Homeಮುಖಪುಟಬಿಜೆಪಿ 120, ಕಾಂಗ್ರೆಸ್ 6, ಎಎಪಿ 0: ಗುಜರಾತ್‌ ಚುನಾವಣಾ ಜಾಹೀರಾತಿನಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್- ನ್ಯೂಸ್‌ಲಾಂಡ್ರಿ...

ಬಿಜೆಪಿ 120, ಕಾಂಗ್ರೆಸ್ 6, ಎಎಪಿ 0: ಗುಜರಾತ್‌ ಚುನಾವಣಾ ಜಾಹೀರಾತಿನಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್- ನ್ಯೂಸ್‌ಲಾಂಡ್ರಿ ವರದಿ

- Advertisement -
- Advertisement -

ಬಿಜೆಪಿ: 120, ಕಾಂಗ್ರೆಸ್: 6, ಎಎಪಿ: 0. – ಇದು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಮೂರು ಪ್ರಮುಖ ಪಕ್ಷಗಳು ಗೆದ್ದಿರುವ ಸ್ಥಾನಗಳ ಸಂಖ್ಯೆ ಅಲ್ಲ. ಇದು ಕಳೆದ 15 ದಿನಗಳಲ್ಲಿ ಈ ಪಕ್ಷಗಳು ಗುಜರಾತ್‌ನ ಮೂರು ಪ್ರಮುಖ ದಿನಪತ್ರಿಕೆಗಳಾದ ‘ಸಂದೇಶ್, ದಿವ್ಯ ಭಾಸ್ಕರ್ ಮತ್ತು ಗುಜರಾತ್ ಸಮಾಚಾರ’ದಲ್ಲಿ ನೀಡಿದ ಜಾಹೀರಾತುಗಳ ಸಂಖ್ಯೆಯಾಗಿದೆ.

ನವೆಂಬರ್ 21ರಿಂದ ಹಿಡಿದು ಡಿಸೆಂಬರ್ 5ರವರೆಗೆ ಅಹಮದಾಬಾದ್ ಆವೃತ್ತಿಗಳಲ್ಲಿ ಬಂದ ಜಾಹೀರಾತುಗಳನ್ನು ‘ನ್ಯೂಸ್‌ಲಾಂಡ್ರಿ’ ಜಾಲತಾಣ ವಿಶ್ಲೇಷಣೆ ಮಾಡಿದೆ. ಸರಾಸರಿಯಾಗಿ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಮೂರು ಪತ್ರಿಕೆಗಳಲ್ಲಿ ಪ್ರತಿದಿನ ಎಂಟು ಜಾಹೀರಾತುಗಳನ್ನು ನೀಡಿದೆ ಎಂದು ಜಾಲತಾಣ ವರದಿ ಮಾಡಿದೆ.

ಈ ಅವಧಿಯಲ್ಲಿ ಮೂರು ಪತ್ರಿಕೆಗಳು ತಮ್ಮ ಮೊದಲ ಹಾಗೂ ಕೊನೆಯ ಪುಟಗಳಲ್ಲಿ ಬಿಜೆಪಿಯ ಒಟ್ಟು 72 ಜಾಹೀರಾತುಗಳನ್ನು ಪ್ರಕಟಿಸಿದವು. ಡಿಸೆಂಬರ್ 1 ರಂದು ಅಹಮದಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರೋಡ್‌ಶೋ ನಡೆಸಲಿರುವ ಕುರಿತು ಪೂರ್ಣಪುಟದ ಜಾಹೀರಾತುಗಳನ್ನು ನೀಡಲಾಗಿತ್ತು. ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಒಂದು ದಿನದ ನಂತರ ನವೆಂಬರ್ 27ರಂದು ಪೂರ್ಣ ಪುಟ ಜಾಹೀರಾತುಗಳು ಕಾಣಿಸಿಕೊಂಡವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯ ಹೆಚ್ಚಿನ ಜಾಹೀರಾತುಗಳು ಗುಜರಾತ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲಿರುವ ಪಕ್ಷದ ನಾಯಕರ ಕುರಿತು ಇರುತ್ತಿದ್ದವು. ಮೋದಿಯವರ ವೇಳಾಪಟ್ಟಿಯೇ ಮೊದಲ ಪುಟದ ಅರ್ಧದಷ್ಟು ಭಾಗವನ್ನು ಆಕ್ರಮಿಸಿಕೊಂಡಿದ್ದನ್ನು ಗಮನಿಸಬಹುದು. ಪ್ರಮುಖವಾಗಿ ಪ್ರಚಾರ ಮಾಡಲಾದ ಇತರ ವೇಳಾಪಟ್ಟಿಗಳು ಕೇಂದ್ರ ಸಚಿವರಾದ ಅಮಿತ್ ಶಾ, ಸ್ಮೃತಿ ಇರಾನಿ, ಪರ್ಷೋತ್ತಮ್ ರೂಪಾಲಾ, ಮನ್ಸುಖ್ ಮಾಂಡವಿಯಾ ಮುಖ್ಯಮಂತ್ರಿಗಳಾದ ಭೂಪೇಂದ್ರ ಪಟೇಲ್, ಹಿಮಂತ ಬಿಸ್ವಾ ಶರ್ಮಾ, ಜೈರಾಮ್ ಠಾಕೂರ್, ಯೋಗಿ ಆದಿತ್ಯನಾಥ್ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮೊದಲಾದವರಿಗೆ ಸೇರಿದ್ದವು.

