Homeಕರ್ನಾಟಕಬೌದ್ಧರು ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು: ಸಾಮಾಜಿಕ ಹೋರಾಟಗಾರ ಚೇತನ್

ಬೌದ್ಧರು ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು: ಸಾಮಾಜಿಕ ಹೋರಾಟಗಾರ ಚೇತನ್

- Advertisement -
- Advertisement -

“ಹಿಂದುತ್ವವು ಇಸ್ಲಾಮಿಕ್ ಮಸೀದಿಗಳ ಮೇಲೆ ಹಸ್ತಕ್ಷೇಪ ಮಾಡಿದರೆ, ಬೌದ್ಧರು ಅನೇಕ ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು” ಎಂದು ಸಾಮಾಜಿಕ ಹೋರಾಟಗಾರ, ನಟ ಚೇತನ್ ಅಹಿಂಸಾ ತಿಳಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ವೇದಕಾಲದ ಸಾವಿರ ವರ್ಷಗಳ ಕಾಲ (1500-500 BCE), ಯಾವುದೇ ದೇವಾಲಯಗಳು ಇರಲಿಲ್ಲ. ಬುದ್ಧ ಮತ್ತು ಬೌದ್ಧ ಸ್ತೂಪಗಳು/ಪಗೋಡಗಳನ್ನು ಸಹಸ್ರಮಾನದವರೆಗೆ ಶಾಶ್ವತಗೊಳಿಸಿದ ನಂತರ, ಹಿಂದೂ ದೇವಾಲಯಗಳು ಅಸ್ತಿತ್ವಕ್ಕೆ ಬಂದವು” ಎಂದಿದ್ದಾರೆ.

ಮುಂದುವರಿದು, “ಹಿಂದುತ್ವವು ಇಸ್ಲಾಮಿಕ್ ಮಸೀದಿಗಳ ಮೇಲೆ ಹಸ್ತಕ್ಷೇಪ ಮಾಡಿದರೆ, ಬೌದ್ಧರು ಅನೇಕ ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು’’ ಎಂದು ಅವರು ಪ್ರತಿಪಾದಿಸಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, “ಬುಧವಾರ ದಕ್ಷಿಣ ಕನ್ನಡದಲ್ಲಿ ‘ಕಾಂತಾರ’ ಚಿತ್ರವನ್ನು ವೀಕ್ಷಿಸುತ್ತಿದ್ದ ಮುಸ್ಲಿಂ ದಂಪತಿಗಳನ್ನು, ಧರ್ಮಾಂಧ ಮುಸ್ಲಿಂ ಯುವಕರು ಬೆದರಿಸಿ ಅವರ ಮೇಲೆ ಹಲ್ಲೆ ನಡೆಸಿದರು. ಈ ಚಲನಚಿತ್ರವು ‘ಹಿಂದೂ ಸಂಸ್ಕೃತಿ’ಯನ್ನು ಬೆಂಬಲಿಸುತ್ತದೆ” ಎಂದಿದ್ದಾರೆ.

“ಸಾಂಸ್ಕೃತಿಕ/ಸೈದ್ಧಾಂತಿಕ ಬಹುತ್ವವೇ ನಮ್ಮ ರಾಷ್ಟ್ರದ ತಳಹದಿ. ಇಂತಹ ಅಸಹಿಷ್ಣುತೆ ಮತ್ತು ಮೂಲಭೂತ ಹಕ್ಕುಗಳ ನಿರಾಕರಣೆಗಳನ್ನು ನಾವು ಖಂಡಿಸುತ್ತೇವೆ” ಎಂದು ಚೇತನ್ ಹೇಳಿದ್ದಾರೆ.

ಇತ್ತೀಚೆಗೆ ಕಾಂತಾರ ಸಿನಿಮಾ ಕುರಿತು ಮಾತನಾಡಿ ಚೇತನ್‌ ಚರ್ಚೆಯಲ್ಲಿದ್ದರು. “ನಮ್ಮ ಕನ್ನಡ ಚಿತ್ರ ‘ಕಾಂತಾರ’ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿ ತಂದಿದೆ. ಭೂತಕೋಲ ಹಿಂದೂ ಸಂಸ್ಕೃತಿ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ಇದು ನಿಜವಲ್ಲ” ಎಂದು ಪೋಸ್ಟ್‌ ಮಾಡಿದ್ದರು.

“ನಮ್ಮ ಪಂಬದ/ನಲಿಕೆ/ಪರವ ಬಹುಜನ ಸಂಪ್ರದಾಯಗಳಾಗಿವೆ. ವೈದಿಕ-ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಇವು ಹಿಂದಿನವುಗಳಾಗಿವೆ. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲಾಗಲೀ, ಅದರಾಚೆಯಾಗಲೀ ಸತ್ಯಸಂಗತಿಗಳೊಂದಿಗೆ ತೋರಿಸಬೇಕು” ಎಂದು ಅಭಿಪ್ರಾಯಪಟ್ಟಿದ್ದರು.

