Homeಮುಖಪುಟನೀತಿಗೆಟ್ಟ ರಾಜಕೀಯದ ಮೂಲಕ ಗುಜರಾತ್‌ನಲ್ಲಿ ಬಿಜೆಪಿ ಗೆದ್ದಿದೆ: ಎಚ್‌.ಸಿ.ಮಹದೇವಪ್ಪ

ನೀತಿಗೆಟ್ಟ ರಾಜಕೀಯದ ಮೂಲಕ ಗುಜರಾತ್‌ನಲ್ಲಿ ಬಿಜೆಪಿ ಗೆದ್ದಿದೆ: ಎಚ್‌.ಸಿ.ಮಹದೇವಪ್ಪ

- Advertisement -
- Advertisement -

“ನೀತಿಗೆಟ್ಟ ರಾಜಕಾರಣದ ಮೂಲಕ ಬಿಜೆಪಿ ಗುಜರಾತ್‌ನಲ್ಲಿ ಜಯ ಸಾಧಿಸಿದೆ” ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಆರೋಪಿಸಿದ್ದಾರೆ.

ಗುಜರಾತ್‌ ಚುನಾವಣಾ ಫಲಿತಾಂಶದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, “ಈ ಬಾರಿ ಕಾಂಗ್ರೆಸ್ ಪಕ್ಷವು ಬಹುಮತ ಪಡೆಯಲಿದೆ ಎಂಬ ಸುಳಿವು ಸಿಕ್ಕ ಕೂಡಲೇ ಬಿಜೆಪಿಯವರು ಇನ್ನಿಲ್ಲದ ಕೀಳು ರಾಜಕೀಯವನ್ನು ಮಾಡಲು ಆರಂಭಿಸಿದರು” ಎಂದು ಆರೋಪಿಸಿದ್ದಾರೆ.

“ಗುಜರಾತ್ ಕಾಂಗ್ರೆಸ್‌ನ ಪ್ರಮುಖ ನಾಯಕರಾಗಿದ್ದ ಅಲ್ಪೇಶ್ ಠಾಕೂರ್ ಅವರನ್ನು ತಮ್ಮ ಎಲ್ಲಾ ನೀತಿಗೆಟ್ಟ ಪ್ರಯತ್ನಗಳ ಮೂಲಕ ಬಿಜೆಪಿ ತನ್ನೊಳಗೆ ಸೇರಿಸಿಕೊಂಡಿತು. ನಂತರ ಪಾಟೀದಾರ್ ಹೋರಾಟದ ರುವಾರಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾಗಿದ್ದ ಹಾರ್ದಿಕ ಪಟೇಲ್ ಅವರನ್ನು ಇ.ಡಿ., ಐ.ಟಿ. ದಾಳಿಗಳ ಮೂಲಕ ಬಿಜೆಪಿ ಸೇರಿಸಿಕೊಂಡಿತು” ಎಂದು ದೂರಿದ್ದಾರೆ.

“ಇದಿಷ್ಟು ಸಾಲದು ಎಂಬಂತೆ ಈ ಬಾರಿ ಗುಜರಾತ್‌ನಲ್ಲಿ ಗೆಲುವು ಕಾಣಲಿದ್ದ ಸುಮಾರು 60ಕ್ಕೂ ಹೆಚ್ಚಿನ ಜನ ಕಾಂಗ್ರೆಸ್ ನಾಯಕರನ್ನು ಬಿಜೆಪಿ ತನ್ನೊಳಗೆ ಸೇರಿಸಿಕೊಳ್ಳುವ ಮೂಲಕ ಅಕ್ಷರಶಃ ನೀತಿಗೆಟ್ಟ ರಾಜಕೀಯವನ್ನು ಮಾಡಿತು” ಎಂದಿದ್ದಾರೆ.