ನವೆಂಬರ್ 22 ರಂದು ಅತಿ ಹೆಚ್ಚಿನದಾಗಿ ಬಿಜೆಪಿ ಜಾಹೀರಾತುಗಳನ್ನು ಪ್ರಕಟಿಸಲಾಗಿದೆ.  ರೂಪಲಾ, ಫಡ್ನವಿಸ್, ಮಾಂಡವಿಯಾ, ಶರ್ಮಾ ಮತ್ತು ಠಾಕೂರ್ ಅವರನ್ನು ಒಳಗೊಂಡ ಸಾರ್ವಜನಿಕ ಸಭೆಗಳ ವಿವರಗಳನ್ನು ಪ್ರತಿ ಪತ್ರಿಕೆಯಲ್ಲಿ ಎಂಟು ಜಾಹೀರಾತುಗಳನ್ನು ಪ್ರಕಟಿಸಲಾಗಿದೆ. ಕೊನೆಯ ಪುಟದಲ್ಲಿ ಮೂರು ಮತ್ತು ಒಳಪುಟಗಳಲ್ಲಿ ಐದು ಜಾಹೀರಾತುಗಳು ಕಾಣಿಸಿಕೊಂಡಿವೆ. ಪ್ರತಿ ಪತ್ರಿಕೆಯ ಕೊನೆಯ ಪುಟದ ಕಾಲುಭಾಗವು ಸಾರ್ವಜನಿಕ ಸಭೆಯ ವಿವರಗಳನ್ನು ಒಳಗೊಂಡಿದ್ದವು. ಬನಸ್ಕಾಂತ, ಅಹಮದಾಬಾದ್ ಮತ್ತು ಆನಂದ್‌ನಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಗಳ ಕುರಿತು ವಿವರಗಳನ್ನು ನೀಡಲಾಗಿತ್ತು. ಅಮಿತ್ ಶಾ ಅವರ ಚಿತ್ರಗಳೊಂದಿಗೆ ಜಾಹೀರಾತು ಪ್ರಕಟಗೊಂಡಿದ್ದವು. ಭೂಪೇಂದ್ರ ಪಟೇಲ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನೂ ಇಲ್ಲಿ ಒಳಗೊಳ್ಳಲಾಗಿತ್ತು.

ಇದನ್ನೂ ಓದಿರಿ: ವಡ್ಗಾಮ್‌ ಫಲಿತಾಂಶ ಘೋಷಣೆಗೂ ಮುನ್ನವೇ ಜಿಗ್ನೇಶ್ ಸೋತಿದ್ದಾರೆಂದು ಮಾಧ್ಯಮಗಳು ವರದಿ ಪ್ರಕಟಿಸಿದ್ದೇಕೆ?

