Homeಅಂಕಣಗಳುಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

ಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

- Advertisement -
- Advertisement -

ಸದ್ಯದ ಬಿಜೆಪಿ ಪಾರ್ಟಿಯೊಳಗೆ ರೌಡಿಗಳ ನೂಕುನುಗ್ಗಲು ನೋಡಿದ ಪ್ರತಾಪ ಸಿಮ್ಮ, ರೌಡಿಗಳು ಹೆದರಿ ಬಿಜೆಪಿಯೊಳಕ್ಕೆ ಬರಲುಕಾರಣ ನಮ್ಮ ಮೋದಿಯವರೇ ಎಂದರಂತಲ್ಲಾ; ಮೋದಿ ಉಗ್ರರನ್ನೇ ಅಟ್ಟಾಡಿಸಿಕೊಂಡು ಲಾಠಿ ಬೀಸುತ್ತಿದ್ದಾರೆ, ಆ ಲಾಠಿಗೆ ಸಿಕ್ಕ ಉಗ್ರರ ಕೆನ್ನೆ ಸಿಗಿದು ಹಲ್ಲು ಮುರಿದಿವೆ, ಕಣ್ಣು ಗೋಲಿಯಂತೆ ಆಕಾಶಕ್ಕೆ ಹಾರಿವೆ, ಕಿವಿ ತೂತುಬಿದ್ದು ಕೋಳ ತೊಡಿಸುವಂತಾಗಿವೆ; ಇದನ್ನ ನೋಡಿದ ಕೇಳಿದ ಊರ ರೌಡಿಗಳು, ಸದ್ಯಕ್ಕೆ ನಮ್ಮ ಅಂಗಾಂಗಗಳು ಆರೋಗ್ಯವಾಗಿರಬೇಕಾದರೆ, ಇದ್ದಂತೆಯೇ ಇರಬೇಕಾದರೆ ಮೋದಿ ಪಾರ್ಟಿಗೆ ಹೋಗಿ ಜೈಕಾರ ಹಾಕುವುದು ಬಿಟ್ಟು ಬೇರೆ ದಾರಿಯೇ ಕಾಣುತ್ತಿಲ್ಲ ಆದ್ದರಿಂದ ಬಿಜೆಪಿ ದಾರಿಯೇ ನಮಗೆ ಸೂಕ್ತವೆಂದು ತೀರ್ಮಾನಿಸಿದ್ದಾರೆ ಎಂದರಂತಲ್ಲಾ. ಇದಕ್ಕೆ ಒಂದು ಕಾರಣ ಸೇರಿಸುವುದಾದರೇ ಮೋದಿ ಸರಕಾರದ ಸಮಯದಲ್ಲಿ ಸಾವಿರಾರು ಮುಸ್ಲಿಮರನ್ನು ಸದೆಬಡಿದವರು ದೊಡ್ಡದೊಡ್ಡ ಹುದ್ದೆಗೆ ಏರಿದರು; ಇನ್ನು ಅವರ ಪಾರ್ಟಿಯ ರಾಜಕಾರಣಿಯೊಬ್ಬ ಕೇಸೊಂದರಲ್ಲಿ ಗಡಿಪಾರಾಗಿ ಕೊನೆಗೆ ಗೃಹಮಂತ್ರಿಯಾಗಿ ತನಗಾಗದವರ ಪಟ್ಟಿ ತಯಾರಿಸುತ್ತ ಕುಳಿತಿದ್ದಾರಂತಲ್ಲ. ಇಂತಹ ಜನ ಮುಂದೆ ಏನಾದರೂ ಮಾಡಬಲ್ಲರಾದ್ದರಿಂದ, ಆಡಳಿತ ನಡೆಸುತ್ತಿರುವ ಪಾರ್ಟಿಗೆ ಹೋಗಿ ಅಡಗಿಕೊಳ್ಳುವುದು ಸೂಕ್ತ ಎಂದು ಆಲೋಚಿಸುತ್ತಿರುವಾಗ ಫೈಟರ್ ರವಿ ಎಂಬಾತ ನಾಗಮಂಗಲದ ಕಡೆ ಹೊರಟನಂತಲ್ಲಾ, ಥೂತ್ತೇರಿ.