“ಗುಜರಾತ್‌ನಲ್ಲಿ ಬಿಜೆಪಿ ಬಹುಮತವನ್ನು ಪಡೆದುಕೊಂಡಿದೆ. 2017ನೇ ಚುನಾವಣೆಯಲ್ಲಿ 82 ಸೀಟುಗಳನ್ನು ಕಾಂಗ್ರೆಸ್ ಪಡೆದಿತ್ತು. ಬಿಜೆಪಿ 100ರ ಒಳಗೆ ಕುಸಿದಿತ್ತು. ನಿಜಕ್ಕೂ ಹೇಳಬೇಕೆಂದರೆ ಈ ಬಾರಿ ಗುಜರಾತ್‌ನಲ್ಲಿ ಕಾಂಗ್ರೆಸ್ ಪಕ್ಷ ಬಹುಮತವನ್ನು ಪಡೆದೇ ತೀರುತ್ತಿತ್ತು. ಆದರೆ ಬಿಜೆಪಿ ನೀತಿಗೆಟ್ಟ ರಾಜಕಾರಣ ಮಾಡಿತು” ಎಂದು ಟೀಕಿಸಿದ್ದಾರೆ.

“ನಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳುವಂತೆ ಚುನಾವಣೆಗಳನ್ನು ನೇರವಾಗಿ ಎದುರಿಸುವ ಧಮ್ಮು, ತಾಕತ್ತು ಇಲ್ಲದ ಬಿಜೆಪಿಗರು ಕಾಂಗ್ರೆಸಿಗರನ್ನೇ ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ನಾವು ಕಾಂಗ್ರೆಸ್ ಸೋಲಿಸಿದೆವು ಎಂದರೆ ಎಲ್ಲಿಂದ ನಗಬೇಕು ಹೇಳಿ?” ಎಂದು ವ್ಯಂಗ್ಯವಾಡಿದ್ದಾರೆ.

“ಅದಕ್ಕಿಂತಲೂ ಮುಖ್ಯವಾಗಿ ರಾಜಕೀಯ ಪಕ್ಷವೊಂದನ್ನು ತೊರೆದು ಸಿದ್ಧಾಂತ ಇಲ್ಲದೇ ಅವಕಾಶವಾದಿತನದಿಂದ ವರ್ತಿಸಿದರೆ ಪಕ್ಷ ದುರ್ಬಲಗೊಳ್ಳುತ್ತದೆ. ಗುಜರಾತ್ ಚುನಾವಣೆಯಲ್ಲಿ ಈ ಬಾರಿ ಉಂಟಾದ ಸೋಲು ಇಂತಹ ಸಿದ್ದಾಂತ ರಹಿತ ವ್ಯಕ್ತಿಗಳ ದ್ರೋಹದ ಫಲವೇ ಆಗಿದೆ” ಎಂದು ವಿಷಾದಿಸಿದ್ದಾರೆ.

“ಹೀಗೆ ಹೇಳಿದರೆ ನೀವು ಮತ್ತು ಸಿದ್ದರಾಮಯ್ಯನವರು ಜೆಡಿಎಸ್ ಬಿಟ್ಟು ಬರಲಿಲ್ಲವೇ ಎಂದು ಕೆಲವರು ಬಾಯಿ ಚಟಕ್ಕೆ ಮಾತನಾಡುತ್ತಾರೆ. ಆದರೆ ಜೆಡಿಎಸ್‌ನಿಂದ ನಾವು ಹೊರಗೆ ಬರಲಿಲ್ಲ, ಎಲ್ಲಿ ಹಿಂದುಳಿದವರಿಗೆ ದೊಡ್ಡ ಹುದ್ದೆ ಕೊಡಬೇಕಾಗುತ್ತದೋ ಎಂದು ಅವರೇ ನಮ್ಮನ್ನು ಪಕ್ಷದಿಂದ ಹೊರಹಾಕಿದರು. ಇದನ್ನು ತಿಳಿಯದೇ ಮಾತನಾಡುವವರು ಅರ್ಥ ಮಾಡಿಕೊಂಡರೆ ಒಳ್ಳೆಯದು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...