Homeಚಳವಳಿಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಯಾಗಲಿ: ಡಿ.11 ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟ

ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಯಾಗಲಿ: ಡಿ.11 ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟ

ನವೆಂಬರ್ 28ರಿಂದ ಹರಿಹರದಲ್ಲಿರುವ ದಸಸಂ ಸಂಸ್ಥಾಪಕರಾದ ಬಿ.ಕೃಷ್ಣಪ್ಪನವರ ಚೈತನ್ಯ ಭೂಮಿಯಿಂದ ಆರಂಭವಾಗಿರುವ ಪಾದಯಾತ್ರೆಯು ಸದ್ಯ ನೆಲಮಂಗಲ ತಲುಪಿದೆ.

- Advertisement -
- Advertisement -

ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಯಾಗಲಿ ಎಂದು ಒತ್ತಾಯಿಸಿ ಡಿ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ’ ವತಿಯಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ.

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ನವೆಂಬರ್ 28ರಿಂದ ಹರಿಹರದಲ್ಲಿರುವ ದಸಸಂ ಸಂಸ್ಥಾಪಕರಾದ ಬಿ.ಕೃಷ್ಣಪ್ಪನವರ ಚೈತನ್ಯ ಭೂಮಿಯಿಂದ ಆರಂಭವಾಗಿರುವ ಪಾದಯಾತ್ರೆಯು ಸದ್ಯ ನೆಲಮಂಗಲ ತಲುಪಿದ್ದು, ಡಿಸೆಂಬರ್ 11 ರಂದು ಬೆಂಗಳೂರಿನ ಹೋರಾಟಕ್ಕೆ ಸೇರಿಕೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹೋರಾಟದ ಮೂಂಚೂಣಿ ನಾಯಕರಾದ ಅಂಬಣ್ಣ ಅರೋಲಿಕರ್, ಎಂ.ಆರ್ ಭೇರಿ, ಕರಿಯಪ್ಪ ಗುಡಿಮನಿ, ಡಿಎಸ್ಎಸ್ ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್, ಸುರೇಶ್, ನಾಗವೇಂದ್ರ ಬೈಯ್ಯಾರೆಡ್ಡಿ, ಮಸ್ಕಿ ಮುರಾರಿ ಸೇರಿದಂತೆ ನೂರಾರು ಹೋರಾಟಗಾರರು ಕಳೆದ 11 ದಿನಗಳಿಂದ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ಒಳಮೀಸಲಾತಿ ಜಾರಿಗಾಗಿ ಮೂರು ದಶಕಗಳಿಂದ ನಿರಂತರ ಹೋರಾಟ ನಡೆಯುತ್ತಿದ್ದು ಅದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ನೂರಾರು ಮುಖಂಡರು ಇದಕ್ಕಾಗಿ ಹಗಲಿರುಳು ಹೋರಾಟದಲ್ಲಿ ನಿರತರಾಗಿದ್ದಾರೆ. ಡಿಸೆಂಬರ್ 11ರ ಹೋರಾಟಕ್ಕೆ ರಾಜ್ಯದ ಎಲ್ಲಾ ಮೂಲೆಗಳಿಂದ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. ಡಿಸೆಂಬರ್ 6ರಂದು ನಡೆದ ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶದಲ್ಲಿಯೂ ಸಹ ಒಳಮೀಸಲಾತಿ ಜಾರಿಯಾಗಬೇಕೆಂಬ ನಿರ್ಣಯ ಅಂಗೀಕರಿಸಲಾಗಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿದ ಒತ್ತಡ

ಇದೀಗ ಬೆಂಗಳೂರಿನಲ್ಲಿ ಡಿಸೆಂಬರ್ 11 ರಂದು ನಡೆಯುವ ಐತಿಹಾಸಿಕ ಬೃಹತ್ ಹೋರಾಟಕ್ಕೆ ಸಿದ್ದತೆಗಳು ನಡೆಯುತ್ತಿವೆ. ಒಳಮೀಸಲಾತಿ ಜಾರಿಯಾಗಬೇಕೆಂಬ ಹಕ್ಕೊತ್ತಾಯ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಕೇಳಿಬರುತ್ತಿದ್ದು, ಈ ಕುರಿತ ಪೋಸ್ಟರ್‌ಗಳು ವ್ಯಾಪಕವಾಗಿ ಹರಿದಾಡುತ್ತಿವೆ.

