Homeಅಂಕಣಗಳುಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

ಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

- Advertisement -
- Advertisement -

ಸದ್ಯದ ಬಿಜೆಪಿ ಪಾರ್ಟಿಯೊಳಗೆ ರೌಡಿಗಳ ನೂಕುನುಗ್ಗಲು ನೋಡಿದ ಪ್ರತಾಪ ಸಿಮ್ಮ, ರೌಡಿಗಳು ಹೆದರಿ ಬಿಜೆಪಿಯೊಳಕ್ಕೆ ಬರಲುಕಾರಣ ನಮ್ಮ ಮೋದಿಯವರೇ ಎಂದರಂತಲ್ಲಾ; ಮೋದಿ ಉಗ್ರರನ್ನೇ ಅಟ್ಟಾಡಿಸಿಕೊಂಡು ಲಾಠಿ ಬೀಸುತ್ತಿದ್ದಾರೆ, ಆ ಲಾಠಿಗೆ ಸಿಕ್ಕ ಉಗ್ರರ ಕೆನ್ನೆ ಸಿಗಿದು ಹಲ್ಲು ಮುರಿದಿವೆ, ಕಣ್ಣು ಗೋಲಿಯಂತೆ ಆಕಾಶಕ್ಕೆ ಹಾರಿವೆ, ಕಿವಿ ತೂತುಬಿದ್ದು ಕೋಳ ತೊಡಿಸುವಂತಾಗಿವೆ; ಇದನ್ನ ನೋಡಿದ ಕೇಳಿದ ಊರ ರೌಡಿಗಳು, ಸದ್ಯಕ್ಕೆ ನಮ್ಮ ಅಂಗಾಂಗಗಳು ಆರೋಗ್ಯವಾಗಿರಬೇಕಾದರೆ, ಇದ್ದಂತೆಯೇ ಇರಬೇಕಾದರೆ ಮೋದಿ ಪಾರ್ಟಿಗೆ ಹೋಗಿ ಜೈಕಾರ ಹಾಕುವುದು ಬಿಟ್ಟು ಬೇರೆ ದಾರಿಯೇ ಕಾಣುತ್ತಿಲ್ಲ ಆದ್ದರಿಂದ ಬಿಜೆಪಿ ದಾರಿಯೇ ನಮಗೆ ಸೂಕ್ತವೆಂದು ತೀರ್ಮಾನಿಸಿದ್ದಾರೆ ಎಂದರಂತಲ್ಲಾ. ಇದಕ್ಕೆ ಒಂದು ಕಾರಣ ಸೇರಿಸುವುದಾದರೇ ಮೋದಿ ಸರಕಾರದ ಸಮಯದಲ್ಲಿ ಸಾವಿರಾರು ಮುಸ್ಲಿಮರನ್ನು ಸದೆಬಡಿದವರು ದೊಡ್ಡದೊಡ್ಡ ಹುದ್ದೆಗೆ ಏರಿದರು; ಇನ್ನು ಅವರ ಪಾರ್ಟಿಯ ರಾಜಕಾರಣಿಯೊಬ್ಬ ಕೇಸೊಂದರಲ್ಲಿ ಗಡಿಪಾರಾಗಿ ಕೊನೆಗೆ ಗೃಹಮಂತ್ರಿಯಾಗಿ ತನಗಾಗದವರ ಪಟ್ಟಿ ತಯಾರಿಸುತ್ತ ಕುಳಿತಿದ್ದಾರಂತಲ್ಲ. ಇಂತಹ ಜನ ಮುಂದೆ ಏನಾದರೂ ಮಾಡಬಲ್ಲರಾದ್ದರಿಂದ, ಆಡಳಿತ ನಡೆಸುತ್ತಿರುವ ಪಾರ್ಟಿಗೆ ಹೋಗಿ ಅಡಗಿಕೊಳ್ಳುವುದು ಸೂಕ್ತ ಎಂದು ಆಲೋಚಿಸುತ್ತಿರುವಾಗ ಫೈಟರ್ ರವಿ ಎಂಬಾತ ನಾಗಮಂಗಲದ ಕಡೆ ಹೊರಟನಂತಲ್ಲಾ, ಥೂತ್ತೇರಿ.

