೇತ್‌ ಮತ್ತೆ ಬಂಧನ

ಮೊರ್ಬಿ ವಿವಾದ: ಜಾಮೀನಿನ ಬಳಿಕ ಟಿಎಂಸಿ ನಾಯಕ ಸಾಕೇತ್‌ ಮತ್ತೆ ಬಂಧನ

- Advertisement -
- Advertisement -

ಗುಜರಾತ್‌ನ ಮೋರ್ಬಿ ಸೇತುವೆ ಕುಸಿತದ ಕುರಿತು ಸುಳ್ಳು ಸುದ್ದಿ ಟ್ವೀಟ್ ಮಾಡಿದ ಆರೋಪದಲ್ಲಿ ಬಂಧಿತರಾಗಿದ್ದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ವಕ್ತಾರ ಸಾಕೇತ್ ಗೋಖಲೆ ಅವರಿಗೆ ಜಾಮೀನು ದೊರೆತ ಕೆಲವೇ ಗಂಟೆಗಳಲ್ಲಿ ಅವರನ್ನು ಗುರುವಾರ ಮತ್ತೆ ಬಂಧಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಸೇತುವೆ ಕುಸಿದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದರ ಕುರಿತು ಸುಳ್ಳು ಸುದ್ದಿಯನ್ನು ಹರಡುವ ಮೂಲಕ ‘ಚುನಾವಣೆ ಸಮಯದಲ್ಲಿ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸಲಾಗಿದೆ’ ಎಂಬ ಆರೋಪದ ಮೇಲೆ ಮೊರ್ಬಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಗುರುವಾರ ಸಾಕೇತ್‌ ಅವರರನ್ನು ಬಂಧಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವರದಿಯ ಪ್ರಕಾರ ಮೊದಲ ಪ್ರಕರಣದಲ್ಲಿ ಗೋಖಲೆ ಜಾಮೀನು ಪಡೆದ ‘ಕೇವಲ ಒಂದು ಗಂಟೆ’ ನಂತರ ಹೊಸ ಪ್ರಕರಣವನ್ನು ದಾಖಲಿಸಲಾಗಿದೆ.

ಈ ಪ್ರಕರಣದಲ್ಲಿ ಮಾಡಲಾದ ಆರೋಪಗಳು ಅಹಮದಾಬಾದ್‌ನಲ್ಲಿ ದಾಖಲಾಗಿರುವ ಮೊದಲ ಪ್ರಕರಣದಂತೆಯೇ ಇವೆ. ಮಚ್ಚು ನದಿಯ ಸೇತುವೆ ಕುಸಿದು 141 ಜನರು ಸಾವನ್ನಪ್ಪಿದ ಒಂದು ದಿನದ ನಂತರ ನವೆಂಬರ್ 1 ರಂದು ಪ್ರಧಾನಿ ಮೊರ್ಬಿಗೆ ಭೇಟಿ ನೀಡಿದ್ದರು.

ಡಿಸೆಂಬರ್ 1ರಂದು ಗೋಖಲೆ ಅವರು ಟ್ವೀಟ್ ಮಾಡಿ, “ಮೋದಿಯವರು ಮೊರ್ಬಿಗೆ ಭೇಟಿ ನೀಡಲು 30 ಕೋಟಿ ರೂಪಾಯಿ ಖರ್ಚಾಗಿದೆ ಎಂಬ ವಿಷಯವನ್ನು ಮಾಹಿತಿ ಹಕ್ಕು ಅರ್ಜಿ ಬಹಿರಂಗಪಡಿಸಿದೆ” ಎಂದು ಆರೋಪಿಸಿ ಸುದ್ದಿ ಕ್ಲಿಪ್ಪಿಂಗ್ ಹಂಚಿಕೊಂಡಿದ್ದರು. ಆದರೆ ಪ್ರೆಸ್ ಇನ್‌ಫರ್ಮೇಷನ್ ಬ್ಯೂರೋ (ಪಿಐಬಿ) ಫ್ಯಾಕ್ಟ್‌ಚೆಕ್‌ ಖಾತೆಯು ಈ ಆರೋಪವನ್ನು ನಿರಾಕರಿಸಿತ್ತು.

ಈ ಸುದ್ದಿ ಕ್ಲಿಪ್ಪಿಂಗ್ ಸ್ಥಳೀಯ ಪತ್ರಿಕೆ ಗುಜರಾತ್ ಸಮಾಚಾರ್‌ಗೆ ಸಂಬಂಧಿಸಿದೆ. ಆದರೆ ಪತ್ರಿಕೆಯು ಈ ಸುದ್ದಿಯನ್ನು ಪ್ರಕಟಿಸಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.

ಗೋಖಲೆ ಅವರನ್ನು ಮೊದಲು ಡಿಸೆಂಬರ್ 5 ರಂದು ರಾಜಸ್ಥಾನದ ಜೈಪುರದಲ್ಲಿ ಗುಜರಾತ್ ಪೊಲೀಸರು ಬಂಧಿಸಿದ್ದರು. ಅವರನ್ನು ಅಹಮದಾಬಾದ್‌ಗೆ ಕರೆತಂದ ನಂತರ ಔಪಚಾರಿಕವಾಗಿ ಅರೆಸ್ಟ್‌ ಮಾಡಲಾಯಿತು. ನಂತರ ಡಿಸೆಂಬರ್ 8 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ರಾಜಕೀಯ ಮೈಲೇಜ್ ಪಡೆಯುವುದಕ್ಕಾಗಿ ಮೋದಿಯವರ ಮೋರ್ಬಿ ಭೇಟಿಯ ಬಗ್ಗೆ ಗೋಖಲೆ ಸುಳ್ಳು ಸುದ್ದಿಯನ್ನು ಟ್ವೀಟ್ ಮಾಡಿದ್ದಾರೆ ಎಂದು ಗುಜರಾತ್ ಪೊಲೀಸರು ಆರೋಪಿಸಿದ್ದರು.

ಗುರುವಾರ, ತೃಣಮೂಲ ಕಾಂಗ್ರೆಸ್ ವಕ್ತಾರರಿಗೆ ಅಹಮದಾಬಾದ್ ನ್ಯಾಯಾಲಯವು ಪ್ರಕರಣದಲ್ಲಿ ಜಾಮೀನು ನೀಡಿತು. ಪಕ್ಷದ ಸಂಸದ ಡೆರೆಕ್ ಒ’ಬ್ರಿಯಾನ್ ಗುರುವಾರ ಸಂಜೆ 4.47 ಕ್ಕೆ ಜಾಮೀನಿನ ಬಗ್ಗೆ ಟ್ವೀಟ್ ಮಾಡಿದ್ದಾರೆ. ಆದಾಗ್ಯೂ, ಐದು ಗಂಟೆಗಳ ನಂತರ, ರಾತ್ರಿ 8.45ಕ್ಕೆ ಗೋಖಲೆಯನ್ನು ಮತ್ತೆ ಬಂಧಿಸಲಾಯಿತು ಎಂದು ಒ’ಬ್ರಿಯಾನ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಯಾವುದೇ ಸೂಚನೆ ಅಥವಾ ವಾರಂಟ್ ಇಲ್ಲದೆ ವಕ್ತಾರರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ‘ಅಜ್ಞಾತ ಸ್ಥಳ’ಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಎರಡನೇ ಪ್ರಕರಣದಲ್ಲಿ, ಗೋಖಲೆ ವಿರುದ್ಧ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125ರ (ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಮೊರ್ಬಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯೊಬ್ಬರು, ಪ್ರಥಮ ಮಾಹಿತಿ ವರದಿಯನ್ನು ಸಲ್ಲಿಸಿದ್ದಾರೆ. ಗುಜರಾತ್‌ನಲ್ಲಿ ರಾಜ್ಯ ಚುನಾವಣೆಗಳ ಕಾರಣ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲಿ ಗೋಖಲೆ ಅವರು ಸುಳ್ಳು ಸುದ್ದಿಯನ್ನು ಟ್ವೀಟ್ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.

ಏತನ್ಮಧ್ಯೆ, ತೃಣಮೂಲ ಕಾಂಗ್ರೆಸ್ ಪಕ್ಷವು ಐದು ಸದಸ್ಯರ ನಿಯೋಗವನ್ನು ಮೊರ್ಬಿಗೆ ಕಳುಹಿಸಿದೆ. “ಮೊರ್ಬಿ ದುರಂತಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನೂ ಈವರೆಗೆ ಬಂಧಿಸಿಲ್ಲ. ಆದರೆ ಸತ್ಯ ಹೇಳುವವರಿಗೆ ಕಿರುಕುಳ ನೀಡಲಾಗುತ್ತಿದೆ” ಎಂದು ಪಕ್ಷವು ಟ್ವೀಟ್ ಮಾಡಿದೆ. “ನಾವು ಸಾಕೇತ್ ಗೋಖಲೆ ಅವರ ಪರವಾಗಿ ನಿಲ್ಲುತ್ತೇವೆ ಮತ್ತು ನಾವು ನಮ್ಮ ಎಲ್ಲಾ ಶಕ್ತಿಯೊಂದಿಗೆ ಹೋರಾಡುತ್ತೇವೆ” ಎಂದು ಪ್ರತಿಕ್ರಿಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...