*****

ಈ ನಾಗಮಂಗಲಕ್ಕೂ ರಾಜಕಾರಣ ಕುಖ್ಯಾತಿಗೂ ಒಂದು ಇತಿಹಾಸವಿದೆ. ಈ ಹಿಂದೆ ಇಲ್ಲಿ ಶಾಸಕ, ಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಾಗಿದ್ದ ಹೆಚ್.ಟಿ ಕೃಷ್ಣಪ್ಪನವರು, ಹಿಂದೆ ಬಂದರೆ ಒದೆಯದ ಮುಂದೆ ಬಂದರೆ ಹಾಯದ ಗೋವಿನ ರೀತಿಯ ವ್ಯಕ್ತಿ; ಇದನ್ನು ತಮ್ಮ ಬದುಕಿನುದ್ದಕ್ಕೂ ಪಾಲಿಸಿದ್ದ ಮತ್ತು ವಕೀಲರಾಗಿದ್ದ ಇವರು ರಾಜಕಾರಣಕ್ಕೆ ಬಂದಿದ್ದು ಕೊಲೆಗಾರ ಅಪರಾಧಿಗಳನ್ನು ಬಿಡಿಸಿದ ಕಾರಣಕ್ಕೆ. ಗುಳುಕಾಯಿ ಹೊಸಳ್ಳಿ ಜನ ಶಾನುಭೋಗರನ್ನೇ ಕೊಲೆ ಮಾಡಿ ಜೈಲಿಗೆ ಹೋದರು. ಅವರನ್ನೆಲ್ಲಾ ನಿರಪರಾಧಿಗಳೆಂದು ತಾಂತ್ರಿಕ ಕಾರಣಗಳ ಮುಖಾಂತರ ಖುಲಾಸೆಗೊಳಿಸಿದರು. ಕೊಲೆಗಾರರನ್ನು ಬಿಡಿಸಿದ ವ್ಯಕ್ತಿ ನಮ್ಮನ್ನ ರಕ್ಷಿಸುತ್ತಾನೆಂದು ಭಾವಿಸಿದ ಜನ ಚುನಾವಣೆಯಲ್ಲಿ ಗೆಲ್ಲಿಸಿ ಶಾಸಕನನ್ನಾಗಿ ಮಾಡಿದರು. ಇವರ ನಂತರ ಬಂದ ಶಿವರಾಮೇಗೌಡ, ಗಂಗಾಧರಮೂರ್ತಿಯ ಕೊಲೆ ಕೇಸಿನಲ್ಲಿ ಸಿಲುಕಿ ಅಂತೂ ಆರೋಪಮುಕ್ತರಾಗಿ ಬಚಾವಾದರು. ಇವರ ನಂತರ ಬಂದ ಚಲುವರಾಯಸ್ವಾಮಿ ಬಳಿಯಿದ್ದ ಕೆಲ ರೌಡಿಗಳು ನಿಷ್ಠಾವಂತ ನಾಯಿಗಳಂತೆ ಬಾಲ ಅಲ್ಲಾಡಿಸಿದರೆ ಹೊರತು ಯಾರ ಮೇಲೂ ದಾಳಿ ಮಾಡಲಿಲ್ಲ. ಇವರ ನಂತರ ಬಂದ ಸುರೇಶ್‌ಗೌಡ ಹೆಚ್‌ಎಎಲ್‌ನ ವಸತಿ ನಿರ್ಮಾಣದ ಸೊಸೈಟಿ ಹಣದ ಅವ್ಯವಹಾರದ ಜೊತೆಗೆ ರೌಡಿಗಳಿಂದಲೂ ಹಣ ಪಡೆದು ಅದನ್ನು ಹಿಂದಿರುಗಿಸದೇ ಇರುವುದರಿಂದ ಆತನನ್ನ ಸೋಲಿಸಲೆಂದೇ ಫೈಟರ್ ರವಿ ಎಂಬ ರೌಡಿ ಬಂದು ಇಡೀ ತಾಲೂಕಿನ ತುಂಬ ಕಟೌಟ್ ಹಾಕಿದ್ದನಂತಲ್ಲಾ. ಏನು ಮಾಡಿದರೂ ರೌಡಿಯಂತೆ ಕಾಣದೆ ಮಠದ ಮೃತ ಸ್ವಾಮಿಯಂತೆ ಕಾಣುತ್ತಿದ್ದಾನೆ ಎಂದು ಜನ ನಗುತ್ತಿದ್ದಾರಲ್ಲಾ, ಥೂತ್ತೇರಿ.