*****

ಈ ನಾಗಮಂಗಲಕ್ಕೂ ರಾಜಕಾರಣ ಕುಖ್ಯಾತಿಗೂ ಒಂದು ಇತಿಹಾಸವಿದೆ. ಈ ಹಿಂದೆ ಇಲ್ಲಿ ಶಾಸಕ, ಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಾಗಿದ್ದ ಹೆಚ್.ಟಿ ಕೃಷ್ಣಪ್ಪನವರು, ಹಿಂದೆ ಬಂದರೆ ಒದೆಯದ ಮುಂದೆ ಬಂದರೆ ಹಾಯದ ಗೋವಿನ ರೀತಿಯ ವ್ಯಕ್ತಿ; ಇದನ್ನು ತಮ್ಮ ಬದುಕಿನುದ್ದಕ್ಕೂ ಪಾಲಿಸಿದ್ದ ಮತ್ತು ವಕೀಲರಾಗಿದ್ದ ಇವರು ರಾಜಕಾರಣಕ್ಕೆ ಬಂದಿದ್ದು ಕೊಲೆಗಾರ ಅಪರಾಧಿಗಳನ್ನು ಬಿಡಿಸಿದ ಕಾರಣಕ್ಕೆ. ಗುಳುಕಾಯಿ ಹೊಸಳ್ಳಿ ಜನ ಶಾನುಭೋಗರನ್ನೇ ಕೊಲೆ ಮಾಡಿ ಜೈಲಿಗೆ ಹೋದರು. ಅವರನ್ನೆಲ್ಲಾ ನಿರಪರಾಧಿಗಳೆಂದು ತಾಂತ್ರಿಕ ಕಾರಣಗಳ ಮುಖಾಂತರ ಖುಲಾಸೆಗೊಳಿಸಿದರು. ಕೊಲೆಗಾರರನ್ನು ಬಿಡಿಸಿದ ವ್ಯಕ್ತಿ ನಮ್ಮನ್ನ ರಕ್ಷಿಸುತ್ತಾನೆಂದು ಭಾವಿಸಿದ ಜನ ಚುನಾವಣೆಯಲ್ಲಿ ಗೆಲ್ಲಿಸಿ ಶಾಸಕನನ್ನಾಗಿ ಮಾಡಿದರು. ಇವರ ನಂತರ ಬಂದ ಶಿವರಾಮೇಗೌಡ, ಗಂಗಾಧರಮೂರ್ತಿಯ ಕೊಲೆ ಕೇಸಿನಲ್ಲಿ ಸಿಲುಕಿ ಅಂತೂ ಆರೋಪಮುಕ್ತರಾಗಿ ಬಚಾವಾದರು. ಇವರ ನಂತರ ಬಂದ ಚಲುವರಾಯಸ್ವಾಮಿ ಬಳಿಯಿದ್ದ ಕೆಲ ರೌಡಿಗಳು ನಿಷ್ಠಾವಂತ ನಾಯಿಗಳಂತೆ ಬಾಲ ಅಲ್ಲಾಡಿಸಿದರೆ ಹೊರತು ಯಾರ ಮೇಲೂ ದಾಳಿ ಮಾಡಲಿಲ್ಲ. ಇವರ ನಂತರ ಬಂದ ಸುರೇಶ್‌ಗೌಡ ಹೆಚ್‌ಎಎಲ್‌ನ ವಸತಿ ನಿರ್ಮಾಣದ ಸೊಸೈಟಿ ಹಣದ ಅವ್ಯವಹಾರದ ಜೊತೆಗೆ ರೌಡಿಗಳಿಂದಲೂ ಹಣ ಪಡೆದು ಅದನ್ನು ಹಿಂದಿರುಗಿಸದೇ ಇರುವುದರಿಂದ ಆತನನ್ನ ಸೋಲಿಸಲೆಂದೇ ಫೈಟರ್ ರವಿ ಎಂಬ ರೌಡಿ ಬಂದು ಇಡೀ ತಾಲೂಕಿನ ತುಂಬ ಕಟೌಟ್ ಹಾಕಿದ್ದನಂತಲ್ಲಾ. ಏನು ಮಾಡಿದರೂ ರೌಡಿಯಂತೆ ಕಾಣದೆ ಮಠದ ಮೃತ ಸ್ವಾಮಿಯಂತೆ ಕಾಣುತ್ತಿದ್ದಾನೆ ಎಂದು ಜನ ನಗುತ್ತಿದ್ದಾರಲ್ಲಾ, ಥೂತ್ತೇರಿ.

