Homeಚಳವಳಿಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಯಾಗಲಿ: ಡಿ.11 ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟ

ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಯಾಗಲಿ: ಡಿ.11 ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟ

ನವೆಂಬರ್ 28ರಿಂದ ಹರಿಹರದಲ್ಲಿರುವ ದಸಸಂ ಸಂಸ್ಥಾಪಕರಾದ ಬಿ.ಕೃಷ್ಣಪ್ಪನವರ ಚೈತನ್ಯ ಭೂಮಿಯಿಂದ ಆರಂಭವಾಗಿರುವ ಪಾದಯಾತ್ರೆಯು ಸದ್ಯ ನೆಲಮಂಗಲ ತಲುಪಿದೆ.

- Advertisement -
- Advertisement -

ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಯಾಗಲಿ ಎಂದು ಒತ್ತಾಯಿಸಿ ಡಿ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ’ ವತಿಯಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ.

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ನವೆಂಬರ್ 28ರಿಂದ ಹರಿಹರದಲ್ಲಿರುವ ದಸಸಂ ಸಂಸ್ಥಾಪಕರಾದ ಬಿ.ಕೃಷ್ಣಪ್ಪನವರ ಚೈತನ್ಯ ಭೂಮಿಯಿಂದ ಆರಂಭವಾಗಿರುವ ಪಾದಯಾತ್ರೆಯು ಸದ್ಯ ನೆಲಮಂಗಲ ತಲುಪಿದ್ದು, ಡಿಸೆಂಬರ್ 11 ರಂದು ಬೆಂಗಳೂರಿನ ಹೋರಾಟಕ್ಕೆ ಸೇರಿಕೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹೋರಾಟದ ಮೂಂಚೂಣಿ ನಾಯಕರಾದ ಅಂಬಣ್ಣ ಅರೋಲಿಕರ್, ಎಂ.ಆರ್ ಭೇರಿ, ಕರಿಯಪ್ಪ ಗುಡಿಮನಿ, ಡಿಎಸ್ಎಸ್ ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್, ಸುರೇಶ್, ನಾಗವೇಂದ್ರ ಬೈಯ್ಯಾರೆಡ್ಡಿ, ಮಸ್ಕಿ ಮುರಾರಿ ಸೇರಿದಂತೆ ನೂರಾರು ಹೋರಾಟಗಾರರು ಕಳೆದ 11 ದಿನಗಳಿಂದ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ಒಳಮೀಸಲಾತಿ ಜಾರಿಗಾಗಿ ಮೂರು ದಶಕಗಳಿಂದ ನಿರಂತರ ಹೋರಾಟ ನಡೆಯುತ್ತಿದ್ದು ಅದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ನೂರಾರು ಮುಖಂಡರು ಇದಕ್ಕಾಗಿ ಹಗಲಿರುಳು ಹೋರಾಟದಲ್ಲಿ ನಿರತರಾಗಿದ್ದಾರೆ. ಡಿಸೆಂಬರ್ 11ರ ಹೋರಾಟಕ್ಕೆ ರಾಜ್ಯದ ಎಲ್ಲಾ ಮೂಲೆಗಳಿಂದ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. ಡಿಸೆಂಬರ್ 6ರಂದು ನಡೆದ ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶದಲ್ಲಿಯೂ ಸಹ ಒಳಮೀಸಲಾತಿ ಜಾರಿಯಾಗಬೇಕೆಂಬ ನಿರ್ಣಯ ಅಂಗೀಕರಿಸಲಾಗಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿದ ಒತ್ತಡ

ಇದೀಗ ಬೆಂಗಳೂರಿನಲ್ಲಿ ಡಿಸೆಂಬರ್ 11 ರಂದು ನಡೆಯುವ ಐತಿಹಾಸಿಕ ಬೃಹತ್ ಹೋರಾಟಕ್ಕೆ ಸಿದ್ದತೆಗಳು ನಡೆಯುತ್ತಿವೆ. ಒಳಮೀಸಲಾತಿ ಜಾರಿಯಾಗಬೇಕೆಂಬ ಹಕ್ಕೊತ್ತಾಯ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಕೇಳಿಬರುತ್ತಿದ್ದು, ಈ ಕುರಿತ ಪೋಸ್ಟರ್‌ಗಳು ವ್ಯಾಪಕವಾಗಿ ಹರಿದಾಡುತ್ತಿವೆ.

