Homeಚಳವಳಿಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಯಾಗಲಿ: ಡಿ.11 ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟ

ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಯಾಗಲಿ: ಡಿ.11 ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟ

ನವೆಂಬರ್ 28ರಿಂದ ಹರಿಹರದಲ್ಲಿರುವ ದಸಸಂ ಸಂಸ್ಥಾಪಕರಾದ ಬಿ.ಕೃಷ್ಣಪ್ಪನವರ ಚೈತನ್ಯ ಭೂಮಿಯಿಂದ ಆರಂಭವಾಗಿರುವ ಪಾದಯಾತ್ರೆಯು ಸದ್ಯ ನೆಲಮಂಗಲ ತಲುಪಿದೆ.

- Advertisement -
- Advertisement -

ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಯಾಗಲಿ ಎಂದು ಒತ್ತಾಯಿಸಿ ಡಿ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ’ ವತಿಯಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ.

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ನವೆಂಬರ್ 28ರಿಂದ ಹರಿಹರದಲ್ಲಿರುವ ದಸಸಂ ಸಂಸ್ಥಾಪಕರಾದ ಬಿ.ಕೃಷ್ಣಪ್ಪನವರ ಚೈತನ್ಯ ಭೂಮಿಯಿಂದ ಆರಂಭವಾಗಿರುವ ಪಾದಯಾತ್ರೆಯು ಸದ್ಯ ನೆಲಮಂಗಲ ತಲುಪಿದ್ದು, ಡಿಸೆಂಬರ್ 11 ರಂದು ಬೆಂಗಳೂರಿನ ಹೋರಾಟಕ್ಕೆ ಸೇರಿಕೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹೋರಾಟದ ಮೂಂಚೂಣಿ ನಾಯಕರಾದ ಅಂಬಣ್ಣ ಅರೋಲಿಕರ್, ಎಂ.ಆರ್ ಭೇರಿ, ಕರಿಯಪ್ಪ ಗುಡಿಮನಿ, ಡಿಎಸ್ಎಸ್ ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್, ಸುರೇಶ್, ನಾಗವೇಂದ್ರ ಬೈಯ್ಯಾರೆಡ್ಡಿ, ಮಸ್ಕಿ ಮುರಾರಿ ಸೇರಿದಂತೆ ನೂರಾರು ಹೋರಾಟಗಾರರು ಕಳೆದ 11 ದಿನಗಳಿಂದ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ಒಳಮೀಸಲಾತಿ ಜಾರಿಗಾಗಿ ಮೂರು ದಶಕಗಳಿಂದ ನಿರಂತರ ಹೋರಾಟ ನಡೆಯುತ್ತಿದ್ದು ಅದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ನೂರಾರು ಮುಖಂಡರು ಇದಕ್ಕಾಗಿ ಹಗಲಿರುಳು ಹೋರಾಟದಲ್ಲಿ ನಿರತರಾಗಿದ್ದಾರೆ. ಡಿಸೆಂಬರ್ 11ರ ಹೋರಾಟಕ್ಕೆ ರಾಜ್ಯದ ಎಲ್ಲಾ ಮೂಲೆಗಳಿಂದ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. ಡಿಸೆಂಬರ್ 6ರಂದು ನಡೆದ ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶದಲ್ಲಿಯೂ ಸಹ ಒಳಮೀಸಲಾತಿ ಜಾರಿಯಾಗಬೇಕೆಂಬ ನಿರ್ಣಯ ಅಂಗೀಕರಿಸಲಾಗಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿದ ಒತ್ತಡ

ಇದೀಗ ಬೆಂಗಳೂರಿನಲ್ಲಿ ಡಿಸೆಂಬರ್ 11 ರಂದು ನಡೆಯುವ ಐತಿಹಾಸಿಕ ಬೃಹತ್ ಹೋರಾಟಕ್ಕೆ ಸಿದ್ದತೆಗಳು ನಡೆಯುತ್ತಿವೆ. ಒಳಮೀಸಲಾತಿ ಜಾರಿಯಾಗಬೇಕೆಂಬ ಹಕ್ಕೊತ್ತಾಯ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಕೇಳಿಬರುತ್ತಿದ್ದು, ಈ ಕುರಿತ ಪೋಸ್ಟರ್‌ಗಳು ವ್ಯಾಪಕವಾಗಿ ಹರಿದಾಡುತ್ತಿವೆ.

ಮೂರೇ ದಿ‌ನದಲ್ಲಿ EWS ಮೀಸಲಾತಿಗಾಗಿ ಸಂವಿಧಾನ ತಿದ್ದುಪಡಿ ಮಾಡಿದವರಿಗೆ ಮೂವತ್ತು ವರ್ಷದಿಂದ ಕೇಳುತ್ತಿರುವ ಒಳಮೀಸಲಾತಿಯನ್ನ ಜಾರಿಮಾಡಲು ಏನು ಅಡ್ಡಿ? ‘ಸಾಮಾಜಿಕ‌ ನ್ಯಾಯವು ದಮನಿತರ ಪಾಲಿಗೆ ದಕ್ಕುವ ಒಳಮೀಸಲಾತಿಯೊಂದಿಗೆ ಸಾರ್ಥಕಗೊಳ್ಳುತ್ತದೆ ಎಂಬ ಸಮಷ್ಠಿ ನ್ಯಾಯ ಪ್ರಜ್ಞೆಯನ್ನು ಆಳುವವರಿಗೆ ಅರ್ಥ ಮಾಡಿಸುವ ಕಾಲ ಬಂದಿದೆ’. “ಮೀಸಲಾತಿ ಎನ್ನುವುದು ಸಾಮಾಜಿಕ ನ್ಯಾಯ, ಮೀಸಲಾತಿ ಪರವಾಗಿರುವರೆಲ್ಲಾ ಒಳಮೀಸಲಾತಿ ಪರವಾಗಿ ಇರಲೇಬೇಕು” ಎಂಬ ಹೇಳಿಕೆಗಳು ವೈರಲ್ ಆಗಿವೆ.

ಅಂಬೇಡ್ಕರ್‌ರವರು ಪ್ರಸ್ತಾಪಿಸಿರುವ ಜಾತಿ ಒಳಗೆ ಮತ್ತು ಜಾತಿ ಜಾತಿಗಳ ನಡುವಿನ ಸ್ತರೀಯ ಅಸಮಾನತೆಯನ್ನು ತಡೆದು ಹಾಕಲು ಒಳಮೀಸಲಾತಿಯು ತಾಂತ್ರಿಕ ಸಾಧನವಾದರೆ, ಮುಂದೆ ಹೋದವರು ಹಿಂದಿರುವವರಿಗಾಗಿ ಕಾಯುವ, ಮೇಲೆ ಏರಿದವರು ಕೆಳಗಿನವರಿಗಾಗಿ ಕೈ ಚಾಚುವ ಸಹಾನುಭೂತಿ ಬಂಧುತ್ವದ ಅಡಿಪಾಯವಾಗಿದೆ. ಹೆಜ್ಜೆಗಳು ಸಮಪಾಲಿಗಾಗಿ ಸಾಗಿ ಬಂಧುತ್ವವ ಬೆಸೆಯಲಿ ಎಂಬ ಲೇಖಕಿ, ಹೋರಾಟಗಾರ್ತಿ ದು. ಸರಸ್ವತಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ; ತುಳಿತಕ್ಕೊಳಗಾದವರೆಲ್ಲರೂ ದಲಿತರೆ; ಆದರೆ ದಲಿತರೆಲ್ಲರೂ ಅಸ್ಪೃಶ್ಯರಲ್ಲ- ಡಾ.ಎಸ್.ಕೆ.ಮಂಜುನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...