ಮೂರು ಪತ್ರಿಕೆಗಳಲ್ಲಿ ಬಿಜೆಪಿಯ ಏಕೈಕ ಜಾಕೆಟ್ ಜಾಹೀರಾತು ಡಿಸೆಂಬರ್ 1 ರಂದು ಪ್ರಕಟಗೊಂಡಿತ್ತು. ಅಹಮದಾಬಾದ್‌ನಲ್ಲಿ ಮೋದಿಯವರು 50-ಕಿಮೀಯಷ್ಟು ರೋಡ್‌ಶೋ ನಡೆಸಲಿರುವುದನ್ನು ಇಲ್ಲಿ ನೀಡಲಾಗಿತ್ತು. ಮೂರು ಗಂಟೆಗಳಲ್ಲಿ 16 ವಿಧಾನಸಭಾ ಕ್ಷೇತ್ರಗಳನ್ನು 35 ನಿಲುಗಡೆಗಳೊಂದಿಗೆ ಮೋದಿ ಕ್ರಮಿಸಲಿರುವ ವಿವರಗಳನ್ನು ಜಾಹೀರಾತಿನಲ್ಲಿ ನೀಡಲಾಗಿತ್ತು.

ನವೆಂಬರ್ 27 ರಂದು, ಬಿಜೆಪಿಯು ಪ್ರತಿ ಮೂರು ಪತ್ರಿಕೆಗಳ ಒಳಪುಟಗಳಲ್ಲಿ ಪೂರ್ಣ ಪುಟದ ಜಾಹೀರಾತುಗಳನ್ನು ನೀಡಿತ್ತು. ಪಕ್ಷದ ಪ್ರಣಾಳಿಕೆಯ ಪ್ರಮುಖ ಅಂಶಗಳನ್ನು ಪಟ್ಟಿ ಮಾಡಲಾಗಿತ್ತು. ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವುದು, ‘ಆಂಟಿ ರ್‍ಯಾಡಿಕಲ್‌’ ಕೋಶವನ್ನು ಸ್ಥಾಪಿಸುವುದು, 2036ರ ಒಲಂಪಿಕ್ಸ್ ಅನ್ನು ಆಯೋಜಿಸಲು ವಿಶ್ವ ದರ್ಜೆಯ ಕ್ರೀಡಾ ಮೂಲಸೌಕರ್ಯಗಳನ್ನು ನಿರ್ಮಿಸುವುದು, 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದು, ಏಮ್ಸ್ ತರಹದ ವೈದ್ಯಕೀಯ ಸೌಲಭ್ಯಗಳನ್ನು ಸ್ಥಾಪಿಸುವುದು – ಸೇರಿದಂತೆ ಮೊದಲಾದ ಭರವಸೆಗಳನ್ನು ನೀಡಲಾಗಿತ್ತು.

ಕಳೆದ 15 ದಿನಗಳಲ್ಲಿ ಮೋದಿಯವರ ಸಾರ್ವಜನಿಕ ಸಭೆಗಳ ಕುರಿತ 18 ಮುಖಪುಟದ ಜಾಹೀರಾತುಗಳನ್ನು ‘ನ್ಯೂಸ್‌ಲಾಂಡ್ರಿ’ ಪಟ್ಟಿ ಮಾಡಿದೆ. ಮೋದಿಯವರ ರೋಡ್‌ಶೋ ಕುರಿತ ಜಾಹೀರಾತು ಹೊರತುಪಡಿಸಿ ಉಳಿದೆಲ್ಲವೂ ಮೊದಲ ಪುಟದ ಅರ್ಧದಷ್ಟು ಭಾಗವನ್ನು ಆಕ್ರಮಿಸಿಕೊಂಡಿವೆ. ಉದಾಹರಣೆಗೆ ನವೆಂಬರ್ 24ರಂದು, ಎಲ್ಲಾ ಮೂರು ಪತ್ರಿಕೆಗಳ ಮುಖಪುಟಗಳಲ್ಲಿ ಜಾಹೀರಾತು ನೀಡಿ, ‘ಅರಾವಳಿ, ಬನಸ್ಕಾಂತ, ಗಾಂಧಿನಗರ ಮತ್ತು ಅಹಮದಾಬಾದ್‌’ನಲ್ಲಿ ಮೋದಿಯವರು ಪಾಲ್ಗೊಳ್ಳಲಿರುವ ಸಾರ್ವಜನಿಕ ಸಭೆಗಳ ಮಾಹಿತಿಗಳನ್ನು ನೀಡಲಾಗಿತ್ತು. ಷಾ ಅವರ ಸಾರ್ವಜನಿಕ ಸಭೆಗಳ ಜಾಹೀರಾತುಗಳು ಸಾಮಾನ್ಯವಾಗಿ ಕೊನೆಯ ಪುಟದಲ್ಲಿ ಕಾಣಿಸಿಕೊಳ್ಳುತ್ತಿದ್ದವು. ಮೂರು ಪತ್ರಿಕೆಗಳಲ್ಲಿ ಸಾಮಾನ್ಯವಾಗಿ ಕಾಲುಪುಟದ ಒಟ್ಟು 24 ಜಾಹೀರಾತುಗಳನ್ನು ನೀಡಲಾಗಿತ್ತು.