*****

ಹಿಂದೆ ಹೆಚ್ಚು ಯುದ್ಧಗಳಾಗುತ್ತಿದ್ದವು; ದೈಹಿಕವಾಗಿ ಭಲಾಢ್ಯವಾಗಿದ್ದ ಮತ್ತು ತೋಳು ತಿಮಿರಿನ ಜನ ಸೈನ್ಯಕ್ಕೆ ಸೇರಿ ಹತರಾಗುತ್ತಿದ್ದರು. ಅವರ ಹೆಂಡತಿಯರು ಅನಿವಾರ್ಯವಾಗಿ ಸಮಸ್ಯೆಗಳಿಗೆ ತುತ್ತಾಗುತ್ತಿದ್ದರು. ಇವರೆಲ್ಲಾ ಹೆಚ್ಚಿನ ಸಂಖ್ಯೆಯಲ್ಲಿ ಶೋಷಿತ ಸಮುದಾಯಗಳ ಜನ. ಸ್ವಾತಂತ್ರ್ಯಾನಂತರ ರಾಜಗುರುಗಳು ನಿರ್ನಾಮವಾಗಿ ಸೈನಿಕರು ಇಲ್ಲವಾದ ಕಾರಣ ಆ ಮನಸ್ಥಿತಿಯವರು ಊರುಗಳಲ್ಲೇ ರೌಡಿಗಳಾದರು; ಅವರು ಆ ತರಹ ಆಗಲು ಒಂದು ಸಣ್ಣ ಕಾರಣ ಸಾಕು, ಮುಂದೆ ಪೊಲೀಸರೇ ಬೆಳೆಸಿ ಭೂಗತಲೋಕ ಸೇರಿಸುತ್ತಾರೆ. ಈ ಭೂಗತ ಲೋಕದ ಕೃತ್ಯಗಳು ಭಯಾನಕ. ರೌಡಿಗಳ ಆಯಸ್ಸು ಮುಗಿದು ಸತ್ತ ಉದಾಹರಣೆ ವಿರಳ. ಭೂಗತ ಲೋಕದ ರಾಜ-ಡಾನ್ ದೈತ್ಯ ದೇಹಿಯಾಗಿರುತ್ತಾನೆ. ಜಯರಾಜ್, ಬಲರಾಮ್, ಫಯಾಜ್, ಕೊತ್ವಾಲ, ಶಿವರಾಂ, ಸುನಿಲ್ ಇತ್ಯಾದಿ ವ್ಯಕ್ತಿಗಳ ಆಕಾರ ನೋಡಿದರೆ ನಿಮಗೆ ತಿಳಿಯುತ್ತದೆ. ಆದರೆ ದೇಹಾಕೃತಿಯಲ್ಲ ದುರ್ಬಲವಾಗಿದ್ದ ಮುತ್ತಪ್ಪ ರೈ ಬುದ್ಧಿವಂತಿಕೆ ಉಪಯೋಗಿಸಿ ಭೂಗತಲೋಕಕ್ಕೆ ಪಿಸ್ತೂಲು ತಂದ ವ್ಯಕ್ತಿ. ಅದನ್ನ ಆತನೇ ಉಪಯೋಗಿಸಬೇಕಿಲ್ಲ; ಕಾಸುಕೊಟ್ಟು ನಿರ್ದೇಶನ ನೀಡಿದರೆ ಸಾಕು; ಯಾವ ಹುಡುಗನಾದರೂ ಆ ಕೆಲಸ ಮಾಡಿ ತಲೆಮರೆಸಿಕೊಳ್ಳಬಲ್ಲ. ಇಂತಹ ಕೆಲಸವನ್ನ ದುಬಾಯಿಯಲ್ಲಿ ಕುಳಿತು ಮಾಡಿ ಯಾವ ಕೇಸುಗಳನ್ನು ಕಡಿಮೆ ಅಂಟಿಸಿಕೊಂಡು ಬದುಕಿದವನು ಈ ಮುತ್ತಪ್ಪ ರೈ. ಅಂತಹ ರೈಗೂ ನಾಗಮಂಗಲದ ಕಡೆ ಚಿಲ್ಲರೆ ರಾಜಕಾರಣಿಯೊಬ್ಬ ಕೋಟ್ಯಂತರ ರೂಪಾಯಿಗಳ ನಾಮ ಎಳೆದು, ನಾಳೆ ಕೊಡುತ್ತೇನೆ ನಾಡಿದ್ದು ಗ್ಯಾರಂಟಿ ಎಂದು ಹೇಳುತ್ತಿರುವಾಗಲೇ ಮುತ್ತಪ್ಪ ರೈ ದೇಹ ತ್ಯಜಿಸಿದ. ಅಂತಹ ಮುತ್ತಪ್ಪನಿಗೆ ಮಣ್ಣು ತಿನ್ನಿಸಿದವರು ಈ ನಾಗಮಂಗಲದ ಮಣ್ಣಿನವನು ಅನ್ನುವುದಾದರೆ ಇನ್ನ ಬಿಜೆಪಿ ರೌಡಿಗಳು ಇಲ್ಲಿ ಉದ್ಧಾರವಾಗುವುದುಂಟೆ, ಥೂತ್ತೇರಿ.