ಮೂರೇ ದಿ‌ನದಲ್ಲಿ EWS ಮೀಸಲಾತಿಗಾಗಿ ಸಂವಿಧಾನ ತಿದ್ದುಪಡಿ ಮಾಡಿದವರಿಗೆ ಮೂವತ್ತು ವರ್ಷದಿಂದ ಕೇಳುತ್ತಿರುವ ಒಳಮೀಸಲಾತಿಯನ್ನ ಜಾರಿಮಾಡಲು ಏನು ಅಡ್ಡಿ? ‘ಸಾಮಾಜಿಕ‌ ನ್ಯಾಯವು ದಮನಿತರ ಪಾಲಿಗೆ ದಕ್ಕುವ ಒಳಮೀಸಲಾತಿಯೊಂದಿಗೆ ಸಾರ್ಥಕಗೊಳ್ಳುತ್ತದೆ ಎಂಬ ಸಮಷ್ಠಿ ನ್ಯಾಯ ಪ್ರಜ್ಞೆಯನ್ನು ಆಳುವವರಿಗೆ ಅರ್ಥ ಮಾಡಿಸುವ ಕಾಲ ಬಂದಿದೆ’. “ಮೀಸಲಾತಿ ಎನ್ನುವುದು ಸಾಮಾಜಿಕ ನ್ಯಾಯ, ಮೀಸಲಾತಿ ಪರವಾಗಿರುವರೆಲ್ಲಾ ಒಳಮೀಸಲಾತಿ ಪರವಾಗಿ ಇರಲೇಬೇಕು” ಎಂಬ ಹೇಳಿಕೆಗಳು ವೈರಲ್ ಆಗಿವೆ.

ಅಂಬೇಡ್ಕರ್‌ರವರು ಪ್ರಸ್ತಾಪಿಸಿರುವ ಜಾತಿ ಒಳಗೆ ಮತ್ತು ಜಾತಿ ಜಾತಿಗಳ ನಡುವಿನ ಸ್ತರೀಯ ಅಸಮಾನತೆಯನ್ನು ತಡೆದು ಹಾಕಲು ಒಳಮೀಸಲಾತಿಯು ತಾಂತ್ರಿಕ ಸಾಧನವಾದರೆ, ಮುಂದೆ ಹೋದವರು ಹಿಂದಿರುವವರಿಗಾಗಿ ಕಾಯುವ, ಮೇಲೆ ಏರಿದವರು ಕೆಳಗಿನವರಿಗಾಗಿ ಕೈ ಚಾಚುವ ಸಹಾನುಭೂತಿ ಬಂಧುತ್ವದ ಅಡಿಪಾಯವಾಗಿದೆ. ಹೆಜ್ಜೆಗಳು ಸಮಪಾಲಿಗಾಗಿ ಸಾಗಿ ಬಂಧುತ್ವವ ಬೆಸೆಯಲಿ ಎಂಬ ಲೇಖಕಿ, ಹೋರಾಟಗಾರ್ತಿ ದು. ಸರಸ್ವತಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ; ತುಳಿತಕ್ಕೊಳಗಾದವರೆಲ್ಲರೂ ದಲಿತರೆ; ಆದರೆ ದಲಿತರೆಲ್ಲರೂ ಅಸ್ಪೃಶ್ಯರಲ್ಲ- ಡಾ.ಎಸ್.ಕೆ.ಮಂಜುನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...