ಮೂರೇ ದಿ‌ನದಲ್ಲಿ EWS ಮೀಸಲಾತಿಗಾಗಿ ಸಂವಿಧಾನ ತಿದ್ದುಪಡಿ ಮಾಡಿದವರಿಗೆ ಮೂವತ್ತು ವರ್ಷದಿಂದ ಕೇಳುತ್ತಿರುವ ಒಳಮೀಸಲಾತಿಯನ್ನ ಜಾರಿಮಾಡಲು ಏನು ಅಡ್ಡಿ? ‘ಸಾಮಾಜಿಕ‌ ನ್ಯಾಯವು ದಮನಿತರ ಪಾಲಿಗೆ ದಕ್ಕುವ ಒಳಮೀಸಲಾತಿಯೊಂದಿಗೆ ಸಾರ್ಥಕಗೊಳ್ಳುತ್ತದೆ ಎಂಬ ಸಮಷ್ಠಿ ನ್ಯಾಯ ಪ್ರಜ್ಞೆಯನ್ನು ಆಳುವವರಿಗೆ ಅರ್ಥ ಮಾಡಿಸುವ ಕಾಲ ಬಂದಿದೆ’. “ಮೀಸಲಾತಿ ಎನ್ನುವುದು ಸಾಮಾಜಿಕ ನ್ಯಾಯ, ಮೀಸಲಾತಿ ಪರವಾಗಿರುವರೆಲ್ಲಾ ಒಳಮೀಸಲಾತಿ ಪರವಾಗಿ ಇರಲೇಬೇಕು” ಎಂಬ ಹೇಳಿಕೆಗಳು ವೈರಲ್ ಆಗಿವೆ.

ಅಂಬೇಡ್ಕರ್‌ರವರು ಪ್ರಸ್ತಾಪಿಸಿರುವ ಜಾತಿ ಒಳಗೆ ಮತ್ತು ಜಾತಿ ಜಾತಿಗಳ ನಡುವಿನ ಸ್ತರೀಯ ಅಸಮಾನತೆಯನ್ನು ತಡೆದು ಹಾಕಲು ಒಳಮೀಸಲಾತಿಯು ತಾಂತ್ರಿಕ ಸಾಧನವಾದರೆ, ಮುಂದೆ ಹೋದವರು ಹಿಂದಿರುವವರಿಗಾಗಿ ಕಾಯುವ, ಮೇಲೆ ಏರಿದವರು ಕೆಳಗಿನವರಿಗಾಗಿ ಕೈ ಚಾಚುವ ಸಹಾನುಭೂತಿ ಬಂಧುತ್ವದ ಅಡಿಪಾಯವಾಗಿದೆ. ಹೆಜ್ಜೆಗಳು ಸಮಪಾಲಿಗಾಗಿ ಸಾಗಿ ಬಂಧುತ್ವವ ಬೆಸೆಯಲಿ ಎಂಬ ಲೇಖಕಿ, ಹೋರಾಟಗಾರ್ತಿ ದು. ಸರಸ್ವತಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ; ತುಳಿತಕ್ಕೊಳಗಾದವರೆಲ್ಲರೂ ದಲಿತರೆ; ಆದರೆ ದಲಿತರೆಲ್ಲರೂ ಅಸ್ಪೃಶ್ಯರಲ್ಲ- ಡಾ.ಎಸ್.ಕೆ.ಮಂಜುನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...