*****

ಹಿಂದೆ ಹೆಚ್ಚು ಯುದ್ಧಗಳಾಗುತ್ತಿದ್ದವು; ದೈಹಿಕವಾಗಿ ಭಲಾಢ್ಯವಾಗಿದ್ದ ಮತ್ತು ತೋಳು ತಿಮಿರಿನ ಜನ ಸೈನ್ಯಕ್ಕೆ ಸೇರಿ ಹತರಾಗುತ್ತಿದ್ದರು. ಅವರ ಹೆಂಡತಿಯರು ಅನಿವಾರ್ಯವಾಗಿ ಸಮಸ್ಯೆಗಳಿಗೆ ತುತ್ತಾಗುತ್ತಿದ್ದರು. ಇವರೆಲ್ಲಾ ಹೆಚ್ಚಿನ ಸಂಖ್ಯೆಯಲ್ಲಿ ಶೋಷಿತ ಸಮುದಾಯಗಳ ಜನ. ಸ್ವಾತಂತ್ರ್ಯಾನಂತರ ರಾಜಗುರುಗಳು ನಿರ್ನಾಮವಾಗಿ ಸೈನಿಕರು ಇಲ್ಲವಾದ ಕಾರಣ ಆ ಮನಸ್ಥಿತಿಯವರು ಊರುಗಳಲ್ಲೇ ರೌಡಿಗಳಾದರು; ಅವರು ಆ ತರಹ ಆಗಲು ಒಂದು ಸಣ್ಣ ಕಾರಣ ಸಾಕು, ಮುಂದೆ ಪೊಲೀಸರೇ ಬೆಳೆಸಿ ಭೂಗತಲೋಕ ಸೇರಿಸುತ್ತಾರೆ. ಈ ಭೂಗತ ಲೋಕದ ಕೃತ್ಯಗಳು ಭಯಾನಕ. ರೌಡಿಗಳ ಆಯಸ್ಸು ಮುಗಿದು ಸತ್ತ ಉದಾಹರಣೆ ವಿರಳ. ಭೂಗತ ಲೋಕದ ರಾಜ-ಡಾನ್ ದೈತ್ಯ ದೇಹಿಯಾಗಿರುತ್ತಾನೆ. ಜಯರಾಜ್, ಬಲರಾಮ್, ಫಯಾಜ್, ಕೊತ್ವಾಲ, ಶಿವರಾಂ, ಸುನಿಲ್ ಇತ್ಯಾದಿ ವ್ಯಕ್ತಿಗಳ ಆಕಾರ ನೋಡಿದರೆ ನಿಮಗೆ ತಿಳಿಯುತ್ತದೆ. ಆದರೆ ದೇಹಾಕೃತಿಯಲ್ಲ ದುರ್ಬಲವಾಗಿದ್ದ ಮುತ್ತಪ್ಪ ರೈ ಬುದ್ಧಿವಂತಿಕೆ ಉಪಯೋಗಿಸಿ ಭೂಗತಲೋಕಕ್ಕೆ ಪಿಸ್ತೂಲು ತಂದ ವ್ಯಕ್ತಿ. ಅದನ್ನ ಆತನೇ ಉಪಯೋಗಿಸಬೇಕಿಲ್ಲ; ಕಾಸುಕೊಟ್ಟು ನಿರ್ದೇಶನ ನೀಡಿದರೆ ಸಾಕು; ಯಾವ ಹುಡುಗನಾದರೂ ಆ ಕೆಲಸ ಮಾಡಿ ತಲೆಮರೆಸಿಕೊಳ್ಳಬಲ್ಲ. ಇಂತಹ ಕೆಲಸವನ್ನ ದುಬಾಯಿಯಲ್ಲಿ ಕುಳಿತು ಮಾಡಿ ಯಾವ ಕೇಸುಗಳನ್ನು ಕಡಿಮೆ ಅಂಟಿಸಿಕೊಂಡು ಬದುಕಿದವನು ಈ ಮುತ್ತಪ್ಪ ರೈ. ಅಂತಹ ರೈಗೂ ನಾಗಮಂಗಲದ ಕಡೆ ಚಿಲ್ಲರೆ ರಾಜಕಾರಣಿಯೊಬ್ಬ ಕೋಟ್ಯಂತರ ರೂಪಾಯಿಗಳ ನಾಮ ಎಳೆದು, ನಾಳೆ ಕೊಡುತ್ತೇನೆ ನಾಡಿದ್ದು ಗ್ಯಾರಂಟಿ ಎಂದು ಹೇಳುತ್ತಿರುವಾಗಲೇ ಮುತ್ತಪ್ಪ ರೈ ದೇಹ ತ್ಯಜಿಸಿದ. ಅಂತಹ ಮುತ್ತಪ್ಪನಿಗೆ ಮಣ್ಣು ತಿನ್ನಿಸಿದವರು ಈ ನಾಗಮಂಗಲದ ಮಣ್ಣಿನವನು ಅನ್ನುವುದಾದರೆ ಇನ್ನ ಬಿಜೆಪಿ ರೌಡಿಗಳು ಇಲ್ಲಿ ಉದ್ಧಾರವಾಗುವುದುಂಟೆ, ಥೂತ್ತೇರಿ.