ವಿವಿಧ ದಿನಗಳಲ್ಲಿ, ಒಳಪುಟಗಳಲ್ಲಿ ಬಿಜೆಪಿಯ ಸಾಧನೆಗಳ ಕುರಿತು ಅನೇಕ ಜಾಹೀರಾತುಗಳು ಇದ್ದವು. ಈ ಜಾಹೀರಾತುಗಳು “ಭಾಜ್ಪ್ ಎಟ್ಲೆ ಭರೋಸೋ” ( ಬಿಜೆಪಿ ಎಂದರೆ ನಂಬಿಕೆ) ಎಂಬ ಪಠ್ಯದೊಂದಿಗೆ ಸಾಮಾನ್ಯವಾಗಿ ಪ್ರಾರಂಭವಾಗುತ್ತಿತ್ತು ಅಥವಾ ಕೊನೆಗೊಳ್ಳುತ್ತಿತ್ತು. ನವೆಂಬರ್ 24ರಂದು ಒಂದು ಜಾಹೀರಾತಿನಲ್ಲಿ, “ಬಿಜೆಪಿ ಎಂದರೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ, ರಾಜ್ಯದಲ್ಲಿ ಶಾಂತಿಯನ್ನು ಖಾತ್ರಿಪಡಿಸುವ, ಮಾ ಶಕ್ತಿಯ ಭದ್ರತೆಯನ್ನು ಖಾತ್ರಿಪಡಿಸುವ, ಮಹಿಳೆಯರಿಗೆ ಸುರಕ್ಷೆ ನೀಡುವ ಪಕ್ಷವಾಗಿದೆ. ಬಿಜೆಪಿಗೆ ಮತ ನೀಡಿ ಅಧಿಕಾರ ದೊರಕಿಸಬೇಕು” ಎಂದು ಮನವಿ ಮಾಡಲಾಗಿತ್ತು.

ಮತ್ತೊಂದು ಜಾಹೀರಾತಿನಲ್ಲಿ ಕೋವಿಡ್ ಸಮಯದಲ್ಲಿ ಬಿಜೆಪಿ ಮಾಡಿರುವ ಸಾಧನೆಗಳೆಂದು ಪಟ್ಟಿ ಮಾಡಲಾಗಿತ್ತು. ಬಡವರಿಗೆ ಉಚಿತ ಪಡಿತರ, ಗ್ಯಾರಂಟಿ ಇಲ್ಲದೆ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ, ಕಾರ್ಮಿಕರಿಗೆ ಪೌಷ್ಟಿಕ ಆಹಾರ ಮೊದಲಾದ ವಿಚಾರಗಳನ್ನು ಪ್ರಸ್ತಾಪಿಸಲಾಗಿತ್ತು.

ಡಿಸೆಂಬರ್ 5 ರಂದು ಎಲ್ಲಾ ಮೂರು ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿ, ಎರಡನೇ ಹಂತದ ಮತದಾನದತ್ತ ಗಮನ ಸೆಳೆಯಲಾಯಿತು. “ಗುಜರಾತ್‌ನ ಹೆಮ್ಮೆ”, “ಗುಜರಾತ್ ವಿರೋಧಿಗಳ ವಿರುದ್ಧ ಹೋರಾಡುವ ಮತ್ತು ಭಯೋತ್ಪಾದಕರನ್ನು ಪ್ರವೇಶಿಸದಂತೆ ತಡೆಯುವ ಒಬ್ಬರಿಗೆ ಮತ ಚಲಾಯಿಸಬೇಕು” ಎಂದು ಕೋರಲಾಗಿತ್ತು. “ಏಕರೂಪ ನಾಗರಿಕ ಸಂಹಿತೆಯ ಪ್ರಕ್ರಿಯೆಯನ್ನು ಆರಂಭಿಸಿದ ರಾಜ್ಯ, ಜಗತ್ತೇ ಗುಜರಾತ್‌ಗೆ ಜಯಕಾರ ಹಾಕಿದೆ” ಎಂದು ಪ್ರಕಟಿಸಲಾಗಿತ್ತು. ಅಮಿತ್ ಷಾ, ನಡ್ಡಾ, ಭೂಪೇಂದ್ರ ಪಟೇಲ್ ಮತ್ತು ಸಿಆರ್ ಪಾಟೀಲ್ ಅವರ ಸಣ್ಣ ಭಾವಚಿತ್ರಗಳ ಜೊತೆಗೆ ಮೋದಿಯವರ ಕಟೌಟ್‌ ಬಳಿಸಲಾಗಿತ್ತು. ಮೊದಲ ಪುಟದ ಅರ್ಧದಷ್ಟು ಭಾಗವನ್ನು ಜಾಹೀರಾತು ಆಕ್ರಮಿಸಿಕೊಂಡಿತ್ತು.