ಹಿಂದೂ ದೇವಾಲಯವಲ್ಲ: ಮದ್ರಾಸ್ ಕೋರ್ಟ್ ತೀರ್ಪು

ಹಿಂದೂ ದೇವಾಲಯಗಳ ಇತಿಹಾಸ ಕೆದಕಿದರೆ ಬೌದ್ಧಸ್ತೂಪಗಳು ದೊರಕುತ್ತವೆ ಎಂಬ ಚರ್ಚೆ ಮೊದಲಿನಿಂದಲೂ ಇದ್ದು, “ತಮಿಳುನಾಡಿನ ಸೇಲಂ ಜಿಲ್ಲೆಯ ಪೆರಿಯೇರಿ ಗ್ರಾಮದ ಕೊಟ್ಟೈ ರಸ್ತೆಯಲ್ಲಿರುವ ದೇವಾಲಯದೊಳಗಿನ ವಿಗ್ರಹ ಬುದ್ಧನದ್ದಾಗಿದೆ” ಎಂದು ಮದ್ರಾಸ್ ಹೈಕೋರ್ಟ್ ಕೆಲವು ತಿಂಗಳ ಹಿಂದೆ ಹೇಳಿತ್ತು.

ದೇವಾಲಯದಲ್ಲಿರುವ ವಿಗ್ರಹವನ್ನು ಈಗ ‘ತಲೈವೆಟ್ಟಿ ಮುನಿಯಪ್ಪನ್’ ಎಂದು ಪೂಜಿಸಲಾಗುತ್ತಿದೆ. ಸೇಲಂ ಮೂಲದ ಬುದ್ಧ ಟ್ರಸ್ಟ್‌ನ ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಈ ವಿಗ್ರಹವು ಬುದ್ಧನ ವಿಗ್ರಹವಾಗಿದೆ ಎಂದು 2017ರಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಜುಲೈ 28, 2021ರಂದು ಪುರಾತತ್ತ್ವ ಶಾಸ್ತ್ರದ ತಂಡವು ವಿಗ್ರಹವನ್ನು ಪರಿಶೀಲಿಸಿತು. ವಿಗ್ರಹವನ್ನು ಶುಚಿಗೊಳಿಸಿದ ನಂತರ ವಿಗ್ರಹದ ಮೇಲಿನ ಹಲವು ಚಿಹ್ನೆಗಳು ಕಂಡುಬಂದಿದ್ದವು.

“ಅಂತಹ ವರದಿಯನ್ನು ಸ್ವೀಕರಿಸಿದ ನಂತರ, ಈ ಶಿಲ್ಪವನ್ನು ತಲೈವೆಟ್ಟಿ ಮುನಿಯಪ್ಪನ್ ಎಂದು ಪರಿಗಣಿಸಲು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಅನುಮತಿ ನೀಡುವುದು ಸೂಕ್ತವಲ್ಲ” ಎಂದು ನ್ಯಾಯಮೂರ್ತಿ ವೆಂಕಟೇಶ್ ಆದೇಶದಲ್ಲಿ ಬರೆದಿದ್ದರು. “ಶಿಲ್ಪವು ಬುದ್ಧನದು ಎಂಬ ತೀರ್ಮಾನಕ್ಕೆ ಬಂದ ನಂತರವೂ ಇದು ಹಿಂದೂ ದೇವರೆಂದು ಮುಂದುವರಿಯಲು ಅನುಮತಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

“ವಿಗ್ರಹವನ್ನು ಅದರ ಮೂಲ ಸ್ವರೂಪಕ್ಕೆ ಮರುಸ್ಥಾಪಿಸಬೇಕು” ಎಂದು ಧಾರ್ಮಿಕ ದತ್ತಿ ಇಲಾಖೆಗೆ ಹೈಕೋರ್ಟ್ ಆದೇಶಿಸಿದ್ದು, ಈ ದೇವಾಲಯದ ಒಳಗೆ ಬುದ್ಧನ ವಿಗ್ರಹ ಎಂದು ಬೋರ್ಡ್ ಹಾಕಬೇಕು ಎಂದು ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಬೌದ್ದರು ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು ಎನ್ನುವ ಪ್ರತಿಪಾದನೆ ಸರಿ ಇದೆ. ಆ ದಿಕ್ಕಿನಲ್ಲಿ ಯೋಚಿಸಬೇಕು.👍💐

  2. ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿ ವಿಙ್ನಾನದಿಂದ ಅವರ ಕಸ್ಸೇಸ್ ಪರೀಕ್ಷೆಗೆ ಅವರ ದುಡ್ಡು ತೇಗೆದುಕೊಂಡು ಸರ್ಟೀಪಿಕೇಟ್ ಹೊಂದಿದವರು ಪೂಜೆ ಮಾಡಲು ಅರ್ಹತೆ ಹೊದಿರುವರು ಎಂದು ಗುರುತಿಸಬಹುದು ಮಾಂತ್ರಿಕ ರಿಂದ ಆಗುವ ಶೋಷಣೆ ತಡೆಯಬಹುದು ಜೀವವುಳ್ಳ ದೇವರನ್ನು ಆರಾಧಿಸುವ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...