Homeಕರ್ನಾಟಕಮುಖ್ಯವಾಹಿನಿ ಚಳವಳಿಗಳ ಭಾಗವಾಗಿ ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ ರಚನೆ

ಮುಖ್ಯವಾಹಿನಿ ಚಳವಳಿಗಳ ಭಾಗವಾಗಿ ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ ರಚನೆ

- Advertisement -
- Advertisement -

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ- ಕೋಯಲೀಷನ್ ಫಾರ್ ಕನ್ವರ್ಜನ್ಸ್ ರಚಿಸಲಾಗಿದೆ.

ಬೆಂಗಳೂರಿನ ಆಶೀರ್ವಾದ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿ ಡಿಸೆಂಬರ್‌ 5 ಮತ್ತು 6ರಂದು ಸಭೆ ನಡೆಸಲಾಗಿದೆ. ಕರ್ನಾಟಕದ ಹತ್ತು ಜಿಲ್ಲೆಗಳ ಲೈಂಗಿಕ ಅಲ್ಪಸಂಖ್ಯಾತರ ಜಿಲ್ಲಾ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಸಮುದಾಯ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ, ಒಕ್ಕೂಟ ರಚನೆಗೆ ತೀರ್ಮಾನ ಕೈಗೊಂಡರು.

ಮುಖ್ಯ ವಾಹಿನಿ ಚಳವಳಿಗಳಾದ ಜನಪರ ಹಾಗೂ ಪ್ರಗತಿಪರ ಚಳವಳಿಗಳು, ಸಾಮಾಜಿಕ ನ್ಯಾಯ ಚಳವಳಿಗಳು, ಮಹಿಳಾ ಚಳವಳಿ, ಮಕ್ಕಳ ಹಕ್ಕುಗಳ ಚಳವಳಿ, ಯುವ ಸಮುದಾಯದ ಚಳವಳಿ, ಜಾತಿ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ಚಳವಳಿ, ಸಹಸ್ರ ನಾಗರಿಕರ ಚಳವಳಿ, ಮಾನದ ಹಕ್ಕುಗಳ ಚಳವಳಿ, ಕಾರ್ಮಿಕ ಚಳವಳಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಾಗೂ ಸರ್ಕಾರೇತರ ಸಂಸ್ಥೆಗಳೊಂದಿಗೆ ಈ ಒಕ್ಕೂಟವು ಕಾರ್ಯನಿರ್ವಹಿಸಲಿದೆ.

ಈ ಒಕ್ಕೂಟದ ಜವಾಬ್ದಾರಿಯನ್ನು ರಾಜ್ಯ ಸಂಚಾಲಕರು, ವಿಭಾಗೀಯ ಸಂಚಾಲಕರು ಹಾಗೂ ಜಿಲ್ಲಾ ಸಂಚಾಲಕರು ನಿರ್ವಹಿಸುತ್ತಾರೆ.

ಡಿಸೆಂಬರ್ 5, ಸೋಮವಾರದಂದು ಸಭೆ ಆರಂಭಿಸಲಾಯಿತು. ಒಕ್ಕೂಟ ಬೇಕು – ಬೇಡಗಳ ಕುರಿತಾಗಿ ಚರ್ಚೆ ಮಾಡಿ ಎಲ್ಲಾ ಜಿಲ್ಲೆಗಳ ಜಿಲ್ಲಾ ಆಡಳಿತ ಮಂಡಳಿಗಳ ಪ್ರತಿನಿಧಿಗಳು ಮತ್ತು ಸಮುದಾಯ ಪ್ರತಿನಿಧಿಗಳು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಸರ್ವಾನುಮತದಿಂದ ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ- ಕೊಯಿಲೀಷನ್ ಫಾರ್ ಕನ್ವರ್ಜನ್ಸ್‌‌ ಬೇಕು ಎಂಬ ನಿರ್ಧಾರಕ್ಕೆ ಬರಲಾಯಿತು.