ಇದನ್ನೂ ಓದಿರಿ: ಮೊರ್ಬಿ ವಿವಾದ: ಜಾಮೀನಿನ ಬಳಿಕ ಟಿಎಂಸಿ ನಾಯಕ ಸಾಕೇತ್‌ ಮತ್ತೆ ಬಂಧನ

ಕಾಂಗ್ರೆಸ್‌ ಪಾಡೇನು?

ಡಿಸೆಂಬರ್ 4 ಮತ್ತು 5ರಂದು ಎರಡನೇ ಹಂತದ ಮತದಾನಕ್ಕೆ ಒಂದು ದಿನ ಮೊದಲು ಮೂರು ಪತ್ರಿಕೆಗಳಲ್ಲಿ ಕಾಲುಪುಟದಷ್ಟು ಜಾಹೀರಾತುಗಳನ್ನು ಕಾಂಗ್ರೆಸ್ ನೀಡಿತ್ತು. ಮೊದಲ ಜಾಹೀರಾತಿನಲ್ಲಿ ಕಾಂಗ್ರೆಸ್‌ನ ಚುನಾವಣಾ ಭರವಸೆಗಳನ್ನು ಪ್ರಸ್ತಾಪಿಸಲಾಗಿತ್ತು. ಉಚಿತ ವಿದ್ಯುತ್, 500 ರೂ.ನಲ್ಲಿ ಗ್ಯಾಸ್ ಸಿಲಿಂಡರ್, ಹೆಚ್ಚಿನ ಉದ್ಯೋಗವಕಾಶ ಮತ್ತು ರೈತರ ಸಾಲ ಮನ್ನಾದ ಕುರಿತು ಕಾಂಗ್ರೆಸ್‌ ಮಾತನಾಡಿತ್ತು.

ಡಿಸೆಂಬರ್ 5 ರಂದು ಜಾಹೀರಾತಿನಲ್ಲಿ ಹೆಚ್ಚಿದ ಹಣದುಬ್ಬರ, ನಿರುದ್ಯೋಗ ಮತ್ತು “ವ್ಯಾಪಕ” ಭ್ರಷ್ಟಾಚಾರದ ಕುರಿತು ತಿಳಿಸಲಾಗಿತ್ತು. ಕಾಂಗ್ರೆಸ್‌ಗೆ ಮತ ಹಾಕಿದರೆ, ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲಾಗುತ್ತದೆ, ಯುವಕರಿಗೆ ಉದ್ಯೋಗಗಳನ್ನು ಒದಗಿಸಲಾಗುತ್ತದೆ, ಹಣದುಬ್ಬರವನ್ನು ತಡೆಯಲಾಗುತ್ತದೆ ಮತ್ತು ಗುಜರಾತ್ ಅನ್ನು ಡ್ರಗ್ ಮುಕ್ತ ಮಾಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. “ಬದಲಾವಣೆ ಒಂದೇ ಪರ್ಯಾಯ” ಎಂದು ಜಾಹೀರಾತು ಕೊನೆಗೊಂಡಿತ್ತು.

ನವೆಂಬರ್ 21 ರಿಂದ ಡಿಸೆಂಬರ್ 5 ರವರೆಗೆ ಈ ಮೂರು ಪತ್ರಿಕೆಗಳಲ್ಲಿ ಎಎಪಿ ಯಾವುದೇ ಜಾಹೀರಾತುಗಳನ್ನು ನೀಡಿಲ್ಲ.

(ಹೆಚ್ಚಿನ ವಿವರಗಳಿಗೆ ‘ನ್ಯೂಸ್‌ಲಾಂಡ್ರಿ’ ವರದಿ ಓದಬಹುದು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...