*****

ಬೆಂಗಳೂರಿಂದ ಎರಡೂವರೆ ಗಂಟೆ ಪ್ರಯಾಣದಷ್ಟು ದೂರವಿರುವ ನಾಗಮಂಗಲ ಕೆಲ ರೌಡಿಗಳಿಗೆ ಸುರಕ್ಷಿತ ಜಾಗ. ದರೋಡೆ ಕೇಸೊಂದರಿಂದ ಪರಾರಿಯಾಗಿ ಎಲ್ಲಿ ಅಡಗಿಕೊಳ್ಳಬೇಕೆಂದು ರೌಡಿಗಳೆಲ್ಲಾ ಚರ್ಚಿಸುತ್ತಿರುವಾಗ ಇವರಿಗೆ ಕಾಫಿ, ಸಿಗರೇಟು ತಂದುಕೊಡುತ್ತಿದ್ದ ಹುಡುಗನೊಬ್ಬ ,”ಸಾರ್ ನಾಗಮಂಗಲದತ್ರ ಇರೋ ನಮ್ಮೂರಲ್ಲಿರಿ, ಅಲ್ಲಿಗೆ ಯಾರೂ ಬರಕ್ಕಾಗಲ್ಲ” ಎಂದ. ಮರು ಮಾತನಾಡದ ರೌಡಿಗಳು ಆ ಮುಗ್ದ ಹುಡುಗನ ಹಿಂದೆ ಬಂದು ಅವನ ಮನೆಯೊಳಗೆ ಇಸ್ಪಿಟ್ ಆಡುತ್ತ, ಮಾಂಸ ಮದ್ಯದ ಅಮಲಲ್ಲಿ ತೇಲಾಡುತ್ತಿರುವಾಗ ಹುಡುಗನ ಅಪ್ಪ “ಮಗ ಯಾರ್ಲ ಇವುರು” ಅಂದ. “ಇವುರ್‍ಯೆಲ್ಲ ಬೆಂಗಳೂರು ರೌಡಿಗಳು ಕಣಪ್ಪ, ಯಾವ ಕ್ಯಲಸ ಮಾಡಕ್ಕೂ ಹೇಸದಿಲ್ಲ. ಅದೇನೊ ಮಾಡಿ ಇಲ್ಲಿ ಬಂದವುರೆ ಯಾರಿಗೂ ಹೇಳಬ್ಯಾಡ” ಅಂದ. ಕೂಡಲೇ ಆ ಅಪ್ಪ ರೌಡಿಯೊಬ್ಬನ ಜುಬ್ಬ ಹಾಕಿಕೊಂಡ; ಅದಾಗಲೇ ರೌಡಿಗಳೇ ಕೊಟ್ಟ ವಿಸ್ಕಿ ಕುಡಿದಿದ್ದರಿಂದ, ಊರಮುಂದಿನ ಕಟ್ಟೆಮೇಲೆ ಕುಳಿತು “ಅದ್ಯಾವನನ್ನ ಮಗ ಬತ್ತಿರೋ ಬರ್ಲಿ, ಏನಂತ ತಿಳಕಂಡಿದ್ದಿರಿ ಈ ನನ್ನ? ಬಂದು ಮುಟ್ಟಿ ನೋಡಿ ನಿಮ್ಮ ಕತೆ ಏನಾಯ್ತದೆ ಅಂತ ಗೊತ್ತಾಯ್ತದೆ. ಯಂಥಾ ಜನ ತಂದು ನನ್ನ ಮನಿಲಿ ಮಡಿಕಂಡಿದ್ದಿನಿ ಗೊತ್ತೆ? ಕೊಲೆ ಮಾಡಿ ಜಯಿಸಿಗಂಡೋರು ನನ್ನ ಮನೇಲಿ ಇಸ್ಪೀಟ್ ಆಡ್ತಾ ಅವುರೆ ಗೊತ್ತೆ” ಎಂದು ಅವಾಜ್ ಹಾಕಿದ. ಆತನ ಎದುರು ಜನ ಸೇರತೊಡಗಿದರು. ಇತ್ತ ರೌಡಿಗಳು ಹಿತ್ತಲ ಬಾಗಿಲಿಂದ ಎದ್ದುಬಿದ್ದು ಓಡತೊಡಗಿದರು! ಎಂದಿನಂತೆ ಊರ ಜನಕ್ಕೆ ಆ ಕೊಚ್ಚಿಕೊಂಡ ವ್ಯಕ್ತಿ ಮತ್ತೊಂದು ಸುಳ್ಳು ಹೇಳಿದಂತಾಯ್ತು. ಈಗ ಅಂತಹ ಸ್ಥಿತಿಯಿಲ್ಲ. ಫೈಟರ್ ರವಿ ಕಾರಣಕ್ಕೆ ಬೆಂಗಳೂರು ಕೆಲ ಪುಡಿರೌಡಿಗಳು ಬಂದು ಇಲ್ಲಿನ ತೋಟ ತುಡಿಕೆಯಲ್ಲಿ ಬೇಯುತ್ತಿರುವ ಬಾಡಿಗಾಗಿ ಕಾಯಬಹುದು. ಅಂತೂ ಬಿಜೆಪಿ ಪಾಪದಕೊಡ ರೌಡಿಗಳಿಂದ ತುಂಬತೊಡಗಿದೆಯಂತಲ್ಲಾ, ಥೂತ್ತೇರಿ.

ಇದನ್ನೂ ಓದಿ: ಅನಂತನಾಗ್ ಮೋದಿ ಮೆಚ್ಚಿದ್ದರಲ್ಲಿ ಅಚ್ಚರಿಯೇನಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...