*****

ಬೆಂಗಳೂರಿಂದ ಎರಡೂವರೆ ಗಂಟೆ ಪ್ರಯಾಣದಷ್ಟು ದೂರವಿರುವ ನಾಗಮಂಗಲ ಕೆಲ ರೌಡಿಗಳಿಗೆ ಸುರಕ್ಷಿತ ಜಾಗ. ದರೋಡೆ ಕೇಸೊಂದರಿಂದ ಪರಾರಿಯಾಗಿ ಎಲ್ಲಿ ಅಡಗಿಕೊಳ್ಳಬೇಕೆಂದು ರೌಡಿಗಳೆಲ್ಲಾ ಚರ್ಚಿಸುತ್ತಿರುವಾಗ ಇವರಿಗೆ ಕಾಫಿ, ಸಿಗರೇಟು ತಂದುಕೊಡುತ್ತಿದ್ದ ಹುಡುಗನೊಬ್ಬ ,”ಸಾರ್ ನಾಗಮಂಗಲದತ್ರ ಇರೋ ನಮ್ಮೂರಲ್ಲಿರಿ, ಅಲ್ಲಿಗೆ ಯಾರೂ ಬರಕ್ಕಾಗಲ್ಲ” ಎಂದ. ಮರು ಮಾತನಾಡದ ರೌಡಿಗಳು ಆ ಮುಗ್ದ ಹುಡುಗನ ಹಿಂದೆ ಬಂದು ಅವನ ಮನೆಯೊಳಗೆ ಇಸ್ಪಿಟ್ ಆಡುತ್ತ, ಮಾಂಸ ಮದ್ಯದ ಅಮಲಲ್ಲಿ ತೇಲಾಡುತ್ತಿರುವಾಗ ಹುಡುಗನ ಅಪ್ಪ “ಮಗ ಯಾರ್ಲ ಇವುರು” ಅಂದ. “ಇವುರ್‍ಯೆಲ್ಲ ಬೆಂಗಳೂರು ರೌಡಿಗಳು ಕಣಪ್ಪ, ಯಾವ ಕ್ಯಲಸ ಮಾಡಕ್ಕೂ ಹೇಸದಿಲ್ಲ. ಅದೇನೊ ಮಾಡಿ ಇಲ್ಲಿ ಬಂದವುರೆ ಯಾರಿಗೂ ಹೇಳಬ್ಯಾಡ” ಅಂದ. ಕೂಡಲೇ ಆ ಅಪ್ಪ ರೌಡಿಯೊಬ್ಬನ ಜುಬ್ಬ ಹಾಕಿಕೊಂಡ; ಅದಾಗಲೇ ರೌಡಿಗಳೇ ಕೊಟ್ಟ ವಿಸ್ಕಿ ಕುಡಿದಿದ್ದರಿಂದ, ಊರಮುಂದಿನ ಕಟ್ಟೆಮೇಲೆ ಕುಳಿತು “ಅದ್ಯಾವನನ್ನ ಮಗ ಬತ್ತಿರೋ ಬರ್ಲಿ, ಏನಂತ ತಿಳಕಂಡಿದ್ದಿರಿ ಈ ನನ್ನ? ಬಂದು ಮುಟ್ಟಿ ನೋಡಿ ನಿಮ್ಮ ಕತೆ ಏನಾಯ್ತದೆ ಅಂತ ಗೊತ್ತಾಯ್ತದೆ. ಯಂಥಾ ಜನ ತಂದು ನನ್ನ ಮನಿಲಿ ಮಡಿಕಂಡಿದ್ದಿನಿ ಗೊತ್ತೆ? ಕೊಲೆ ಮಾಡಿ ಜಯಿಸಿಗಂಡೋರು ನನ್ನ ಮನೇಲಿ ಇಸ್ಪೀಟ್ ಆಡ್ತಾ ಅವುರೆ ಗೊತ್ತೆ” ಎಂದು ಅವಾಜ್ ಹಾಕಿದ. ಆತನ ಎದುರು ಜನ ಸೇರತೊಡಗಿದರು. ಇತ್ತ ರೌಡಿಗಳು ಹಿತ್ತಲ ಬಾಗಿಲಿಂದ ಎದ್ದುಬಿದ್ದು ಓಡತೊಡಗಿದರು! ಎಂದಿನಂತೆ ಊರ ಜನಕ್ಕೆ ಆ ಕೊಚ್ಚಿಕೊಂಡ ವ್ಯಕ್ತಿ ಮತ್ತೊಂದು ಸುಳ್ಳು ಹೇಳಿದಂತಾಯ್ತು. ಈಗ ಅಂತಹ ಸ್ಥಿತಿಯಿಲ್ಲ. ಫೈಟರ್ ರವಿ ಕಾರಣಕ್ಕೆ ಬೆಂಗಳೂರು ಕೆಲ ಪುಡಿರೌಡಿಗಳು ಬಂದು ಇಲ್ಲಿನ ತೋಟ ತುಡಿಕೆಯಲ್ಲಿ ಬೇಯುತ್ತಿರುವ ಬಾಡಿಗಾಗಿ ಕಾಯಬಹುದು. ಅಂತೂ ಬಿಜೆಪಿ ಪಾಪದಕೊಡ ರೌಡಿಗಳಿಂದ ತುಂಬತೊಡಗಿದೆಯಂತಲ್ಲಾ, ಥೂತ್ತೇರಿ.

ಇದನ್ನೂ ಓದಿ: ಅನಂತನಾಗ್ ಮೋದಿ ಮೆಚ್ಚಿದ್ದರಲ್ಲಿ ಅಚ್ಚರಿಯೇನಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...