ಡಿಸೆಂಬರ್‌ 6ರಂದು ಅಂದರೆ ಡಾ.ಬಿ.ಆರ್‌.ಅಂಬೇಡ್ಕರ್‌‌ರವರ ‘ಮಹಾ ಪರಿನಿರ್ವಾಣ ದಿನ’ದಂದು ಒಕ್ಕೂಟದ ಗುರಿ ಉದ್ದೇಶಗಳು, ವ್ಯಾಪ್ತಿ, ಇನ್ನಿತರ ವಿಷಯಗಳ ಕುರಿತಾಗಿ ಗುಂಪು ಚರ್ಚೆಯನ್ನು ಮಾಡಲಾಯಿತು. ನಂತರ ಸರ್ವಾನುಮತದಿಂದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಜಿಲ್ಲಾವಾರು ಸಂಚಾಲಕರ ಆಯ್ಕೆಯನ್ನು ಮಾಡಲಾಯಿತು. ಬಸವರಾಜ್ (ಯಾದಗಿರಿ), ನಾರಾಯಣ (ಹುಬ್ಬಳ್ಳಿ – ಧಾರವಾಡ), ನಿಂಗಪ್ಪ (ಕೊಪ್ಪಳ), ಶಮೀರ್ (ಬಾಗಲಕೋಟೆ), ಮಾಯಾ.ಎಸ್ (ಚಿಕ್ಕಬಳ್ಳಾಪುರ), ಪ್ರಕಾಶ್ ರಾಜ್ (ಬೆಂಗಳೂರು ನಗರ), ಸಂಜನಾ (ಉಡುಪಿ), ಕೃಷ್ಣಮೂರ್ತಿ (ಕೋಲಾರ), ಪ್ಯಾರೂ (ಶಿವಮೊಗ್ಗ), ಪ್ರಣತಿ (ಮೈಸೂರು), ನಂದನ್ (ದಾವಣಗೆರೆ), ಮೋನಿಕಾ (ರಾಮನಗರ), ಪ್ರಗತಿ (ರಾಯಚೂರು), ಬೀರಲಿಂಗ (ಕಲಬುರ್ಗಿ) ಅವರು ಜಿಲ್ಲಾವಾರು ಸಂಚಾಲಕರಾಗಿ ಆಯ್ಕೆಯಾದರು.

ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ, ಕಾಂಗ್ರೆಸ್ ನಾಯಕಿ ಅಕ್ಕಯ್ ಪದ್ಮಶಾಲಿಯವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ, ಕಾಂಗ್ರೆಸ್ ನಾಯಕಿ ಅಕ್ಕಯ್ ಪದ್ಮಶಾಲಿಯವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆ ಕೈಗೊಂಡ ನಿರ್ಣಯಗಳು

1) ಒಂದು ವರ್ಷದವರೆಗೆ ಯಾವುದೇ ಶುಲ್ಕವನ್ನು ಸದಸ್ಯರಿಂದ ಸ್ವೀಕರಿಸದೆ ಉಚಿತವಾಗಿ ಈ ಒಕ್ಕೂಟವನ್ನು ನಡೆಸಿಕೊಂಡು ಹೋಗಬೇಕು.

2) ಸಂಸ್ಥೆಯು ಕೆಲಸ ಮಾಡಲು ಮುಕ್ತ ಸ್ವತಂತ್ರ್ಯವಾದ ವಾತಾವರಣವಿರಬೇಕೆಂಬ ಕಾರಣಕ್ಕೆ ಮತ್ತು ಕೆಲಸದ ವ್ಯಾಪ್ತಿಯನ್ನು ಹೆಚ್ಚಿಸಲು ಸಂಸ್ಥೆಯನ್ನು ನೋಂದಾಯಿಸುವುದು ಬೇಡ.

3)ಬ್ಯಾಂಕ್ ಅಕೌಂಟ್ ಬೇಕು. ಜಂಟಿ ಖಾತೆ ಇರಬೇಕು. ಆ ಖಾತೆಯು ರಾಯಚೂರು ಜಿಲ್ಲೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾನಲ್ಲಿ ಬಸವರಾಜ್ (ಯಾದಗಿರಿ ಜಿಲ್ಲೆ), ಪ್ರಗತಿ (ರಾಯಚೂರು ಜಿಲ್ಲೆ), ಬೀರಲಿಂಗ (ಕಲಬುರ್ಗಿ ಜಿಲ್ಲೆ) ಅವರ ಹೆಸರಿನಲ್ಲಿ ಇರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...